< १ राजाहरू 18 >
1 धेरै दिन बितेपछि खडेरीको तेस्रो वर्षमा परमप्रभुको वचन एलियाकहाँ आयो, “आहाबकहाँ गएर आफैलाई प्रकट गर्, र म देशमा वृष्टि ल्याउने छु ।”
ಅನೇಕ ದಿವಸಗಳಾದ ತರುವಾಯ, ಮೂರನೆಯ ವರ್ಷದಲ್ಲಿ, ಯೆಹೋವ ದೇವರ ವಾಕ್ಯವು ಎಲೀಯನಿಗೆ ಬಂದಿತು, “ನೀನು ಹೋಗಿ ಅಹಾಬನಿಗೆ ನಿನ್ನನ್ನು ಪ್ರಕಟಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು,” ಎಂದು ಹೇಳಿದರು.
2 आफैलाई आहाबकहाँ प्रकट गर्न एलिया गए । सामरियामा घोर अनिकाल परेको थियो ।
ಎಲೀಯನು ಅಹಾಬನಿಗೆ ತನ್ನನ್ನು ಪ್ರಕಟಿಸಿಕೊಳ್ಳಲು ಹೋದನು. ಆದರೆ ಸಮಾರ್ಯದಲ್ಲಿ ಬರವು ಘೋರವಾಗಿತ್ತು.
3 आहाबले राजदरबारको जिम्मावाल ओबदियालाई बोलाए । ओबदियाले परमप्रभुलाई अत्यन्तै आदर गर्थे ।
ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. ಓಬದ್ಯನು ಯೆಹೋವ ದೇವರಿಗೆ ಬಹಳ ಭಯಭಕ್ತಿವುಳ್ಳವನಾಗಿದ್ದನು.
4 किनकि ईजेबेलले परमप्रभुका अगमवक्ताहरूलाई मार्दा ओबदियाले एक सय अगमवक्तालाई लिएर तिनीहरूलाई पचास-पचास गरी एउटा गुफामा लुकाई तिनीहरूलाई रोटी र पानी खुवाएका थिए ।
ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.
5 आहाबले ओबदियालाई भने, “देशको चारैतिर भएका खोलानाला र त्यसका मुहानहरूमा जाऊ । सायद हामीले घाँस पाउनेछौँ अनि घोडा र खच्चरहरूलाई जीवितै राख्न सक्छौँ । यसरी हामीले सबै पशु गुमाउने छैनौँ ।
ಅಹಾಬನು ಓಬದ್ಯನಿಗೆ, “ನೀನು ದೇಶದಲ್ಲಿರುವ ಎಲ್ಲಾ ನೀರಿನ ಬುಗ್ಗೆಗಳ ಬಳಿಗೂ, ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳೆದುಕೊಳ್ಳದ ಹಾಗೆ ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ಜೀವದಿಂದ ಇರಿಸುವುದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು. ಆಗ ನಾವು ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದನು.
6 त्यसैले निरीक्षण र पानीको खोजीको लागि तिनीहरूले देश विभाजन गरे । आहाब एकलै एकातिर गए, र ओबदिया अर्कोतिर गए ।
ಅವರು ದೇಶವನ್ನು ಹಾದು ಹೋಗಲು, ಅದನ್ನು ವಿಭಾಗ ಮಾಡಿಕೊಂಡು ಅಹಾಬನು ಒಂದು ಮಾರ್ಗದಲ್ಲಿಯೂ, ಓಬದ್ಯನು ಮತ್ತೊಂದು ಮಾರ್ಗದಲ್ಲಿಯೂ ಪ್ರತ್ಯೇಕವಾಗಿ ಹೋದರು.
7 ओबदिया बाटोमा जाँदै गर्दा एलियाले अकस्मात् तिनलाई भेटे । ओबदियाले तिनलाई चिनिहाले र भुइँतिर शिर निहुराए । तिनले भने, “के तपाईं मेरा मालिक एलिया हुनुहुन्न र?”
ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಅವನನ್ನು ಗುರುತಿಸಿ ಸಾಷ್ಟಾಂಗ ನಮಸ್ಕಾರಮಾಡಿ, “ನೀನು ನನ್ನ ಒಡೆಯನಾದ ಎಲೀಯನಲ್ಲವೋ?” ಎಂದನು.
