< ယောရှု 7 >

1 သို့ရာတွင် ယုဒအမျိုး၊ ဇေရ၊ ဇာဗဒိ၊ ကာမိတို့မှ ဆင်းသက်သော အာခန်သည်၊ ကျိန်အပ်သောအရာကို သိမ်းယူ၍ ထိုအရာအားဖြင့် ဣသရေလအမျိုးသားတို့ သည် ပြစ်မှားသောအပြစ် ရှိသောကြောင့်၊ ထာဝရဘုရား သည် သူတို့၌ အမျက်ထွက်တော်မူ၏။
ಆದರೆ ಇಸ್ರಾಯೇಲರು ಅರ್ಪಿತವಾದ ವಸ್ತುಗಳ ವಿಷಯದಲ್ಲಿ ಅಪನಂಬಿಕೆಯಿಂದ ನಡೆದುಕೊಂಡರು. ಯೆಹೂದ ಗೋತ್ರದ ಜೆರಹನ ಮೊಮ್ಮಗನೂ, ಜಿಮ್ರಿಯ ಮಗನೂ ಆದ ಕರ್ಮೀಯ ಮಗನಾದ ಆಕಾನನು ಅರ್ಪಿತವಾದ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡನು. ಇದರಿಂದ ಇಸ್ರಾಯೇಲರ ಮೇಲೆ ಯೆಹೋವ ದೇವರ ಕೋಪವು ಉರಿಯಿತು.
2 ယောရှုသည်လည်း၊ ယေရိခေါမြို့မှ လူတို့ကို စေလွှတ်၍၊ သင်တို့သည် ဗေသလမြို့အရှေ့၊ ဗေသဝင်မြို့ အနားမှာရှိသော အာဣမြို့သို့ သွား၍ ထိုပြည်ကို ကြည့်ရှု ကြလော့ဟု မှာထားသည်အတိုင်း သူတို့သည် သွား၍၊ အာဣမြို့ကို ကြည့်ရှုပြီးလျှင်၊
ಆಗ ಯೆಹೋಶುವನು ಕೆಲವರನ್ನು ಕರೆದು, “ನೀವು ದೇಶವನ್ನು ಸಂಚರಿಸಿ ಸುತ್ತಿ ನೋಡಿ ಬನ್ನಿರಿ,” ಎಂದು ಹೇಳಿ, ಯೆರಿಕೋವಿನಿಂದ ಜನರನ್ನು ಬೇತೇಲಿನ ಪೂರ್ವದಕಡೆ ಬೇತಾವೆನಿನ ಬಳಿಯಲ್ಲಿರುವ ಆಯಿ ಎಂಬ ಪಟ್ಟಣಕ್ಕೆ ಕಳುಹಿಸಿದನು. ಆಗ ಅವರು ಹೋಗಿ ಆಯಿ ಎಂಬ ಪಟ್ಟಣವನ್ನು ರಹಸ್ಯವಾಗಿ ನೋಡಿ ಬಂದರು.
3 ယောရှုထံသို့ ပြန်လာ၍၊ ဤလူတို့ကို အကုန်အ စင် မသွားပါစေနှင့်။ လူနှစ်ထောင် သုံးထောင်လောက် သွား၍ အာဣမြို့ကို လုပ်ကြံပါစေ။ ထိုမြို့သို့ သွားရာတွင် ဤလူအပေါင်းတို့ကို မပင်ပန်းပါစေနှင့်။ မြို့သားတို့သည် မများပါဟု လျှောက်သည်နှင့်အညီ၊
ಯೆಹೋಶುವನ ಬಳಿಗೆ ತಿರುಗಿಬಂದು ಅವನಿಗೆ, “ಜನರೆಲ್ಲರೂ ಹೋಗುವ ಅವಶ್ಯಕತೆ ಇಲ್ಲ, ಆಯಿ ಎಂಬ ಪಟ್ಟಣವನ್ನು ಹೊಡೆಯುವುದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಹೋದರೆ ಸಾಕು. ಸೈನ್ಯವನ್ನು ಕಳುಹಿಸಿ ದಣಿಸಬೇಡ. ಏಕೆಂದರೆ ಸ್ವಲ್ಪ ಜನರು ಮಾತ್ರ ಅಲ್ಲಿ ಇದ್ದಾರೆ,” ಎಂದರು.
