< २ राजाहरू 23 >
1 त्यसैले राजाले सन्देशवाहकहरू पठाए जसले यहूदा र यरूशलेमका सबै धर्म-गुरुलाई तिनीकहाँ भेला गराए ।
೧ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇಮಿನ ಮತ್ತು ಯೆಹೂದ ಪ್ರಾಂತ್ಯಗಳಲ್ಲಿರುವ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.
2 तब राजा परमप्रभुको मन्दिरमा गए, अनि यहूदाका सबै मानिस र यरूशलेमका सबै बासिन्दा, पुजारीहरू, अगमवक्ताहरू र सानादेखि ठुलासम्म सबै मानिस पनि तिनीसँगै गए । तब तिनले परमप्रभुको मन्दिरमा भेट्टाइएका करारको पुस्तकका सबै वचन तिनीहरूले सुन्ने गरी पढे ।
೨ಅರಸನು ಯೆರೂಸಲೇಮಿನವರನ್ನೂ, ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.
3 राजा खम्बानेर खडा थिए अनि आफ्नो सारा ह्रदय र सारा प्राणले परमप्रभुको पछि लाग्न र उहाँका आज्ञाहरू, उहाँका निर्देशनहरू, उहाँका विधिहरू पालन गर्न र यस पुस्तकमा लेखिएका यस करारका वचनहरू पालन गर्न परमप्रभुको सामु करार बाँधे । यसरी सबै मानिसले यो करार पालन गर्ने सहमति जनाए ।
೩ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.
4 तब प्रधान पुजारी हिल्कियाह, तिनको अधिनका पुजारीहरू र द्वारपालहरूलाई बाल देवता र अश्शेरा देवी अनि आकाशका सबै ताराहरूका निम्ति बनाइएका भाँडाहरू परमप्रभुको मन्दिरबाट बाहिर ल्याउन हुकुम दिए । तिनले किद्रोन उपत्यकामा भएको मैदानहरूमा तिनलाई जलाए र तिनका खरानीलाई बेथेलमा लगे ।
೪ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.
5 यहूदाका राजाहरूले यहूदाका सहरहरूका उच्च ठाउँहरू र यरूशलेम वरिपरिका ठाउँहरूमा धूप बाल्नलाई चुनेका मूर्तिपूजक पुजारीहरूलाई तिनले हटाइदिए । तिनीहरूले बाल देवता, सूर्य, चन्द्रमा, ग्रहहरू र आकाशका सबै ताराहरूलाई धूप बाल्थे ।
೫ಇದಲ್ಲದೆ, ಯೆಹೂದ ಪ್ರಾಂತ್ಯದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಸುತ್ತಣ ಪ್ರದೇಶಗಳಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ, ಬಾಳನಿಗೂ, ಸೂರ್ಯ, ಚಂದ್ರ ಹಾಗೂ ನಕ್ಷತ್ರಗಳು ಎನಿಸಿಕೊಳ್ಳುವ ಆಕಾಶಸೈನ್ಯಕ್ಕೂ, ಧೂಪಹಾಕುವುದಕ್ಕಾಗಿ ಯೆಹೂದ ರಾಜರಿಂದ ನೇಮಿಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.
6 परमप्रभुको मन्दिरबाट अश्शेरा देवीको खम्बालाई तिनले यरूशलेम बाहिर किद्रोन उपत्यकामा बाहिर लगे र त्यसलाई त्यहाँ जलाए । तिनले त्यसलाई पिटेर धूलो र त्यो धूलोलाई साधारण मानिसहरूका चिहानहरूमा फालिदिए ।
೬ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.
7 तिनले परमप्रभुको मन्दिरमा भएका झुटो धर्मका वेश्याहरूका कोठाहरू सफा गरे, जहाँ स्त्रीहरूले अश्शेरा देवीका निम्ति वस्त्रहरू बुन्ने गर्थे ।
೭ಯೆಹೋವನ ಆಲಯದ ಪ್ರಾಕಾರದೊಳಗಿದ್ದ ದೇವದಾಸ, ವೇಶ್ಯವೃತ್ತಿಯವರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ್ ದೇವತೆಗಳಿಗಾಗಿ ಗುಡಾರದ ಬಟ್ಟೆಗಳನ್ನು ನೇಯುತ್ತಿದ್ದರು.
