< १ इतिहास 21 >

1 इस्राएलको विरुद्ध एउटा दुश्‍मन खडा भयो र आफ्‍ना मानिसहरूको सङ्ख्‍या गन्‍नलाई दाऊदलाई सुर्‍यायो ।
ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.
2 दाऊदले योआब र आफ्‍ना फौजका कमान्डरहरूलाई भने, “जाओ, बेर्शेबादेखि दानसम्‍मका इस्राएलका मानिसहरूको सङ्‍खया गन्‍ती गर र मलाई बताओ, ताकि म तिनीहरूको संख्‍या जान्‍न सकूँ ।”
ಆದ್ದರಿಂದ ದಾವೀದನು ಯೋವಾಬನನ್ನೂ ಜನರ ಪ್ರಧಾನರನ್ನೂ ಕರೆದು ಅವರಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀವು ಹೋಗಿ ಬೇರ್ಷೆಬವು ಮೊದಲುಗೊಂಡು, ದಾನ್ ಊರಿನವರೆಗೆ ಇಸ್ರಾಯೇಲರನ್ನು ಲೆಕ್ಕಿಸಿ, ಅವರ ಲೆಕ್ಕವನ್ನು ನನಗೆ ತೆಗೆದುಕೊಂಡು ಬನ್ನಿರಿ,” ಎಂದನು.
3 योआबले भने, “परमप्रभुले आफ्‍ना फौजलाई सय गुणा बढाउनुभएको होस् । तर हे मेरा मालिक राजा, के तिनीहरूले मेरा मालिकको सेवा गर्दैनन् र? इस्राएलमाथि किन दोष ल्‍याउनुहुन्‍छ?”
ಆಗ ಯೋವಾಬನು, “ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ. ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರೂ ನನ್ನ ಒಡೆಯನ ಸೇವಕರಲ್ಲವೋ, ನನ್ನ ಒಡೆಯನು ಈ ಕಾರ್ಯವನ್ನು ಅಪೇಕ್ಷಿಸುವುದು ಏಕೆ? ಇದು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವುದು,” ಎಂದನು.
4 तर राजाको वचन योआबको विरुद्धमा लागू भयो । त्यसैले योआब त्यहाँबाट हिंडे र सारा इस्राएलभरी गए । तब तिनी यरूशलेममा फर्केर आए ।
ಆದರೆ ಅರಸನ ಮಾತೇ ಯೋವಾಬನಿಗೆ ವಿರೋಧವಾಗಿ ಗೆದ್ದಿತು. ಆಗ ಅವನು ಹೊರಟು, ಇಸ್ರಾಯೇಲಿನ ಸಮಸ್ತ ಪ್ರಾಂತಗಳಿಗೆ ಹೋಗಿ, ಯೆರೂಸಲೇಮಿಗೆ ತಿರುಗಿಬಂದನು.
5 त्यसपछि योआबले दाऊदलाई योद्धाहरूको जम्मा संख्या बताए । इस्राएलमा तरवार चलाउन सक्‍नेहरू इस्राएलमा ११ लाख थिए । यहूदामा मात्र ४ लाख ७० हजार सेना थिए ।
ಯೋವಾಬನು ದಾವೀದನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಸಮಸ್ತ ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಹನ್ನೊಂದು ಲಕ್ಷಮಂದಿ ಇದ್ದರು. ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಮಂದಿ ಇದ್ದರು.
6 तर लेवी र बेन्‍यामीनलाई तिनीहरूसँग गन्‍ती गरिएन, किनकि राजाको हुकुमले योआबलाई साह्रै खिन्‍न पारेको थियो ।
ಆದರೆ ಲೇವಿಯರನ್ನೂ, ಬೆನ್ಯಾಮೀನರನ್ನೂ ಅವರಲ್ಲಿ ಎಣಿಸಲಿಲ್ಲ. ಏಕೆಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.
7 यो कामबाट परमेश्‍वर अप्रसन्‍न हुनुभयो, अनि उहाँले इस्राएललाई आक्रमण गर्नुभयो ।
ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದ್ದಾದದ್ದರಿಂದ, ದೇವರು ಇಸ್ರಾಯೇಲನ್ನು ಶಿಕ್ಷಿಸಿದರು.
8 दाऊदले परमेश्‍वरलाई भने, “मैले यसो गरेर ठुलो पाप गरेको छु । अब आफ्‍नो दासको दोषलाई हटाउनुहोस्, किनकि मैले धेरै मूर्खतापूर्ण काम गरेको छु ।”
ದಾವೀದನು ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ, ಮಹಾಪಾಪ ಮಾಡಿದೆನು. ನೀವು ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ. ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.
