< ယောန 4 >
1 ၁ ယောနသည် အလွန်စိတ်ညစ်၍ အမျက်ထွက် သဖြင့်၊ အို ထာဝရဘုရား၊ အကျွန်ုပ်တောင်းပန်ပါ၏။ အကျွန်ုပ်သည် ကိုယ်ပြည်၌ရှိစဉ်၊ ဤသို့ပြောပါပြီမဟုတ် လော။ ထိုကြောင့်၊ ကိုယ်တော်ထံမှ တာရှုမြို့သို့ ကြိုးစား၍ ပြေးပါ၏။
ಆದರೆ ಯೋನನು ತುಂಬಾ ಬೇಸರಗೊಂಡನು. ಅವನಿಗೆ ಬಹು ಕೋಪ ಬಂತು.
2 ၂ ကိုယ်တော်သည် သနားစုံမက်တတ်သော ဘုရား ဖြစ်၍ စိတ်ရှည်သောသဘော၊ ကျေးဇူးပြုချင်သောသ ဘော၊ အပြစ်ဒဏ်ပေးမည့်အမှုကို နောင်တရတတ်သော သဘောရှိတော်မူကြောင်းကို အကျွန်ုပ်သိပါ၏။
ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.
3 ၃ သို့ဖြစ်၍၊ အိုထာဝရဘုရား၊ အကျွန်ုပ်အသက်ကို နှုတ်ယူတော်မူပါ။ အကျွန်ုပ်အသက်ရှင်ခြင်းထက် သေ ခြင်းသည် သာ၍ကောင်းပါသည်ဟု တောင်းလျှောက်လေ ၏။
ಆದ್ದರಿಂದ ಯೆಹೋವ ದೇವರೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆಯಿರಿ, ಏಕೆಂದರೆ ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.
4 ၄ ထာဝရဘုရားကလည်း၊ သင်သည် အမျက်ထွက် ကောင်းသလောဟု မေးတော်မူ၏။
ಆದರೆ ಯೆಹೋವ ದೇವರು, “ನೀನು ಹೀಗೆ ಕೋಪ ಮಾಡಿಕೊಳ್ಳುವುದು ಸರಿಯೋ?” ಎಂದು ಯೋನನಿಗೆ ಹೇಳಿದರು.
5 ၅ ယောနသည် မြို့၌ အဘယ်သို့ဖြစ်မည်ကို သိမြင် ခြင်းငှါ၊ မြို့ပြင်သို့ထွက်၍ မြို့အရှေ့မျက်နှာ၌ တဲမိုးကို လုပ်ပြီးလျှင်၊ အမိုးအရိပ်တွင် ထိုင်၍နေ၏။
ಆಗ ಯೋನನು ಪಟ್ಟಣವನ್ನು ಬಿಟ್ಟು, ಪಟ್ಟಣದ ಪೂರ್ವದಿಕ್ಕಿನ ಕಡೆಯಲ್ಲಿ ಕುಳಿತುಕೊಂಡು, ಗುಡಿಸಲನ್ನು ಕಟ್ಟಿಕೊಂಡು, ಪಟ್ಟಣದಲ್ಲಿ ಏನಾಗುವುದೆಂದು ನೋಡುವವರೆಗೆ ಗುಡಿಸಲಿನ ನೆರಳಿನಲ್ಲಿ ಕುಳಿತುಕೊಂಡನು.
6 ၆ အရှင်ထာဝရဘုရားသည်လည်း ကြက်ဆူပင်ကို ပြင်ဆင်ပြီးလျှင်၊ ယောန၏စိတ်ကို ပြေစေခြင်းငှါ သူ့ ခေါင်းပေါ်မှာ လွှမ်း၍ မိုးစေတော်မူ၏။ ထိုအပင်ကြောင့် ယောနသည် အလွန်အားရဝမ်းမြောက်၏။
ದೇವರಾದ ಯೆಹೋವ ದೇವರು ಒಂದು ಸೋರೆ ಬಳ್ಳಿಯನ್ನು ಹಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು, ಅವನ ತಲೆಗೆ ನೆರಳು ಕೊಟ್ಟು, ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದರು. ಯೋನನು ಆ ಸೋರೆ ಬಳ್ಳಿಯ ವಿಷಯವಾಗಿ ಬಹಳ ಸಂತೋಷಪಟ್ಟನು.
