< ကမ္ဘာဦး 3 >
1 ၁ မြွေသည် ထာဝရအရှင်ဘုရားသခင် ဖန်ဆင်းတော်မူသော မြေတိရစ္ဆာန်သကာတို့ထက် လိမ္မာသည် ဖြစ်၍၊ မိန်းမအား သင်တို့သည် ဥယျာဉ်၌ရှိသမျှသောအပင်တို့၏ အသီးကိုမစားရဟု ဧကန်စင်စစ် ဘုရား သခင်မိန့်တော်မူသလောဟု မေး၏။
ಯೆಹೋವ ದೇವರು ಸೃಷ್ಟಿಸಿದ ಅಡವಿಯ ಎಲ್ಲಾ ಕಾಡುಮೃಗಗಳಿಗಿಂತ ಸರ್ಪವು ಬಹು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಗೆ, “ನೀವು ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ?” ಎಂದು ಕೇಳಿತು.
2 ၂ မိန်းမကလည်း၊ ငါတို့သည် ဥယျာဉ်ရှိသော အပင်တို့၏ အသီးကိုစားရသော အခွင့်ရှိ၏။
ಆಗ ಸ್ತ್ರೀಯು ಸರ್ಪಕ್ಕೆ, “ತೋಟದ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು.
3 ၃ ဥယျာဉ်အလယ်၌ရှိသော အပင်၏အသီးကိုကား၊ သင်တို့သည် မကိုင်မစားပဲ နေကြလော့၊ သို့မဟုတ် သေမည်ဟု ဘုရားသခင် အမိန့်တော်ရှိသည်ဟု မြွေအားဆို၏။
ಆದರೆ ತೋಟದ ಮಧ್ಯದಲ್ಲಿರುವ ಈ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಕೂಡದು, ಮುಟ್ಟಲೂ ಕೂಡದು; ತಿಂದರೆ ಸತ್ತು ಹೋಗುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದಳು.
4 ၄ မြွေကလည်း သင်တို့သည် ဧကန်အမှန် သေရမည်မဟုတ်၊
ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.
5 ၅ အကြောင်းမူကား၊ ထိုအသီးကိုစားသောနေ့၌ သင်တို့သည် မျက်စိပွင့်လင်းလျက် ကောင်းမကောင်းကို သိ၍၊ ဘုရားသခင်ကဲ့သို့ ဖြစ်ကြ လတံ့သည်ကို၊ ဘုရားသခင်သိတော်မူသည်ဟု မိန်းမအားဆို၏။
ನೀವು ಇದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯುವುವು, ನೀವು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿತವರಾಗಿ ದೇವರ ಹಾಗೆ ಇರುವಿರಿ. ಇದು ದೇವರಿಗೆ ತಿಳಿದಿದೆ,” ಎಂದು ಹೇಳಿತು.
6 ၆ ထိုအပင်သည် စားဘွယ်ကောင်းခြင်း၊ အဆင်းလည်းလှခြင်း၊ ပညာတိုးပွားစေလိုသောငှါ၊ နှစ်သက် ဖွယ်သော အပင်ဖြစ်ခြင်းကို မိန်းမသည် မြင်လျှင်၊ အသီးကို ယူ၍စား၏။ မိမိခင်ပွန်းအားလည်း ပေး၍ သူသည်လည်း စား၏။
ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.
7 ၇ ထိုသူနှစ်ယောက်တို့သည် မျက်စိပွင့်လင်း၍ မိမိတို့၌ အဝတ်အချည်းစည်းရှိသည်ကို သိမြင်လျှင်၊ မိမိတို့ ဝတ်ရန်ဖို့ သင်္ဘောသဖန်းပင်အရွက်တို့ကို ချုပ်စပ်၍ ခါးစည်းကိုလုပ်ကြ၏။
ಆಗ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು, ಅವರು ಅಂಜೂರದ ಎಲೆಗಳನ್ನು ತೆಗೆದುಕೊಂಡು ತಮಗೆ ತಾವೇ ಉಡುಪುಗಳನ್ನು ಮಾಡಿಕೊಂಡರು.
