< ဧ​သ​တာ 9 >

1 ရှင်ဘုရင်အမိန့်တော်အတိုင်း စီရင်ရသော အချိန်နီး၍၊ ယုဒအမျိုး၏ ရန်သူတို့က၊ ငါတို့နိုင်မည်ဟု မြော်လင့်သောနေ့၊ အမှုပြောင်းလဲ၍ ယုဒလူတို့သည် မနာလိုသော သူတို့ကိုနိုင်သော နေ့ရက်တည်းဟူသော အာဒါမည်သော ဒွါဒသမလတဆယ်သုံးရက်နေ့တွင်၊
ಹನ್ನೆರಡನೆಯ ತಿಂಗಳಾದ ಆದಾರ್ ತಿಂಗಳೆಂಬ ಹದಿಮೂರನೆಯ ದಿನದಲ್ಲಿ ಅರಸನ ಆಜ್ಞೆಯು ನೆರವೇರುವುದಕ್ಕೆ ನಿರ್ಣಯವಾಗಿತ್ತು. ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವುದಾಗಿ ಎದುರುನೋಡಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಲಾರಂಭಿಸಿದರು.
2 ရှင်ဘုရင်အာရွှေရု၏ နိုင်ငံတော် အပြည်ပြည် အမြို့မြို့၌နေသော ယုဒလူတို့သည်၊ ညှဉ်းဆဲလိုသော သူတို့ကို ဆီးတားခြင်းငှါ စုဝေးကြ၏။ ပြည်သူပြည်သား အပေါင်းတို့သည် ကြောက်ရွံ့သောကြောင့်၊ အဘယ်သူမျှ ရန်မပြုဝံ့ဘဲနေကြ၏။
ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ಯೆಹೂದ್ಯರು ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ದಾಳಿಮಾಡಲು ಒಟ್ಟಾಗಿ ಸೇರಿದರು. ಆಗ ಯೆಹೂದ್ಯರ ಭಯವು ಸಮಸ್ತ ಜನರ ಮೇಲೆ ಇದ್ದುದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ.
3 အပြည်ပြည်ကို အုပ်စိုးသောမင်း၊ ကိုယ်စားတော် မင်း၊ မြို့ဝန်မင်း၊ အမှုတော်စောင့် အရာရှိအပေါင်းတို့ သည် မော်ဒကဲကို ကြောက်ရွံ့သောကြောင့်၊ ယုဒလူတို့ကို မစကြ၏။
ಇದಲ್ಲದೆ ಪ್ರಾಂತಗಳ ಉಪರಾಜರೂ, ಪ್ರತಿನಿಧಿಗಳೂ, ಅಧಿಪತಿಗಳೂ, ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಏಕೆಂದರೆ ಮೊರ್ದೆಕೈಯ ಭಯ ಅವರಿಗಿತ್ತು.
4 အကြောင်းမူကား၊ မော်ဒကဲသည် နန်းတော် တွင် ဘုန်းကြီးလျက်၊ အတိုင်းတိုင်းအပြည်ပြည်၌ သိတင်း နှံ့ပြား၍၊ တနေ့ထက် တနေ့ကြီးမြင့်ရာသို့ ရောက် သတည်း။
ಏಕೆಂದರೆ ಮೊರ್ದೆಕೈ ಅರಮನೆಯಲ್ಲಿ ಪ್ರಮುಖನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತಗಳಿಗೂ ಹರಡಿತು. ಈ ಮೊರ್ದೆಕೈ ಅಧಿಕವಾಗಿ ಅಧಿಕಾರವಂತನಾದನು.
5 ထိုနေ့တွင် ယုဒလူတို့သည် ရန်သူအပေါင်းတို့ကို ထားနှင့်လုပ်ကြံသတ်ဖြတ်ဖျက်ဆီး၍၊ မနာလိုသော သူတို့၌ ပြုချင်သမျှပြုကြ၏။
ಹೀಗೆ ಯೆಹೂದ್ಯರು ತಮ್ಮ ಶತ್ರುಗಳೆಲ್ಲರನ್ನು ಸೋಲಿಸಿ, ಖಡ್ಗದಿಂದ ಸಂಹರಿಸಿದರು. ತಮ್ಮನ್ನು ಹಗೆಮಾಡುತ್ತಿದ್ದವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.
