< २ राजाहरू 20 >
1 ती दिनमा मृत्यु नै हुन्छ कि जस्तो गरी हिजकिया बिरामी परे । त्यसैले आमोजका छोरा यशैया अगमवक्ता तिनीकहाँ आए र तिनलाई भने, “परमप्रभु भन्नुहुन्छ, 'तेरो घरलाई मिलाएर राख्, किनकि तँ मर्नेछस् र बाँच्नेछैनस्' ।”
೧ಆ ಕಾಲದಲ್ಲಿ ಹಿಜ್ಕೀಯನನ್ನು ಮರಣಕರವಾದ ರೋಗವು ಬಾಧಿಸಿತು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “‘ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ’ ಎಂದು ಯೆಹೋವನು ತಿಳಿಸಿದ್ದಾನೆ” ಎಂದು ಹೇಳಿದನು.
2 तब हिजकियाले भित्तापट्टि आफ्नो अनुहार फर्काए र यसो भनेर परमप्रभुमा प्रार्थना चढाए,
೨ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು ಯೆಹೋವನಿಗೆ ಪ್ರಾರ್ಥಿಸಿ, ಹೀಗೆ ವಿಜ್ಞಾಪಿಸಿಕೊಂಡನು.
3 “हे परमप्रभु, मेरो सारा ह्रदयले म कसरी तपाईंको सामु विश्वासका साथ हिंडेको छु, र कसरी तपाईंको दृष्टिमा जे ठिक थियो, मैले त्यही गरेको छु, सो कृपा गरी सम्झनुहोस् । तब हिजकिया धुरुधुरु रोए ।
೩“ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.
4 यशैया बिचको चोकमा पुग्नुभन्दा अगि परमप्रभुको वचन यसो भनेर तिनीकहाँ आयो,
೪ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲು ಯೆಹೋವನಿಂದ ಅಪ್ಪಣೆಯಾಯಿತು.
5 “फर्की र मेरा मानिसका अगुवा हिजकियालाई यसो भन्, 'तेरा पुर्खा दाऊदका परमप्रभु परमेश्वर यसो भन्नुहुन्छः मैले तेरो प्रार्थना सुनेको छु, र मैले तेरो आँसु देखेको छु । मैले तँलाई तेस्रो दिनमा निको पार्नै लागेको छु, र तँ परमप्रभुको मन्दिरमा माथि उक्लेर जानेछस् ।
೫“ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.
6 म तेरो जीवनमा पन्ध्र वर्ष आयु थपिदिनेछु, र अश्शूरका राजाको हातबाट म तँलाई र तेरो सहरलाई बचाउनेछु, अनि मेरो आफ्नै निम्ति र मेरा दास दाऊदको निम्ति म यस सहरको रक्षा गर्नेछु' ।”
೬ಇದಲ್ಲದೆ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಿಸಿದ್ದೇನೆ, ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರನ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು” ಅಂದನು.
7 त्यसैले यशैयाले भने, “नेभाराको लेप लगाउनुहोस् ।” तिनीहरूले त्यसै गरे र तिनको पिलोमा त्यो लगाइदिए र तिनी निको भए ।
೭ಅನಂತರ ಯೆಶಾಯನು, ಒಂದು ಅಂಜೂರಹಣ್ಣನ್ನು ತೆಗೆದು ಅವನ ಗಾಯದ ಮೇಲೆ ಇಟ್ಟಾಗ ಹಿಜ್ಕೀಯನು ಗುಣಹೊಂದಿದನು.
8 हिजकियाले यशैयालाई भने, “परमप्रभुले मलाई निको पार्नुहुनेछ र म तेस्रो दिनमा परमप्रभुको मन्दिरमा जानुपर्छ भन्ने कुराको चिन्ह के हुनेछ?”
೮ಹಿಜ್ಕೀಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುವನೆಂಬುವುದಕ್ಕೂ, ನಾನು ಮೂರನೆಯ ದಿನ ಆತನ ಆಲಯಕ್ಕೆ ಹೋಗುವೆನೆಂಬುವುದಕ್ಕೂ, ಇರುವ ಗುರುತು ಏನು?” ಎಂದು ಕೇಳಿದನು.
9 यशैयाले जवाफ दिए, “तपाईंको लागि परमप्रभुबाट चिन्ह यो हुनेछ, कि परमप्रभुले बोल्नुभएको कुरा उहाँले गर्नुहुनेछ । घामको छाया दस सिंडी अगाडि जानुपर्यो कि दस सिंडी पछाडि जानुपर्यो?”
೯ಅದಕ್ಕೆ ಯೆಶಾಯನು, “ಯೆಹೋವನು ನುಡಿದಿದ್ದನ್ನು ನೆರವೇರಿಸುವನು ಎಂಬುದಕ್ಕೆ ಯೆಹೋವನಿಂದ ಉಂಟಾದ ಗುರುತು ಕೇಳುತ್ತಿರುವೆ, ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ? ಹಿಂದೆ ಬರಬೇಕೋ? ಹೇಳು ಹಿಂದೆ ಹೋಗಬೇಕೋ ಹೇಳು?” ಎಂದು ಕೇಳಿದನು.
10 हिजकियाले जवाफ दिए, “घामको छायालाई दस सिंडी अगाडि जानु त समान्य कुरो हो । त्यो छाया दस सिंडी पछाडि जाओस् ।”
೧೦ಅದಕ್ಕೆ ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ, ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು” ಎಂದು ಹೇಳಿದನು.
