< १ शमूएल 26 >
1 जीपीहरू गिबामा शाऊलकहाँ आए र भने, “के दाऊद यशीमोन सामुन्नेको हकीलाहको पहाडमा लुकिरहेका छैनन्?”
ಜೀಫ್ಯರು ಗಿಬೆಯದಲ್ಲಿರುವ ಸೌಲನ ಬಳಿಗೆ ಬಂದು, “ದಾವೀದನು ಯೆಷಿಮೋನಿಗೆ ಎದುರಾದ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ,” ಎಂದರು.
2 तब शाऊल उठे र इस्राएलका चुनिएका तिन हजार मानिसलाई आफूसित लिएर जीपको उजाड-स्थानमा दाऊदलाई खोज्न तल गए ।
ಆಗ ಸೌಲನು ಎದ್ದು ಜೀಫ್ ಮರುಭೂಮಿಯಲ್ಲಿರುವ ದಾವೀದನನ್ನು ಹುಡುಕಲು ಇಸ್ರಾಯೇಲಿನಲ್ಲಿ ಆಯ್ದ ಮೂರು ಸಾವಿರ ಜನರ ಸಂಗಡ ಜೀಫ್ ಮರುಭೂಮಿಗೆ ಹೊರಟುಹೋಗಿ,
3 शाऊलले हकीलाहको पहाडमा छाउनी हाले, जुन यशीमोनको अगाडीतिर बाटोको छेउमा छ । तर दाऊदचाहिं उजाड-स्थानमा बसिरहेका थिए र शाऊल तिनको पछिपछि उजाड-स्थानमा आएको तिनले देखे ।
ಯೆಷಿಮೋನಿಗೆ ಎದುರಾದ ಮಾರ್ಗದಲ್ಲಿರುವ ಹಕೀಲಾ ಬೆಟ್ಟದಲ್ಲಿ ದಂಡಿಳಿಸಿದನು. ದಾವೀದನು ಸೌಲನು ತನ್ನ ಹಿಂದೆ ಮರುಭೂಮಿಗೆ ಬಂದದ್ದನ್ನು ನೋಡಿ, ಮರುಭೂಮಿಯಲ್ಲಿ ನಿಂತನು.
4 त्यसैले शाऊल साँच्चै नै आएका थिए भनी थाहा पाउनलाई दाऊदले गुप्तचरहरू पठाए ।
ದಾವೀದನು ಗೂಢಚಾರರನ್ನು ಕಳುಹಿಸಿ, ಸೌಲನು ಬಂದದ್ದು ನಿಶ್ಚಯವೆಂದು ತಿಳಿದುಕೊಂಡನು.
5 दाऊद उठे र शाऊलले छाउनी हालेको ठाउँमा गए । शाऊल र तिनका फौजका सेनापति नेरका छोरा अबनेर कहाँ सुतेका ठाउँ देखे । शाऊल छाउनीमा सुते र मानिसहरूले तिनका वरिपरि छाउनी हालेका थिए र सबै मस्त निद्रामा थिए ।
ದಾವೀದನು ಎದ್ದು ಸೌಲನು ಇಳಿದುಕೊಂಡಿದ್ದ ಸ್ಥಳಕ್ಕೆ ಬಂದನು. ಸೌಲನೂ, ಅವನ ದಂಡಿನ ನಾಯಕನಾಗಿರುವ ನೇರನ ಮಗನಾದ ಅಬ್ನೇರನೂ ಮಲಗಿರುವ ಸ್ಥಳವನ್ನು ದಾವೀದನು ನೋಡಿದನು. ಸೌಲನು ಮಧ್ಯದಲ್ಲಿ ಮಲಗಿದ್ದನು. ಜನರು ಅವನ ಸುತ್ತಲೂ ದಂಡಾಗಿ ಇಳಿದುಕೊಂಡಿದ್ದರು.
6 तब दाऊदले हित्ती अहीमेलेक, योआबका भाइ सरूयाहका छोरा अबीशैलाई भने, “शाऊलको छाउनीमा तल मसँग को जानेछ?” अबीशैले भने, “म! म तपाईंसँग जानेछु ।”
ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಮತ್ತು ಚೆರೂಯಳ ಮಗನಾಗಿರುವ ಯೋವಾಬನ ಸಹೋದರ ಅಬೀಷೈಯನ್ನು ನೋಡಿ, “ನನ್ನ ಸಂಗಡ ಸೌಲನ ದಂಡಿನಲ್ಲಿ ಪ್ರವೇಶಿಸಲು ಬರುವವರು ಯಾರು?” ಎಂದು ಕೇಳಿದನು. ಅದಕ್ಕೆ ಅಬೀಷೈಯನು, “ನಾನು ನಿನ್ನ ಸಂಗಡ ಬರುವೆನು,” ಎಂದನು.
7 त्यसैले दाऊद र अबीशै राती फौज भएको ठाउँतिर गए । शाऊल आफ्नो भाला आफ्नो शिर नजिकै भूइँमा गाडेर छाउनीभित्र सुतिरहेका थिए । अबनेर र तिनका सिपाहीहरू तिनको वरिपरि सुतेका थिए ।
ದಾವೀದನೂ, ಅಬೀಷೈಯನೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಸೌಲನು ಕಂದಕದೊಳಗೆ ಮಲಗಿ ನಿದ್ರೆ ಮಾಡುತ್ತಿದ್ದನು. ಅವನ ಈಟಿಯು ಅವನ ತಲೆದಿಂಬಿನ ಬಳಿಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲು ಅಬ್ನೇರನೂ, ಜನರೂ ಮಲಗಿದ್ದರು.
8 अबीशैले दाऊदलाई भने, “परमेश्वरले आज तपाईंको शत्रुलाई तपाइईंको हातमा दिनुभएको छ । कृपया, तिनलाई एकै प्रहारमा भालाले भूइँमा रोप्न मलाई दिनुहोस् । म तिनलाई दोस्रो पटक प्रहार गर्दिनँ ।”
ಆಗ ಅಬೀಷೈಯನು ದಾವೀದನಿಗೆ, “ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಿಂದ ನೆಲಕ್ಕೆ ಹತ್ತುವಂತೆ ತಿವಿಯಲು ಅಪ್ಪಣೆಕೊಡಬೇಕು; ಎರಡು ಸಾರಿ ಹೊಡೆಯುವುದಿಲ್ಲ,” ಎಂದನು.
9 दाऊदले अबीशैलाई भने, “तिनलाई नाश नगर । किनकि परमप्रभुको अभिषिक्त जनमाथि हात उठाएर कोचाहिं दोषरहित हुन सक्छ?”
ಆದರೆ ದಾವೀದನು ಅಬೀಷೈಯನಿಗೆ, “ಅವನನ್ನು ಸಂಹರಿಸಬೇಡ. ಏಕೆಂದರೆ ಅಪರಾಧವಿಲ್ಲದೆ ಯೆಹೋವ ದೇವರ ಅಭಿಷಿಕ್ತನ ವಿರೋಧವಾಗಿ ಕೈ ಹಾಕುವವನು ಯಾರು?” ಎಂದನು.
10 दाऊदले भने, “जस्तो परमप्रभु जीवित हुनुहुन्छ, परमप्रभुले नै तिनलाई मार्नुहुनेछ वा मर्नलाई तिनको दिन आउनेछ वा तिनी युद्धमा जानेछन् र नाश हुनेछन् ।
ಇದಲ್ಲದೆ ಇನ್ನೂ ದಾವೀದನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರೇ ಅವನನ್ನು ಹೊಡೆಯುವರು, ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು, ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.
11 परमप्रभुको अभिषिक्त जनामाथि मैले आफ्नो हात उठाउने कुरा उहाँले दूर गर्नुभएको होस् । तर अब म तिमीलाई अनुरोध गर्छु, तिनको शिरमा भएको भाला र पानीको सुराही लेऊ र हामी जाऔं ।”
ನಾನು ನನ್ನ ಕೈಯನ್ನು ಯೆಹೋವ ದೇವರ ಅಭಿಷಿಕ್ತನ ಮೇಲೆ ಹಾಕದ ಹಾಗೆ ಯೆಹೋವ ದೇವರು ನನಗೆ ತಡೆಯಲಿ. ಈಗ ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೋ ನಾವು ಹೋಗೋಣ,” ಎಂದನು.
12 त्यसैले दाऊदले भाला र पानीको सुराही शाऊलको शिरनेरबाट लिए र तिनीहरू गए । तिनीहरूलाई कसैले देखेन वा यो कसैले थाहा पाएन, न त कोही ब्युँझिए, किनकि तिनीहरू सबै मस्त निदाएका थिए, किनकि परमप्रभुबाट आएको गहिरो निद्रा तिनीहरूमाथि परेको थियो ।
ದಾವೀದನು ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೊಂಡನು. ಅವರು ಹೊರಟು ಹೋದರು. ಒಬ್ಬರಾದರೂ ನೋಡಲಿಲ್ಲ ಇಲ್ಲವೆ ತಿಳಿದುಕೊಳ್ಳಲಿಲ್ಲ, ಅರಿತಿದ್ದಿಲ್ಲ, ಯಾರೂ ಎಚ್ಚೆತ್ತಿರಲಿಲ್ಲ. ಏಕೆಂದರೆ ಯೆಹೋವ ದೇವರಿಂದ ಗಾಢನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರು ಗಾಢ ನಿದ್ರೆಯಲ್ಲಿದ್ದರು.
13 तब दाऊद पारिपट्टि गए र टाढा पहाडको टाकुरमा खडा भए । तिनीहरू बिच लामो दूरी थियो ।
ದಾವೀದನು ದಾಟಿ ಆ ಕಡೆಗೆ ಹೋಗಿ ತಮಗೂ, ಅವರಿಗೂ ಮಧ್ಯದಲ್ಲಿ ಬಹಳ ಸ್ಥಳ ಉಂಟಾಗುವ ಹಾಗೆ ದೂರವಾಗಿರುವ ಒಂದು ಬೆಟ್ಟದ ಕೊನೆಯಲ್ಲಿ ನಿಂತು,
14 दाऊदले मानिसहरू र नेरका छोरा अबनेरलाई कराए । तिनले भने, “ए अबनेर के तिमीले जवाफ दिंदैनौ?” तब अबनेरले जवाफ दिए र भने, “राजामाथि कराउने तिमी को हौ?”
ಸೈನಿಕರಿಗೂ ನೇರನ ಮಗನಾದ ಅಬ್ನೇರನಿಗೂ ಕೇಳಿಸುವಂತೆ ಕೂಗಿ, “ಅಬ್ನೇರನೇ, ನೀನು ಉತ್ತರ ಕೊಡುವುದಿಲ್ಲವೋ?” ಎಂದನು. ಅದಕ್ಕೆ ಅಬ್ನೇರನು ಉತ್ತರವಾಗಿ, “ಅರಸನಿಗೆ ಎದುರಾಗಿ ಕೂಗುವ ನೀನು ಯಾರು?” ಎಂದನು.
15 दाऊदले अबनेरलाई भने, “के तिमी साहसी मानिस होइनौ? इस्राएलमा तिमी जस्तो को छ? तिमीले आफ्नो मालिक राजाको किन हेरचाह गरेनौ? किनकि तिम्रो मालिक राजालाई मार्न कोही आयो ।
ಆಗ ದಾವೀದನು ಅಬ್ನೇರನಿಗೆ, “ನೀನು ಪರಾಕ್ರಮಶಾಲಿಯಲ್ಲವೇ? ಇಸ್ರಾಯೇಲಿನಲ್ಲಿ ನಿನಗೆ ಸಮಾನನಾದವನು ಯಾರು? ಆದರೆ ನೀನು ನಿನ್ನ ಒಡೆಯನಾದ ಅರಸನನ್ನು ಕಾಯದೆ ಹೋದದ್ದೇನು? ಜನರಲ್ಲಿ ಒಬ್ಬನು ನಿನ್ನ ಒಡೆಯನಾದ ಅರಸನನ್ನು ಸಂಹರಿಸುವುದಕ್ಕೆ ಬಂದಿದ್ದನು.