4 လူသုံးထောင်ခန့်မျှ ချီသွား၍ အာဣမြို့သားတို့ ရှေ့မှာ ပြေးရကြ၏။
ಆದ್ದರಿಂದ ಜನರಲ್ಲಿ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಅಲ್ಲಿಗೆ ಹೋದರು. ಆದರೆ ಅವರು ಆಯಿ ಎಂಬ ಪಟ್ಟಣದ ಮನುಷ್ಯರನ್ನು ಎದುರಿಸಲಾಗದೆ ಓಡಿಹೋದರು.
5 အာဣမြို့သားတို့သည် လူသုံးဆယ်ခြောက် ယောက်တို့ကို သတ်ကြ၏။ မြို့တံခါးမှသည် ရှေဗရိမ်အ ရပ်တိုင်အောင်လိုက်၍၊ ထိုအရပ်၌ ဆင်းရာတွင် လုပ်ကြံ ကြသောကြောင့်၊ လူများတို့၏ စိတ်နှလုံးသည် အရည်ကျို ၍ ရေကဲ့သို့ ဖြစ်လေ၏။
ಆಯಿ ಎಂಬ ಪಟ್ಟಣದವರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಪಟ್ಟಣದ ಬಾಗಿಲಿನಿಂದ ಪ್ರಾರಂಭಿಸಿ ಶೆಬಾರಿಮಿನವರೆಗೂ ಅವರನ್ನು ಹಿಂದಟ್ಟಿ, ಅವರನ್ನು ಹೊಡೆದರು. ಆದ್ದರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.
6 ထိုအခါ ယောရှုသည် မိမိအဝတ်ကို ဆုတ်၍ ဣသရေလအမျိုး အသက်ကြီးသူတို့နှင့်တကွ၊ မိမိတို့ခေါင်း ပေါ်၌ မြေမှုန့်ကိုတင်၍ ထာဝရဘုရား၏ သေတ္တာတော် ရှေ့မှာ ညဦးတိုင်အောင် ဝပ်လျက်နေကြ၏။
ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಂಜೆಯವರೆಗೆ ಯೆಹೋವ ದೇವರ ಮಂಜೂಷದ ಮುಂದೆ ನೆಲದ ಮೇಲೆ ಬೋರಲು ಬಿದ್ದರು.
7 ယောရှုကလည်း၊ အိုအရှင် ထာဝရဘုရား၊ ကိုယ် တော်သည် ဤလူအပေါင်းတို့ကို အာမောရိလူတို့လက်သို့ အပ်၍ ဖျက်ဆီးစေခြင်းငှါ ယော်ဒန်မြစ်တဘက်သို့ အဘယ်ကြောင့် ဆောင်ခဲ့တော်မူသနည်း။ အကျွန်ုပ်တို့ သည် ရောင့်ရဲသောစိတ်ရှိ၍ ယော်ဒန်မြစ်အရှေ့ဘက်၌ နေကြပါစေသော။
ಇದಲ್ಲದೆ ಯೆಹೋಶುವನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ನಮ್ಮನ್ನು ಅಮೋರಿಯರ ಕೈಯಲ್ಲಿ ಒಪ್ಪಿಸಿಕೊಡುವುದಕ್ಕಾಗಿ ನೀವು ಈ ಜನರನ್ನು ಯೊರ್ದನ್ ನದಿ ದಾಟಿಸಿದ್ದು ಏಕೆ? ನಾವು ಯೊರ್ದನ್ ನದಿ ಆಚೆಯಲ್ಲಿ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.
8 အိုဘုရားရှင်၊ ဣသရေလအမျိုးသားတို့သည် ရန်သူတို့ရှေ့မှာ ကျောကိုလှည့်ရကြသည်ဖြစ်၍ အကျွန်ုပ် သည် အဘယ်သို့ ပြောရပါမည်နည်း။
ಯೆಹೋವ ದೇವರೇ, ಈಗ ಇಸ್ರಾಯೇಲರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದರಲ್ಲಾ. ನಾನು ಏನು ಹೇಳಲಿ.
