< ယေရမိ 32 >
1 ၁ နေဗုခဒ်နေဇာ နန်းစံတဆယ်ရှစ်နှစ်၊ ယုဒ ရှင်ဘုရင် ဇေဒကိ နန်းစံဆယ်နှစ်တွင်၊ ထာဝရဘုရား ထံတော်မှ နှုတ်ကပတ်တော်သည် ယေရမိသို့ ရောက် လာ၏။
೧ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಯೆಹೋವನು ಯೆರೆಮೀಯನಿಗೆ ತನ್ನ ವಾಕ್ಯವನ್ನು ದಯಪಾಲಿಸಿದನು.
2 ၂ ထိုအခါ ဗာဗုလုန် ရှင်ဘုရင်၏ စစ်သူရဲတို့သည် ယေရုရှလင်မြို့ကို ဝိုင်းထားကြပြီ။ ပရောဖက်ယေရမိ သည် ယုဒရှင်ဘုရင်၏ နန်းတော်ထောင်ဝင်းထဲမှာ အချုပ်ခံလျက်နေရ၏။
೨ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.
3 ၃ အကြောင်းမူကား၊ ယုဒရှင်ဘုရင် ဇေဒကိသည် ခေါ်၍၊ ထာဝရဘုရားက၊ ဤမြို့ကို ဗာဗုလုန်ရှင်ဘုရင် လက်သို့ ငါအပ်၍၊ သူသည် သိမ်းယူလိမ့်မည်။
೩ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವನು ಇಂತೆನ್ನುತ್ತಾನೆ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.
4 ၄ ယုဒရှင်ဘုရင် ဇေဒကိသည် ခါလဒဲလူတို့ လက်နှင့်မလွတ်၊ ဗာဗုလုန် ရှင်ဘုရင်လက်သို့ ဆက်ဆက် ရောက်လိမ့်မည်။ မျက်နှာချင်းဆိုင်၍ စကားပြောလျက်၊ တယောက်ကို တယောက်ကြည့်ရှုလျက် တွေ့ရလိမ့်မည်။
೪ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವುದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತನಾಡುವನು.
5 ၅ ဇေဒကိကိုလည်း ဗာဗုလုန်မြို့သို့ ဆောင်သွား လိမ့်မည်။ငါအကြည့်အရှုမလာမှီတိုင်အောင်၊ ထိုမြို့၌ နေရလိမ့်မည်။ သင်တို့သည် ခါလဒဲလူတို့ကို စစ်တိုက်၍ မနိုင်ရကြဟု ထာဝရဘုရား မိန့်တော်မူကြောင်းကို၊ သင် သည် အဘယ်ကြောင့် ပရောဖက်ပြု၍ ဟောသနည်းဟု ဆို၍ ထောင်ထဲမှာ လှောင်ထားသတည်း။
೫ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು. ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬುದಾಗಿ ಏಕೆ ನುಡಿಯುತ್ತೀ?’” ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.
6 ၆ ထိုအခါယေရမိက၊ ငါ့ဆီသို့ရောက်လာသော ထာဝရဘုရား၏ နှုတ်ကပတ်တော်ဟူမူကား၊
೬ಅದಕ್ಕೆ ಯೆರೆಮೀಯನು, “ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು,
7 ၇ သင်၏ဘထွေး ရှလ္လုံသား ဟာနမေလသည် သင့်ထံသို့လာ၍၊ အာနသုတ်မြို့မှာရှိသော ကျွန်ုပ်လယ်ကို သင်သည် ရွေးပိုင်သောကြောင့်၊ ဝယ်ပါဟု ပြောဆို လိမ့်မည်အကြောင်းကို ထာဝရဘုရား မိန့်တော်မူသည်နှင့် အညီ၊
೭ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು’” ಎಂದು ತಿಳಿಸಿದನು.
