< १ राजाहरू 13 >
1 परमप्रभुको वचनद्वारा परमेश्वका जन बेथेलमा आए । यारोबाम धूप बाल्नलाई वेदीनेर उभिरहेका थिए ।
೧ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು
2 तिनले परमप्रभुको वचनद्वारा वेदीको विरुद्धमा चिच्च्याए, “हे वेदी, हे वेदी! परमप्रभु यसो भन्नुहुन्छ, 'हेर, दाऊदको घरानामा योशियाह नाउँ गरेको बालकको जन्म हुने छ, र त्यसले तेरो लागि बलिदान चढाउने डाँडाका ठाउँहरूमा पुजारीहरूलाई तँमाथि नै बलिदान चढाउने छ । तँमाथि तिनीहरूले मानिसका हड्डीहरू जलाउने छन्' ।”
೨ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು.
3 तब उही दिन परमेश्वरका जनले यसो भन्दै एउटा चिन्ह दिए, “परमप्रभुले घोषणा गर्नुभएको चिन्ह यही होः हेर, वेदी दुई फक्लेटा हुने छ, र त्यसमाथि भएको खरानीचाहिँ खन्याइने छ' ।”
೩ಇದಲ್ಲದೆ ಅವನು, “ನನ್ನ ಮಾತು ಯೆಹೋವನದು ಎಂಬುವುದಕ್ಕೆ ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಗುವುದೇ ಗುರುತಾಗಿರುವುದು” ಎಂದು ಹೇಳಿದನು.
4 बेथेलमा परमेश्वरका जनले वेदीको विरुद्धमा भनेका कुरा जब राजा यारोबामले सुने तिनले वेदीबाट आफ्नो हात पसारेर यसो भने, “त्यसलाई समात्!” तब तिने परमेश्वरको जनलाई समात्न जुन हात पसारेका थिए, त्यो सुक्यो र तिनले त्यो फेरि आफूतिर ल्याउन सकेनन् ।
೪ಬೇತೇಲಿನ ಯಜ್ಞವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರುದ್ಧವಾಗಿ ನುಡಿದಿದ್ದನ್ನು ಕೇಳಿ, “ಕೈಚಾಚಿ ಅವನನ್ನು ಹಿಡಿಯಿರಿ” ಎಂದು ಆಜ್ಞಾಪಿಸಿದನು. ಕೂಡಲೇ ಅವನ ಕೈ ಬತ್ತಿ ಹೋಯಿತು. ಅವನು ಅದನ್ನು ಹಿಂದಕ್ಕೆ ತೆಗೆದುಕೊಳ್ಳಲು ಅಗಲ್ಲಿಲ್ಲ.
5 (वेदी पनि दुई फक्लेटा भयो, र खरानी वेदीबाट पोखियो जस्तो परमप्रभुको वचनद्वारा परमेश्वरका जनले चिन्हद्वारा व्याख्या गरेका थिए ।)
೫ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು. ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.
6 त्यसैले परमेश्वरका जनले परमप्रभुलाई प्रार्थना गरे, र राजाको हात पहिलेकै जस्तो भयो ।
೬ಅರಸನು ಆ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು” ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.
7 राजाले परमेश्वरका जनलाई भने, “मेरो घरमा खानपान गर्नुहोस्, र म तपाईंलाई इनाम दिने छु ।”
೭ಆಗ ಅರಸನು ಅವನಿಗೆ, “ನನ್ನ ಮನೆಗೆ ಬಾ, ಸ್ವಲ್ಪ ಊಟ ಮಾಡಿ ವಿಶ್ರಾಂತಿ ಪಡೆದುಕೋ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ” ಎಂದನು.
8 परमेश्वरका जनले राजालाई भने, “तपाईंले मलाई आधा सम्पत्ति दिनुभए तापनि म तपाईंसित जान्नँ, न यस ठाउँमा तपाईंसित खाने छु न पिउने छु ।
೮ಆದರೆ ದೇವರ ಮನುಷ್ಯನು ಅರಸನಿಗೆ, “ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ, ನಾನು ನಿನ್ನ ಸಂಗಡ ಬರುವುದಿಲ್ಲ. ಇಲ್ಲಿ ಅನ್ನ ಪಾನಗಳನ್ನು ತೆಗೆದುಕೊಳ್ಳುವುದಿಲ್ಲ.
9 किनकि परमप्रभुले आफ्नो वचनद्वारा मलाई आज्ञा दिनुभएको छ, 'तैँले त्यहाँ रोटी नखानू, न त पानी पिउनू, न तँ आएको बाटो फर्केर जानू' ।”
೯ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಮತ್ತು ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂತಲೂ ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಹೇಳಿದನು.