6 ရှုရှန်မြို့တော်၌လူငါးရာတို့ကို လုပ်ကြံသတ်ဖြတ် ကြ၏။
ಶೂಷನಿನ ಅರಮನೆಯಲ್ಲಿ ಯೆಹೂದ್ಯರು ಐನೂರು ಮಂದಿಗೆ ಮರಣದಂಡನೆ ವಿಧಿಸಿದರು.
7 ယုဒအမျိုး၏ ရန်သူဟမ္မေဒါသသားဖြစ်သော ဟာမန်၏သား တကျိပ်တည်းဟူသော ပါရှန္ဒာသ၊ ဒါလဖုန်၊ အာသပါသ၊ ပေါရသ၊ အာဒလိ၊ အာရိဒါသ၊ ပါမရှာတ၊ အရိသဲ၊ ဒရိဒဲ၊ ဝါဇေဇာသတို့ကိုလည်း သတ်ကြ၏။ သို့ရာတွင် သူတို့ဥစ္စာကို မသိမ်းမယူဘဲနေကြ၏။
ಇದಲ್ಲದೆ ಪರ್ಷಂದಾತನು ದಲ್ಫೋನನು, ಅಸ್ಪಾತನು,
8
ಪೊರಾತನು, ಅದಲ್ಯನು, ಅರಿದಾತನು,
9
ಪರ್ಮಷ್ಟನು, ಅರಿಸಾಯನು, ಅರಿದಾಯನು, ವೈಜಾತನು ಎಂಬವರನ್ನು ಕೊಂದರು.
10 ၁၀
ಇವರು ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗ ಹಾಮಾನನ ಹತ್ತು ಮಂದಿ ಪುತ್ರರು. ಆದರೆ ಅವರು ಇವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.
11 ၁၁ ထိုနေ့၌ ရှုရှန်မြို့တော်တွင် သေသောသူစာရင်း ကို ရှင်ဘုရင်ရှေ့တော်မှာ ပြကြ၏။
ಅದೇ ದಿವಸ ಶೂಷನಿನ ಅರಮನೆಯಲ್ಲಿ ಮರಣದಂಡನೆಯಾದವರ ಲೆಕ್ಕವು ಅರಸನ ಮುಂದೆ ಒಪ್ಪಿಸಲಾಯಿತು.
12 ၁၂ ရှင်ဘုရင်သည် မိဖုရားဧသတာကို ခေါ်၍၊ ယုဒ လူတို့သည် ရှုရှန် မြို့တော်၌ ဟာမန်သားတကျိပ်နှင့်တကွ လူငါးရာတို့ကို လုပ်ကြံသတ်ဖြတ် ကြပြီ။ နိုင်ငံတော်တွင် အခြားသော အပြည်ပြည်တို့၌ အဘယ်သို့ ပြုကြပြီနည်း။ သင်သည် အဘယ်အလိုရှိသေးသနည်း။ အလိုရှိသည် အတိုင်း ငါပြုမည်။ အဘယ်ဆိုကို တောင်းချင်သေး သနည်း။ တောင်းသမျှကို ငါပေးမည်ဟု မိန့်တော်မူလျှင်၊
ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಸಂಹರಿಸಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತಗಳಲ್ಲಿ ಏನು ಮಾಡಿರಬಹುದೋ? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲಾಗುವುದು. ಇನ್ನೂ ನಿನ್ನ ಬೇಡಿಕೆ ಏನು? ಅದು ಮಾಡಲಾಗುವುದು,” ಎಂದು ಹೇಳಿದನು.