7 ၇ နက်ဖြန်မိုဃ်းလင်းသောအခါ ဘုရားသခင် ခန့် ထားတော်မူသော ပိုးကောင်သည် ကြက်ဆူပင်ကို ကိုက်၍ ညှိုးနွမ်းစေ၏။
ಮಾರನೆಯ ದಿವಸ ಉದಯವಾದಾಗ, ದೇವರು ಒಂದು ಹುಳುವನ್ನು ಸಿದ್ಧಮಾಡಿದರು. ಅದು ಸೋರೆ ಬಳ್ಳಿಯನ್ನು ಒಣಗುವ ಹಾಗೆ ಹೊಡೆಯಿತು.
8 ၈ နေထွက်သောအခါ ဘုရားသခင်သည် အလွန်ပူ သောအရှေ့လေကို ပြင်ဆင်တော်မူ၍၊ ယောန၏ခေါင်းကို နေထိခိုက်သဖြင့် သူသည် မော၍ သေချင်သောစိတ်ရှိ လျက်၊ ငါ့အသက်သေခြင်းသည် ရှင်ခြင်းထက် သာ၍ ကောင်းသည်ဟု မြည်တမ်းလေ၏။
ಸೂರ್ಯೋದಯವಾದಾಗ ದೇವರು ಉಗ್ರವಾದ ಪೂರ್ವ ಗಾಳಿಯನ್ನು ಸಿದ್ಧಮಾಡಿದರು. ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ, ಅವನು ಮೂರ್ಛೆ ಹೋಗಿ, ಮರಣವನ್ನು ಕೇಳಿಕೊಂಡು, “ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.
9 ၉ ဘုရားသခင်ကလည်း၊ သင်သည် ကြက်ဆူပင် အတွက် အမျက်ထွက်ကောင်းသလောဟု မေးတော်မူ လျှင်၊ ယောနက၊ အကျွန်ုပ်သည် အသက်သေသည်တိုင် အောင် အမျက်ထွက်ကောင်းပါသည်ဟု လျှောက်ဆို၏။
ಆದರೆ ದೇವರು ಯೋನನಿಗೆ, “ನೀನು ಸೋರೆ ಬಳ್ಳಿಯನ್ನು ಕುರಿತು ಕೋಪ ಮಾಡುವುದು ಸರಿಯೋ?” ಎಂದರು. ಅವನು, “ನಾನು ಸಾಯುವಷ್ಟು ಕೋಪ ಮಾಡುವುದು ಒಳ್ಳೆಯದೇ,” ಎಂದನು.
10 ၁၀ ထာဝရဘုရားကလည်း၊ သင်သည် ပင်ပန်းစွာ မလုပ်၊ ကြီးပွားစေခြင်းငှါလည်း မပြုစု၊ တညဉ့်ခြင်းတွင် ပေါက်၍ တညဉ့်ခြင်းတွင် သေသော ကြက်ဆူပင်ကို နှမြောသည်တကား။
ಆದರೆ ಯೆಹೋವ ದೇವರು, “ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ, ಒಂದೇ ರಾತ್ರಿಯಲ್ಲಿ ನಾಶವಾದಂಥ ಸೋರೆ ಬಳ್ಳಿಗಾಗಿ ಚಿಂತಿಸಿದೆಯಲ್ಲಾ,
11 ၁၁ ငါသည် များစွာသော တိရစ္ဆာန်တို့ကိုမဆို၊ ကိုယ်လက်ျာလက်နှင့် လက်ဝဲလက်ကိုမျှ ပိုင်းခြား၍ မသိ သော သူတသိန်းနှစ်သောင်းမက၊ လူများသော နိနေဝေ မြို့ကြီးကို ငါနှမြောသင့်သည်မဟုတ်လောဟု မိန့်တော် မူ၏။
ಹಾಗಾದರೆ ಎಡಬಲ ಕೈಗಳನ್ನು ತಿಳಿಯದವರಾದ ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು ಬಹಳ ಪಶುಪ್ರಾಣಿಗಳೂ ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆಯನ್ನು ನಾನು ಚಿಂತಿಸಬಾರದೋ?” ಎಂದರು.