10 त्यसैले परमेश्वरका जन अर्कै बाटो भएर गए, र तिनी जुन बाटो भएर आएका थिए त्यही बाटो भएर आफ्नो घरमा फर्केनन् ।
೧೦ಆ ದೇವರ ಮನುಷ್ಯನು ಬಂದ ದಾರಿಯನ್ನು ಬಿಟ್ಟು ಇನ್ನೊಂದು ದಾರಿಯನ್ನು ಹಿಡಿದು ಹೊರಟು ಹೋದನು.
11 बेथेलमा एक जना वृद्ध अगमवक्ता बस्थे । त्यस दिन बेथेलमा परमेश्वरका जनले गरेका सबै कुरा अगमवक्ताका एक जना छोराले तिनलाई बताए । परमेश्वरका जन राजासित बोलेका थिए भन्ने कुरा पनि तिनका छोराहरूले तिनलाई बताए ।
೧೧ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ದೇವರ ಮನುಷ್ಯನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಮತ್ತು ಅವನು ಅರಸನಿಗೆ ಹೇಳಿದ್ದನ್ನೂ ತಮ್ಮ ತಂದೆಗೆ ತಿಳಿಸಿದರು.
12 तिनीहरूका पिताले तिनीहरूलाई सोधे, “तिनी कुनचाहिँ बाटो लागे?” परमेश्वरका जन यहूदाको बाटो भएर गएका थिए भनी तिनका छोराहरूले देखेका थिए ।
೧೨ತಂದೆಯು ಅವರನ್ನು, “ಅವನು ಯಾವ ದಾರಿಯಿಂದ ಹೋದನು?” ಎಂದು ಕೇಳಲು ಅವರು ಯೆಹೂದ ದೇಶದವನಾದ ಆ ದೇವರ ಮನುಷ್ಯನು ಹೋದ ದಾರಿಯನ್ನು ತೋರಿಸಿದರು.
13 त्यसैले तिनले आफ्ना छोराहरूलाई भने, “मेरो निम्ति गधामा काठी कस ।” त्यसैले तिनीहरूले गधामा काठी कसी त्यसमा चढेर गए ।
೧೩ಆಗ ಅವನು ತನ್ನ ಮಕ್ಕಳಿಗೆ, “ಕತ್ತೆಗೆ ತಡಿಹಾಕಿರಿ” ಎಂದು ಆಜ್ಞಾಪಿಸಿಲು ಅವರು ತಡಿಹಾಕಿದರು. ಅವನು ಕತ್ತೆಯ ಮೇಲೆ ಕುಳಿತುಕೊಂಡು ಹೊರಟನು.
14 ती वृद्ध अगमवक्ता परमेश्वरका जनको पछिपछि गए र तिनलाई फलाँटको रुखमुनि बसिरहेको भेट्टाए, र तिनले भने, “के यहूदाबाट आउनुभएका परमेश्वरका जन तपाईं नै हुनुहुन्छ?” तिनले जवाफ दिए, “हो, म नै हुँ ।”
೧೪ದೇವರ ಮನುಷ್ಯನ ಹಿಂದೆ ಹೋಗಿ ಏಲಾ ವೃಕ್ಷದ ಕೆಳಗೆ ಕುಳಿತ್ತಿದ್ದ ಅವನನ್ನು ಕಂಡು, “ಯೆಹೂದದಿಂದ ಬಂದ ದೇವರ ಮನುಷ್ಯನು ನೀನೋ?” ಎಂದು ಕೇಳಿದನು. ಅವನು ಹೌದೆಂದನು.
15 तब ती वृद्ध अगमवक्ताले तिनलाई भने, “मसितै घरमा आउनुहोस् र खानपान गर्नुहोस् ।”
೧೫ಆಗ ಆ ಮುದುಕನು ಅವನಿಗೆ, “ನೀನು ನನ್ನ ಮನೆಗೆ ಬಂದು ಊಟಮಾಡು” ಎಂದು ಹೇಳಿದನು.
16 परमेश्वरका जनले भने, “म तपाईंसँगै फर्केर जान सक्दिनँ, न त यस ठाउँमा तपाईंसँगै खानपान गर्न सक्छु न पिउन सक्छु ।
೧೬ಅದಕ್ಕೆ ಅವನು, “ನಾನು ನಿನ್ನ ಸಂಗಡ ಬರವುದಿಲ್ಲ ಮತ್ತು ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ.
17 किनकि परमप्रभुको वचनद्वारा मलाई आज्ञा दिइएको छ, 'तैँले त्यहाँ रोटी नखानू, न पानी पिउनू, न तँ आएको बाटो फर्केर जानू' ।”
೧೭ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ, ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದು ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಉತ್ತರಕೊಟ್ಟನು.