8 ၈ ငါ့ဘထွေး သားဟာနမေလသည် ငါရှိရာ ထောင်ဝင်းထဲသို့ လာ၍၊ ဗင်္ယာမိန်ခရိုင်၊ အာနသုတ်မြို့၌ ရှိသော ကျွန်ုပ်လယ်ကို ဝယ်ပါလော့။ သင်သည် အမွေခံပိုင်သော အခွင့်နှင့် ရွေးပိုင်သော အခွင့်ရှိသည် ဖြစ်၍၊ ကိုယ်အဘို့ ဝယ်ပါဟု ငါ့အားပြောဆို၏။ ထိုအခါ ထာဝရဘုရား စီရင်တော်မူသော အမှုဖြစ်ကြောင်းကို ငါသိသောကြောင့်၊
೮ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, “ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ” ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.
9 ၉ အာနသုတ်မြို့၌ရှိသော ငါ့ဘထွေးသား ဟာနမေလ၏လယ်ကို ငါဝယ်၍ လယ်ဘိုးငွေ တဆယ် ခုနစ်ကျပ်ကို ချိန်ပေးလေ၏။
೯ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲಾ ಬೆಳ್ಳಿಯನ್ನು ತೂಕಮಾಡಿ ಅವನಿಗೆ ಕೊಟ್ಟೆನು.
10 ၁၀ စာချုပ်ကိုလည်း စီရင်၍ တံဆိပ်ခတ်ပြီးမှ၊ သက်သေတို့ကိုခေါ်၍ ငွေကို ချိန်ခွင်နှင့်ချိန်ပေး၏။
೧೦ಪತ್ರಕ್ಕೆ ಸಹಿ ಹಾಕಿ ಮುಚ್ಚಿ ಆ ಮುಚ್ಚಳಕ್ಕೆ ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು.
11 ၁၁ ဓမ္မသတ်ထုံးစံအတိုင်း တံဆိပ်ခတ်သော စာချုပ် တစောင်နှင့် ဖွင့်ထားသောလက်ခံတစောင်ကို ယူ၍၊
೧೧ಆ ಮೇಲೆ ನಾನು ಕ್ರಯಪತ್ರವನ್ನು ಅಂದರೆ ನಿಯಮ ಮತ್ತು ಷರತ್ತುಗಳಿಂದ ಮುಚ್ಚಿದ್ದ ಪತ್ರವನ್ನೂ ಹಾಗು ಮುಚ್ಚಳದ ಪತ್ರವನ್ನೂ ತೆಗೆದುಕೊಂಡೆನು.
12 ၁၂ ဘထွေးသား ဟာနမေလ အစရှိသော၊ စာချုပ်၌ အမည်ပါသော သက်သေများ၊ ထောင်ဝင်းထဲမှာ ထိုင်နေ သော ယုဒလူများအပေါင်းတို့ရှေ့တွင်၊ မာသေယသား ဖြစ်သော နေရိ၏သားဗာရုတ်၌ အပ်လျက်၊
೧೨ಅದನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆ ಕ್ರಯಪತ್ರಕ್ಕೆ ಸಹಿಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲಾ ಯೆಹೂದ್ಯರ ಎದುರಿನಲ್ಲಿ ಆ ಕ್ರಯಪತ್ರವನ್ನು ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆನು.
13 ၁၃ ဣသရေလအမျိုး၏ ဘုရားသခင်၊ ကောင်းကင် ဗိုလ်ခြေအရှင် ထာဝရဘုရား မိန့်တော်မူသည်ကား၊
೧೩ಅವರೆಲ್ಲರ ಮುಂದೆ ನಾನು ಬಾರೂಕನಿಗೆ,
14 ၁၄ တံဆိပ်ခတ်သော ဤစာချုပ်တစောင်နှင့် ဖွင့်ထားသော ဤလက်ခံတစောင်ကို ယူ၍၊ ကာလ ကြာမြင့်စွာ တည်နေစေခြင်းငှါ မြေအိုး၌ထားလော့။
೧೪“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ನೀನು ಈ ಕ್ರಯಪತ್ರಗಳನ್ನು, ಅಂದರೆ ಮುಚ್ಚಿದ ಪತ್ರವನ್ನೂ ಮತ್ತು ಮುಚ್ಚಳಿಕೆಯ ಪತ್ರವನ್ನೂ ತೆಗೆದುಕೊಂಡು ಬಹು ದಿನ ಇರುವ ಹಾಗೆ ಅದನ್ನು ಮಡಿಕೆಯಲ್ಲಿ ಬಚ್ಚಿಡು.