13 ၁၃ ဧသတာက၊ အရှင်မင်းကြီးအလိုတော်ရှိလျှင်၊ ရှုရှန်မြို့၌ရှိသော ယုဒလူတို့သည် ယနေ့ အမိန့်တော် အတိုင်း နက်ဖြန်နေ့၌လည်း ပြုရမည်အကြောင်း၊ ဟာမန်သားတကျိပ်ကိုလည်း လည်ဆွဲချတိုင်၌ ဆွဲထားရမည် အကြောင်း အမိန့်ရှိတော်မူပါဟု လျှောက်သည်အတိုင်း၊
ಅದಕ್ಕೆ ಎಸ್ತೇರಳು, “ಅರಸನಿಗೆ ಸಮ್ಮತಿಯಾದರೆ, ಇಂದಿನಂತೆಯೇ ರಾಜಾಜ್ಞೆಯು ನಾಳೆಯೂ ಶೂಷನ್ ಪಟ್ಟಣದಲ್ಲಿ ಜಾರಿಗೆ ಬರಲು ಯೆಹೂದ್ಯರಿಗೆ ಅಪ್ಪಣೆ ಆಗಲಿ. ಹಾಮಾನನ ಹತ್ತು ಮಂದಿ ಮಕ್ಕಳ ಶವಗಳನ್ನು ಗಲ್ಲಿಗೇರಿಸುವಂತೆ ಅಪ್ಪಣೆಯಾಗಲಿ,” ಎಂದಳು.
14 ၁၄ ရှင်ဘုရင်မိန့်တော်မူ၍ ရှုရှန်နန်းတော်၌ အမိန့် တော်ကို ထုတ်ပြီးမှ၊ ဟာမန်သား တကျိပ်ကို ဆွဲထား ကြ၏။
ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಜಾರಿಗೆಬಂದಾಗ ಅವರು ಹಾಮಾನನ ಹತ್ತು ಮಂದಿ ಪುತ್ರರ ಶವವನ್ನು ಗಲ್ಲಿಗೆ ಹಾಕಿದರು.
15 ၁၅ ရှုရှန်မြို့၌ရှိသော ယုဒလူတို့သည်လည်း၊ အာဒါလတဆယ်လေးရက်နေ့တွင် စုဝေး၍၊ ရှုရှန်မြို့သား သုံးရာတို့ကို သတ်ကြ၏။ သို့ရာတွင် သူတို့ဥစ္စာကို မသိမ်း မယူဘဲနေကြ၏။
ಇದಲ್ಲದೆ ಶೂಷನಿನಲ್ಲಿರುವ ಯೆಹೂದ್ಯರು ಆದಾರ್ ಎಂಬ ಫಾಲ್ಗುನಮಾಸದ ಹದಿನಾಲ್ಕನೆಯ ದಿವಸದಲ್ಲಿ ಶೂಷನಿನಲ್ಲಿ ಒಟ್ಟಾಗಿ ಸೇರಿ ಮುನ್ನೂರು ಮಂದಿಗೆ ಮರಣದಂಡನೆಯನ್ನು ವಿಧಿಸಿದರು. ಆದರೆ ಅವರು ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.
16 ၁၆ နိုင်ငံတော်အတိုင်းတိုင်း အပြည်ပြည်၌ရှိသော ယုဒလူအခြားတို့သည် အာဒါလတဆယ်သုံးရက်နေ့တွင်၊ မိမိတို့အသက်ကို စောင့်လျက်၊ ရန်သူလက်သို့မရောက်ဘဲ ချမ်းသာရမည်အကြောင်း၊ စုဝေး၍ ရန်သူခုနစ်သောင်း ငါးထောင်တို့ကို သတ်ကြ၏။ သို့ရာတွင် သူတို့ဥစ္စာကို မသိမ်းမယူဘဲ နေကြ၏။
ಅರಸನ ಪ್ರಾಂತಗಳಲ್ಲಿರುವ ಮಿಕ್ಕ ಯೆಹೂದ್ಯರು ತಮ್ಮ ಪ್ರಾಣ ರಕ್ಷಣೆಗಾಗಿ ಎದ್ದು ನಿಂತು, ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆಯುವಂತೆ ಒಟ್ಟಾಗಿ ಸೇರಿದರು. ಅವರು ತಮ್ಮ ವೈರಿಗಳಲ್ಲಿ 75,000 ಮಂದಿಗೆ ಮರಣದಂಡನೆ ವಿಧಿಸಿದರು. ಆದರೆ ಅವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.