8 एलियाले तिनलाई जवाफ दिए, “म नै हुँ । 'हेर, एलिया यहीँ छन्' भनी गएर तिम्रो मालिकलाई बताइदेऊ ।”
ಎಲೀಯನು ಅವನಿಗೆ, “ನಾನೇ, ನೀನು ಹೋಗಿ, ‘ಎಲೀಯನು ಇಲ್ಲಿದ್ದಾನೆ’ ಎಂದು ನಿನ್ನ ಯಜಮಾನನಿಗೆ ಹೇಳು,” ಎಂದನು.
9 ओबदियाले भने, “मैले के पाप गरेको छु, कि तपाईं आफ्ना दासलाई आहाबको हातमा मर्नलाई सुम्पनुहुन्छ?”
ಅದಕ್ಕವನು, “ಅಹಾಬನು ನನ್ನನ್ನು ಕೊಂದುಹಾಕುವ ಹಾಗೆ ನೀನು ನಿನ್ನ ಸೇವಕನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲು ನಾನೇನು ಪಾಪಮಾಡಿದೆನು?
10 परमप्रभु तपाईंका परमेश्वरको नाउँमा म भन्दछु, कि यस्तो कुनै जाति वा राज्य छैन जहाँ मेरा मालिकले तपाईंलाई फेला पार्न मानिसहरू पठाएका छैनन् । 'एलिया यहाँ छैनन्' भनी कुनै जाति वा राज्यले बताउँदा तिनीहरूले फेला पार्न सकेनन् भनी आहाबले तिनीहरूलाई भाकल गर्न लगाउँछन् ।
ನಿನ್ನ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ, ರಾಜ್ಯವೂ ಒಂದೂ ಇಲ್ಲ. ಅವರು, ‘ಎಲೀಯನು ನಮ್ಮಲ್ಲಿ ಇಲ್ಲ,’ ಎಂದು ಹೇಳಿದಾಗ, ಅಹಾಬನು ಆ ರಾಜ್ಯಕ್ಕೂ, ಜನಾಂಗಕ್ಕೂ ಆಣೆ ಇಡಿಸಿಕೊಂಡನು.
11 तथापि अहिले तपाईं भन्नुहुन्छ, 'जाऊ, र एलिया यहाँ छन् भनी आफ्नो मालिकलाई बताइदेऊ ।'
ಈಗ ನೀನು, ‘ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ತಿಳಿಸು,’ ಎಂದು ಹೇಳುತ್ತೀ.
12 म यहाँबाट जानेबित्तिकै परमप्रभुका आत्माले तपाईंलाई मैले नचिनेको ठाउँमा लैजानुहुने छ । तब मैले आहाबलाई गएर बताउँदा तिनले तपाईंलाई फेला नपारेपछि तिनले मलाई मार्ने छन् । तापनि म तपाईंका दासले त मेरो बाल्यकालदेखि नै परमप्रभुको आराधना गरेको छु ।
ನಾನು ನಿನ್ನನ್ನು ಬಿಟ್ಟು ಹೋಗುವಾಗ, ಯೆಹೋವ ದೇವರ ಆತ್ಮರು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯುವರು. ನಾನು ಬಂದು ಅಹಾಬನಿಗೆ ತಿಳಿಸಿದಾಗ, ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕುವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕಂದಿನಿಂದ ಯೆಹೋವ ದೇವರನ್ನು ಆರಾಧಿಸುತ್ತೇನೆ.
13 हे मेरा मालिक, ईजेबेलले परमप्रभुका अगमवक्ताहरूलाई मार्दा मैले परमप्रभुका एक सय जना अगमवक्तालाई पचास-पचास गरी कसरी एउटा गुफामा लुकाई तिनीहरूलाई रोटी र पानी खुवाएँ भन्ने कुरो तपाईंलाई बताइएको छैन र?