9 परमप्रभुले दाऊदका अगमवक्ता गादलाई भन्‍नुभयो,
ಆಗ ಯೆಹೋವ ದೇವರು ದಾವೀದನ ದರ್ಶಿಯಾದ ಗಾದನಿಗೆ,
10 “गएर दाऊदलाई भन्, ‘परमप्रभु यसो भन्‍नुहुन्‍छः तँलाई म तिनवटा कुरा रोज्‍न दिन्‍छु । तिमध्ये एउटा रोज ।’”
“ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ,’ ಎಂದು ಹೇಳು,” ಎಂದರು.
11 यसैले गाद दाऊदकहाँ गए र तिनलाई भने, “परमप्रभु यही भन्‍नुहुन्‍छ, ‘यिमध्ये एउटा रोज:
ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನೇ ಆಯ್ದುಕೋ,
12 तिन वर्षसम्‍मको अनिकालको कुरा, वा तेरा शत्रुहरूले तीन महिनासम्‍म खेद्‍ने र उनीहरूका तरवारले मारिने कुरा, वा तिन दिनको लागि परमप्रभुको तरवार, अर्थात् परमप्रभुका दूतले इस्राएलका सम्‍पूर्ण ठाउँमा विनाश ल्‍याउने एउटा विपत्तिको कुरा ।’ त्‍यसो हो भने, मलाई पठाउनुहुनेकहाँ मैले के जवाफ लानुपर्ने हो सो अब निर्णय गर्नुहोस् ।”
ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ಮೂರು ತಿಂಗಳವರೆಗೆ ನಿನ್ನ ಶತ್ರುಗಳ ಹಿಂಸೆಗೆ ಬಲಿಯಾಗುವುದು ಬೇಕೋ? ಇಲ್ಲವೆ ಯೆಹೋವ ದೇವರ ದೂತನು ಇಸ್ರಾಯೇಲಿನ ಸಮಸ್ತ ಪ್ರಾಂತಗಳಲ್ಲಿ ಯೆಹೋವ ದೇವರ ಖಡ್ಗದಿಂದ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ನೀನು ಆರಿಸಿಕೋ. ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.
13 तब दाऊदले गादलाई भने, “म साह्रै सङ्कष्‍टमा परेको छु! मानिसको हातमा पर्नुभन्दा मलाई परमप्रभुको हातमा नै पर्न देऊ, किनकि उहाँका करुणामय कामहरू धेरै महान् छन् ।”
ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಯೆಹೋವ ದೇವರ ಕೈಯಲ್ಲಿಯೇ ಬೀಳುತ್ತೇನೆ. ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.
14 त्यसैले परमप्रभुले इस्राएलमा एउटा विपत्ति पठाउनुभयो, र सत्तरी हजार मानिसहरू मरे ।
ಆದಕಾರಣ ಯೆಹೋವ ದೇವರು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
15 परमेश्‍वरले यरूशलेम विनाश गर्न एउटा स्‍वर्गदूत पठाउनुभयो । तिनले त्‍यो नाश गर्न लाग्‍दा परमप्रभुले त्‍यो देखेर त्‍यस सर्वनाशदेखि मन बदल्‍नुभयो । ती नाश गर्ने स्‍वर्गदूतलाई उहाँले भन्‍नुभयो, “अब भयो! तिम्रो हात थाम ।” त्‍यस बेला ती स्‍वर्गदूत यबूसी अरौनाका खलाको छेउमा उभिरहेका थिए ।
ಇದಲ್ಲದೆ ಯೆರೂಸಲೇಮನ್ನು ನಾಶಮಾಡುವುದಕ್ಕೆ ದೇವರು ದೂತನನ್ನು ಕಳುಹಿಸಿದರು. ಅವನು ನಾಶಮಾಡುವುದನ್ನು ಯೆಹೋವ ದೇವರು ನೋಡಿ, ಆ ದಂಡನೆಗೋಸ್ಕರ ದುಃಖಪಟ್ಟು, ಜನರನ್ನು ನಾಶಮಾಡುವ ದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.
16 दाऊदले मास्‍तिर हेरे र परमप्रभुका स्‍वर्गदूतले आफ्‍नो हातमा नाङ्गो तरवार लिएर यरूशलेममाथि ताकेर आकाश र पृथ्‍वीका बीचमा खडा भएको देखे । तब भाङ्‌ग्रा लागाएका दाऊद र धर्म-गुरुहरू भूइँमा घोप्‍टो परे ।
ಆಗ ದಾವೀದನು ತನ್ನ ಕಣ್ಣೆತ್ತಿ ಭೂಮಿಗೂ, ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಯೆಹೋವ ದೇವರ ದೂತನನ್ನು ಕಂಡನು. ಅವನ ಕೈಯಲ್ಲಿ ಯೆರೂಸಲೇಮಿನ ಮೇಲೆ ಚಾಚಿದ್ದ ಹಿರಿದ ಖಡ್ಗ ಇತ್ತು. ಆಗ ದಾವೀದನೂ, ಇಸ್ರಾಯೇಲಿನ ಹಿರಿಯರೂ ಗೋಣಿತಟ್ಟುಗಳನ್ನು ಹೊದ್ದುಕೊಂಡು ಬೋರಲಾಗಿ ಬಿದ್ದರು.
