< ယေဇကျေလ 11 >
1 ၁ ထိုနောက် ဝိညာဉ်တော်သည် ငါ့ကိုချီ၍၊ အရှေ့ ဘက်သို့ မျက်နှာပြုသော ထာဝရဘုရား၏ အိမ်တော် အရှေ့တံခါးသို့ ဆောင်သွား၍၊ တံခါးဝ၌ လူနှစ်ကျိပ် ငါးယောက်ရှိ၏။ သူတို့တွင်မင်းပြုသောသူ၊ အဇုရသား ယာဇညာ၊ ဗေနာယသားပေလတိတို့ကို ငါမြင်၏။
೧ಆ ಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.
2 ၂ ဗျာဒိတ်တော်အသံကား၊ အချင်းလူသား၊ ဤ သူတို့သည် မကောင်းသောအကြံကို ကြံစည်၍၊ ဤမြို့၌ မတရားသော တိုင်ပင်ခြင်းကို ပြုသောသူဖြစ်ကြ၏။
೨ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ.
3 ၃ သူတို့က၊ အမှုမရောက်သေး။ အိမ်ဆောက်ကြ ကုန်အံ့။ ဤမြို့သည် အိုးကင်း၊ ငါတို့သည် အမဲသား ဖြစ်သည်ဟု ဆိုတတ်ကြ၏။
೩ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ.
4 ၄ သို့ဖြစ်၍ အိုလူသား၊ သူတို့တဘက်၌ ပရောဖက် ပြု၍ ဟောပြောလော့ဟု မိန့်တော်မူ၏။
೪ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಅಹಿತವನ್ನು ನುಡಿ, ತಪ್ಪದೆ ನುಡಿ” ಎಂದು ಆಜ್ಞಾಪಿಸಿದನು.
5 ၅ ထိုအခါ ထာဝရဘုရား၏ ဝိညာဉ်တော်သည် ငါ့အပေါ်သို့ သက်ရောက်၍၊ သင်သည် ဟောပြောလော့။ ထာဝရဘုရားမိန့်တော်မူသည်ကား၊ အိုဣသရေလ အမျိုး၊ သင်တို့သည် ဤသို့ပြောဆိုကြပြီ။ သင်တို့ကြံစည် သမျှတို့ကို ငါသိ၏။
೫ಆಗ ಯೆಹೋವನ ಆತ್ಮವು ನನ್ನಲ್ಲಿ ಆವೇಶ ಉಂಟುಮಾಡಿ, ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತನಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.
6 ၆ သင်တို့သည် ဤမြို့၌သူရဲတို့ကို များပြားစေ၍၊ မြို့လမ်းတို့ကို သူရဲများနှင့်ပြည့်စေကြပြီ။
೬ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.
7 ၇ ထိုကြောင့် အရှင်ထာဝရဘုရား မိန့်တော်မူ သည်ကား၊ သင်တို့ထားသော သူရဲတို့သည် အမဲသား ဖြစ်၏။ ဤမြို့သည် အိုးကင်းဖြစ်၏။ သို့သော်လည်း၊ သင်တို့ကို မြို့ထဲက ငါထုတ်မည်။
೭“ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.
8 ၈ သင်တို့သည် ထားကို ကြောက်သည်ဖြစ်၍၊ ငါသည် ထိုထားကို သင်တို့အပေါ်သို့ရောက်စေမည်ဟု အရှင်ထာဝရဘုရား မိန့်တော်မူ၏။
೮ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು’” ಇದು ಕರ್ತನಾದ ಯೆಹೋವನ ನುಡಿ.
9 ၉ ငါသည် သင်တို့ကိုမြို့ထဲက ထုတ်ပြီးလျှင်၊ တကျွန်းတနိုင်ငံသား တို့၏လက်သို့အပ်၍ အပြစ်ဒဏ်ကို စီရင်မည်။
೯“ನಾನು ಪಟ್ಟಣದೊಳಗಿಂದ ನಿಮ್ಮನ್ನು ಕಿತ್ತು ಅನ್ಯರ ಕೈಗೆ ಕೊಟ್ಟು ದಂಡಿಸುವೆನು.