11 त्यसैले यशैया अगमवक्ताले परमप्रभुमा पुकारा गरे र उहाँले घामको छायालाई आहाजको सिंडीमा जहाँ पुगेको थियो त्यहाँबाट दस सिंडी पछाडि सार्नुभयो ।
೧೧ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಗಡಿಯಾರದ ವೇಳಾನುಸಾರ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡಿದನು.
12 त्यस बेला बेबिलोनका राजा बलदानका छोरा मरोदक-बलदानले हिजकियालाई चिठीहरू र एउटा उपहार पठाए किनकि हिजकिया बिरामी परेका थिए भनी तिनले सुनेका थिए ।
೧೨ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬೆಲಿನ ಅರಸನೂ ಆದ ಬೆರೋದಕಬಲದಾನ ಎಂಬುವವನು ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿ, ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.
13 हिजकियाले ती चिठीमा लेखिएका कुरा सुने र त्यसपछि ती सन्देशवाहकहरूलाई राजदरबारका सबै कुरा र तिनका मूल्यवान् थोकहरू अर्थात् चाँदी, सुन, मसला र बहुमुल्य तेल र तिनका हतियारहरूका भण्डार अनि तिनका भण्डारहरूमा भेट्टाइएका सबै थोक देखाए । हिजकियाको आफ्नो घरमा अनि तिनका सारा राज्य तिनले उनीहरूलाई नदेखाएका कुरा केही थिएन ।
೧೩ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದ್ದದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ, ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
14 तब यशैया अगमवक्ता हिजकिया राजाकहाँ आए र तिनलाई सोधे, “यी मानिसहरूले तपाईंलाई के भने? तिनीहरू कहाँबाट आएका हुन्?” हिजकियाले भने, “तिनीहरू टाढाको देश बेबिलोनबाट आएका हुन् ।”
೧೪ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನನ್ನು, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹು ದೂರ ದೇಶವಾದ ಬಾಬೆಲಿನಿಂದ ಬಂದವರು” ಎಂದು ಉತ್ತರ ಕೊಟ್ಟನು.
15 यशैयाले सोधे, “तपाईंको घरमा तिनीहरूले के-के हेरेका छन्?” हिजकियाले जवाफ दिए, “तिनीहरूले मेरो घरमा भएका हरेक थोक देखेका छन् । मसँग भएका मूल्यवान् थोकहरूमा मैले तिनीहरूलाई नदेखाएका कुनै पनि बाँकी छैन ।”
೧೫ಯೆಶಾಯನು ತಿರುಗಿ ಹಿಜ್ಕೀಯನನ್ನು, “ಅವರು ನಿನ್ನ ಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿ ಇರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಂದು ವಸ್ತುವು ಇರುವುದಿಲ್ಲ” ಎಂದನು.
16 त्यसैले यशैयाले हिजकियालाई भने, “परमप्रभुक वचन सुन्नुहोस्,
೧೬ಆಗ ಯೆಶಾಯನು ಹಿಜ್ಕೀಯನಿಗೆ, “ಯೆಹೋವನ ಮಾತನ್ನು ಕೇಳು,
17 'हेर्, ती दिन आउँदैछन् जतिबेला तेरा पुर्खाहरूले आजको दिनसम्म तेरो दरबारमा जम्मा गरेर राखेको हरेक थोक बेबिलोनमा लगिनेछ । परमप्रभु भन्नुहुन्छ, कुनै कुरा पनि छाडिनेछैन ।
೧೭‘ಆತನು ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ.
18 तँबाट जन्मेका तेरा छोराहरू, जसलाई तँ आफैले हुर्काएको छस्— तिनीहरूले उनीहरूलाई लानेछन्, र उनीहरू बेबिलोनका राजदरबारमा नपुंसक बन्नेछन्' ।”
೧೮ಬಾಬೆಲಿನ ಅರಸನು ಬಂದು ನಿನ್ನಿಂದ ಹುಟ್ಟುವಂಥ ಮಕ್ಕಳನ್ನು ತೆಗೆದುಕೊಂಡು ಹೋಗಿ, ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಎಂದು ಯೆಹೋವನು ಅನ್ನುತ್ತಾನೆ’” ಎಂದು ಹೇಳಿದನು.
19 तब हिजकियाले यशैयालाई भने, “तपाईंले बोलेको परमप्रभुको वचन असल छ ।” किनकि तिनले सोचे, “के मेरो समयमा शान्ति र स्थिरता हुने छैन र?”
೧೯ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ. ನನ್ನ ಜೀವಮಾನ ಕಾಲದಲ್ಲಿ ಸಮಾಧಾನವೂ, ಭದ್ರತೆಯೂ ಇರುವುದಲ್ಲವೇ?” ಎಂದು ಕೊಂಡನು.
20 हिजकियाका सम्बन्धमा भएका अरू कुराहरू र तिनका सबै शक्ति र कसरी तिनले पोखरी र सुरुङ बनाए अनि सहरमा पानी ल्याए भन्ने बारेमा यहूदाका राजाहरूको इतिहासको पुस्तकमा लेखिएका छैनन् र?
೨೦ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
21 हिजकिया आफ्ना पुर्खाहरूसित सुते, र तिनको ठाउँमा तिनका छोरा मनश्शे राजा भए ।
೨೧ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.