9 ခါနနိလူ အစရှိသော ဤပြည်သူပြည်သား အပေါင်းတို့သည် ထိုသိတင်းကို ကြားလျှင်၊ အကျွန်ုပ်တို့ကို ဝိုင်း၍ အကျွန်ုပ်တို့၏နာမည်ကို မြေကြီးမှ ပယ်ရှင်းကြပါ လိမ့်မည်။ ကိုယ်တော်သည် ကြီးမြတ်သောနာမတော်အဘို့ အလိုငှါ အဘယ်သို့ ပြုတော်မူမည်နည်းဟု လျှောက်ဆို၏။
ಕಾನಾನ್ಯರೂ ದೇಶವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದುಬಿಡುವರು, ಆಗ ನಿಮ್ಮ ಮಹತ್ತಾದ ಹೆಸರಿಗೆ ಏನು ಮಾಡುವಿರಿ?” ಎಂದನು.
10 ၁၀ ထာဝရဘုရားကလည်း၊ ထလော့။ အဘယ် ကြောင့် ဝပ်၍နေသနည်း။
ಯೆಹೋವ ದೇವರು ಯೆಹೋಶುವನಿಗೆ, “ನೀನು ಎದ್ದೇಳು, ನೀನು ಈ ಪ್ರಕಾರ ಬೋರಲು ಬಿದ್ದಿರುವುದೇನು?
11 ၁၁ ဣသရေလအမျိုးသည် ပြစ်မှားပြီ။ ငါမှာထား သော ပဋိညာဉ်တရားကို ဖျက်လေပြီ။ ကျိန်အပ်သောအ ရာကို ခိုးယူ၍ ပရိယာယ်ပြုသဖြင့် မိမိဥစ္စာထဲမှာ ထား လေပြီ။
ಇಸ್ರಾಯೇಲರು ಪಾಪಮಾಡಿದ್ದಾರೆ. ನಾನು ತಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿದರು. ಅವರು ಅರ್ಪಿತವಾದದ್ದರಲ್ಲಿ ಕೆಲವೊಂದನ್ನು ಕಳವು ಮಾಡಿ ತೆಗೆದುಕೊಂಡು, ವಂಚನೆಮಾಡಿ ಅದನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
12 ၁၂ ထိုသို့ ဣသရေလအမျိုးသားတို့သည် ကျိန်အပ် သောသူဖြစ်သောကြောင့်၊ ရန်သူတို့ရှေ့မှာ မခံမရပ်နိုင်၊ ကျောကို လှည့်ရကြ၏။ ကျိန်အပ်သောသူကို သင်တို့အထဲ က မပယ်မရှင်းလျှင် သင်တို့နှင့်အတူ ငါမနေ။
ಆದ್ದರಿಂದ ಇಸ್ರಾಯೇಲರು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನು ತೋರಿಸಿದ್ದಾರೆ. ಅದರಿಂದ ಅವರು ನಾಶನಕ್ಕೆ ಪಾತ್ರರಾದರು. ನೀವು ಶಾಪಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ, ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವುದಿಲ್ಲ.
13 ၁၃ ထ၍ လူများတို့ကို သန့်ရှင်းစေလော့။ နက်ဖြန် နေ့အဘို့ ကိုယ်ကိုကိုယ် သန့်ရှင်းစေကြဟု ဆင့်ဆိုလော့။ ဣသရေလအမျိုး၏ ဘုရားသခင် ထာဝရဘုရား မိန့်တော် မူသည်ကား၊ အိုဣသရေလအမျိုး၊ ကျိန်အပ်သောအရာ သည် သင်တို့အထဲ၌ ရှိ၏။ ထိုအရာကို သင်တို့အထဲက မပယ်မရှင်းမှီတိုင်အောင် ရန်သူတို့ရှေ့မှာ မခံမရပ်နိုင်ကြ။
“ನೀನು ಎದ್ದು ಜನರನ್ನು ಶುದ್ಧೀಕರಿಸಿ, ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ, ಏಕೆಂದರೆ, ‘ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು, ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವವರೆಗೂ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರೆ,’ ಎಂದು ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುತ್ತಾರೆ.