17 ၁၇ ထိုလ တဆယ်လေးရက်နေ့တွင် ငြိမ်ဝပ်စွာနေ ၍ ပွဲခံရာနေ့၊ ပျော်မွေ့ရာနေ့ဖြစ်စေခြင်းငှါ စောင့်ရှောက် ကြ၏။
ಆದಾರ್ ಮಾಸದ ಹದಿಮೂರನೆಯ ದಿನ ಈ ಘಟನೆ ನಡೆಯಿತು. ಹದಿನಾಲ್ಕನೆಯ ದಿನದಂದು ಅವರು ವಿಶ್ರಮಿಸಿಕೊಂಡು, ಅದನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.
18 ၁၈ ရှုရှန်မြို့၌ရှိသော ယုဒလူများမူကား၊ တဆယ် သုံးရက်နေ့နှင့် တဆယ်လေးရက်နေ့တွင်း စုဝေးကြ၏။ တဆယ်ငါးရက်မြောက်သောအခါ ငြိမ်ဝပ်စွာနေ၍ ပွဲခံရာ နေ့၊ ပျော်မွေ့ရာနေ့ဖြစ်စေခြင်းငှါ စောင့်ရှောက်ကြ၏။
ಆದರೆ ಶೂಷನಿನಲ್ಲಿದ್ದ ಯೆಹೂದ್ಯರು ಹದಿಮೂರನೆಯ ಹಾಗೂ ಹದಿನಾಲ್ಕನೆಯ ದಿನಗಳಲ್ಲಿ ಒಟ್ಟಾಗಿ ಸೇರಿಬಂದದ್ದರಿಂದ, ಹದಿನೈದನೆಯ ದಿನದಲ್ಲಿ ಅವರು ವಿಶ್ರಮಿಸಿಕೊಂಡು, ಅದೇ ದಿನವನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.
19 ၁၉ မြို့ရိုးမရှိသောရွာတို့၌ နေသော ယုဒလူတို့သည် လည်း၊ အာဒါ လတဆယ်လေးရက်နေ့ကို ပျော်မွေ့စွာ ပွဲခံရာနေ့၊ မင်္ဂလာနေ့၊ တယောက်ကိုတယောက် လက်ဆောင်ပေးလိုက်ရာနေ့ဖြစ်စေကြ၏။
ಆದಕಾರಣ ಗ್ರಾಮಗಳಲ್ಲಿಯೂ ಬಯಲು ಪ್ರಾಂತಗಳ ಪಟ್ಟಣಗಳಲ್ಲಿಯೂ ವಾಸವಾಗಿರುವ ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆಯ ದಿನವನ್ನು ಶುಭದಿನವಾಗಿಯೂ, ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ ಆಚರಿಸಿದರು.
20 ၂၀ တဖန် မော်ဒကဲသည် ဤအမှုအရာတို့ကို ရေးထား၏။
ಮೊರ್ದೆಕೈಯು ಈ ಘಟನೆಗಳನ್ನು ಬರೆದು ಅರಸನಾದ ಅಹಷ್ವೇರೋಷನ ಸಕಲ ಪ್ರಾಂತಗಳಲ್ಲಿ ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಯೆಹೂದ್ಯರು ಎಲ್ಲರಿಗೂ ಪತ್ರಗಳ ಮುಖಾಂತರ ಕಳುಹಿಸಿದನು.
