< ဧသတာ 3 >
1 ၁ ထိုနောက်မှ ရှင်ဘုရင်သည် အာရွှေရုသည် အာဂတ်အမျိုး၊ ဟမ္မေဒါသသားဟာမန်ကို ချီးမြှောက်၍၊ အထံတော်၌ရှိသော မှူးမတ်အပေါင်းတို့ထက် သာ၍ မြင့်မြတ်သော နေရာကို ပေးတော်မူ၏။
ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗ ಹಾಮಾನನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ ಅವನನ್ನು ತನ್ನ ಬಳಿಯಲ್ಲಿರುವ ಸಮಸ್ತ ಶ್ರೇಷ್ಠರಿಗಿಂತ ಉನ್ನತಸ್ಥಾನವನ್ನು ಕೊಟ್ಟು ಗೌರವಿಸಿದನು.
2 ၂ နန်းတော်တံခါးသို့ရောက်သော ရှင်ဘုရင်၏ ကျွန်အပေါင်းတို့သည်၊ အမိန့်တော်ရှိသည်အတိုင်း ဟာမန် ကို ဦးချရှိခိုးကြ၏။ မော်ဒကဲမူကား ဦးမချ၊ ရှိမခိုး။
ಆದಕಾರಣ ಅರಮನೆಯ ಬಾಗಿಲಲ್ಲಿರುವ ಅರಸನ ಸಮಸ್ತ ಸೇವಕರು ಬಗ್ಗಿ ಹಾಮಾನನಿಗೆ ಅಡ್ಡಬೀಳುತ್ತಿದ್ದರು. ಏಕೆಂದರೆ ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು. ಆದರೆ ಮೊರ್ದೆಕೈಯು ಬಗ್ಗದೆ ಅಡ್ಡಬೀಳದೆಯೂ ಇದ್ದನು.
3 ၃ နန်းတော်တံခါးသို့ ရောက်သော ရှင်ဘုရင်၏ ကျွန်တို့က၊ သင်သည် ရှင်ဘုရင်အမိန့်တော်ကို အဘယ် ကြောင့် ငြင်းဆန်သနည်းဟု နေ့တိုင်း မော်ဒကဲအား မေးမြန်းသတိပေးသော်လည်း၊
ಆಗ ಅರಮನೆಯ ಬಾಗಿಲಲ್ಲಿರುವ ಅರಸನ ಸೇವಕರು ಮೊರ್ದೆಕೈಗೆ, “ನೀನು ಅರಸನ ಆಜ್ಞೆಯನ್ನು ಮೀರುವುದೇನು?” ಎಂದರು.
4 ၄ မော်ဒကဲက၊ ငါသည် ယုဒလူဖြစ်သည်ဟု ပြန် ပြော၍၊ သူတို့ စကားကို နားမထောင်သောကြောင့်၊ သူတို့ သည် မော်ဒကဲစကား တည်မည် မတည်မည်ကို သိလို သောငှါ၊ ဟာမန်အား ကြားပြောကြ၏။
ಅವರು ಪ್ರತಿದಿನ ಅವನಿಗೆ ಹೇಳಿದರೂ ಅವನು ಅವರ ಮಾತಿಗೆ ಕಿವಿಗೊಡಲಿಲ್ಲ. ತಾನು ಯೆಹೂದ್ಯನೆಂದು ಅವರಿಗೆ ಹೇಳಿಕೊಳ್ಳುತ್ತಿದ್ದ ಮೊರ್ದೆಕೈಯ ನಡವಳಿಕೆಯನ್ನು ಸಹಿಸಬಹುದೋ ಎಂದು ಕಾಣಲು ಅವರು ಹಾಮಾನನಿಗೆ ದೂರು ಹೇಳಿದರು.