15 ၁၅ ဣသရေလအမျိုး၏ ဘုရားသခင်၊ ကောင်းကင် ဗိုလ်ခြေအရှင် ထာဝရဘုရားမိန့်တော်မူသည်ကား၊ ဤပြည်၌အိမ်၊ လယ်ယာ၊ စပျစ်ဥယျာဉ်တို့ကို ပိုင်ရကြ လေဦးမည်ဟု မိန့်တော်မူကြောင်းကို ပြန်ပြောသဖြင့်၊ ထိုသူတို့ရှေ့မှာ ဗာရုတ်ကိုမှာထားလေ၏။
೧೫ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ’” ಎಂದು ಖಂಡಿತವಾಗಿ ಹೇಳಿದೆನು.
16 ၁၆ ထိုသို့နေရိသား ဗာရုတ်၌ စာချုပ်ကို အပ်ပြီးမှ၊ ထာဝရဘုရားအား ငါဆုတောင်းသော ပဌနာစကား ဟူမူကား၊
೧೬ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನ ಕೈಗೆ ಕೊಟ್ಟ ಮೇಲೆ ನಾನು ಯೆಹೋವನಿಗೆ,
17 ၁၇ အိုအရှင်ထာဝရဘုရား၊ ကိုယ်တော်သည် မဟာ တန်ခိုးနှင့် လက်ရုံးတော်ကိုဆန့်၍၊ ကောင်းကင်နှင့် မြေကြီးကို ဖန်ဆင်းတော်မူပြီ။ ကိုယ်တော်မတတ်နိုင် သော အရာတစုံတစခုမျှ မရှိပါ။
೧೭“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.
18 ၁၈ ကိုယ်တော်သည် လူအထောင်အသောင်းတို့အား ကရုဏာကျေးဇူးပြုလျက်၊ အဘတို့၏အပြစ်ကို နောက် ဖြစ်သောသားတို့၏ ခေါင်းပေါ်သို့ သက်ရောက်စေတော် မူ၏။ အလွန်ကြီးမြတ်သောဘုရား၊ မဟာတန်ခိုးတော်နှင့် ပြည့်စုံသော ဘုရားဖြစ်၍၊ ကောင်းကင်ဗိုလ်ခြေအရှင် ထာဝရဘုရားဟူသော ဘွဲ့နာမရှိတော်မူ၏။
೧೮ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ.
19 ၁၉ ထူးဆန်းသော အကြံကိုကြံ၍၊ ထူးဆန်းသော အမှုကို စီရင်တော်မူလျက်၊ လူအသီးအသီးတို့ ကျင့်ကြံ ပြုမူသည် အတိုင်းအကျိုးအပြစ်ကို ပေးခြင်းငှါ၊ လူသား များ သွားလာသော လမ်းအလုံးစုံတို့ကို အစဉ်ကြည့်ရှု လျက်နေတော်မူ၏။
೧೯ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.
20 ၂၀ အဲဂုတ္တုပြည်၊ ဣသရေလပြည်အစရှိသော လူအမျိုးမျိုးတို့၌ နိမိတ်လက္ခဏာအံ့ဘွယ်သော အမှုတို့ကို ယနေ့တိုင်အောင် ပြတော်မူသဖြင့်၊ ယခုကဲ့သို့ အစဉ် ကျော်စောသော သိတင်းရှိတော်မူ၏။
೨೦ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ಈ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ.
21 ၂၁ နိမိတ်လက္ခဏာ အံ့ဘွယ်သောအမှုတို့ကို ပြလျက်၊ အားကြီးသော လက်၊ ဆန့်တော်မူသော လက်ရုံး၊ အလွန်ကြောက်မက်ဘွယ်သော အခြင်းအရာနှင့်တကွ၊ ကိုယ်တော်၏ ဣသရေလလူတို့ကို အဲဂုတ္တုပြည်မှ နှုတ်ဆောင်တော်မူ၍၊
೨೧ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ.