ಈಜೆಬೆಲಳು ಪ್ರವಾದಿಗಳನ್ನು ಕೊಲ್ಲುತ್ತಿದ್ದ ಸಮಯದಲ್ಲಿ ಯೆಹೋವ ದೇವರ ಪ್ರವಾದಿಗಳನ್ನು ನೂರು ಮಂದಿಯನ್ನು, ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನೀನು ಕೇಳಿಸಿಕೊಳ್ಳಲಿಲ್ಲವೇ?
14 अहिले तपाईं मलाई भन्नुहुन्छ, 'जाऊ, र एलिया यहाँ छन् भनी आफ्नो मालिकलाई बताइदेऊ ।' तिनले मलाई मार्ने छन् ।”
ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದುಹಾಕುವ ಹಾಗೆ, ‘ಎಲೀಯನು ಇದ್ದಾನೆ ಎಂದು ನೀನು ಹೋಗಿ ಅವನಿಗೆ ಹೇಳು,’ ಎಂಬುದಾಗಿ ನೀನು ಹೇಳುತ್ತೀ,” ಎಂದನು.
15 तब एलियाले जवाफ दिए, “सर्वशक्तिमान् परमप्रभु जसको अगि म खडा छु, उहाँको नाउँमा शपथ खाएर म भन्दछु, कि निश्चय नै म आजै आहाबकहाँ देखा पर्ने छु ।”
ಅದಕ್ಕೆ ಎಲೀಯನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸೇನಾಧೀಶ್ವರ ಯೆಹೋವ ದೇವರಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು,” ಎಂದನು.
16 त्यसैले ओबदिया आहाबलाई भेट्न गए, र एलियाले भनेका कुरा तिनलाई बताए ।
ಹೀಗೆ ಓಬದ್ಯನು ಅಹಾಬನೆದುರಿಗೆ ಹೋಗಿ ತಿಳಿಸಿದ್ದರಿಂದ ಅಹಾಬನು ಎಲೀಯನನ್ನು ಎದುರುಗೊಳ್ಳಲು ಹೋದನು.
17 तब राजा एलियालाई भेट्न गए । जब आहाबले एलियालाई देखे, तिनले तिनलाई भने, “तिमी नै एलिया हौ? इस्राएलमा कष्ट ल्याउने तिमी नै हौ!”
ಅಹಾಬನು ಎಲೀಯನನ್ನು ಕಂಡಾಗ ಅವನಿಗೆ, “ಇಸ್ರಾಯೇಲನ್ನು ಕಷ್ಟಕ್ಕೆ ಒಳಪಡಿಸುವವನು ನೀನಲ್ಲವೋ?” ಎಂದನು.
18 एलियाले जवाफ दिए, “मैले इस्राएलमा कष्ट ल्याएको छैनँ, तर तपाईं र तपाईंको परिवारले परमप्रभुका आज्ञाहरू त्यागेर बाल देवताको पछि लागी कष्ट ल्याउनुभएको छ ।
ಅದಕ್ಕೆ ಅವನು, “ನಾನು ಇಸ್ರಾಯೇಲನ್ನು ಕಳವಳಪಡಿಸುವುದಿಲ್ಲ. ಆದರೆ ನೀನೂ, ನಿನ್ನ ತಂದೆಯ ಕುಟುಂಬದವರೂ ಯೆಹೋವ ದೇವರ ಆಜ್ಞೆಯನ್ನು ತೊರೆದುಬಿಟ್ಟು, ಬಾಳನನ್ನು ಹಿಂಬಾಲಿಸುವ ನೀವೇ ಕಳವಳಪಡಿಸುವವರು.
19 अब मलाई कर्मेल डाँडामा भेट गर्न सारा इस्राएलीलाई बोलाउनुहोस् । ईजेबेलको टेबुलमा बसेर खाने बालका चार सय पचास अगमवक्ता र अशेराका चार सय अगमवक्तालाई पनि ल्याउनुहोस् ।”
ಆದ್ದರಿಂದ ನೀನು ಕರ್ಮೆಲು ಬೆಟ್ಟದ ಬಳಿಯಲ್ಲಿ ಸಮಸ್ತ ಇಸ್ರಾಯೇಲನ್ನೂ, ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ, ಈಜೆಬೆಲಳ ಮೇಜಿನ ಹತ್ತಿರ ಭೋಜನಮಾಡುವ ಅಶೇರನ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕೂಡಿಸು,” ಎಂದನು.