5 ၅ ထိုသို့ မော်ဒကဲသည် ဦးမချ၊ ရှိမခိုးဘဲ နေ ကြောင်းကို ဟာမန် သိမြင်သောအခါ၊ အလွန်အမျက် ထွက်၍၊
ಹಾಮಾನನು, ಮೊರ್ದೆಕೈಯು ತನಗೆ ಬಗ್ಗಿ ಅಡ್ಡಬೀಳದೆ ಇರುವುದನ್ನು ಕಂಡಾಗ ಬಹು ಕೋಪಗೊಂಡನು.
6 ၆ သူတို့သည် မော်ဒကဲအမျိုးကို ဘော်ပြသော ကြောင့်၊ မော်ဒကဲတယောက်တည်းကို ကွပ်မျက်လျှင်၊ စိတ်မပြေလောက်ဟု ဟာမန်သည် အောက်မေ့လျက်၊ မော်ဒကဲအမျိုးသားချင်းတည်းဟူသော အာရွှေရုနိုင်ငံ အရပ်ရပ်၌ရှိသော ယုဒလူအပေါင်းတို့ကို ဖျက်ဆီးခြင်းငှါ ရှာကြံလေ၏။
ಮೊರ್ದೆಕೈ ಮತ್ತು ಅವನ ಜನರು ಯೆಹೂದ್ಯರೆಂದು ಹಾಮಾನನಿಗೆ ಗೊತ್ತಾದಾಗ ಮೊರ್ದೆಕೈಯನ್ನು ಮಾತ್ರ ಕೊಲ್ಲಬಾರದೆಂದು ಅವನಿಗೆ ತೋರಿತು. ಅದರ ಬದಲು ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನರಾದ ಯೆಹೂದ್ಯರನ್ನೆಲ್ಲಾ ಸಂಹರಿಸಲು ಮಾರ್ಗವನ್ನು ಹುಡುಕಿದನು.
7 ၇ ထိုကြောင့် အာရွှေရုနန်းစံဆယ်နှစ်နှစ်၊ နိသန် အမည်ရှိသော ပဌမလတွင်၊ နေ့ရက်အစဉ်၊ လအစဉ် အတိုင်းလိုက်၍၊ အာဒါအမည် ရှိသော ဒွါဒသမလ တိုင်အောင်၊ ဟာမန်ရှေ့မှာ ပုရစာရေးတံချကြ၏။
ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆ ವರ್ಷದ ಮೊದಲನೆಯ ತಿಂಗಳು ಆದ ನಿಸಾನ ಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿನವೂ ಯಾವುದು ಎಂದು ತಿಳಿದುಕೊಳ್ಳಲು ಪೂರ್ ಅನ್ನು ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.
8 ၈ တဖန်ဟာမန်သည် ရှင်ဘုရင် အာရွှေရုထံတော် သို့ဝင်၍၊ အခြားတပါးသော လူမျိုးအပေါင်းတို့နှင့် ကျင့်ရာ ထုံးတမ်းမတူ၊ အရှင်မင်းကြီး စီရင်တော်မူချက်တို့ကို နားမထောင်၊ နိုင်ငံတော်အတွင်း၊ တိုင်းသူပြည်သား အမျိုးမျိုးတို့တွင် အရပ်ရပ်ကွဲပြားလျက်နေသော လူမျိုး တမျိုးရှိပါ၏။ ထိုအမျိုးကို အခွင့်ပေးတော်မူရာ၌ ကျေးဇူး တော်မရှိပါ။
ಆಗ ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಸಕಲ ಪ್ರಾಂತಗಳಲ್ಲಿರುವ ಜನರೊಳಗೆ ಚದರಿ ಬಂದು ವಾಸಿಸುವ ಪ್ರತ್ಯೇಕವಾದ ಜನಾಂಗದ ಜನರಿದ್ದಾರೆ. ಅವರ ರೀತಿನೀತಿಗಳು ಎಲ್ಲಾ ಜನರಿಗಿಂತಲೂ ಬೇರೆಯಾಗಿರುತ್ತವೆ. ಈ ಜನರು ಅರಸನ ನಿಯಮಗಳನ್ನು ಕೈಗೊಳ್ಳುವುದೇ ಇಲ್ಲ. ಆದಕಾರಣ ಇಂಥವರನ್ನು ಸುಮ್ಮನೇ ಬಿಡುವುದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