17 दाऊदले परमेश्‍वरलाई भने, “सेनाको गन्‍ती गर् भनेर हुकुम दिने म होइनँ र? मैले यो दुष्‍ट काम गरें । तर बिचरा यी भेडाहरूले के नै पो गरेका छन् र? हे परमप्रभु मेरा परमेश्‍वर!, तपाईंको हातले म र मेरो घरानालाई प्रहार गरोस्, तर तर यो विपत्ति तपाईंका मानिसहरूमाथि नरहोस् ।”
ದಾವೀದನು ದೇವರಿಗೆ, “ಜನರಲ್ಲಿ ಯುದ್ಧ ವೀರರನ್ನು ಲೆಕ್ಕಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಈ ಕೆಟ್ಟದ್ದನ್ನು ಮಾಡಿದೆನು, ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನನ್ನ ಯೆಹೋವ ದೇವರೇ, ನಿಮ್ಮ ಹಸ್ತವು ನಿಮ್ಮ ಜನರನ್ನು ಬಾಧಿಸದೆ, ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.
18 यसैले दाऊदलाई यबूसी अरौनाको खलामा गएर परमप्रभुको निम्‍ति एउटा वेदी बनाउन भन् भनी परमप्रभुका स्वर्गदूतले गादलाई भने ।
ಆಗ ಯೆಹೋವ ದೇವರ ದೂತನು ಗಾದನಿಗೆ, “ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು,” ಎಂದನು.
19 यसैले परमप्रभुको नाउँमा गादले हुकुम गरेझैं गर्नलाइ दाऊद त्‍यहाँ उक्‍लेर गए ।
ಗಾದನು ಯೆಹೋವ ದೇವರ ಹೆಸರಿನಲ್ಲಿ ಹೇಳಿದ ಮಾತಿನ ಪ್ರಕಾರ ದಾವೀದನು ಹೋದನು.
20 अरौनाले आफ्‍नो गहूँ चुट्दै गरेका समयमा, तिनी पछि फर्के, र स्‍वर्गदूतलाई देखे । तिनी र तिनका चार जना छोराहरू आफूलाई लुकाए ।
ಒರ್ನಾನನು ಗೋಧಿಯನ್ನು ತುಳಿಸುತ್ತಿರುವಾಗ, ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ, ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಪುತ್ರರೂ ಅಡಗಿಕೊಂಡಿದ್ದರು.
21 दाऊद अरौनाकहाँ आउँदा, अरौनाले हेरे र दाऊदलाई देखे । तिनी खलाबाट बाहिर आए र आफ्‍नो अनुहार भुइँमा घोप्‍टो पारेर दाऊदको अघि घुँडा टेके ।
ಆದರೆ ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡನು, ಆಗ ಅವನು ಕಣದಿಂದ ಹೊರಟು, ದಾವೀದನ ಮುಂದೆ ಮುಖ ಕೆಳಗೆಮಾಡಿ ಅಡ್ಡಬಿದ್ದನು.
22 तब दाऊदले अरौनालाई भने, “मलाई यो खला बेच ताकि यहाँ म परमप्रभुको निम्‍ति एउटा वेदी बनाउन सकूँ । म पुरै दाम तिर्नेछु, ताकि मानिसहरूबाट यो विपत्ति हटिजाओस् ।”
ಆಗ ದಾವೀದನು ಒರ್ನಾನನಿಗೆ, “ಈ ವ್ಯಾಧಿಯು, ಜನರನ್ನು ಬಿಟ್ಟುಹೋಗುವಂತೆ ನಾನು ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ, ಈ ಕಣದ ಸ್ಥಳವನ್ನು ನನಗೆ ಕೊಡು. ಅದನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು,” ಎಂದನು.
23 अरौनाले दाऊदलाई भने, “त्‍यो तपाईंको आफ्नै ठानेर लिनुहोस्, मेरा मालिक महाराजा । हजुरो नजरमा जस्तो असल लाग्छ सो त्‍यहाँ गर्नुहोस् । हेर्नुहोस्, म तपाईंलाई होमबलिको निम्‍ति गोरुहरू, दाउराको निम्‍ति काठहरू र अन्‍नबलिको निम्‍ति गहूँ दिन्छु । यो सबै थोक म तपाईंलाई दिनेछु ।”
ಒರ್ನಾನನು ದಾವೀದನಿಗೆ, “ನಿನಗಾಗಿ ತೆಗೆದುಕೋ, ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ದಹನಬಲಿಗೋಸ್ಕರ ಎತ್ತುಗಳೂ, ಸೌದೆಗೆ ಹಂತೀಕುಂಟೆ, ಧಾನ್ಯ ಸಮರ್ಪಣೆಗೋಸ್ಕರ ಗೋಧಿ ಕೊಡುವುದಲ್ಲದೆ, ಸಮಸ್ತವನ್ನೂ ಕೊಡುವೆನು,” ಎಂದನು.