21 ၂၁ ယုဒလူတို့သည် ရန်သူလက်မှ လွတ်၍ ချမ်းသာ ရသောနေ့၊
ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆ ಮತ್ತು ಹದಿನೈದನೆ ದಿನಗಳನ್ನೂ ಪ್ರತಿವರ್ಷ ಹಬ್ಬದ ದಿನಗಳಾಗಿ ಆಚರಿಸುವುದು ಶಾಶ್ವತ ನಿಯಮವೆಂದು ಭಾವಿಸುವಂತೆ ಆ ಪತ್ರದಲ್ಲಿ ಬರೆಯಲಾಗಿತ್ತು.
22 ၂၂ သူတို့ဝမ်းနည်းခြင်းနှင့် မြည်တမ်းခြင်းပျောက်၍ ဝမ်းမြောက်ခြင်းနှင့်ပျော်မွေကခြင်းသို့ ရောက်သော လတည်းဟူသော အာဒါလ တဆယ်လေးရက်နှင့် တဆယ်ငါးရက်နေ့တို့ကို နှစ်တိုင်းစောင့်၍ ပွဲခံရာနေ့၊ ပျော်မွေ့ရာနေ့၊ တယောက်ကိုတယောက် လက်ဆောင် ပေးလိုက်၍၊ ဆင်းရဲသောသူတို့အား စွန့်ကြဲရာနေ့ဖြစ်စေ သော ထုံးစံကို စီရင်ခြင်းငှါ၊ ရှင်ဘုရင် အာရွှေရု နိုင်ငံ တော်အပြည်ပြည်၌ အနီးအဝေးရှိသော ယုဒလူအပေါင်း တို့နေရာသို့ မှာစာကို ပေးလိုက်လေ၏။
ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆದ ಕಾಲವಾಗಿಯೂ, ಅವರ ದುಃಖ ಸಂತೋಷವೂ, ಗೋಳಾಟ ಉತ್ಸವವೂ ಬದಲಾದ ದಿನವಾಗಿಯೂ ಕೊಂಡಾಡುವಂತೆ ಆ ಪತ್ರದಲ್ಲಿ ಬರೆದಿತ್ತು. ಆದ್ದರಿಂದ ಆ ದಿನ ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ, ಬಡವರಿಗೆ ದಾನಗಳನ್ನು ಮಾಡುವ ದಿನವಾಗಿಯೂ ಪಾಲಿಸಬೇಕೆಂದೂ ಆ ಪತ್ರದಲ್ಲಿ ಬರೆದಿತ್ತು.
23 ၂၃ ယုဒလူတို့ကလည်း၊ ပြုစရှိ၍ မော်ဒကဲမှာလိုက် သည်အတိုင်း အမြဲပြုပါမည်ဟု ဝန်ခံကြ၏။
ಆದ್ದರಿಂದ ಯೆಹೂದ್ಯರು ಮೊರ್ದೆಕೈಯು ತಮಗೆ ಬರೆದ ಪ್ರಕಾರವಾಗಿ, ತಾವು ಆರಂಭಮಾಡಿದ್ದ ಸಂಭ್ರಮವನ್ನು ಮುಂದುವರಿಸಲು ಒಪ್ಪಿಕೊಂಡರು.
24 ၂၄ ယုဒလူအပေါင်းတို့၏ ရန်သူဖြစ်သော အာဂတ် အမျိုး၊ ဟမ္မေဒါသသား ဟာမန်သည် ယုဒအမျိုးကို ဖျက်ဆီးမည်အကြံရှိ၍၊ ဖျက်ဆီးပယ်ရှင်းခြင်းငှါ ပုရ စာရေးတံချသောကြောင့်၎င်း၊
ಏಕೆಂದರೆ ಸಮಸ್ತ ಯೆಹೂದ್ಯರಿಗೂ ಕಡು ವೈರಿಯಾದ, ಅಗಾಗನ ವಂಶದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ತೀರ್ಮಾನಿಸಿಕೊಂಡು ಅವರನ್ನು ಹಾಳುಮಾಡಲು, ನಿರ್ನಾಮಗೊಳಿಸಲು ಪೂರ್ ಅಂದರೆ, ಚೀಟನ್ನು ಹಾಕಿದ್ದನು.