9 ၉ ကိုယ်တော် သဘောတူလျှင် ထိုအမျိုးကို ဖျက်ဆီးစေဟု အမိန့်ရှိတော်မူပါ။ ထိုအမှုကို ဆောင်ရွက် သော သူတို့သည် ဘဏ္ဍာတော်တိုက်ထဲသို့ ငွေအခွက် တသိန်းကို သွင်းစေခြင်းငှါ၊ ကျွန်တော်အပ်ပေးပါ မည်ဟု လျှောက်လေ၏။
ಅರಸನಿಗೆ ಸಮ್ಮತಿಯಾದರೆ, ಅವರೆಲ್ಲರಿಗೂ ಮರಣದಂಡನೆ ವಿಧಿಸುವಂತೆ ಒಂದು ಆಜ್ಞೆಯನ್ನು ಹೊರಡಿಸಬೇಕು. ಆಗ ನಾನು ರಾಜಭಂಡಾರಕ್ಕೆ 340 ಮೆಟ್ರಿಕ್ ಟನ್ ಬೆಳ್ಳಿಯನ್ನು ಖಜಾಂಚಿಗೆ ಕೊಡುವೆನು,” ಎಂದನು.
10 ၁၀ ရှင်ဘုရင်ကလည်း၊ ထိုငွေကို သင့်အားငါပေး၏။
ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನ ವಂಶಸ್ಥನೂ ಹಮ್ಮೆದಾತನ ಮಗನೂ ಆದ ಹಾಮಾನನಿಗೆ ಕೊಟ್ಟನು.
11 ၁၁ ထိုလူမျိုးကိုလည်း သင်သည် ပြုချင်သမျှ ပြုရသော အခွင့်ရှိစေခြင်းငှါ၊ သင်၌ငါအပ်သည်ဟု လက်စွပ်တော်ကိုချွတ်၍ ယုဒအမျိုး၏ ရန်သူဖြစ်သော အာဂတ်အမျိုး ဟမ္မေဒါသသား ဟာမန်အားပေးတော်မူ ၏။
ಅರಸನು ಹಾಮಾನನಿಗೆ, “ಬೆಳ್ಳಿಯನ್ನು ನೀನೇ ಇಟ್ಟುಕೋ: ನಿನಗೆ ಸರಿ ತೋರುವ ಹಾಗೆ ಆ ಜನರಿಗೆ ಮಾಡು,” ಎಂದನು.
12 ၁၂ ထိုအခါ ပဌမလတဆယ်သုံးရက်နေ့တွင်၊ စာရေးတော်ကြီးတို့ကို ခေါ်၍ ကိုယ်စားတော်မင်း၊ အပြည်ပြည်အုပ်သော မြို့ဝန်၊ အရပ်ရပ်စီရင်သော သူကြီးတို့ကို ဟာမန်မှာထားသမျှအတိုင်း၊ လူအမျိုးမျိုး ပြောသော စကားအသီးအသီးအားဖြင့် ရှင်ဘုရင် အာရွှေရု၏ အမိန့်တော်ကို စာရေး၍၊ ရှင်ဘုရင်၏ လက်စွပ်တော်နှင့် တံဆိပ်ခတ်လေ၏။
ಮೊದಲನೆಯ ತಿಂಗಳ ಹದಿಮೂರನೆಯ ದಿವಸದಲ್ಲಿ ಅರಸನ ಲೇಖಕರನ್ನು ಕರೆಸಲಾಯಿತು. ಹಾಮಾನನು ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಪ್ರತಿ ಪ್ರಾಂತದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅವರವರ ಸ್ವದೇಶಿ ಲಿಪಿಗಳಲ್ಲಿಯೂ, ಭಾಷೆಗಳಲ್ಲಿಯೂ ಪತ್ರಗಳನ್ನು ಬರೆದರು. ಅರಸನಾದ ಅಹಷ್ವೇರೋಷನ ಹೆಸರಿನಲ್ಲಿಯೇ ಲಿಖಿತವಾದ ಈ ಪತ್ರಗಳು ಅರಸನ ಉಂಗುರದಿಂದ ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು.