18 त्यसैले ती वृद्ध अगमवक्ताले तिनलाई भने, “तपाईंजस्तै म पनि अगमवक्ता हुँ, र परमप्रभुको वचनद्वारा एउटा स्वर्गदूतले मलाई यसो भने, 'तिनलाई तिमीसँगै घरमा फर्काएर ल्याउनू ताकि तिनले रोटी खान सकून् र पानी पिउन सकून्' ।” तर तिनले परमेश्वरका जनलाई झुट बोल्दै थिए ।
೧೮ಆಗ ಆ ಮುದುಕನು, “ನಾನು ನಿನ್ನಂತೆ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು, ನಿನ್ನನ್ನು ಕರೆದುಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ದೇವರ ಮನುಷ್ಯನಿಗೆ ಪ್ರವಾದಿ ಹೇಳಿದ ಮಾತು ಸುಳ್ಳಾಗಿತ್ತು.
19 त्यसैले परमेश्वरका जन ती वृद्ध अगमवक्तासँगै फर्केर गए, र तिनको घरमा रोटी खानुका साथै पानी पिए ।
೧೯ದೇವರ ಮನುಷ್ಯನು ಆ ಪ್ರವಾದಿಯ ಮಾತನ್ನು ನಂಬಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.
20 तिनीहरू टेबुलमा बस्दै गर्दा परमप्रभुको वचन तिनलाई फर्काएर ल्याउने अगमवक्ताकहाँ आयो, र
೨೦ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ತನ್ನ ಮನೆಗೆ ಕರೆದುಕೊಂಡು ಬಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು.
21 तिनले यहूदबाट आएका परमेश्वरका जनलाई यसो भनेर कराए, “परमप्रभु भन्नुहुन्छ, 'तँ परमप्रभुको वचनप्रति अनाज्ञाकारी भएकोले र परमप्रभुले तँलाई दिनुभएको वचन पालन नगरी
೨೧ಅವನು ಆ ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಆತನ ಆಜ್ಞೆಯನ್ನು ಮೀರಿ ಅವಿಧೇಯನಾಗಿ,
22 फर्केर आई यस ठाउँमा रोटी खाएकोले र पानी पिएकोले तेरो शरीरलाई तेरा पित्रहरूको चिहानमा गाडिने छैन किनकि तैँले परमप्रभुले मनाही गर्नुभएको ठाउँमा रोटी खाइस् र पानी पिइस्' ।”
೨೨ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೋಸ್ಕರ ಹಿಂದಿರುಗಿ ಬಂದದ್ದರಿಂದ, ನಿನ್ನ ಶವವು ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಯೆಹೋವನು ಹೇಳುತ್ತಾನೆ” ಅಂದನು.
23 जब ती परमेश्वरका जनले रोटी खाइसके र पानी पिइसके तब अगमवक्ताले तिनीसँगै तिनको घरमा फर्केर आएका परमेश्वरका जनका लागि गधामा जीन काठी कसे ।
೨೩ಅನ್ನಪಾನಗಳನ್ನು ತೆಗೆದುಕೊಂಡ ನಂತರ ಅವನು ತಾನು ಕರೆದುಕೊಂದು ಬಂದಿದ್ದ ಪ್ರವಾದಿಗೋಸ್ಕರ ಕತ್ತೆಗೆ ತಡಿಹಾಕಿಸಿದನು.
24 परमेश्वरका जन गइसकेपछि बाटोमा एउटा सिंहसित तिनको जम्काभेट भयो । सिंहले तिनलाई मारिदियो, र तिनको लाश बाटोमै पडिरह्यो । तब गधा र सिंह लाशको छेउमा उभिएका थिए ।
೨೪ದೇವರ ಮನುಷ್ಯನು ಸ್ವಲ್ಪ ದೂರ ಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದು ಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು. ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.
25 मानिसहरू त्यो बाटो भएर जाँदा तिनीहरूले बाटोमा लाश छाडिएको र लाशनेर सिंह उभिरहेको देखे । तिनीहरू ती वृद्ध अगमवक्ता बस्ने सहरमा आएर यो कुरा बताइदिए ।
೨೫ಹಾದುಹೋಗುವವರು ಶವವು ದಾರಿಯಲ್ಲಿ ಬಿದ್ದಿರುವುದನ್ನೂ, ಸಿಂಹವು ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡು ವೃದ್ಧ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು.