22 ၂၂ ငါပေးမည်ဟု ဘိုးဘေးတို့အား ကျိန်ဆိုတော်မူ သောပြည်တည်းဟူသော၊ နို့နှင့်ပျားရည်စီးသော ဤပြည် ကို ပေးသနားတော်မူသဖြင့်၊
೨೨ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ.
23 ၂၃ သူတို့သည် ဝင်၍သိမ်းယူကြသော်လည်း၊ အမိန့် တော်ကို နားမထောင်၊ တရားတော်လမ်းသို့မလိုက်၊ မှာထားတော်မူသော အကျင့်တစုံတခုကိုမျှ မကျင့်ဘဲ နေသောကြောင့်၊ ယခုခံရသမျှသော ဘေးဥပဒ်တို့ကို သူတို့အပေါ်သို့ ရောက်စေတော်မူပြီ။
೨೩ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.
24 ၂၄ ပြအိုးမြေရိုးတို့ကိုကြည့်ရှုတော်မူပါ။ မြို့တော်ကို တိုက်ယူခြင်းငှါ ရောက်ကြပါပြီ။ ထားဘေး၊ မွတ်သိပ်ခြင်း ဘေး၊ ကာလနာဘေးတို့ဖြင့် တိုက်သော ခါလဒဲလူတို့ လက်သို့ မြို့တော်ကို အပ်တော်မူပြီ။ မိန့်တော်မူသော စကားပြည့်စုံကြောင်းကိုလည်း ကိုယ်တော်တိုင် မြင်တော်မူ၏။
೨೪ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.
25 ၂၅ ထိုမြို့တော်သည် ခါလဒဲလူတို့လက်သို့ ရောက်သော်လည်း၊ အိုအရှင် ထာဝရဘုရား၊ ထိုလယ်ကို ငွေနှင့်ဝယ်၍၊ သက်သေတို့ကို ခေါ်ထား ရမည်အကြောင်း မိန့်တော်မူပါပြီတကားဟု လျှောက်လေ ၏။
೨೫ಕರ್ತನಾದ ಯೆಹೋವನೇ, ನೀನು ನನಗೆ, ‘ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ’ ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ” ಎಂದು ವಿಜ್ಞಾಪನೆ ಮಾಡಿದೆನು.
26 ၂၆ ထိုအခါ ထာဝရဘုရား၏ နှုတ်ကပတ်တော် သည် ယေရမိသို့ ရောက်လာသည်ကား၊
೨೬ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
27 ၂၇ ငါ ထာဝရဘုရားသည် ခပ်သိမ်းသော သတ္တဝါ တို့ကို အစိုးရသော ဘုရားသခင်ဖြစ်၏။ ငါမတတ်နိုင် သော အရာတစုံတခုရှိလိမ့်မည်လော။
೨೭“ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?
28 ၂၈ သို့ဖြစ်၍၊ ထာဝရဘုရား မိန့်တော်မူသည်ကား၊ ဤမြို့ကို ခါလဒဲလူတို့ လက်သို့၎င်း၊ ဗာဗုလုန်ရှင်ဘုရင် နေဗုခဒ်နေဇာလက်သို့၎င်း ငါအပ်၍၊ သူသည် သိမ်းယူ လိမ့်မည်။
೨೮ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.
29 ၂၉ ဤမြို့ကို တိုက်သော ခါလဒဲလူတို့သည်ဝင်၍ မီးရှို့ကြလိမ့်မည်။ ငါ့အမျက်ကိုနှိုးဆော်ခြင်းငှါ ဗာလ ဘုရားအဘို့ အိမ်မိုးပေါ်မှာ နံ့သာပေါင်းကိုမီးရှို၍၊ အခြား တပါးသော ဘုရားတို့အဘို့ သွန်းလောင်းရာပူဇော် သက္ကာ ကိုပြုရာ အိမ်များနှင့်တကွ၊ တမြို့လုံးကို မီးလောင်စေကြ လိမ့်မည်။
೨೯ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.