13 ၁၃ အာဒါအမည်ရှိသော ဒွါဒသမလတဆယ် သုံးရက် တနေ့ခြင်းတွင်၊ ယုဒလူအကြီးအငယ်မိန်းမ ကလေးရှိရှိသမျှတို့ကို သတ်ဖြတ်သုတ်သင်ပယ်ရှင်း၍၊ သူတို့ဥစ္စာကို လုယူသိမ်းရုံးစေခြင်းငှါ၊ အမိန့်တော် စာကို စာပို့လုလင်တို့ဖြင့် နိုင်ငံတော်အပြည်ပြည်သို့ ပေးလိုက် လေ၏။
ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನದಲ್ಲಿ, ಹಿರಿಯರೂ, ಕಿರಿಯರೂ, ಮಕ್ಕಳೂ, ಮಹಿಳೆಯರೂ, ಒಟ್ಟು ಎಲ್ಲಾ ಯೆಹೂದ್ಯರನ್ನು ಒಂದೇ ದಿನದಲ್ಲಿ ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ಅವರ ಆಸ್ತಿಯನ್ನು ಕೊಳ್ಳೆ ಹೊಡೆಯುವದಕ್ಕೂ ಅರಸನ ಎಲ್ಲಾ ಪ್ರಾಂತಗಳಿಗೆ ಅಂಚೆಯವರ ಮೂಲಕ ಪತ್ರಗಳನ್ನು ಕಳುಹಿಸಲಾಯಿತು.
14 ၁၄ ဤရွေ့ကား၊ လူအမျိုးမျိုးတို့သည် ထိုနေ့ရက်တွင် အသင့်ရှိစေခြင်းငှါ၊ အတိုင်းတိုင်းအပြည်ပြည်၌ ကြော်ငြာရ သော အမိန့်တော် စာချက်ဖြစ်သတည်း။
ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಪ್ರತಿ ಪ್ರಾಂತದಲ್ಲಿಯೂ ರಾಜಾಜ್ಞೆ ಜಾರಿಗೆ ತರುವುದರಲ್ಲಿ ಇತ್ತು. ರಾಜಾಜ್ಞೆಯಾಗಿ ಬರೆದ ಪತ್ರದ ಪ್ರತಿಯಲ್ಲಿ ಎಲ್ಲಾ ಜನರಲ್ಲಿಯೂ ಜಾರಿಗೆ ತರಲು ಪ್ರಕಟಿಸಬೇಕೆಂದು ಸಹ ಬರೆದಿತ್ತು.
15 ၁၅ ရှုရှန်နန်းတော်၌ ထိုအမိန့်တော်စာကို ကြော်ငြာ ပြီးမှ၊ ရှင်ဘုရင် စီရင်သည်အတိုင်း၊ စာပို့လုလင်တို့သည် အလျင်အမြန် ပြေးသွားကြ၏။ ရှင်ဘုရင်နှင့် ဟာမန် သည် စပျစ်ရည် သောက်ပွဲ၌ထိုင်၍၊ ရှုရှန်မြို့တော်သည် ဆင်းရဲခြင်းသို့ ရောက်သတည်း။
ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನಿನ ಅರಮನೆಯಲ್ಲಿಂದ ಆ ಆಜ್ಞೆಯು ಹೊರಡಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವೋ ತಳಮಳಗೊಂಡಿತ್ತು.