14 ၁၄ နက်ဖြန်နံနက်၌ သင်တို့သည် အမျိုးအနွယ်အ လိုက် ချဉ်းကပ်ရကြမည်။ ထာဝရဘုရား မှတ်တော်မူ သော အမျိုးသည်၊ အဆွေအမျိုးအလိုက် ချဉ်းကပ်ရကြ မည်။ ထာဝရဘုရား မှတ်တော်မူသောအမျိုးသည်၊ အိမ်ထောင်စုံနှင့် ချဉ်းကပ်ရကြမည်။ ထာဝရ ဘုရား မှတ်တော်မူသော အိမ်ထောင်သည် လူအသီးသီး ချဉ်းကပ်ရကြမည်။
“‘ಆದ್ದರಿಂದ ಬೆಳಿಗ್ಗೆ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಯೆಹೋವ ದೇವರು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರವಾಗಿಯೂ ಯೆಹೋವ ದೇವರು ಹಿಡಿಯುವ ಕುಟುಂಬವು ಮನೆಮನೆಯಾಗಿಯೂ ಯೆಹೋವ ದೇವರು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ.
15 ၁၅ ကျိန်အပ်သော အရာပါလျက် မှတ်တော်မူသော သူမှစ၍၊ သူ၌ရှိသမျှတို့ကို မီးရှို့ရကြမည်။ အကြောင်းမူ ကား၊ သူသည် ထာဝရဘုရား၏ ပဋိညာဉ်တရားကို ဖျက် ၍ ဣသရေလအမျိုး၌ အဓမ္မအမှုကို ပြုလေပြီဟု ယောရှု အား မိန့်တော်မူ၏။
ಆಗ ಶಾಪಕ್ಕೀಡಾದದ್ದನ್ನು ತೆಗೆದುಕೊಂಡವನೆಂದು ಹಿಡಿಯಲಾಗುವನು. ಯೆಹೋವ ದೇವರ ಒಡಂಬಡಿಕೆಯನ್ನು ಮೀರಿ, ಇಸ್ರಾಯೇಲಿನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲಾಗಬೇಕು, ಎಂದು ಅವರಿಗೆ ಹೇಳು,’ ಎಂದರು.”
16 ၁၆ နံနက်စောစော ယောရှုသည် ထ၍ ဣသရေလ လူတို့ကို အမျိုးအနွယ်အလိုက် ဆောင်ခဲ့သဖြင့် ယုဒအမျိုး ကို မှတ်တော်မူ၏။
ಮರುದಿನ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರ ಗೋತ್ರವಾಗಿ ಕರೆದಾಗ, ಯೆಹೂದ ಗೋತ್ರವು ಸಿಕ್ಕಿಕೊಂಡಿತು.
17 ၁၇ ယုဒအမျိုးကို ဆောင်ခဲ့သဖြင့်၊ ဇေရိအဆွေအ မျိုးကို မှတ်တော်မူ၏။ ဇေရိအဆွေအမျိုး အိမ်ထောင်စုံ အသီးအသီးတို့ကို ဆောင်ခဲ့သဖြင့် ဇာဗဒိအိမ်ထောင်ကို မှတ်တော်မူ၏။
ಅವನು ಯೆಹೂದ ಕುಟುಂಬವನ್ನು ಕರೆದಾಗ, ಜೆರಹನ ಗೋತ್ರ ಸಿಕ್ಕಿಕೊಂಡಿತು. ಜೆರಹನ ಗೋತ್ರವನ್ನು ಕರೆದಾಗ ಜಿಮ್ರಿಯು ಸಿಕ್ಕಿಕೊಂಡಿತು.