10 ၁၀ သင်တို့သည် ထားဖြင့်ဆုံးရှုံးကြ၍၊ ဣသရေလ ပြည်စွန်းမှာ ငါ စစ်ကြောစီရင်သဖြင့်၊ ငါသည် ထာဝရ ဘုရားဖြစ်ကြောင်းကို သင်တို့ သိရကြလိမ့်မည်။
೧೦ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು, ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
11 ၁၁ ဤမြို့သည် သင်တို့၏ အိုးကင်းမဖြစ်ရ၊ သင်တို့ သည်လည်း၊ အိုးကင်း၌ အမဲသားမဖြစ်ရကြ။ ဣသရေလ ပြည်စွန်းမှာ ငါစစ်ကြောစီရင်သဖြင့်၊ ငါသည် ထာဝရ ဘုရားဖြစ်ကြောင်းကို သင်တို့သိရကြလိမ့်မည်။
೧೧ಈ ಪಟ್ಟಣವು ನಿಮಗೆ ಹಂಡೆಯಾಗುವುದಿಲ್ಲ; ನೀವು ಅದರಲ್ಲಿನ ಮಾಂಸವಾಗುವುದಿಲ್ಲ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು.
12 ၁၂ အကြောင်းမူကား၊ သင်တို့သည် ငါ၏ဘုရား လမ်းသို့မလိုက်၊ ငါ့စီရင်ချက်တို့ကို မစောင့်၊ သင်တို့ ပတ်လည်၌နေသော လူမျိုးတို့၏ ထုံးစံဓလေ့တို့ကို လိုက်ကြပြီဟု မိန့်တော်မူ၏။
೧೨“‘ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”
13 ၁၃ ထိုဗျာဒိတ်တော်စကားကို ငါသည်ဆင့်ဆို၍ ဟောပြောစဉ်တွင်၊ ဗေနာယသားပေလတိသည် သေ၏။ ငါသည်လည်း ပြပ်ဝပ်၍၊ အိုအရှင် ထာဝရဘုရား၊ ကျန်ကြွင်းသော ဣသရေလအမျိုးသားတို့ကို ဆုံးရှုံး စေတော်မူမည်လောဟု ကျယ်သောအသံနှင့် ကြွေးကြော် ၏။
೧೩ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ, “ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿಯೋ?” ಎಂದು ಮೊರೆಯಿಟ್ಟೆನು.
14 ၁၄ တဖန်ထာဝရဘုရား၏ နှုတ်ကပတ်တော်သည် ငါ့ဆီသို့ရောက်လာ၍၊
೧೪ಆಗ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
15 ၁၅ အချင်းလူသား၊ ယေရုရှလင်မြို့သူမြို့သားတို့က၊ ထာဝရဘုရားထံတော်မှ ဝေးစွာထွက်သွားကြလော့။ ဤပြည်ကိုငါတို့အား အပိုင်ပေးတော်မူပြီဟု သင်၏ ညီအစ်ကို၊ သင်၏အမျိုးသားချင်း၊ ဣသရေလအမျိုး သားအပေါင်းတို့အား ဆိုတတ်ကြ၏။
೧೫“ನರಪುತ್ರನೇ, ನಿನ್ನ ಸಹೋದರರು, ನಿನ್ನ ಅಣ್ಣತಮ್ಮಂದಿರು, ನಿನ್ನ ನೆಂಟರು ಅಂತು ಯೆರೂಸಲೇಮಿನವರು ಮತ್ತು ಇಸ್ರಾಯೇಲ್ ವಂಶದವರಲ್ಲಿ ಉಳಿದಿರುವವರು, ‘ಯೆಹೋವನ ಬಳಿಯಿಂದ ದೂರವಾಗಿ ತೊಲಗಿರಿ, ಈ ದೇಶವು ನಮಗೇ ಸ್ವತ್ತಾಗಿ ಸಿಕ್ಕಿದೆ’ ಎಂದು ಹೀನೈಸಿದರೋ ಅವರೆಲ್ಲರು ಉಳಿದಿದ್ದಾರಲ್ಲಾ.
16 ၁၆ ထိုကြောင့်၊ အရှင်ထာဝရဘုရား မိန့်တော်မူ သည်ကား၊ သင်၏အမျိုးသားချင်းတို့ကို တပါးအမျိုးသား တို့ နေရာဝေးသောအရပ်သို့ ငါပြောင်းစေ၍၊ အတိုင်း တိုင်းအပြည်ပြည်တို့၌ ဖြန့်ကြဲသော်လည်း၊ သူတို့ ရောက် သောပြည်တို့၌ ငါသည်သူတို့အဘို့ သန့်ရှင်းရာဌာနကဲ့သို့ ခဏ ဖြစ်လိမ့်မည်။
೧೬“ಆದಕಾರಣ ನೀನು ಹೀಗೆ ಸಾರು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ದೂರವಾಗಿ ತೊಲಗಿಸಿ, ಜನಾಂಗಗಳಲ್ಲಿ ಮತ್ತು ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಸ್ವಲ್ಪ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.’
17 ၁၇ အရှင်ထာဝရဘုရားမိန့်တော်မူသည်ကား၊ သူတို့ ကို ဖြန့်ကြဲသော လူအမျိုးမျိုး နေရာအတိုင်းတိုင်း အပြည်ပြည်တို့မှ ငါသိမ်းယူ၍၊ စုဝေးပြီးလျှင်၊ ဣသရေလ ပြည်ကိုပေးမည်။
೧೭“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.’
