< २ इतिहास 16 >
1 आसाका राजकालको छत्तीसौँ वर्षमा इस्राएलका राजा बाशा यहूदाको विरूद्ध आक्रामक रूपले प्रस्तुत भए र रामालाई बजमूत गराए, ताकि कोही पनि यहूदाका राजा आसाको देशभित्र जान र बाहिर आउन नसकून् ।
೧ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲರ ರಾಜನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ, ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಕೋಟೆಯನ್ನು ಭದ್ರಪಡಿಸಿದನು.
2 त्यसपछि आसाले परमप्रभुको मन्दिर र राजाको महलका भण्डारका सुन र चाँदीहरू निकालेर ती दमस्कसमा बस्ने अरामका राजा बेन-हददकहाँ पठाए । तिनले भने,
೨ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಕಳುಹಿಸಿ
3 “मेरा पिता र तपाईंका पिताको बिचमा भएजस्तै मेरो र तपाईंका बिचमा पनि एउटा करार होस् । हेर्नुहोस्, मैले तपाईंलाई चाँदी र सुन पठाएको छु । इस्राएलका राजा बाशासँग तपाईंको सन्धि तोडिदिनुहोस्, ताकि तिनले मलाई हस्तक्षेप नगरुन् ।”
೩ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಪ್ಪಂದ ಇದೆಯಲ್ಲಾ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ: ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಮಾಡು; ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು” ಎಂದು ಹೇಳಿ ಕಳುಹಿಸಿದನು.
4 बेन-हददले आसा राजाको कुरा स्वीकार गरेर आफ्ना फौजका कमाण्डरलाई इस्राएलका सहरहरूका विरुद्धमा लड्न पठाए । तिनीहरूले इयोन, दान, हाबिल-मैम र नप्तालीका सबै भण्डार राख्ने सहरमाथि आक्रमण गरे ।
೪ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರುದ್ಧವಾಗಿ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್, ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು.
5 जब बाशाले यो कुरा सुने तब यस्तो भयो, तिनले रामालाई मजबूत बनाउन छोडिदिए, र आफ्ना काम बन्द गरिदिए ।
೫ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು.
6 त्यसपछि आसा राजाले यहूदाका सबैलाई आफूसित लगे । तिनीहरूले बाशाले बनाउँदै गरेको रामाका ढुङ्गा र काठहरू उठाएर लगे । त्यसपछि आसा राजाले गेबा र मिस्पालाई मजबूत पार्न ती सामाग्री प्रयोग गरे ।
೬ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರೆಯಿಸಿ ರಾಮ ಕೋಟೆಗಾಗಿ ಬಾಷನು ತರಿಸಿದ್ದ ಕಲ್ಲುಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.
7 त्यस बेला दर्शी हनानी यहूदाका राजा आसाकहाँ आए र तिनलाई भने, “तपाईंले अरामका राजामाथि भरोसा गर्नुभएको हुनाले र परमप्रभु आफ्ना परमेश्वरमाथि भरोसा नगर्नुभएको हुनाले गर्दा अरामका राजाको फौज तपाईंको हातबाट उम्केको छ ।
೭ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.
8 के कूशीहरू र लिबियालीहरू असंख्य रथ र घोड़चढ़ीहरू भएको विशाल फौज थिएनन्? तापनि तपाईंले परमप्रभुमाथि भरोसा राख्नुभएको हुनाले, उहाँले तपाईंलाई उनीहरूमाथि विजय दिनुभयो ।
೮ಕೂಷ್ಯ ಹಾಗೂ ಲೂಬ್ಯರ ಸೈನ್ಯವು ಅಪರಿಮಿತ ರಥಾಶ್ವಬಲಗಳುಳ್ಳ ಮಹಾಸೈನ್ಯವಲ್ಲವೇ? ನೀನು ಯೆಹೋವನನ್ನು ಆಶ್ರಯಿಸಿಕೊಂಡದ್ದರಿಂದ ಆತನು ಅದನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟನು.
9 किनकि परमप्रभुको दृष्टि सारा पृथ्वीभरि जहाँसुकै दौडिरहन्छ, ताकि जसका हृदय उहाँप्रति समर्पित छन्, तिनीहरूका पक्षमा उहाँले आफैलाई बलियो देखाउन सक्नुभएको होस् । तर यस विषयमा तपाईंले मूर्खतासाथ काम गर्नुभयो । अबदेखि तपाईंले युद्ध गर्नुपर्नेछ ।”
೯ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.
10 त्यसपछि आसा ती दर्शीसँग रिसाए । उनले तिनलाई थुनामा राखे, किनकि यस विषयमा थिनीसित उनी रिसाएका थिए । यसै समयमा, आसाले केही मानिसहरूमाथि अत्याचार गरे ।
೧೦ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.
11 हेर, आसाका सुरुदेखि अन्तसम्मका कामहरू यहूदा र इस्राएलका राजाहरूका पुस्तकमा लेखिएका छन् ।
೧೧ಆಸನ ಪೂರ್ವೋತ್ತರಚರಿತ್ರೆಗಳನ್ನು ಯೆಹೂದ ಮತ್ತು ಇಸ್ರಾಯೇಲ್ ರಾಜರ ಇತಿಹಾಸ ಗ್ರಂಥಗಳಲ್ಲಿ ಬರೆದಿರುತ್ತದೆ.
12 आफ्नो राजकालको उनन्चालिसौँ वर्षमा आसालाई खुट्टामा रोग लाग्यो । तिनको त्यो रोग साह्रै गम्भीर भए तापनि तिनले परमप्रभुबाट सहायता खोजेनन्, तर वैद्यहरूको मात्र सल्लाह लिए ।
೧೨ಆಸನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.
13 तब आफ्नो राजकालको एकचालिसौँ वर्षमा मरेर, तिनी आफ्ना पुर्खाहरूसित सुते ।
೧೩ಆಸನು ತನ್ನ ಆಳ್ವಿಕೆಯ ನಲ್ವತ್ತೊಂದನೆಯ ವರ್ಷದಲ್ಲಿ ತೀರಿಕೊಂಡು ಪೂರ್ವಿಕರ ಬಳಿಗೆ ಸೇರಿದನು.
14 तिनको आफ्नै चिहानमा तिनलाई तिनीहरूले गाडे, जुन तिनले दाऊदको सहरमा आफ्नो निम्ति खन्न लगाएका थिए । उनलाई सुगन्धित वासनाहरू र अत्तरहरू बनाउने निपुण मानिसहरूद्वारा तयार गारिएको विभिन्न किसिमका मसलाहरू मिलाइएको अर्थीमा राखियो । अनि तिनीहरूले उनको सम्झनामा एउटा ठूलो आगो बाले ।
೧೪ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.