30 ၃၀ အကြောင်းမူကား၊ ဣသရေလအမျိုးသားတို့နှင့် ယုဒအမျိုးသားတို့သည်၊ ငယ်သော အရွယ်မှစ၍ ငါ့ရှေ့ မှာ ဒုစရိုက်ကိုသာ ပြုကြပြီ။ မိမိတို့ ပြုလေရာရာ၌ ငါ့အမျက်ကို နှိုးဆော်ခြင်းငှါသာ ပြုကြပြီ။
೩೦ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ. ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ, ಇದು ಯೆಹೋವನ ನುಡಿ.
31 ၃၁ ဣသရေလအမျိုးနှင့် ယုဒအမျိုး၏
೩೧ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪರೋಷಗಳಿಗೆ ಆಸ್ಪದವಾಗಿದೆ.
32 ၃၂ ရှင်ဘုရင်၊ မှူးမတ်၊ ယဇ်ပုရောဟိတ်၊ ပရောဖက်၊ ယုဒပြည်သူ ယေရုရှလင်မြို့သားတို့သည် ငါ့အမျက်ကို နှိုးဆော်ခြင်းငှါ ပြုလေသမျှသော ဒုစရိုက်ကြောင့်၊ ဤမြို့ ကို ငါ့ထံမှ ငါပယ်ရှားမည်အကြောင်း၊ မြို့တည်သော နေ့မှစ၍ ယနေ့တိုင်အောင်၊ ငါ့အမျက်ထွက်၍၊ အမျက် အရှိန်အားကြီးစေသော မြို့ဖြစ်၏။
೩೨ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇಮಿನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲರೂ ಮತ್ತು ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು.
33 ၃၃ သူတို့သည် ငါ့ကိုမျက်နှာမပြုဘဲ ကျောခိုင်းကြပြီ။ ငါသည် စောစောထ၍ အထပ်ထပ်ဆုံးမ သွန်သင်သော် လည်း၊ ငါ၏ဩဝါဒကို ခံလိုသောငှါ နားမထောင်ကြ။
೩೩ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲಿಲ್ಲ ಮತ್ತು ನನಗೆ ಕಿವಿಗೊಡಲೇ ಇಲ್ಲ.
34 ၃၄ ငါ၏နာမဖြင့် သမုတ်သော ဗိမာန်ကို ညစ်ညှုး စေခြင်းငှါ၊ စက်ဆုပ်ရွံရှာဘွယ်သော အရာတို့ကို သွင်း ထားကြပြီတကား၊
೩೪ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆ ಮಾಡಿದ್ದಾರೆ.
35 ၃၅ သူတို့သားသမီးတို့ကို မောလုပ်ဘုရားအား ပူဇော်ခြင်းငှါ၊ ဟိန္နုံ သား၏ချိုင့်၌ရှိသော ဗာလဘုရား၏ ကုန်းတို့ကို တည်လုပ်ကြပြီ။ ယုဒအမျိုးအပေါ်သို့ အပြစ် ရောက်စေခြင်းငှါ၊ ထိုမျှလောက် စက်ဆုပ်ရွံရှာဘွယ် သောအမှုကို ငါမမှာထား၊ ငါအလျှင်အလိုမရှိဘဲ ပြုကြပြီ ဟု ထာဝရဘုရား မိန့်တော်မူ၏။
೩೫ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ” ಎಂಬುದೇ.
36 ၃၆ သို့ရာတွင်၊ ထားဘေး၊ မွတ်သိပ်ခြင်းဘေး၊ ကာလနာဘေးအားဖြင့် ဗာဗုလုန်ရှင်ဘုရင် လက်သို့ ရောက်မည်ဟု သင်တို့ဆိုတတ်သော ဤမြို့ကို ရည်မှတ် ၍၊ ဣသရေလအမျိုး၏ ဘုရားသခင် ထာဝရဘုရား မိန့်တော်မူသည်ကား၊
೩೬ಹೀಗಿರಲು “ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ,
37 ၃၇ ငါသည် အမျက်ဟုန်းဟုန်းထွက်၍၊ အမျက် အရှိန်အားကြီးသည်နှင့်၊ သူတို့ကိုနှင်ထုတ်ရာ တိုင်းပြည် ရှိသမျှတို့မှ၊ တဖန်စုသိမ်း၍ ဤအရပ်သို့ဆောင်ခဲ့ပြီး လျှင်၊ ငြိမ်ဝပ်စွာနေစေမည်။
೩೭‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.
