< २ इतिहास 23 >
1 सातौँ वर्षमा यहोयादाले आफ्नो शक्ति प्रकट गरे र तिनले सय-सयका दलका कमाण्डरहरू, अर्थात् यहोरामका छोरा अजर्याह, येहोहानानका छोरा इश्माएल, ओबेदका छोरा अजर्याह, अदायाहका छोरा मासेयाह र जिक्रीका छोरा एलीशापातसित करार सम्झौता गरे ।
೧ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ, ಜಿಕ್ರಿಯ ಮಗನಾದ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಪ್ಪಂದ ಮಾಡಿಕೊಂಡನು.
2 तिनीहरू यहूदाका चारैतिर गए र यहूदाका सबै सहरबाट लेवीहरूका साथै इस्राएलका पुर्ख्यौली घरानाका मुखियाहरूलाई भेला गरे र तिनीहरू यरूशलेममा आए ।
೨ಇವರು ಯೆಹೂದದಲ್ಲೆಲ್ಲಾ ಸಂಚರಿಸಿ ಎಲ್ಲಾ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲರ ಗೋತ್ರ ಪ್ರಧಾನರನ್ನೂ ಒಟ್ಟುಗೂಡಿಸಲು ಅವರು ಯೆರೂಸಲೇಮಿಗೆ ಬಂದರು.
3 सबै सभाले परमेश्वरको मन्दिरमा राजासित करार बाँधे । यहोयादाले तिनीहरूलाई भने, “हेर्नुहोस्, परमप्रभुले दाऊदका सन्तानहरूका विषयमा प्रतिज्ञा गर्नुभएझैं राजाका छोराले राज्य गर्नेछन् ।
೩ಹೀಗೆ ಕೂಡಿ ಬಂದವರೆಲ್ಲರೂ ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವನು ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಅರಸನಾಗತಕ್ಕವನು ಇವನೇ.
4 तपाईंहरूले यसो गर्नुपर्छः शबाथमा आफ्नो काममा आउने पुजारीहरू र लेवीहरूको एक तिहाइचाहिं ढोकाहरूका रक्षकहरू हुनुपर्छ ।
೪ಈಗ ನೀವು ಮಾಡತಕ್ಕದ್ದು ಏನೆಂದರೆ: ಸಬ್ಬತ್ ದಿನದಂದು ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ, ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.
5 अर्को एक तिहाइचाहिं राजमहलमा, र अर्को एक तिहाइचाहिं जगको ढोकामा हुनुपर्छ । सबै मानिसचाहिं परमप्रभुको मन्दिरका चोकहरूमा हुनुपर्छ ।
೫ಇನ್ನೊಂದು ಭಾಗದವರು ಅರಸನ ಅರಮನೆಯನ್ನೂ, ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲೇ ಇರಬೇಕು.
6 सेवा गर्ने पुजारीहरू र लेवीहरूबाहेक अरू कसैलाई परमप्रभुको मन्दिरभित्र पस्न नदिनू । तिनीहरू भित्र पस्न सक्छन्, किनभने तिनीहरू अभिषेक गरिएका छन् । तर अरू सबै मानिसले परमप्रभुको आज्ञा मान्नुपर्छ ।
೬ಯಾಜಕರೂ ಹಾಗು ಸೇವೆಯಲ್ಲಿರುವ ಲೇವಿಯರು ಹೊರತಾಗಿ ಯಾರೂ ಆಲಯದೊಳಗೆ ಬರಬಾರದು. ಏಕೆಂದರೆ ಅವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಅಜ್ಞಾನುಸಾರವಾಗಿ ಹೊರಗಿರಬೇಕು.
7 लेवीहरू हरेकले आआफ्नो हतियार हातमा बोकेर राजाका चारैतिर सुरक्षा दिनुपर्छ । कोही मन्दिरभित्र पस्यो भने, त्यसलाई मारिनुपर्छ । राजा भित्र आउँदा र बाहिर जाँदा तिनको साथमा हिंड्नुपर्छ ।”
೭ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಆಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗಲೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು” ಎಂದು ಹೇಳಿದನು.