24 दाऊद राजाले औरानलाई भने, “होइन, पुरै दाम तिरेर नै म यसलाई किन्छु । तिम्रो जे छ त्‍यो लिने अनि मेरो दाम नपरी त्‍यो सित्तैंमा परमप्रभुलाई होमबलीको रूपमा चढाउने काम म गर्दिन ।”
ಅರಸ ದಾವೀದನು ಒರ್ನಾನನಿಗೆ, “ಹಾಗಲ್ಲ, ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು, ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಲು ನನಗೆ ಇಷ್ಟವಿಲ್ಲ,” ಎಂದು ಹೇಳಿದನು.
25 यसैले त्‍यस जग्‍गाको निम्‍ति दाऊदले अरौनालाई छ सय सुनका सिक्‍का तिरे ।
ಅಂತೆಯೇ ಆ ಭೂಮಿಗಾಗಿ ಒರ್ನಾನನಿಗೆ ಏಳು ಕಿಲೋಗ್ರಾಂ ಬಂಗಾರವನ್ನು ಕೊಟ್ಟು,
26 दाऊदले त्‍यहाँ परमप्रभुको निम्‍ति एउटा वेदी बनाए र त्‍यसमाथि होमबलि र मेलबलि चढाए । तिनले परमप्रभुमा पुकारा गरे, जसले तिनलाई स्‍वर्गबाट होमबलिको वेदीमा आगो बर्साएर जवाफ दिनुभयो ।
ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ ಯೆಹೋವ ದೇವರನ್ನು ಪ್ರಾರ್ಥಿಸಿದನು. ಆಗ ಅವರು ಆಕಾಶದಿಂದ ದಹನಬಲಿಪೀಠದ ಮೇಲೆ ಅಗ್ನಿಯಿಂದ ಅವನಿಗೆ ಉತ್ತರಕೊಟ್ಟರು.
27 तब परमप्रभुले त्‍यो स्‍वर्गदूतलाई आज्ञा दिनुभयो र स्‍वर्गदूतले आफ्नो तरवारलाई त्‍यसको म्‍यानमा राखे ।
ಯೆಹೋವ ದೇವರು ದೂತನಿಗೆ ಹೇಳಿದ್ದರಿಂದ, ಅವನು ತನ್ನ ಖಡ್ಗವನ್ನು ಒರೆಗೆ ತಿರುಗಿ ಸೇರಿಸಿದನು.
28 जब दाऊदले यबूसी अरौनाको खलामा परमप्रभुले जवाफ दिनुभएको देखे, तब तिनले त्यही बेला बलिदानहरू चढाए ।
ಯೆಹೋವ ದೇವರು ಯೆಬೂಸಿಯನಾದ ಒರ್ನಾನನ ಕಣದಲ್ಲಿ ತನಗೆ ಉತ್ತರ ಕೊಟ್ಟರೆಂದು ದಾವೀದನು ಕಂಡಾಗ, ಅವನು ಅಲ್ಲಿ ಬಲಿಗಳನ್ನು ಅರ್ಪಿಸಿದನು.
29 त्यस बेला, मोशाले उजाड-स्‍थानमा बनाएको परमप्रभुको पवित्र वासस्‍थान र होमबलिको वेदी गिबोनको डाँडाको उच्‍च स्‍थानमा नै थिए ।
ಮರುಭೂಮಿಯಲ್ಲಿ ಮೋಶೆಯು ಮಾಡಿದ ಯೆಹೋವ ದೇವರ ಗುಡಾರವೂ, ದಹನಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು.
30 तापनि परमप्रभुको अगुवाइ माग्‍न दाऊद त्‍यहाँ जान सकेनन्, किनकि ती स्‍वर्गदूतको तरवारसँग तिनी साह्रै डराएका थिए ।
ದಾವೀದನು ದೇವರ ಹತ್ತಿರ ವಿಚಾರಿಸಲು, ಅದರ ಬಳಿಗೆ ಹೋಗಲಾರದೆ ಇದ್ದನು. ಏಕೆಂದರೆ ಅವನು ಯೆಹೋವ ದೇವರ ದೂತನ ಖಡ್ಗದ ನಿಮಿತ್ತ ಹೆದರಿದ್ದನು.

< १ इतिहास 21 >