8 ၈ နေဧသောအချိန်တွင်၊ ထိုဥယျာဉ်၌ ထာဝရအရှင်ဘုရားသခင် ကြွတော်မူသောအသံကို လုလင်မယားတို့သည် ကြားလျှင်၊ အထံတော်မှ လွတ်ခြင်းငှါ၊ ဥယျာဉ်အပင် တို့တွင် ပုန်းကွယ်လျက် နေကြ၏။
ತರುವಾಯ ಯೆಹೋವ ದೇವರು, ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ, ಆ ಸ್ತ್ರೀ ಪುರುಷರು ಅವರ ಸಪ್ಪಳವನ್ನು ಕೇಳಿ, ಅವರಿಗೆ ಕಾಣಿಸಿಕೊಳ್ಳಬಾರದೆಂದು ತೋಟದ ಮರಗಳ ಮಧ್ಯದಲ್ಲಿ ಅಡಗಿಕೊಂಡರು.
9 ၉ ထာဝရအရှင် ဘုရားသခင်ကလည်း၊ သင်သည် အဘယ်မှာရှိသနည်းဟု၊ လူကိုခေါ်တော်မူ၏။
ಆಗ ಯೆಹೋವ ದೇವರು ಮನುಷ್ಯನನ್ನು ಕರೆದು ಅವನಿಗೆ, “ನೀನು ಎಲ್ಲಿದ್ದೀ?” ಎಂದರು.
10 ၁၀ လူကလည်း ဥယျာဉ်၌ကိုယ်တော်၏ အသံကို ကျွန်တော်ကြားလျှင်၊ အဝတ်အချည်းစည်းရှိသောကြောင့်၊ ကြောက်၍ပုန်းလျက်နေပါသည်ဟု လျှောက်လေ၏။
ಅದಕ್ಕೆ ಅವನು, “ನಿನ್ನ ಶಬ್ದವನ್ನು ನಾನು ತೋಟದಲ್ಲಿ ಕೇಳಿದೆ. ನಾನು ಬೆತ್ತಲೆಯಾಗಿರುವುದರಿಂದ ಭಯಪಟ್ಟು ಅಡಗಿಕೊಂಡೆನು,” ಎಂದನು.
11 ၁၁ ဘုရားသခင်ကလည်း၊ သင်၌ အဝတ်အချည်းစည်းရှိသည်ကို သင်အားအဘယ်သူပြောသနည်း။ မစားရဟု ငါပညတ်သော အပင်၏အသီးကို စားပြီလောဟု မေးတော်မူ၏။
ಅದಕ್ಕೆ ದೇವರು, “ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದೀಯೋ?” ಎಂದು ಕೇಳಿದರು.
12 ၁၂ လူကလည်း ကျွန်တော်၌ အပ်ပေးတော်မူသော မိန်းမသည် ထိုအပင်၏အသီးကိုပေး၍ ကျွန်တော်စားမိပါသည်ဟု လျှောက်လေ၏။
ಅದಕ್ಕೆ ಮನುಷ್ಯನು, “ನೀನು ನನ್ನ ಸಂಗಡ ಇರಿಸಿದ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು. ನಾನು ತಿಂದೆನು,” ಎಂದು ಹೇಳಿದನು.
13 ၁၃ ထာဝရအရှင်ဘုရားသခင်ကလည်း၊ သင်သည် အဘယ်သို့ပြုပြီးသနည်းဟု မိန်းမအားမေးတော်မူလျှင်၊ မိန်းမက မြွေသည် ကျွန်တော်မကို လှည့်စား၍၊ ကျွန်တော်မသည်စားမိပါပြီဟု လျှောက်လေ၏။
ಯೆಹೋವ ದೇವರು ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಅದಕ್ಕೆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು. ನಾನು ತಿಂದೆನು,” ಎಂದು ಉತ್ತರಕೊಟ್ಟಳು.