8 योशियाहले यहूदाका सहरहरूबाट सबै पुजारीलाई ल्याए, र गेबादेखि बेर्शेबासम्म पुजारीहरूले धूप बाल्ने उच्चा ठाउँहरूलाई तिनले अपवित्र तुल्याइदिए । तिनले सहरको मूल ढोकाको देब्रेपट्टि यहोशूको ढोका (सहरका राज्यपा) को प्रवेशद्वारमा भएका ढोकाहरूमा बनाइएका उच्च ठाउँहरूलाई नष्ट पारिदिए ।
೮ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಯೆಹೂದ ಪಟ್ಟಣಗಳ ಎಲ್ಲಾ ಯಾಜಕರನ್ನು ಕರೆಯಿಸಿಕೊಂಡು ಅವರು ಧೂಪಹಾಕುತ್ತಿದ್ದ ಪೂಜಾಸ್ಥಳಗಳನ್ನು ನಾಶಮಾಡಿಸಿದನು. ಪುರಾಧಿಕಾರಿಯಾದ ಯೆಹೋಶುವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರಗಳ ದೇವತೆಯ ಪೂಜಾಸ್ಥಳಗಳನ್ನು ಕೆಡವಿ ಹಾಕಿಸಿದನು.
9 ती उच्च ठाउँहरूका पुजारीहरूलाई यरूशलेममा परमप्रभुको मन्दिरमा सेवा गर्न नदिए तापनि तिनीहरूले आफ्ना दाजुभाइका बिचमा अखमिरी रोटी खाए ।
೯ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕಿದರೂ, ಅವರಿಗೆ ಯೆರೂಸಲೇಮಿನಲ್ಲಿದ್ದ ಯೆಹೋವನ ಯಜ್ಞವೇದಿಯ ಸಮೀಪಕ್ಕೆ ಹೋಗುವುದಕ್ಕೆ ಅಪ್ಪಣೆಯಿರಲಿಲ್ಲ.
10 मोलोखलाई बलिको रूपमा कसैले आफ्ना छोरा वा छोरी आगोमा हिंड्न नलगाओस् भनेर योशियाहले बेन-हिन्नोमको बेँसीमा अवस्थित तोपेतलाई अपवित्र तुल्याए ।
೧೦ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೆನ್ ಹಿನ್ನೋಮ್ ತಗ್ಗಿನಲ್ಲಿದ್ದ “ತೋಫೆತ್” ಎಂಬ ಯಜ್ಞವೇದಿಯ ಸ್ಥಳವನ್ನು ಹೊಲೆಮಾಡಿದನು.
11 यहूदाका राजाहरूले सूर्यको सम्मानमा बनाएका घोडाहरू तिनले हटाए । ती नातान-मेलेक नाउँका अधिकारीको कोठा नजिक परमप्रभुको मन्दिरको प्रवेशद्वारको क्षेत्रमा राखिएका थिए । योशियाहले सूर्यको सम्मानमा बनाइएका रथहरूलाई जलाए ।
೧೧ಯೆಹೂದ ರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಟ್ಟುಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಿಲಿನ ಹೊರಗೆ “ಪರ್ವರೀಮ್” ಎಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು.
12 आहाजको दरवारको कौसीमा यहूदाका राजाहरूले राखेका वेदीहरू र मनश्शेले परमप्रभुको मन्दिरका दुईवटा चोकमा बनाएका वेदीहरू राजा योशियाहले नष्ट पारे । योशियाहले तिनलाई टुक्राटुक्रा पारे र तिनलाई किद्रोनको बेँसीमा फाले ।
೧೨ಇದಲ್ಲದೆ, ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
13 इस्राएलका राजा सोलोमनले यरूशलेमको पूर्वपट्टि, भ्रष्टताको पर्वतको दक्षिणपट्टि बनाएका सीदोनीहरूका देवी अश्तोरेतको घिनलाग्दो मूर्ति, मोआबीहरूको देवता कमोशको घिनलाग्दो मूर्ति र अम्मोनीहरूको देवता मोलोखको घिनलाग्दो मूर्तिलाई राजाले नष्ट पारिदिए ।
೧೩ಇಸ್ರಾಯೇಲರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್ ದೇವತೆ, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಯೆರೂಸಲೇಮಿನ ಎದುರಿನಲ್ಲಿಯೂ, ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ್ದ ಪೂಜಾಸ್ಥಳಗಳನ್ನು ಅರಸನು ಹೊಲೆ ಮಾಡಿದನು.