8 यसैले यहोयादा पुजारीले आज्ञा गरेबमोजिम लेवीहरू र सबै यहूदाले सेवा गरे । हरेक जनाले शबाथमा सेवा गर्न आएका मानिसहरू, र शबाथमा सेवा गर्न छाडेकाहरूलाई लिए, किनकि यहोयादा पुजारीले कुनै पनि दललाई हटाएका थिएनन् ।
೮ಲೇವಿಯ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್ ದಿನದಲ್ಲಿ ಸೇವಾ ವಿಮುಕ್ತರಾದ ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್ ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಸೇರಿಸಿಕೊಂಡನು.
9 त्यसपछि कमाण्डरहरूलाई परमेश्वरको मन्दिरमा भएका दाऊद राजाका भालाहरू, र साना तथा ठूला ढालहरू ल्याइदिए ।
೯ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು.
10 यहोयादाले सबै फौजलाई आफ्नो हातमा हतियार लिई मन्दिरको दाहिनेदेखि देब्रेपट्टिसम्म राजालाई घेर्न वेदी र मन्दिरको छेउमा राखे ।
೧೦ಆಯುಧಪಾಣಿಗಳಾದ ಎಲ್ಲಾ ಜನರನ್ನು ಅರಸನ ಸುತ್ತಲೂ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯ ವರೆಗೂ ಸಾಲಾಗಿ ನಿಲ್ಲಿಸಿದನು.
11 तब तिनीहरूले राजाका छोरालाई बाहिर ल्याए, तिनको शिरमा मुकुट लगाइदिए र तिनलाई करार-पत्र दिए । तब तिनीहरूले तिनलाई राजा बनाए र यहोयादा र तिनका छोराहरूले तिनलाई अभिषेक गरे । त्यसपछि तिनीहरूले भने, “राजा अमर रहून् ।”
೧೧ಆಮೇಲೆ ಯೆಹೋಯಾದನ ಮಕ್ಕಳು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ಅಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು.
12 जब मानिसहरू दौडिरहेका र राजाको जयजयकार गरिरहेका हल्ला अतल्याहले सुनिन्, तब तिनी परमप्रभुको मन्दिरमा तिनीहरूकहाँ आइन्,
೧೨ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಇದ್ದ ಯೆಹೋವನ ಆಲಯಕ್ಕೆ ಬಂದಳು.
13 र तिनले हेरिन् र हेर, राजा आफ्नो स्तम्भको छेउमा ढोकानेर खडा थिए र कमाण्डरहरू र तुरही फुक्नेहरू राजाका छेउमा थिए । देशका सबै मानिसहरूले उत्सव मनाउँदै र तुरही बजाउँदै थिए । अनि गायकहरूले बाजाहरू बजाउँदै थिए र प्रशंसाको गानको नेतृत्व गरिरहेका थिए । तब अतल्याहले आफ्ना लुगा च्यातिन् र कराएर भनिन्, “राजद्रोह! राजद्रोह!”
೧೩ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು.
14 तब यहोयादा पुजारीले फौजका सय-सयका दलका कमाण्डरहरूलाई बाहिर ल्याए र तिनीहरूलाई भने, “तिनलाई मन्दिरको बाहिर ल्याओ । तिनको पछि लाग्ने कुनै पनि व्यक्ति तरवारले मारियोस् ।” किनकि पुजारीले भनेका थिए, “तिनलाई परमप्रभुको मन्दिरमा नमार ।”
೧೪ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.