14 ၁၄ ထာဝရအရှင်ဘုရားသခင်သည် မြွေကိုခေါ်၍ သင်သည် ဤအမှုကို ပြုသောကြောင့် သားယဉ်သားရဲ အပေါင်းတို့ထက် ကျိန်ခြင်းကို ခံရ၏။ သင်သည် ဝမ်းဖြင့် သွား၍ မြေမှုန့်ကို တသက်လုံးစားရမည်။
ಆಗ ಯೆಹೋವ ದೇವರು ಸರ್ಪಕ್ಕೆ ಹೀಗೆ ಹೇಳಿದರು, “ನೀನು ಇದನ್ನು ಮಾಡಿದ ಕಾರಣ, “ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಕಾಡುಮೃಗಗಳಲ್ಲಿಯೂ ನೀನು ಬಹು ಶಾಪಗ್ರಸ್ತನಾದೆ. ಇಂದಿನಿಂದ ನಿನ್ನ ಜೀವನ ಪೂರ್ತಿ ಹೊಟ್ಟೆಯಿಂದ ಹರಿದಾಡಿ, ಮಣ್ಣನ್ನು ತಿನ್ನುವೆ.
15 ၁၅ သင်နှင့်မိန်းမကို၎င်း၊ သင်၏အမျိုးအနွယ်နှင့် မိန်းမ၏ အမျိုးအနွယ်ကို၎င်း၊ ငါသည်ရန်ငြိုးဖွဲ့စေမည်။ သူသည် သင်၏ခေါင်းကို ကြိတ်လိမ့်မည်၊ သင်သည် သူ၏ဖနောင့်ကို ကြိတ်လိမ့်မည်ဟု မိန့်တော်မူ၏။
ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”
16 ၁၆ မိန်းမကိုလည်း၊ သင်၌ကိုယ်ဝန်ဆောင်ခြင်း ဝေဒနာကို ငါအလွန်များပြားစေရမည်။ ပင်ပန်းစွာ ဝေဒနာကို ခံ၍သားဘွားရမည်။ ကိုယ်ခင်ပွန်း၏ အလိုသို့လိုက်၍ သူ၏အုပ်စိုးခြင်းကိုလည်း ခံရမည်ဟု မိန့် တော်မူ၏။
ಬಳಿಕ ದೇವರು ಸ್ತ್ರೀಗೆ ಹೀಗೆ ಹೇಳಿದರು, “ನಾನು ನಿನ್ನ ಗರ್ಭ ವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು. ನೀನು ನೋವಿನಿಂದ ಮಕ್ಕಳನ್ನು ಹೆರುವಿ. ನಿನ್ನ ಗಂಡನ ಮೇಲೆ ನಿನ್ನ ಬಯಕೆ ಇರುವುದು. ಅವನು ನಿನ್ನನ್ನು ಆಳುವನು.”
17 ၁၇ ယောက်ျားကိုလည်း၊ ထိုအပင်၏အသီးကို မစားရဟု ငါပညတ်သော်လည်း၊ သင်သည်မယား၏ စကားကိုနားထောင်၍ စားမိသောကြောင့်၊ မြေသည် သင်၏အတွက် ကျိန်ခြင်းကို ခံလျက်ရှိ၏။ မြေ၏အသီးကို တသက်ပတ်လုံးပင်ပန်းစွာ စားရမည်။
ಅನಂತರ ದೇವರು ಆದಾಮನಿಗೆ ಹೀಗೆ ಹೇಳಿದರು, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, “ನಿನ್ನ ನಿಮಿತ್ತ ಭೂಮಿಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ದುಡಿದು, ಅದರ ಹುಟ್ಟುವಳಿಯನ್ನು ಉಣ್ಣುವೆ.