14 तिनले ढुङ्गाका खम्बाहरूलाई टुक्राटुक्रा पारे, र अश्शेरा देवीका खम्बाहरूलाई काटे र ती ठाउँ मानिसका हड्डीहरूले भरे ।
೧೪ಕಲ್ಲು ಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಬಿಟ್ಟು ಅವುಗಳಲ್ಲಿದ್ದ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
15 बेथेलमा भएको वेदी र नबातका छोरा यारोबाम (इस्राएललाई पाप गर्न लगाउने) ले बनाएका उच्च ठाउँहरूलाई पनि योशियाहले पूर्ण रूपमा नाश पारे । तिनले त्यो वेदी र उच्च ठाउँहरूलाई जलाए र धूलोपिठो पारे । तिनले अश्शेरा देवीको खम्बालाई पनि जलाए ।
೧೫ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿನು.
16 योशियाहले त्यस क्षेत्रमा नजर लगाए र पहाडी क्षेत्रमा तिनले चिहानहरू देखे । ती चिहानहरूबाट हड्डीहरू ल्याउन तिनले मानिसहरू पठाए । त्यसपछि तिनले ती हड्डीहरूलाई वेदीमाथि राखेर जलाए जसले त्यो अपवित्र पार्यो । परमेश्वरका मानिसले बोलेका परमप्रभुको वचनअनुसार यसो हुन आएको थियो, ती मानिसले यी कुराहरूका बारेमा पहिले नै बोलेका थिए ।
೧೬ಯೋಷೀಯನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡಗಳಲ್ಲಿ ಸಮಾಧಿಗಳನ್ನು ಕಂಡು, ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ ಆ ಯಜ್ಞವೇದಿಯ ಮೇಲೆ ಸುಟ್ಟು ಅವುಗಳನ್ನು ನಾಶಮಾಡಿದನು. ಹೀಗೆ ದೇವರ ಮನುಷ್ಯನೊಬ್ಬನು ಪ್ರಕಟಿಸಿದ ಯೆಹೋವನ ವಾಕ್ಯವು ನೆರವೇರಿತು.
17 तब तिनले सोधे, “मैले देखेको त्यो स्मारकचाहिं केको हो?” सहरका मानिसहरूले तिनलाई जवाफ दिए, “त्यो यहूदाबाट आएका परमेश्वरका मानिसको चिहान हो जसले तपाईंले भर्खरै बेथेलको वेदीको विरुद्धमा गर्नुभएको कुराको बारेमा बोलेका थिए ।”
೧೭ಇದಲ್ಲದೆ, ಅವನು ಒಂದು ಸಮಾಧಿಶಿಲೆಯನ್ನು ಕಂಡು, ಅದು ಏನು? ಎಂದು ವಿಚಾರಿಸಲು ಆ ಊರಿನವರು, “ನೀನು ಈಗ ಬೇತೇಲಿನ ಯಜ್ಞವೇದಿಗೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದ ದೇಶದವನಾದ ದೇವರ ಮನುಷ್ಯನ ಸಮಾಧಿ” ಎಂದು ಉತ್ತರಕೊಟ್ಟರು.
18 त्यसैले योशियाहले भने, “त्यसलाई छोड । तिनका हड्डीहरूलाई कसैले पनि नसारोस् । त्यसैले सामरियाबाट आएका अगमवक्ताका हड्डीहरूसँगै तिनका हड्डीहरूलाई तिनीहरूले त्यहाँ छाडे ।
೧೮ಆಗ ಯೋಷೀಯನು, “ಬಿಡಿರಿ, ಆ ಮನುಷ್ಯನ ಎಲುಬುಗಳನ್ನು ಯಾರೂ ಮುಟ್ಟಬಾರದು” ಎಂದು ಹೇಳಿದನು. ಆದುದರಿಂದ ಅವರು ಅವನ ಮತ್ತು ಸಮಾರ್ಯದೇಶದ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ.
19 त्यसपछि सामरियाका सहरहरूमा भएका उच्च ठाउँहरू जसलाई इस्राएलका राजाहरूले बनाएका र परमप्रभुलाई क्रुद्ध तुल्याएका थिए, ती सबैलाई योशियाहले हटाए । तिनले बेथेलमा जे गरेका थिए, तिनलाई पनि ठिक त्यही गरे ।
೧೯ಇಸ್ರಾಯೇಲ್ ರಾಜರು ಸಮಾರ್ಯದ ಪಟ್ಟಣಗಳಲ್ಲಿ ಪೂಜಾಸ್ಥಳಗಳನ್ನು ಗುಡಿಗಳನ್ನು ಕಟ್ಟಿಸಿ, ಯೆಹೋವನ ಕೋಪಕ್ಕೆ ಕಾರಣವಾದಂಥವುಗಳನ್ನು ಯೋಷೀಯನು ತೆಗೆದುಕೊಂಡು, ಬೇತೇಲಿನಲ್ಲಿ ನಾಶಮಾಡಿದ ಹಾಗೆ ಅವೆಲ್ಲವನ್ನು ನಾಶಮಾಡಿದನು.