18 ၁၈ သူတို့သည် ထိုပြည်သို့ရောက်၍၊ စက်ဆုပ်ရွံရှာ ဘွယ်သော အမှုအရာရှိသမျှတို့ကို ပယ်ရှားကြလိမ့်မည်။
೧೮ಅವರು ಅಲ್ಲಿಗೆ ಸೇರಿ ಎಲ್ಲಾ ಅಸಹ್ಯ ವಸ್ತುಗಳನ್ನೂ, ಸಮಸ್ತ ಅಸಹ್ಯ ವಿಗ್ರಹಗಳನ್ನೂ ಅಲ್ಲಿಂದ ತೆಗೆದುಹಾಕುವರು.
19 ၁၉ ငါသည်လည်း၊ ညီညွတ်သော စိတ်နှလုံးနှင့် အသစ်သောသဘောကို သွင်းပေးမည်။ သူတို့ကိုယ်ခန္ဓာ ထဲက ကျောက်နှလုံးကို နှုတ်၍၊ အသားနှလုံးကို ပေးသော ကြောင့်၊
೧೯“ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.
20 ၂၀ သူတို့သည် ငါစီရင်ထုံးဖွဲ့သော ပညတ်တရား လမ်းသို့လိုက်၍ စောင့်ရှောက်သဖြင့်၊ ငါ၏လူဖြစ်ကြ လိမ့်မည်။ ငါသည်လည်း သူတို့၏ ဘုရားသခင်ဖြစ်မည်။
೨೦ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.
21 ၂၁ သို့မဟုတ်လျှင်၊ စက်ဆုပ်ရွံ့ရှာဘွယ်သော အမူ အရာတို့၏ အလိုသို့ စိတ်နှလုံးအားဖြင့် လိုက်သော သူတို့၏ အပြစ်ကို၊ သူတို့၏ခေါင်းပေါ်သို့ ငါရောက်စေ မည်ဟု အရှင်ထာဝရဘုရားမိန့်တော်မူ၏။
೨೧ಆದರೆ ಯಾರ ಮನಸ್ಸು ತಮ್ಮ ಅಸಹ್ಯ ವಸ್ತುಗಳನ್ನೂ, ಅಸಹ್ಯ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಇದು ಕರ್ತನಾದ ಯೆಹೋವನ ನುಡಿ.
22 ၂၂ ထိုအခါ ခေရုဗိမ်တို့သည် အတောင်တို့ကို ဖြန့်၍၊ ဘီးတို့သည်လည်း လိုက်ကြ၏။ ဣသရေလအမျိုး၏ ဘုရားသခင့်ဘုန်းတော်သည်လည်း သူတို့အပေါ်၌ ရှိတော်မူ၏။
೨೨ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು, ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು.
23 ၂၃ ထာဝရဘုရား၏ ဘုန်းတော်သည် မြို့ထဲက တက်၍၊ မြို့အရှေ့မှာ ရှိသောတောင်ပေါ်၌ ရပ်တော်မူ၏။
೨೩ಆಗ ಯೆಹೋವನ ತೇಜಸ್ಸು ಪಟ್ಟಣದ ಮಧ್ಯದೊಳಗಿಂದ ಏರಿ ಪಟ್ಟಣಕ್ಕೆ ಪೂರ್ವದಲ್ಲಿರುವ ಗುಡ್ಡದ ಮೇಲೆ ನಿಂತಿತು.
24 ၂၄ ဝိညာဉ်တော်သည်လည်း၊ ဘုရားသခင်၏ ဗျာဒိတ်ရူပါရုံအားဖြင့် ငါ့ကိုချီ၍ သိမ်းသွားသော သူတို့ နေရာ၊ ခါလဒဲပြည်သို့ ဆောင်သွားတော်မူ၏။ ငါမြင်ခဲ့ပြီး သော ဗျာဒိတ်ရုံသည်လည်း ငါနှင့်ကွာ၍ တက်သွား၏။
೨೪ಆಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯ ದರ್ಶನದ ಮುಖಾಂತರ ಕಸ್ದೀಯರ ದೇಶದಲ್ಲಿ ಸೆರೆಯಾದವರ ಬಳಿಗೆ ಕರೆತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.
25 ၂၅ ထာဝရဘုရားပြတော်မူခဲ့ပြီးသော အမှုအရာ ရှိသမျှတို့ကို ငါသည်သိမ်းသွားခြင်းကိုခံရသော သူတို့အား ကြားပြောလေ၏။
೨೫ಯೆಹೋವನು ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆನು.