< १ शमूएल 11 >

1 त्यसपछि अम्मोनी नाहाश गए र याबेश-गिलादलाई घेरा हाले । याबेशका सबै मानिसले नाहाशलाई भने, “हामीसँग एउटा करार गर्नुहोस् र हामी तपाईंको सेवा गर्नेछौं ।”
ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ಮುತ್ತಿಗೆಹಾಕಿದನು. ಆಗ ಯಾಬೇಷಿನ ಜನರೆಲ್ಲರು ನಾಹಾಷನಿಗೆ, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿದರೆ, ನಾವು ನಿನಗೆ ಅಧೀನರಾಗಿರುವೆವು,” ಎಂದರು.
2 अम्मोनी नाहाशले जवाफ दिए, “तिमीहरूसँग म यस शर्तमा सम्झौता गर्नेछु, कि म तिमीहरूको दाहिने आँखा निकालिदिनेछु, र यसरी सारा इस्राएलमाथि म अपमान ल्याउनेछु ।”
ಅಮ್ಮೋನ್ಯನಾದ ನಾಹಾಷನು ಅವರಿಗೆ, “ಇಸ್ರಾಯೇಲರಿಗೆ ಅವಮಾನಪಡಿಸುವುದಕ್ಕಾಗಿ ನಿಮ್ಮೆಲ್ಲರ ಬಲಗಣ್ಣುಗಳನ್ನು ಕಿತ್ತು ಹಾಕುವ ಒಂದೇ ನಿಬಂಧನೆಯಿಂದ, ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ,” ಎಂದನು.
3 तब याबेशका धर्म-गुरुहरूले तिनलाई जवाफ दिए, “हामीलाई सात दिनसम्म छोडिदिनुहोस्, ताकि इस्राएलका सबै इलाकामा हामी दूतहरू पठाउनेछौं । तब हामीलाई बचाउने कोही भएन भने हामी तपाईंकहाँ आत्मासमर्पण गर्नेछौं ।
ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ, “ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಅವಕಾಶವನ್ನು ಕೊಡು. ನಮ್ಮನ್ನು ರಕ್ಷಿಸುವವರು ಯಾರೂ ಇಲ್ಲದೆ ಹೋದರೆ, ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು,” ಎಂದರು.
4 ती दूतहरू गिबामा आए जहाँ शाऊल बस्थे र जे भएको थियो सो मानिसहरूलाई भने । सबै मानिसहरू धुरुधुरु रोए ।
ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರಿಗೆ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಸ್ವರವನ್ನೆತ್ತಿ ಅತ್ತರು.
5 यति बेला शाऊल खतेबाट गोरुहरू लिएर आउँदै थियो । शऊलले भने, “मानिसहरूलाई के खराबी भयो जसले गर्दा तिनीहरू रुँदैछन्?” याबेशका मानिसहरूले जे भनेका थिए सो तिनीहरूले शाऊललाई भने ।
ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು, “ಜನರು ಅಳುವುದೇಕೆ?” ಎಂದು ಕೇಳಿದನು. ಅವರು ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.
6 जब तिनीहरूले भनेका कुरा शाऊलले सुने, तब तिनीमाथि परमेश्‍वरको आत्मा आउनुभयो र तिनी साह्रै रिसाए ।
ಸೌಲನು ಈ ಮಾತುಗಳನ್ನು ಕೇಳಿದಾಗ, ದೇವರ ಆತ್ಮವು ಬಹಳ ಸಾಮರ್ಥ್ಯದಿಂದ ಅವನ ಮೇಲೆ ಬಂದು, ಅವನು ಬಹು ಕೋಪೋದ್ರೇಕಗೊಂಡನು. ಅನಂತರ ಅವನು ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು,
7 तिनले एक हल गोरु लिए र तिनलाई टुक्रा-टक्रा गरी काटे र ती इस्राएलको सबै इलाकामा ती दूतहरूसँगै पठाए । तिनले भने, “शाऊल र शमूएलको पछि नआउने व्यक्‍तिको गोरुलाई यसै गरिनेछ ।” अनि परमप्रभुको भय मानिसहरूमाथि पर्‍यो र तिनीहरू एक जना मानिसझैं एकसाथ निस्केर आए ।
ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ, ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿ, “ಯಾರು ಸೌಲ ಮತ್ತು ಸಮುಯೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳಿಗೆ ಈ ಪ್ರಕಾರ ಮಾಡಲಾಗುವುದು,” ಎಂದು ಹೇಳಿದನು. ಯೆಹೋವ ದೇವರಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ, ಅವರು ಒಬ್ಬ ಮನುಷ್ಯನಂತೆ ಹೊರಟು ಬಂದರು.
8 जब उनीहरूलाई तिनले बेजेकमा भेला पारे, तब इस्राएलका मनिसहरू तिन लाख जना थिए र यहूदाका मानिसहरू तिस हजार जना थिए ।
ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ, ಇಸ್ರಾಯೇಲರು ಮೂರು ಲಕ್ಷ ಜನರೂ, ಯೆಹೂದ್ಯರಲ್ಲಿ ಮೂವತ್ತು ಸಾವಿರ ಜನರೂ ಆಗಿದ್ದರು.