18 ၁၈ ထိုအိမ်ထောင် လူအသီးအသီးတို့ကို ဆောင်ခဲ့သ ဖြင့် ယုဒအမျိုး၊ ဇေရ၊ ဇာဗဒိ၊ ကာမိတို့မှ ဆင်းသက်သော အာခန်ကို မှတ်တော်မူ၏။
ಅವನ ಕುಟುಂಬಗಳು ಕುಟುಂಬಗಳಾಗಿ, ವ್ಯಕ್ತಿಗಳು ವ್ಯಕ್ತಿಗಳಾಗಿ ಬಂದಾಗ, ಜಿಮ್ರಿಯ ಮಗನಾದ ಕರ್ಮೀಯ ಮಗನಾದ ಆಕಾನನೂ ಯೆಹೂದ ಕುಲದವನೂ ಜೆರಹನ ಗೋತ್ರದವನೂ ಸಿಕ್ಕಿದನು.
19 ၁၉ ယောရှုကလည်း၊ ငါ့သား၊ ဣသရေလအမျိုး၏ ဘုရားသခင် ထာဝရဘုရားကို ချီးမွမ်း၍ ရှေ့တော်၌ ကိုယ်အပြစ်ကို ဘော်ပြတောင်းပန်ပါလော့။ သင်ပြုသောအမှုကို ငါ့အားပြောပါလော့။ ဝှက်၍မထား ပါနှင့်ဟု အာခန်အားဆိုလျှင်၊
ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ನೀನು ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಘನಪಡಿಸಿ, ಅವರಿಗೆ ಸ್ತೋತ್ರ ಸಲ್ಲಿಸು. ಏನು ಮಾಡಿದೆಯೋ ಅದನ್ನು ನನಗೆ ತಿಳಿಸು, ನನಗೆ ಮರೆಮಾಡಬೇಡ,” ಎಂದನು.
20 ၂၀ အာခန်က၊ ဟုတ်ပါ၏။ ဣသရေလအမျိုး၏ ဘုရားသခင် ထာဝရဘုရားကို ကျွန်တော်ပြစ်မှားပါပြီ။ ကျွန်တော်ပြုမိသောအမှု ဟူမူကား၊
ಆಕಾನನು ಯೆಹೋಶುವನಿಗೆ, “ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಇಂಥಿಂಥವುಗಳನ್ನು ಮಾಡಿದ್ದೇನೆ.
21 ၂၁ လုယူသော ဥစ္စာတို့တွင် မြတ်သောဗာဗုလုန် ဝတ်လုံ၊ ငွေနှစ်ပိဿာ၊ ရွှေတုံးအကျပ်ငါးဆယ်ကို ကျွန် တော်မြင်သဖြင့်၊ တပ်မက်၍ သိမ်းယူမိပါပြီ။ ကျွန်တော် တဲအတွင်း မြေ၌မြှုပ်လျက် ငွေသည် အောက်ဆုံးရှိပါ သည်ဟု ယောရှုအား ပြန်လျှောက်လေ၏။
ನಾನು ಕೊಳ್ಳೆಯಲ್ಲಿ ಒಂದು ಶಿನಾರ್ ದೇಶದ ಒಳ್ಳೆಯ ವಸ್ತ್ರವನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಒಂದು ಬಂಗಾರದ ಗಟ್ಟಿಯನ್ನು ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ, ಬೆಳ್ಳಿಯೂ ಅದರ ಕೆಳಗೆ ಇದೆ,” ಎಂದನು.
22 ၂၂ ထိုအခါ ယောရှုစေလွှတ်သောသူတို့သည် တဲသို့ ပြေး၍ ထိုဥစ္စာသည် တဲအတွင်း မြေ၌မြှုပ်လျက်၊ ငွေသည် အောက်ဆုံးရှိသည်ကို တွေ့သော်၊
ಆಗ ಯೆಹೋಶುವನು ದೂತರನ್ನು ಕಳುಹಿಸಿದನು. ಅವರು ಡೇರೆಗಳಿಗೆ ಓಡಿದರು. ಆ ಡೇರೆಯಲ್ಲಿ ಹೂತಿಟ್ಟವುಗಳನ್ನು ತೆಗೆದರು. ಬೆಳ್ಳಿಯು ಅದರ ಕೆಳಗೆ ಮರೆಮಾಡಲಾಗಿತ್ತು.