20 त्यसैले आहाबले सारा इस्राएलीलाई भेल हुन खबर पठाए, र तिनीहरू अगमवक्ताहरूसँगै कर्मेल डाँडामा जम्मा भए ।
ಹೀಗೆ ಅಹಾಬನು ಇಸ್ರಾಯೇಲರೆಲ್ಲರನ್ನೂ ಕರೆಯಿಸಿ, ಕರ್ಮೆಲು ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು.
21 एलिया सबै मानिसका नजिक आई भने, “कहिलेसम्म तिमीहरू आफ्नो मन बद्लिरहन्छौ? परमप्रभु नै परमेश्वर हुनुहुन्छ भने उहाँको पछि लाग । तर बाल परमेश्वर हो भने त्यसको पछि लाग ।” तापनि मानिसहरूले तिनलाई जवाफ दिएनन् ।
ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
22 तब एलियाले मानिसहरूलाई भने, “परमप्रभुको अगमवक्ताको रूपमा म एकलै छाडिएको छु, तर बालका अगमवक्ताहरू ४५० जना छन् ।
ಆಗ ಎಲೀಯನು ಜನರಿಗೆ, “ಯೆಹೋವ ದೇವರ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ. ಆದರೆ ಬಾಳನ ಪ್ರವಾದಿಗಳು ನಾನೂರ ಐವತ್ತು ಮಂದಿಯಿದ್ದಾರೆ.
23 तिनीहरूले हामीलाई दुईवटा साँढे देऊन् । तिनीहरू आफैले एउटा साँढेको छनोट गरी त्यसलाई टुक्राटुक्रा पारून्, अनि त्यसलाई दाउरामाथि राखून्, तर त्यसको मुनि आगो भने नलगाऊन् । त्यसपछि म अर्को साँढेलाई तयार पार्ने छु, र त्यसलाई दाउरामाथि राख्ने छु, तर त्यसको मुनि आगो भने लगाउँदिनँ ।
ಈಗ ಎರಡು ಹೋರಿಗಳನ್ನು ಅವರು ನಮಗೆ ಕೊಡಲಿ. ಒಂದು ಹೋರಿಯನ್ನು ಅವರು ಆಯ್ದುಕೊಂಡು, ಅದನ್ನು ತುಂಡುತುಂಡಾಗಿ ಕಡಿದು, ಬೆಂಕಿ ಹಾಕದೆ, ಕಟ್ಟಿಗೆಗಳ ಮೇಲೆ ಇಡಲಿ. ನಾನು ಇನ್ನೊಂದು ಹೋರಿಯನ್ನು ಹಾಗೆ ಮಾಡಿ, ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡುವೆನು.
24 तिमीहरूले आफ्नो देवतालाई पुकार गर, र म परमप्रभुलाई पुकार्ने छु । जसले आगोद्वारा जवाफ दिनुहुन्छ उहाँ नै परमेश्वर हुनुहुने छ ।” सबै मानिसले भने, “यो असल कुरो हो ।”
ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಅನಂತರ ನಾನು ಯೆಹೋವ ದೇವರ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ, ಬೆಂಕಿಯನ್ನು ಕಳುಹಿಸುವರೋ, ಅವರೇ ದೇವರೆಂದು ನಿಶ್ಚಯಿಸೋಣ,” ಎಂದನು. ಅದಕ್ಕೆ ಜನರೆಲ್ಲರು ಉತ್ತರವಾಗಿ, “ಈ ಮಾತು ಸರಿ,” ಎಂದರು.
25 त्यसैले एलियाले बालका अगमवक्ताहरूलाई भने, “तिमीहरूले एउटा साँढे छनोट गरी त्यसलाई तयार पार किनकि तिमीहरू सङ्ख्यामा धेरै छौ । त्यसपछि आफ्नो देवतालाई पुकार गर, तर साँढेको मुनि आगो नलगाओ ।”
ಆಗ ಎಲೀಯನು ಬಾಳನ ಪ್ರವಾದಿಗಳಿಗೆ, “ನೀವು ಅನೇಕರಾಗಿರುವುದರಿಂದ ಒಂದು ಹೋರಿಯನ್ನು ಆಯ್ದುಕೊಂಡು, ಅದನ್ನು ಮೊದಲು ಸಿದ್ಧಮಾಡಿ, ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ. ಆದರೆ ಬೆಂಕಿಯನ್ನು ಹೊತ್ತಿಸಬೇಡಿರಿ,” ಎಂದನು.