18 ၁၈ ဆူးပင်အမျိုးမျိုးတို့ကိုလည်း သင်အဖို့ မြေပေါက်စေမည်။ လယ်၌ဖြစ်သော ဟင်းသီးဟင်းရွက်တို့ကို သင် စားရမည်။
ಭೂಮಿಯಲ್ಲಿ ಮುಳ್ಳುಗಿಡಗಳೂ ಕಳ್ಳಿಗಳೂ ಬೆಳೆಯುವುವು. ನೀನು ಹೊಲದ ಬೆಳೆಯನ್ನು ಉಣ್ಣುವೆ.
19 ၁၉ သင်ထွက်ရာမြေသို့မပြန်မှီတိုင်အောင်၊ သင်၏ မျက်နှာမှချွေးထွက်လျက် အစာကိုစားရမည်။ အကြောင်းမူကား၊ သင်သည် မြေမှုန့်ဖြစ်၍ မြေမှုန့်သို့ ပြန်ရမည်ဟု မိန့်တော်မူ၏။
ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”
20 ၂၀ ထိုအခါလူသည် မိမိမယားကို ဧဝအမည်ဖြင့် မှည့်လေ၏။ အကြောင်းမူကား၊ သူသည် အသက်ရှင် သော သူအပေါင်းတို့၏ အမိဖြစ်သတည်း။
ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಏಕೆಂದರೆ ಆಕೆಯೇ ಬದುಕಿದವರಿಗೆಲ್ಲಾ ತಾಯಿಯಾಗಿದ್ದಾಳೆ.
21 ၂၁ ထာဝရအရှင် ဘုရားသခင်သည်လည်း လူလင် မယားတို့ သားရေဖြင့် ပတ်လုံကိုလုပ်၍ ဝတ်ခြုံစေတော် မူ၏။
ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದರು.
22 ၂၂ ထာဝရအရှင်ဘုရားသခင်ကလည်း၊ လူသည် ငါတို့တွင် တပါးပါးကဲ့သို့ဖြစ်၍၊ ကောင်းမကောင်း သိတတ်၏။ ယခုမှာ သူသည် ထာဝရအသက်ကို ရခြင်းငှါ၊ လက်ကိုဆန့်လျက် အသက်ပင်၏အသီးကို ယူ၍ မစားသင့်ဟု မိန့်တော်မူ၏။
ಯೆಹೋವ ದೇವರು, “ಇಗೋ, ಮನುಷ್ಯನು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ತಿಳಿದು, ನಮ್ಮಲ್ಲಿ ಒಬ್ಬನಂತಾದನಲ್ಲಾ. ಈಗ ಅವನು ಕೈಚಾಚಿ, ಜೀವವೃಕ್ಷದ ಹಣ್ಣನ್ನು ಸಹ ತಿಂದು, ಶಾಶ್ವತವಾಗಿ ಬದುಕುವವನಾಗಬಾರದು,” ಎಂದರು.
23 ၂၃ လူသည် မိမိထွက်သော မြေ၌ လုပ်ရမည်အကြောင်း၊ ထာဝရအရှင်ဘုရားသခင်သည် ဧဒင် ဥယျာဉ်ထဲက လွှတ်လိုက်တော်မူ၏။
ಆದ್ದರಿಂದ ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕೆ ಯೆಹೋವ ದೇವರು ಏದೆನ್ ತೋಟದೊಳಗಿಂದ ಅವನನ್ನು ಹೊರಗೆ ಕಳುಹಿಸಿಬಿಟ್ಟರು.
24 ၂၄ ထိုသို့လူကို နှင်ထုတ်ပြီးလျှင်၊ အသက်ပင်လမ်းကို စောင့်ရှောက်စေခြင်းငှါ၊ မီးစင်လက်နက်နှင့်တကွ ခေရုဗိမ်တို့ကို ဥယျာဉ်အရှေ့ဘက်၌ ထားတော်မူ၏။
ಹೀಗೆ ಅವರು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷದ ದಾರಿಯನ್ನು ಕಾಯುವುದಕ್ಕೆ ಏದೆನ್ ತೋಟದ ಪೂರ್ವದಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಖಡ್ಗವನ್ನೂ ಇರಿಸಿದರು.