16 तिमीले गरेको यो कुरा ठीक छैन । जस्तो परमप्रभु जीवित हुनुहुन्छ, तिमी मर्न योग्यका छौ किनभने तिमीले परमप्रभुका अभिषिक्त जन तिम्रो मालिकको हेरचाह गरेका छैनौ । राजाको शिरनेर भएको भाला र पानीको सुराही कहाँ छ, हेर!”
ನೀನು ಮಾಡಿದ ಈ ಕಾರ್ಯ ಒಳ್ಳೆಯದಲ್ಲ. ಯೆಹೋವ ದೇವರ ಜೀವದಾಣೆ, ಯೆಹೋವ ದೇವರ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದ್ದರಿಂದ, ನೀವು ಮರಣಕ್ಕೆ ಯೋಗ್ಯರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ, ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು,” ಎಂದನು.
17 शाऊलले दाऊदको सोर चिने र भने, “ए मेरो छोरा दाऊद, के यो तिम्रो सोर हो?” दाऊदले भने, “हो मेरो मालिक, राजा, यो मेरो सोर हो ।”
ಆಗ ಸೌಲನು ದಾವೀದನ ಸ್ವರವನ್ನು ತಿಳಿದುಕೊಂಡು, “ನನ್ನ ಪುತ್ರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ?” ಎಂದನು. ದಾವೀದನು, “ಅರಸನಾದ ನನ್ನ ಒಡೆಯನೇ, ನನ್ನ ಧ್ವನಿಯೇ ಹೌದು,” ಎಂದನು.
18 तिनले भने, “मेरो मालिकले आफ्नो दासको किन खेदो गर्नुहुन्छ? मैले के गरेको छु? मेरो हातमा के खराबी छ?
“ನನ್ನ ಒಡೆಯನು ತನ್ನ ಸೇವಕನನ್ನು ಹೀಗೆ ಹಿಂದಟ್ಟುವುದೇನು? ನಾನೇನು ಮಾಡಿದೆನು?
19 यसकारण अब, म तपाईंलाई बिन्ती गर्छु, मेरो मालिक राजाले आफ्नो दासको कुरा सुन्नुहोस् । परमप्रभुले नै तपाईंलाई मेरो विरुद्धमा उक्साउनुभएको हो भने, उहाँले बलिदान ग्रहण गर्नुभएको होस् । तर यो मानवजाति हो भने, तिनीहरू परमप्रभुको सामु श्रापित होऊन्, किनकि तिनीहरूले मलाई आज बाहिर धपाएका छन्, ताकि म परमप्रभुको उत्तराधिकारमा रहन नसकौं । तिनीहरूले मलाई भनेका छन्, 'अरू देवताहरूको पुजा गर्न जाऊ ।'
ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
20 यसकारण अभ, मेरो रगत परमप्रभुको उपस्थितिबाट टाढा पृथ्वीमा नबगोस् । किनभने इस्राएलका राजा शिकारीले तित्रालाई पहाडहरूमा खेदेझैं एउटा उपियाँलाई खोज्न निस्केर आएका छन् ।”
ಆದ್ದರಿಂದ ಯೆಹೋವ ದೇವರ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ, ಇಸ್ರಾಯೇಲಿನ ಅರಸನು ಒಂದು ನೊಣವನ್ನು ಹುಡುಕಲು ಹೊರಟನು,” ಎಂದನು.