9 तिनीहरूले त्यहाँ आएका दूतहरूलाई भने, “तिमीहरूले याबेश-गिलादका मानिसहरूलाई यसो भन, 'भोलि यति बेला मध्‍यन्‍हसम्ममा, तिमीहरूको छुट्टकारा हुनेछ,’ ।” त्यसैले दूतहरू गए र याबेश-गिलादका मानिसहरूलाई भने, र तिनीहरू खुसी भए ।
ಆಗ ಅವರು ಬಂದ ದೂತರಿಗೆ, “ನೀವು ಗಿಲ್ಯಾದಿನಲ್ಲಿರುವ ಯಾಬೇಷಿನ ಜನರಿಗೆ, ‘ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವುದು,’ ಎಂದು ಹೇಳಿರಿ,” ಎಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ, ಅವರು ಸಂತೋಷಪಟ್ಟರು.
10 तब याबेशका मानिसहरूले नाहाशलाई भने, “भोलि हामी तपाईंकहाँ आत्मासमर्पण गर्नेछौं, र तपाईंलाई जे असल लाग्छ सो हामीमाथि गर्नुहोस् ।”
ತರುವಾಯ ಯಾಬೇಷಿನ ಜನರು ನಹಾಷನಿಗೆ, “ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನೀನು ನಿನಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ನಮಗೆ ಮಾಡು,” ಎಂದರು.
11 भोलिपल्ट शाऊलले मानिसहरूलाई तिन समूहमा विभाजन गरे । बिहानको पहरमा तिनीहरू छाउनी बिचमा आए र तिनीहरूले आक्रमण गरे र मध्‍यन्‍हसम्ममा अम्मोनीहरूलाई पराजित गरे । ती जीवित रहेकाहरू सबै यसरी छरपष्‍ट भए, कि तिनीहरू कोही पनि दुई जना सँगै रहेनन् ।
ಮಾರನೆಯ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ, ಬೆಳಗಿನ ಜಾವದಲ್ಲಿ ಪಾಳೆಯದಲ್ಲಿ ಬಂದು, ಬಿಸಿಲೇರುವವರೆಗೆ ಅಮ್ಮೋನಿಯರನ್ನು ಸಂಹರಿಸಿದನು. ಉಳಿದವರು ಚದರಿಹೋದರು. ಅವರಲ್ಲಿ ಒಬ್ಬರು ಕೂಡ ಇರಲಿಲ್ಲ.
12 तब मानिसहरूले शमूएललाई भने, “ती को थिए जसले यसो भने 'के शाऊलले हामीमाथि राज्‍य गर्नेछ र?’ ती मानिसहरूलाई ल्याउनुहोस्, ताकि हामीले तिनीहरूलाई मार्नेछौं ।”
ಆಗ ಜನರು ಸಮುಯೇಲನಿಗೆ, “ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರ‍್ಯಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ, ಅವರನ್ನು ಕೊಂದು ಹಾಕುತ್ತೇವೆ,” ಎಂದರು.
13 तर शाऊलले भने, “आजको दिन कसैलाई मारिनेछैन, किनभने परमप्रभुले आज इस्राएललाई छुटकारा दिनुभएको छ ।”
ಆಗ ಸೌಲನು, “ಯೆಹೋವ ದೇವರು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನು ಉಂಟುಮಾಡಿದ್ದರಿಂದ, ಈ ಹೊತ್ತು ಯಾರನ್ನೂ ಕೊಲ್ಲಬಾರದು,” ಎಂದನು.
14 त्यसपछि शमूएलले मानिसहरूलाई भने, “आओ, हामी गिलगामा जानेछौं र त्यहाँ राजसत्ताप्रति फेरि भक्‍ति जानउनेछौं ।”
ಆಗ ಸಮುಯೇಲನು ಜನರಿಗೆ, “ನಾವು ಗಿಲ್ಗಾಲಿಗೆ ಹೋಗಿ, ಅಲ್ಲಿ ರಾಜ್ಯತ್ವವನ್ನು ದೃಢೀಕರಿಸೋಣ ಬನ್ನಿರಿ,” ಎಂದನು.
15 त्यसैले सबै मानिसहरू गिलगालमा गए र गिलगामा परमप्रभुको सामु शाऊललाई राजा बनाए । तिनीहरूले त्यहाँ परमप्रभुको सामु मेलबलिहरू चढाए, र शाऊल र इस्राएलका सबै मानिसहरू धेरै आनन्‍दित भए ।
ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ, ಆ ಸ್ಥಳದಲ್ಲಿ ಯೆಹೋವ ದೇವರ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ, ಯೆಹೋವ ದೇವರಿಗೆ ಸಮಾಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲರೂ ಬಹಳವಾಗಿ ಸಂತೋಷಪಟ್ಟರು.

< १ शमूएल 11 >