15 यसैले तिनी राजाको घोडा ढोकामा आएको बेला तिनीहरूले तिनलाई समाते र तिनलाई त्यहीं मारे ।
೧೫ಅವರು ಆಕೆಯನ್ನು ಹಿಡಿದು ಅರಸನ ಅರಮನೆಗೆ ಹೋಗುವ ಕುದುರೆ ಬಾಗಿಲಿನ ತನಕ ಒಯ್ದು, ಅವಳನ್ನು ಕೊಂದು ಹಾಕಿದರು.
16 त्यसपछि यहोयादाले आफै र सबै मानिस र राजाको बिचमा तिनीहरू परमप्रभुको मानिस हुनुपर्छ भनी करार बाँधे ।
೧೬ಆ ನಂತರ ಯೆಹೋಯಾದನು ಎಲ್ಲಾ ಜನರನ್ನೂ, ಅರಸನನ್ನೂ ಪ್ರೇರೇಪಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣ ಮಾಡಿದನು.
17 यसैले सबै मानिसहरू बालको मन्दिरमा गए र त्यसलाई भत्काए । बालका वेदीहरू र त्यसका मूर्तिहरूलाई तिनीहरूले टुक्रा-टुक्रा पारे, र बालको पुजारी मत्तानलाई वेदीहरूका अगि मारे ।
೧೭ತರುವಾಯ ಜನರೆಲ್ಲರೂ ಬಾಳನ ಕ್ಷೇತ್ರಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಯಜ್ಞವೇದಿಗಳ ಎದುರಿನಲ್ಲಿಯೇ ಕೊಂದುಹಾಕಿದನು; ಆ ಕ್ಷೇತ್ರವನ್ನೂ ಅದರಲ್ಲಿದ್ದ ಯಜ್ಞವೇದಿ ಹಾಗೂ ವಿಗ್ರಹಗಳನ್ನೂ ಒಡೆದುಹಾಕಿ ಹಾಳುಮಾಡಿ ಬಿಟ್ಟರು.
18 यहोयादाले परमप्रभुका मन्दिरको हेर-विचार गर्नको निम्ति पुजारीहरूका अधीनमा अधिकृतहरूको नियुक्ती गरे, जो लेवीहरू थिए । आफ्नो समयदेखि नै स्तुतिगान गर्दै र आनन्द मनाउँदै मोशाको व्यवस्थामा तोकिएबमोजिम र दाऊदले दिएको निर्देशन बमोजिम परमप्रभुको निम्ति होमबलि चढाउन र परमप्रभुको मन्दिरमा काम गर्न दाऊदले तिनीहरूलाई खटाइदिएका थिए ।
೧೮ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆ ಮಾಡುವುದೇ ಅವರ ಕರ್ತವ್ಯವಾಗಿತ್ತು.
19 अशुद्ध भएको कुनै मानिसलाई भित्र पस्न नदिनलाई यहोयादाले परमप्रभुको मन्दिरका मूल ढोकाहरूमा रक्षकहरू राखिदिए ।
೧೯ಯಾವ ವಿಷಯದಲ್ಲಾದರೂ ಅಶುದ್ಧನಾದವನು ಯೆಹೋವನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.
20 यहोयादाले सयका कमण्डरहरू, भारदारहरू, मानिसका गभर्नरहरू र देशका सारा मानिसहरूलाई लिए । तिनले राजालाई परमप्रभुको मन्दिरबाट तल ल्याए । मानिसहरू माथिल्लो ढोकाबाट भएर राजमहलमा पसे, र राजालाई सिंहासनमा बसाले ।
೨೦ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗೂ ಸಾಧಾರಣ ಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
21 यसरी देशका सारा मानिसहरू आनन्दित भए, र सहरमा शान्ति भयो । अतल्याहलाई तिनीहरूले तरवारले मारेका थिए ।
೨೧ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಪಟ್ಟಣವು ಶಾಂತವಾಯಿತು; ಅತಲ್ಯಳನ್ನು ಕತ್ತಿಯಿಂದ ಸಂಹರಿಸಿದರು.