21 तब शाऊलले भने, “मैले पाप गरेको छु । ए मेरा छोरा दाऊद फर्क । किनकि अब तिम्रो हानि गर्नेछैन, किनभने तिम्रो दृष्टिमा मेरो जीवन बहुमूल्य थियो । हेर, मैले मूर्खता गरेको छु र धेरै ठुलो गल्ती गरेको छु ।”
ಆಗ ಸೌಲನು, “ನಾನು ಪಾಪಮಾಡಿದೆನು. ನನ್ನ ಮಗನಾದ ದಾವೀದನೇ ತಿರುಗಿ ಬಾ. ಏಕೆಂದರೆ ನನ್ನ ಪ್ರಾಣ ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡು ಮಾಡೆನು. ಇದುವರೆಗೆ ನಾನು ಮಾಡಿದ್ದು ಹುಚ್ಚುತನವೂ, ದೊಡ್ಡ ತಪ್ಪೂ ಆಗಿದೆ,” ಎಂದನು.
22 दाऊदले जवाफ दिए र भने, “हेर्नुहोस्, हे राजा, तपाईंको भाला यहाँ छ! जवान मानिसमध्ये एक जना यता आओस् र यसलाई तपाईंकहाँ लैजाओस् ।
ದಾವೀದನು ಉತ್ತರವಾಗಿ, “ಅರಸನ ಈಟಿಯು ಇಲ್ಲಿ ಇದೆ. ಸೇವಕರಲ್ಲಿ ಒಬ್ಬನು ಈ ಕಡೆಗೆ ಬಂದು, ಅದನ್ನು ತೆಗೆದುಕೊಂಡು ಹೋಗಲಿ.
23 हरेक मानिसलाई आफ्नो धार्मिकता र विश्वस्तताको निम्ति परमप्रभुले नै इनाम दिनुभएको होस् । किनभने परमप्रभुले तपाईंलाई आज मेरो हातमा दिनुभयो, तर मैले उहाँको अभिषिक्त जनलाई प्रहार गरिनँ ।
ಆದರೆ ಯೆಹೋವ ದೇವರು ಪ್ರತಿಯೊಬ್ಬನಿಗೆ ಅವನ ನೀತಿಗೂ, ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಯೆಹೋವ ದೇವರು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆದರೆ ನಾನು ಯೆಹೋವ ದೇವರ ಅಭಿಷಿಕ್ತನ ಮೇಲೆ ನನ್ನ ಕೈ ಚಾಚಲು ಮನಸ್ಸಿಲ್ಲದೆ ಇದ್ದೆನು.
24 हेर्नुहोस्, आज मेरो दृष्टिमा जसरी तपाईंको जीवन बहुमूल्य थियो, त्यसरी नै मेरो जीवन परमप्रभुको दृष्टिमा धेरै मूल्यवान होस् र उहाँले नै मलाई मेरा सबै कष्टहरूबाट छुटकारा दिनुभएको होस् ।
ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ, ಹಾಗೆಯೇ ನನ್ನ ಪ್ರಾಣವು ಯೆಹೋವ ದೇವರ ದೃಷ್ಟಿಗೆ ದೊಡ್ಡದಾಗಿರಲಿ. ಅವರು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ,” ಎಂದನು.
25 तब शाऊलले दाऊदलाई भने, “ए मेरा छोरा दाऊद, तिमीलाई आशिष् मिलोस्! तिमीले निश्चय नै ठुला कुराहरू गर्नेछौ र तिनमा तिमी सफल हुनेछौ ।” त्यसैले दाऊद आफ्नो बाटो लागे र शाऊल आफ्नै ठाउँतिर फर्के ।
ಆಗ ಸೌಲನು ದಾವೀದನಿಗೆ, “ನನ್ನ ಮಗನಾದ ದಾವೀದನೇ, ದೇವರು ನಿನ್ನನ್ನು ಆಶೀರ್ವದಿಸಲಿ. ನೀನು ಮಹತ್ಕಾರ್ಯಗಳನ್ನು ಮಾಡುವೆ, ಗೆದ್ದೇ ಗೆಲ್ಲುವೆ,” ಎಂದನು. ಹಾಗೆಯೇ ದಾವೀದನು ತನ್ನ ಮಾರ್ಗವಾಗಿ ಹೋದನು. ಸೌಲನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.