26 तिनीहरूले तिनीहरूलाई दिइएको एउटा साँढे लिएर त्यसलाई तयार पारे, र बिहानदेखि दिउँसोसम्म यसो भन्दै बाललाई पुकार गरे, “हे बाल, हाम्रा कुरा सुन्नुहोस् ।” तर त्यहाँ कुनै आवाज आएन, न त कसैले जवाफ दियो । तिनीहरूले बनाएका वेदीको वरिपरि तिनीहरू नाचे ।
ಅವರು ತಮಗೆ ಕೊಟ್ಟ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. “ಬಾಳನೇ, ನಮಗೆ ಕಿವಿಗೊಡು,” ಎಂದು ಉದಯದಿಂದ ಮಧ್ಯಾಹ್ನದವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ, ಉತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.
27 मध्यान्हमा एलियाले तिनीहरूको खिसी गर्दै भने, “अझै चर्को गरी कराओ । त्यो पो देवता हो! उसले सोचविचार गर्दै होला वा काममा व्यस्त होला वा यात्रामा होला वा सुतिहरको छ होला । त्यसैले उसलाई ब्युँझाइनुपर्छ ।”
ಮಧ್ಯಾಹ್ನದಲ್ಲಿ ಎಲೀಯನು ಅವರನ್ನು ಗೇಲಿಮಾಡಿ ಅವರಿಗೆ, “ದೊಡ್ಡ ಶಬ್ದದಿಂದ ಕೂಗಿರಿ, ಏಕೆಂದರೆ ಅವನು ಒಬ್ಬ ದೇವರಲ್ಲವೇ? ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವುದೋ ಕೆಲಸದಲ್ಲಿರಬಹುದು; ಇಲ್ಲವೆ ಪ್ರಯಾಣದಲ್ಲಿದ್ದಾನೆ; ಇಲ್ಲವೆ ಅವನು ನಿದ್ದೆಯಲ್ಲಿದ್ದಾನೆ; ಈಗ ಅವನು ಎಚ್ಚರವಾಗಬೇಕು,” ಎಂದನು.
28 त्यसैले तिनीहरू अझै चर्को गरी चिच्च्याए, र तिनीहरूको आदतअनुसार तिनीहरूले आ-आफूलाई तरवार र भालाले प्रहार गरे ।
ಅವರು ದೊಡ್ಡ ಶಬ್ದದಿಂದ ಕೂಗಿ, ತಮ್ಮ ಕ್ರಮದ ಪ್ರಕಾರವೇ ರಕ್ತವು ತಮ್ಮ ಮೇಲೆ ಸೋರುವ ಮಟ್ಟಿಗೂ ಖಡ್ಗಗಳಿಂದಲೂ, ಚೂರಿಗಳಿಂದಲೂ ತಮ್ಮನ್ನು ಕೊಯ್ದುಕೊಂಡರು.
29 मद्यदिन बितेर गयो, र तिनीहरू साँझको बलिदान चढाउने बेलासम्म तिनीहरू बरबराउँदै थिए, तर त्यहाँ कुनै आवाज सुनिएन न त कसैले जवाफ दियो । तिनीहरूका बिन्तीलाई ध्यान दिने कोही भएन ।
ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸುವ ವೇಳೆಯವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೆ ಶಬ್ದವಾದರೂ, ಉತ್ತರ ಕೊಡುವವನಾದರೂ, ಲಕ್ಷಿಸುವವನಾದರೂ ಇರಲಿಲ್ಲ.
30 तब एलियाले मानिसहरूलाई भने, “मेरो नजिक आओ ।” सबै मानिस तिनको नजिक आए । त्यसपछि तिनले परमप्रभुको भत्केको वेदी मर्मत गरे ।
ಆಗ ಎಲೀಯನು ಸಮಸ್ತ ಜನರಿಗೂ, “ನನ್ನ ಬಳಿಗೆ ಬನ್ನಿರಿ,” ಎಂದನು. ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತು ಹಾಕಿದ ಯೆಹೋವ ದೇವರ ಬಲಿಪೀಠವನ್ನು ಅವನು ದುರಸ್ತಿ ಮಾಡಿದನು.