20 उच्च ठाउँहरूका सबै पुजारीलाई तिनले वेदीहरूमा मारे, र तिनले मानिसका हड्डीहरू तिनमा जलाए । तब तिनी यरूशलेममा फर्के ।
೨೦ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಯ ಮೇಲೆ ವಧಿಸಿ ಆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ಹಿಂದಿರುಗಿ ಹೋದನು.
21 तब राजाले सबै मानिसलाई यसो भनरे आज्ञा दिए, “करारको पुस्तकमा लेखिएबमोजिम परमप्रभु आफ्ना परमेश्वरको निम्ति निस्तार-चाड मनाओ ।”
೨೧ಅನಂತರ ಅರಸನು ಎಲ್ಲಾ ಜನರಿಗೆ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು” ಎಂದು ಆಜ್ಞಾಪಿಸಿದನು.
22 इस्राएलमा शासन गर्ने न्यायकर्ताहरूका समयदेखि नै यसरी निस्तार-चाडको उत्सव मनाउने काम कहिलै थिएन, न त इस्राएल र यहूदाका राजाहरूको समयमा भएको थियो ।
೨೨ಇಂಥ ಪಸ್ಕಹಬ್ಬವು ಇಸ್ರಾಯೇಲರನ್ನು ಪಾಲಿಸಿದ ನ್ಯಾಯಸ್ಥಾಪಕರ ಕಾಲದಲ್ಲಾಗಲಿ, ಇಸ್ರಾಯೇಲರ ಮತ್ತು ಯೆಹೂದ್ಯರ ಅರಸರ ಕಾಲದಲ್ಲಾಗಲಿ ನಡೆಯಲೇ ಇಲ್ಲ.
23 तर राजा योशियाहको अठारौँ वर्षमा यरूशलेममा परमप्रभुको निस्तार-चाड मनाइयो ।
೨೩ಈ ಪಸ್ಕಹಬ್ಬವು ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಯೆರೂಸಲೇಮಿನಲ್ಲಿ ಯೆಹೋವನಿಗಾಗಿ ಆಚರಿಸಲ್ಪಟ್ಟಿತು.
24 मृतहरू र भुत आत्माहरूसित बात गर्नेहरूलाई पनि योशियाहले निश्कासन गरे । तिनले यहूदा र यरूशलेममा देखिने सबै प्रेतपुजा, मूर्तिहरू र घिनलाग्दा थोकहरूलाई पनि हटाए । यसरी हिल्कियाह पुजारीले परमप्रभुको मन्दिरमा भेट्टाएका व्यवस्थाका पुस्तकमा लिखिएका वचनहरू पालन गर्ने काम भयो ।
೨೪ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು.
25 आफ्नो सारा ह्रदय, सारा प्राण, र सारा शक्तिले परमप्रभुतर्फ फर्केर सबै मोशाको व्यवस्थालाई पालन गर्ने योशियाहभन्दा पहिले त्यहाँ कुनै अर्को राजा थिएन । न त योशियाहले झैं तिनी पछि आएका अरू कुनै राजाले नै गर्यो ।
೨೫ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಹಿಂದಿನ ಕಾಲದಲ್ಲೂ ಆ ನಂತರದ ಕಾಲದಲ್ಲೂ ಇರಲಿಲ್ಲ.
26 तापनि परमप्रभु आफ्नो दन्किरहेको क्रोधको आगोबाट फकर्नुभएन किनकि मनश्शेले गरेका सबै कामको कारणले यहूदाको विरुद्धमा उहाँलाई भयङ्कर रिस उठेको थियो ।
೨೬ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.
27 त्यसैले परमप्रभुले भन्नुभयो, “जसरी मैले इस्राएललाई हटाएको छु त्यसरी नै मैले चुनेको यो यरूशलेम सहर र 'मेरो नाउँ त्यहाँ हुनेछ' भनी मैले भनेको त्यो मेरो मन्दिर समेत म यहूदालाई पनि मेरो दृष्टिबाट हटाउनेछु ।”
೨೭ಯೆಹೋವನು, “ಇಸ್ರಾಯೇಲರನ್ನು ತೆಗೆದುಹಾಕಿದಂತೆ, ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು, ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮದ ಮಹಿಮೆಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.