26 जब तिनलाई फर्काएर ल्याउने अगमवक्ताले यो कुरा सुने तिनले भने, “तिनी परमप्रभुको वचन नमान्ने परमेश्वरका जन हुन् । त्यसकारण परमप्रभुले तिनलाई सिंहको मुखमा पर्न दिनुभयो जसले तिनलाई टुक्राटुक्रा पारी मारिदियो जस्तो परमप्रभुको वचनले तिनलाई चेताउनी दिएको थियो ।”
೨೬ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ ಅವರಿಗೆ, “ಆ ಶವವು ದೇವರ ಮನುಷ್ಯನದೇ ಆಗಿರಬೇಕು. ಅವನು ಯೆಹೋವನ ಆಜ್ಞೆಗೆ ಅವೀಧೆಯನಾದ್ದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು” ಎಂದು ಹೇಳಿದನು.
27 त्यसैले ती वृद्ध अगमवक्ताले आफ्ना छोराहरूलाई यसो भने, “मेरो गधमा जीन काठी कस ।” तिनीहरूले त्यसै गरे ।
೨೭ಅವನು, “ಕತ್ತೆಗೆ ತಡಿಹಾಕಿರಿ” ಎಂದು ಮಕ್ಕಳಿಗೆ ಆಜ್ಞಾಪಿಸಲು ಅವರು ತಡಿಹಾಕಿದರು.
28 तिनी बाटो लागे र तिनले बाटोमा लाश पडिरहेको अनि लाशको छेउमा गधा र सिंह उभिरहेका देखे । सिंहले लाशलाई खाएको थिएन न त गधालाई आक्रमण गरेको थियो ।
೨೮ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನು ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.
29 अगमवक्ताले परमेश्वरका जनको लाश उठाई गधामा राखे र फर्काएर ल्याए । तिनको निम्ति शोक गर्न र लाशलाई गाड्न तिनी आफ्नै सहरमा आए ।
೨೯ಪ್ರವಾದಿಯು ದೇವರ ಮನುಷ್ಯನ ಶವವನ್ನು ಹೂಣಿಟ್ಟು, ಗೋಳಾಡಬೇಕೆಂದು ಕತ್ತೆಯ ಮೇಲೆ ಹಾಕಿ, ತನ್ನ ಊರಿಗೆ ತೆಗೆದುಕೊಂಡು ಬಂದು,
30 तिनले लाशलाई आफ्नै चिहानमा राखे, र तिनीहरूले यसो भन्दै तिनको निम्ति शोक गरे, “धिक्कार, मेरा भाइ!”
೩೦ತನ್ನ ಸ್ಮಶಾನಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, “ಅಯ್ಯೋ, ನನ್ನ ಸಹೋದರನೇ!” ಎಂದು ಗೋಳಾಡಿದರು.
31 तिनले लाशलाई गाडिसकेपछि वृद्ध अगमवक्ताले आफ्ना छोराहरूलाई यसो भने, “जब म मर्छु, मलाई परमेश्वरका जन गाडिएकै चिहानमा गाड्नू । मेरा हड्डीहरू तिनका हड्डीहरूको छेउमा रहून् ।
೩೧ಅನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ನನ್ನ ಶವವನ್ನು ದೇವರ ಮನುಷ್ಯನ ಶವವಿರುವಲ್ಲೇ ಸಮಾಧಿಮಾಡಿರಿ. ನನ್ನ ಎಲುಬುಗಳನ್ನು ಅವನ ಎಲುಬುಗಳು ಇರುವಲ್ಲೇ ಇಡಿರಿ.
32 किनकि तिनले परमप्रभुको वचनद्वारा बेथेलको वेदीको विरुद्धमा र सामरियाका सहरहरूमा भएका सबै डाँडाका ठाउँहरूका घरहरूको विरुद्धमा घोषणा गरेका सन्देश निश्चय नै पुरा हुने छ ।”
೩೨ಅವನು ಯೆಹೋವನ ಅಪ್ಪಣೆಯಿಂದ ಬೇತೇಲಿನ ಯಜ್ಞವೇದಿಗೆ ವಿರುದ್ಧವಾಗಿಯೂ ಸಮಾರ್ಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳ ವಿರುದ್ಧವಾಗಿಯೂ, ಹೇಳಿದ ಮಾತುಗಳು ಸಂದೇಹವಿಲ್ಲದೆ ನೆರವೇರುವವು” ಎಂದನು.
33 यसपछि यारोबाम आफ्नो दुष्ट मार्गबाट फर्केनन्, तर तिनले डाँडाका ठाउँहरूका लागि सबै थरीका मानिसहरूका बिचबाट सामान्य पुजारीहरूलाई नियुक्त गरिरहे । सेवा गर्न चाहने जोसुकैलाई पनि तिनले पुजारीको रूपमा अभिषेक गर्थे ।
೩೩ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ, ಪುನಃ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.
34 यो विषय यारोबामको परिवारको निम्ति पाप बन्यो, र यसले गर्दा तिनको परिवार पृथ्वीबाट नष्ट भएर सर्वनाश भएर गयो ।
೩೪ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.