31 एलियाले बाह्रवटा ढुङ्गा लिए । प्रत्येकले याकूबका बाह्र छोराको प्रतिनिधित्व गर्थ्यो । यी तिनै याकूब हुन् जसकहाँ परमप्रभुको यस्तो वचन आएको थियो, “तेरो नाउँ इस्राएल हुने छ ।”
“ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವುದು,” ಎಂದು ಯೆಹೋವ ದೇವರ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ, ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,
32 ती ढुङ्गाहरूले तिनले परमप्रभुको नाउँमा एउटा वेदी बनाए, र त्यस वेदीको वरिपरि पन्ध्र लिटर जति बिउ जाने ठुलो खाडल खने ।
ಆ ಕಲ್ಲುಗಳಿಂದ ಯೆಹೋವ ದೇವರ ಹೆಸರಿಗೆ ಬಲಿಪೀಠವನ್ನು ಕಟ್ಟಿ, ಆ ಬಲಿಪೀಠದ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗೆಸಿ, ಒಂದು ಕಾಲುವೆಯನ್ನು ಮಾಡಿದನು.
33 तिनले आगो लगाउन दाउराको बन्दोवस्त गरे, साँढेलाई टुक्राटुक्रा पारे, र ती टुक्राहरूलाई दाउरामाथि राखे । तिनले भने, “चार गाग्रा पानी भरेर यो बलि र दाउरामाथि खन्याइदेओ ।”
ತರುವಾಯ ಅವನು ಕಟ್ಟಿಗೆಗಳನ್ನು ಪೀಠದ ಮೇಲೆ ಇಟ್ಟು, ಹೋರಿಯನ್ನು ತುಂಡುತುಂಡಾಗಿ ಕಡಿದು, ಕಟ್ಟಿಗೆಗಳ ಮೇಲೆ ಇಟ್ಟು, “ನೀವು ನಾಲ್ಕು ಕೊಡ ನೀರು ತುಂಬಿಕೊಂಡು ದಹನಬಲಿಯ ಮೇಲೆಯೂ, ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ,” ಎಂದನು.
34 त्यसपछि तिनले भने, “दोस्रो पटक पनि यसै गर ।” तिनीहरूले दोस्रो पटक पनि त्यसै गरे । फेरि एक पटक तिनले भने, “तेस्रो पटक पनि यसै गर ।” तिनीहरूले तेस्रो पटक पनि त्यसै गरे ।
ಅವರು ಅವನು ಹೇಳಿದಂತೆ ಮಾಡಿದರು. ಆಗ ಎಲೀಯನು, “ಎರಡನೆಯ ಸಾರಿ ಹೊಯ್ಯಿರಿ,” ಎಂದನು. ಅವರು ಎರಡನೆಯ ಸಾರಿಯೂ ಹೊಯ್ದರು. ಮೂರನೆಯ ಸಾರಿ, “ಹೊಯ್ಯಿರಿ,” ಎಂದನು. ಮೂರನೆಯ ಸಾರಿಯೂ ಹೊಯ್ದರು.
35 पानी वेदीको चारैतिर पोखियो र खाडल भरियो ।
ಆದ್ದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು.
36 साँझको बलिदान चढाउने समयमा एलिया अगमवक्ता नजिक आएर भने, “हे परमप्रभु, अब्राहाम, इसहाक र इस्राएलका परमेश्वर, तपाईं इस्राएलका परमेश्वर हुनुहुन्छ र म तपाईंका दास हुँ र यी सबै कुरा मैले तपाईंको वचनअनुसार गरेको छु भनी आज थाहा होस् ।
ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆಯಲ್ಲಿ ಪ್ರವಾದಿಯಾದ ಎಲೀಯನು ಬಲಿಪೀಠದ ಸಮೀಪಕ್ಕೆ ಬಂದು, “ಅಬ್ರಹಾಮನಿಗೂ, ಇಸಾಕನಿಗೂ, ಇಸ್ರಾಯೇಲಿಗೂ ದೇವರಾದ ಯೆಹೋವ ದೇವರೇ, ಇಸ್ರಾಯೇಲಿನಲ್ಲಿ ನೀವೇ ದೇವರೆಂದೂ, ನಾನು ನಿಮ್ಮ ಸೇವಕನೆಂದೂ, ನಾನು ಈ ಕಾರ್ಯಗಳನ್ನೆಲ್ಲಾ ನಿಮ್ಮ ಮಾತಿನ ಹಾಗೆಯೇ ಮಾಡಿದ್ದೇನೆಂದೂ ಇಂದು ತೋರಿಸಿಕೊಡಿರಿ.