28 योशियाह सम्बन्धमा भएका अरू कुराहरू, तिनले गरेका हरेक काम, के ती यहूदाका राजाहरूको इतिहासको पुस्तकमा लेखिएका छैनन् र?
೨೮ಯೋಷೀಯನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆಯಲಾಗಿದೆ.
29 ती दिनमा मिश्रदेशका राजा फारो नेकोले आफ्ना सेना लिएर उत्तरमा यूफ्रेटिस नदी पारि अश्शूरका राजालाई युद्धमा मदत गर्न गए । राजा योशियाह नेकोलाई मगिद्दोमा रोक्ने उदेश्यले गए तर त्यहाँ युद्धमा तिनी मारिए ।
೨೯ಅವನ ಕಾಲದಲ್ಲಿ, ಐಗುಪ್ತದ ಅರಸನಾದ ಫರೋಹ ನೆಕೋ ಎಂಬುವವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ಎದ್ದು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಅಲ್ಲಿ ಅವನಿಂದ ಹತನಾದನು.
30 योशियाहका सेवकहरूले तिनको लाशलाई रथमा राखेर मगिद्दोबाट यरूशलेममा ल्याए, र तिनको आफ्नै चिहानमा तिनलाई गाडे । तब देशका मानिसहरूले योशियाहका छोरा यहोआहाजलाई लिई तिनलाई अभिषेक गरे, र तिनका पिताको ठाउँमा तिनलाई राजा बनाए ।
೩೦ಯೋಷೀಯನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ನಂತರ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು.
31 यहोआहाजले राज्य गर्न सुरु गर्दा तिनी तेइस वर्षका थिए, र तिनले यरूशलेममा तिन महिना राज्य गरे । तिनकी आमाको नाउँ हमुतल थियो । उनी लिब्नाकी यर्मियाकी छोरी थिइन् ।
೩೧ಯೆಹೋವಾಹಾಜನು ಅರಸನಾದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಲಿಬ್ನದವನಾದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.
32 यहोआहाजले हरेक कुरामा आफ्ना पुर्खाहरूले गरेझैँ परमप्रभुको दृष्टिमा जे खराब थियो, त्यही गरे ।
೩೨ಯೆಹೋವಾಹಾಜನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
33 तिनले यरूशलेममा राज्य नगरून् भनेर फारो नेकोले तिनलाई हमात देशको रिब्लामा साङ्लाले बाँधेर राखे । तब नेकोले यहूदालाई एक सय तोडा चाँदी र एक तोडा सुन कर तिर्न लगाए ।
೩೩ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ, ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.
34 फारो नेकोले योशियाहका छोरा एल्याकीमलाई तिनका पिताको ठाउँमा राजा बनाए, र तिनको नाउँ बद्ली यहोयाकीम राखे । तर तिनले यहोआहाजलाई चाहिँ मिश्रदेशमा लगे, जहाँ तिनको मृत्यु भयो ।
೩೪ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು. ಯೆಹೋವಾಹಾಜನು ಅಲ್ಲಿ ಮರಣ ಹೊಂದಿದನು.
35 यहोयाकीमले फारोलाई चाँदी र सुन कर तिरे । फारोको माग पुरा गर्न यहोयाकीमले देशमा कर लगाए, र देशका प्रत्येक मानिसले आफ्नो क्षमताअनुसार तिनलाई करको रूपमा चाँदी र सुन जबरदस्ती तिर्नुपर्ने भयो ।
೩೫ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿ ಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ವಸೂಲಿಮಾಡಿಕೊಂಡು ಫರೋಹ ನೆಕೋವನಿಗೆ ತಂದೊಪ್ಪಿಸಿದನು.
36 यहोयाकीमले राज्य सुरु गर्दा तिनी पच्चिस वर्षका थिए, र तिनले यरूशलेममा एघार वर्ष राज्य गरे । तिनकी आमाको नाउँ जबीदा थियो । उनी रूमाकी पदायाहकी छोरी थिइन् ।
೩೬ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ರೂಮನ ಪೆದಾಯನ ಮಗಳಾದ ಜೆಬೂದಾ ಎಂಬಾಕೆಯು ಅವನ ತಾಯಿ.
37 आफ्ना पिता-पुर्खाहरूले गरेझैँ यहोयाकीमले परमप्रभुको दृष्टिमा जे खराब थियो, त्यही गरे ।
೩೭ಯೆಹೋಯಾಕೀಮನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.