25 ၂၅ ဧသတာသည် ရှင်ဘုရင်ထံတော်သို့ဝင်၍ ယုဒ လူတို့တဘက်၌ ဟာမန်ကြံစည်သော အဓမ္မအကြံကို သူ၏ခေါင်းပေါ်သို့ ပြန်ရောက်စေမည်အကြောင်း၊ သူနှင့် သူ၏သားတို့ကိုလည်း လည်ဆွဲချတိုင်၌ ဆွဲထားစေမည် အကြောင်း၊ အမိန့်တော်စာကို ပေးတော်မူသည်ဖြစ်၍၎င်း၊
ಆದರೆ ಈ ಒಳಸಂಚು ಅರಸನಿಗೆ ತಿಳಿದುಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವಂತೆ ಅರಸನು ಆಜ್ಞೆಯನ್ನು ಹೊರಡಿಸಿದನು. ಅದರೊಂದಿಗೆ ಅವನ ಮಕ್ಕಳನ್ನೂ ಗಲ್ಲಿಗೇರಿಸಲು ಅರಸನು ಆಜ್ಞಾಪಿಸಿದ್ದನು;
26 ၂၆ ပုရဟူသောစကားကို အစွဲပြုသဖြင့်၊ ထိုနေ့ကို ပုရနေ့ဟူ၍ ခေါ်ဝေါ်ကြ၏။ ထိုအမိန့်တော်စာချက်နှင့် ကိုယ်တိုင်တွေ့မြင်သော အမှုကို ထောက်လျက်၊
ಆದ್ದರಿಂದ ಪೂರ್ ಎಂಬ ಪದದ ಆಧಾರದ ಮೇಲೆ ಆ ದಿನಗಳಿಗೆ ಪೂರಿಮ್ ಎಂಬ ಹೆಸರಾಯಿತು. ಅರಸನು ಪತ್ರದಲ್ಲಿ ಬರೆದ ಎಲ್ಲಾ ಮಾತುಗಳನ್ನೂ, ಅವುಗಳ ಸಂಬಂಧವಾಗಿ ತಾವು ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ
27 ၂၇ ယုဒလူတို့သည် ကိုယ်တိုင်မှစ၍ သားမြေး၊ ဘာသာဝင်သူ အပေါင်းတို့နှင့်တကွ၊ မော်ဒကဲမှာစာ၌ စီရင်ထုံးဖွဲ့သည်အတိုင်း၊ ထိုနေ့ နှစ်ရက်ကိုနှစ်တိုင်း အစဉ်မပြတ်စောင့်မည်အကြောင်း၊
ಯೆಹೂದ್ಯರು ಸ್ಮರಿಸಿಕೊಂಡು ಪ್ರತಿವರ್ಷವೂ ಆ ಎರಡು ದಿನಗಳನ್ನು, ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವಂತೆ ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಯಾವ ವಿಧದಲ್ಲಿಯೂ ಮೀರಕೂಡದ ಪದ್ಧತಿಯನ್ನಾಗಿ ಪಾಲಿಸಲು ತೀರ್ಮಾನಿಸಿದರು.
28 ၂၈ ထိုပုရနေ့တို့သည် ယုဒအမျိုး၌မပျောက်၊ သားစဉ်မြေးဆက်တို့သည် မမေ့မလျော့၊ အပြည်ပြည် အမြို့မြို့၌ နေသောအဆွေအမျိုးအသီးအသီး အစဉ် အဆက်တို့သည်အောက်မေ့ စောင့်ရှောက်မည်အကြောင်း ဝန်ခံကြ၏။
ಇದಲ್ಲದೆ ಈ ಎರಡು ದಿನಗಳನ್ನು ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ, ಪ್ರತಿ ತಲೆಮಾರಿನಲ್ಲಿಯೂ, ಪ್ರತಿ ಕುಟುಂಬದಲ್ಲಿಯೂ ಸ್ಮರಿಸಿ ಆಚರಿಸಬೇಕು. ಈ ಪೂರಿಮ್ ದಿನಗಳು ಯೆಹೂದ್ಯರಲ್ಲಿ ಎಂದಿಗೂ ನಿಂತುಹೋಗಬಾರದು. ಅವರ ಸಂತಾನದವರಲ್ಲಿ ಅವುಗಳ ಜ್ಞಾಪಕವು ಅಳಿದು ಹೋಗಬಾರದು ಎಂದೂ ತೀರ್ಮಾನಿಸಿಕೊಂಡರು.