37 हे परमप्रभु, मेरो कुरा सुन्नुहोस्, तपाईं परमप्रभु नै परमेश्वर हुनुहुन्छ र तपाईंले नै यी मानिसहरूका ह्रदय फर्काउनुभएको छ भनी यी मानिसहरूले जानून् ।”
ನೀವು ದೇವರಾದ ಯೆಹೋವ ದೇವರೆಂದೂ, ನೀವು ಅವರ ಹೃದಯವನ್ನು ತಿರುಗಿಸಿದ್ದೀರೆಂದೂ ಈ ಜನರು ತಿಳಿಯುವ ಹಾಗೆ ನನಗೆ ಉತ್ತರಕೊಡಿರಿ. ಯೆಹೋವ ದೇವರೇ, ನನಗೆ ಉತ್ತರಕೊಡಿರಿ” ಎಂದು ಬೇಡಿದನು.
38 तब परमप्रभुको आगो खसी होमबलि, दाउरा, ढुङ्गाहरू, धूलोलाई नष्ट पार्यो, र खाडलको पानी पनि सुकाइदियो ।
ಕೂಡಲೇ ಯೆಹೋವ ದೇವರ ಬೆಂಕಿಯು ಇಳಿದುಬಂದು, ದಹನಬಲಿಯನ್ನೂ, ಕಟ್ಟಿಗೆಗಳನ್ನೂ, ಕಲ್ಲುಗಳನ್ನೂ, ಮಣ್ಣನ್ನೂ ಸುಟ್ಟುಬಿಟ್ಟು, ಕಾಲುವೆಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.
39 जब सबै मानिसले यो देखे तिनीहरूले आ-आफ्ना शिर झुकाई भने, “परमप्रभु नै परमेश्वर हुनुहुन्छ! परमप्रभु नै परमेश्वर हुनुहुन्छ!”
ಜನರೆಲ್ಲರು ಇದನ್ನು ಕಂಡಾಗ ಬೋರಲು ಬಿದ್ದು, “ಯೆಹೋವ ದೇವರೇ ದೇವರು! ಯೆಹೋವ ದೇವರೇ ದೇವರು!” ಎಂದರು.
40 त्यसैले एलियाले तिनीहरूलाई भने, “बालका अगमवक्ताहरूलाई पक्र । एउटै पनि भाग्न नपाओस् ।” त्यसैले तिनीहरूले बालका अगमवक्कताहरूलाई पक्रे र तिनीहरूलाई कीशोन खोलामा ल्याई मारे ।
ಆಗ ಎಲೀಯನು ಅವರಿಗೆ, “ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದೆ ಇರಲಿ,” ಎಂದನು. ಇವರು ಅವರನ್ನು ಹಿಡಿದರು. ಎಲೀಯನು ಅವರನ್ನು ಕೀಷೋನು ಹಳ್ಳದ ಬಳಿಗೆ ತೆಗೆದುಕೊಂಡುಹೋಗಿ ಅಲ್ಲಿ ಅವರನ್ನು ಕೊಂದುಹಾಕಿದನು.
41 एलियाले आहाबलाई भने, “उठ्नुहोस्, खानपान गर्नुहोस् र पिउनुहोस् किनकि ठुलो झरीको आवाज आउँदै छ ।”
ಅನಂತರ ಎಲೀಯನು ಅಹಾಬನಿಗೆ, “ನೀನು ಹೋಗಿ ತಿಂದು, ಕುಡಿ. ಏಕೆಂದರೆ ದೊಡ್ಡಮಳೆಯ ಶಬ್ದವು ಕೇಳಿಸುತ್ತದೆ,” ಎಂದನು.