38 ၃၈ သူတို့သည် ငါ၏လူဖြစ်ကြလိမ့်မည်။ ငါသည် လည်း သူတို့၏ ဘုရားသခင်ဖြစ်မည်။
೩೮ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.
39 ၃၉ ကိုယ်အကျိုးအလိုငှါ၎င်း၊ နောက်ဖြစ်လတံ့သော သားသမီးတို့၏ အကျိုးအလိုငှါ၎င်း၊ ငါ့ကိုအစဉ် ကြောက်ရွံ့ စေခြင်းငှါ တညီတညွတ်တည်း ကျင့်ကြံနိုင်သော သဘော ကို ငါပေးမည်။
೩೯ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.
40 ၄၀ သူတို့ကို မစွန့်ပစ်ဘဲ အစဉ်ကျေးဇူးပြုခြင်းငှါ၊ သူတို့၌ ထာဝရပဋိညာဉ်ကို ငါထားမည်။ သူတို့သည်လည် ငါ့ထံမှ မထွက်မသွားမည်အကြောင်း၊ ငါ့ကိုကြောက်ရွံ့ သော သဘောနှင့် ပြည့်စုံစေမည်။
೪೦ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.
41 ၄၁ သူတို့အား ကျေးဇူးပြုခြင်း အမှု၌ငါသည် အားရ ဝမ်းမြောက်၍၊ ငါ့စိတ်နှလုံးနှင့် နံဝိညာဉ်အကြွင်းမဲ့ ပါလျက်၊ သူတို့ကို ဤပြည်၌ ဆက်ဆက်နေရာချမည်။
೪೧ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”
42 ၄၂ ထာဝရဘုရား မိန့်တော်မူသည်ကား၊ ဤလူမျိုး အပေါ်မှာ ကြီးစွာသော ဤဘေးဥပဒ်အပေါင်းကို ရောက်စေသည် နည်းတူ၊ ငါဂတိထားသော ကောင်းကျိုး အပေါင်းကိုလည်း ငါရောက်စေမည်။
೪೨ಯೆಹೋವನು ಇಂತೆನ್ನುತ್ತಾನೆ, “ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.
43 ၄၃ လူမရှိ၊ တိရစ္ဆာန်မရှိ ဆိတ်ညံပြီ၊ ခါလဒဲ လူတို့ လက်သို့ ရောက်လေပြီဟု သင်တို့ဆိုတတ်သော ဤပြည်၌၊ နောက်တဖန် လယ်ယာတို့ကို ရောင်းဝယ်ကြလိမ့်မည်။
೪೩ಜನ ಮತ್ತು ಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಂಡುಕೊಳ್ಳುವರು, ಕೊಡುವರು.
44 ၄၄ ဗင်္ယာမိန်ပြည်၌၎င်း၊ ယေရုရှလင်မြို့ ပတ်ဝန်း ကျင်အရပ်တို့၌၎င်း၊ ယုဒပြည်တွင်ရှိသော မြို့တို့၌၎င်း၊ တောင်ပေါ်မြို့၊ ချိုင့်ထဲမြို့၊ တောင်ဘက်မြို့တို့၌၎င်း၊ လူတို့သည် လယ်ယာတို့ကို ငွေနှင့်ဝယ်ခြင်း၊ စာချုပ်ကို စီရင်ခြင်း၊ တံဆိပ်ခတ်ခြင်း၊ သက်သေတို့ကိုခေါ်ထားခြင်း အမှုများကို ပြုမြဲပြုကြလိမ့်မည်။ အကြောင်းမူကား၊ သိမ်း သွားခြင်းကို ခံရသောသူတို့ကို တဖန် ငါဆောင်ခဲ့ဦး မည်ဟု ထာဝရဘုရား မိန့်တော်မူ၏။
೪೪ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.