29 ၂၉ ထိုအခါ အဘိဟဲလသမီး မိဖုရားဧသတာနှင့် ယုဒအမျိုး မော်ဒကဲတို့သည်၊ ပုရနေ့တို့ကို မြဲမြံစွာ တည်စေခြင်းငှါ ကျပ်တည်းစွာ အာဏာထား၍ မှာစာကို တဖန်ရေးထားကြ၏။
ಆಗ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯೂ, ಈ ಪೂರಿಮ್ ದಿನವನ್ನು ಸ್ಥಿರಪಡಿಸುವುದಕ್ಕಾಗಿ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಎರಡನೆಯ ಪತ್ರವನ್ನು ಪೂರ್ಣ ಅಧಿಕಾರದಿಂದ ಬರೆದಳು.
30 ၃၀ ယုဒအမျိုးသား မော်ဒကဲနှင့် မိဖုရားဧသတာ မှာထား၍၊
ಮೊರ್ದೆಕೈಯೂ ದಯೆ ಹಾಗೂ ಭರವಸೆಯ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತಗಳಲ್ಲಿರುವ ಸಮಸ್ತ ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದನು.
31 ၃၁ ယုဒလူတို့သည် ကိုယ်အဘို့နှင့် သားစဉ် မြေးဆက်အဘို့ စီရင်သည်အတိုင်း၊ ချိန်းချက်သော အချိန်၌ အစာရှောင်ခြင်း၊ ဆုတောင်းခြင်းနှင့်တကွ ပုရနေ့တို့ကို အမြဲစောင့်စေခြင်းငှါ၊ အာရွှေရုနိုင်ငံတော် တွင် တိုင်းပြည်တရာနှစ်ဆယ်ခုနစ်ပြည်၌ရှိသော ယုဒလူ အပေါင်းတို့ နေရာသို့ ငြိမ်သက်စေသော သစ္စာစကားနှင့် ထိုမှာစာကို မော်ဒကဲပေးလိုက်လေ၏။
ಇದಲ್ಲದೆ ಈ ಪೂರಿಮ್ ದಿನಗಳನ್ನು ಯೆಹೂದ್ಯನಾದ ಮೊರ್ದೆಕೈಯೂ ರಾಣಿಯಾದ ಎಸ್ತೇರಳೂ ಎಲ್ಲಾ ಯೆಹೂದ್ಯರಿಗೂ, ಅವರ ಸಂತಾನದವರಿಗೂ ಉಪವಾಸ ಮಾಡಿ, ದುಃಖಿಸುವ ಕಾಲವನ್ನು ಸ್ಥಿರಪಡಿಸಿದ ಪ್ರಕಾರವೇ ಈ ಪೂರಿಮ್ ದಿನವನ್ನು ಸ್ಥಿರಪಡಿಸುವುವಂತೆ ಆಜ್ಞಾಪಿಸಿದ್ದರು.
32 ၃၂ ဧသတာစီရင်သောအားဖြင့်၊ ပုရနေ့တို့ကို စောင့်ရာ ထုံးစံသည် အမြဲတည်၍ ဤစာ၌ရေးထား လျက်ရှိသတည်း။
ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರಿಮ್ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದ್ದರಿಂದ ಅದು ಗ್ರಂಥದಲ್ಲಿ ಬರೆಯಲಾಯಿತು.

< ဧ​သ​တာ 9 >