42 त्यसैले आहाब खानपान गर्न र पिउनलाई गए । तब एलिया कर्मेल डाँडाको टाकुरामा उक्ले, भुइँमा आफ्नो शिर झुकाई आफ्ना घुँडाहरूका बिचमा आफ्नो मुहार राखे ।
ಅಹಾಬನು ತಿಂದು, ಕುಡಿಯುವುದಕ್ಕೆ ಹೋದನು. ಎಲೀಯನು ಕರ್ಮೆಲಿನ ಶಿಖರವನ್ನು ಏರಿ, ನೆಲದ ಮೇಲೆ ಬಿದ್ದು, ತನ್ನ ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು.
43 तिनले आफ्नो नोकरलाई भने, “गएर समुद्रतिर गएर हेर् ।” तिनको नोकर गएर हेर्यो र फर्केर आई भन्यो, “त्यहाँ केही छैन ।” त्यसैले एलियाले भने, “सातपल्ट गएर हेर् ।”
ತನ್ನ ಸೇವಕನಿಗೆ, “ನೀನು ಹೋಗಿ ಸಮುದ್ರದ ಕಡೆಗೆ ನೋಡು,” ಎಂದನು. ಅವನು ಹೋಗಿ ನೋಡಿ, “ಏನೂ ಇಲ್ಲ,” ಎಂದನು. ಅವನು, “ಏಳು ಸಾರಿ ತಿರುಗಿ ಹೋಗಿ ನೋಡು,” ಎಂದನು.
44 सातौँ पटकमा नोकरले भन्यो, “हेर्नुहोस्, मानिसको हातजस्तै समुद्रबाट सानो बादल उठिरहेको छ ।” एलियाले जवाफ दिए, “गएर आहाबलाई भन्, 'आफ्नो रथ तयार गरेर तल जानुहोस् नत्रता पानीले तपाईंलाई रोक्ने छ ।”
ಏಳನೆಯ ಸಾರಿ ಇವನು ಹೋಗಿ ನೋಡಿದಾಗ, “ಇಗೋ, ಸಮುದ್ರದಿಂದ ಒಂದು ಮನುಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತಿದೆ,” ಎಂದನು. ಆಗ, “ನೀನು ಹೋಗಿ ಅಹಾಬನಿಗೆ ಬೇಗನೇ ರಥವನ್ನು ತೆಗೆದುಕೊಂಡು ಮಳೆಯು ನಿನ್ನನ್ನು ತಡೆಯದಂತೆ ಇಳಿದುಹೋಗೆಂದು ಹೇಳು,” ಎಂದನು.
45 केही क्षणमा नै बादल कालो भयो र हुरी चल्यो, अनि त्यहाँ ठुलो झरी पर्यो । आहाब रथमा चढेर यिजरेलमा गए,
ಆಗ ಇದ್ದಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ, ಗಾಳಿಯಿಂದಲೂ ಕಪ್ಪಾಗಿ ದೊಡ್ಡಮಳೆಯು ಉಂಟಾಯಿತು. ಅಹಾಬನು ರಥದಲ್ಲಿ ಏರಿ ಇಜ್ರೆಯೇಲ್ ಪಟ್ಟಣಕ್ಕೆ ಹೋದನು.
46 तर परमप्रभुको हात एलियामाथि थियो । तिनले आफ्नो खास्टो पटुकामा कसे, र यिजरेलको प्रवेशद्वारसम्मै आहाबको अगिअगि कुदे ।
ಯೆಹೋವ ದೇವರ ಕೈ ಎಲೀಯನ ಮೇಲೆ ಇದ್ದುದರಿಂದ ಅವನು ತನ್ನ ಸಡಿಲವಾದ ಬಟ್ಟೆಗಳನ್ನು ನಡುಕಟ್ಟಿಕೊಂಡು ಇಜ್ರೆಯೇಲ್ ಪಟ್ಟಣದವರೆಗೂ ಅಹಾಬನಿಗೆ ಮುಂದಾಗಿ ಓಡಿದನು.