23 ၂၃ တဲထဲကထုတ်၍ ယောရှုထံ ဣသရေလအမျိုး သားများရှေ့သို့ ဆောင်သွားသဖြင့်၊ ထာဝရဘုရားရှေ့ တော်၌ ထားကြ၏။
ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲರ ಬಳಿಗೂ ತಂದು, ಯೆಹೋವ ದೇವರ ಮುಂದೆ ಇಟ್ಟರು.
24 ၂၄ ယောရှုနှင့် ဣသရေလအမျိုးသားအပေါင်းတို့ သည်၊ ဇေရသာအာခန်မှစ၍ ထိုငွေ၊ ဝတ်လုံ၊ ရွှေတုံး၊ သားသမီး၊ သိုးနွားမြည်း၊ တဲနှင့်တကွ သူ၌ရှိသမျှတို့ကို အာခေါ်ချိုင့်သို့ ဆောင်သွားပြီးမှ၊
ಆಗ ಯೆಹೋಶುವನೂ ಅವನೊಂದಿಗೆ ಇಸ್ರಾಯೇಲರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಪುತ್ರಪುತ್ರಿಯರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ಕಣಿವೆಗೆ ತಂದರು.
25 ၂၅ ယောရှုက၊ ငါတို့ကို အဘယ်ကြောင့် နှောင့်ရှက် သနည်း။ ယနေ့ ထာဝရဘုရားသည် သင့်ကို နှောင့်ရှက် တော်မူမည်ဟု ဆိုသဖြင့်၊ ဣသရေလအမျိုးသား အပေါင်း တို့သည် ကျောက်ခဲနှင့် ပစ်ကြ၏။ ကျောက်ခဲနှင့် ပစ်ကြ ပြီးမှ၊ မီးရှို့ကြ၏။
ಆಗ ಯೆಹೋಶುವನು ಅವನಿಗೆ, “ನೀನು ನಮ್ಮನ್ನು ಸಂಕಷ್ಟಪಡಿಸಿದ್ದೇನು? ಇಂದು ಯೆಹೋವ ದೇವರು ನಿನ್ನನ್ನು ಸಂಕಷ್ಟಪಡಿಸುವರು,” ಎಂದನು. ಆಗ ಇಸ್ರಾಯೇಲರೆಲ್ಲರೂ ಅವನ ಮೇಲೆ ಕಲ್ಲೆಸೆದರು. ಕಲ್ಲೆಸೆದ ತರುವಾಯ ಉಳಿದವರನ್ನು ಬೆಂಕಿಯಿಂದ ಸುಟ್ಟುಬಿಟ್ಟು,
26 ၂၆ သူ့အပေါ်၌ များစွာသော ကျောက်တို့ကို ပုံထား ကြ၍ ယနေ့တိုင်အောင်ရှိ၏။ ထာဝရဘုရားသည်လည်း အမျက်တော်အရှိန်ကို ငြိမ်းစေတော်မူ၏။ ထိုအမှုကို အစွဲ ပြု၍ ထိုချိုင့်ကို ယနေ့တိုင်အောင် အာခေါ်ချိုင့်ဟု ခေါ် ဝေါ်ကြသတည်း။
ಅವರ ಮೇಲೆ ಕಲ್ಲುಕುಪ್ಪೆ ಕೂಡಿಸಿದರು. ಅದು ಈ ದಿನದವರೆಗೂ ಇದೆ. ಆಗ ಯೆಹೋವ ದೇವರು ತಮ್ಮ ಕೋಪದ ಉರಿಯನ್ನು ಬಿಟ್ಟು ತಿರುಗಿದರು. ಆದ್ದರಿಂದ ಆ ಸ್ಥಳವು ಈವರೆಗೂ ಆಕೋರಿನ ಕಣಿವೆ ಎಂದು ಕರೆಯಲಾಗುತ್ತದೆ.

< ယောရှု 7 >