< २ राजाहरू 25 >
1 राजा सिदकियाहको शासनकालको नवौँ वर्षको दसौँ महिनाको दसौँ दिनमा बेबिलोनका राजा नबूकदनेसर आफ्ना सबै सेना लिएर यरूशलेमको विरुद्धमा आए । तिनले यसको सामु छाउनी हाले र तिनीहरूले यसको चारैतिर घेरा हाले ।
೧ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.
2 त्यसैले राजा सिदकियाहको शासनकालको एघारौँ वर्षसम्म सहरलाई घेरा हालियो ।
೨ಅವನು ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
3 त्यस वर्षको चौथो महिनाको नवौँ दिनमा सहरमा यति घोर अनिकाल पर्यो कि देशका मानिसहरूका लागि खानेकुरा भएन ।
೩ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೇ ಹೋಯಿತು.
4 तब सहरको पर्खाल तोडेर भित्र प्रवेश गरियो र रातमा राजाको बगैँचानेर भएका दुईवटा पर्खालको बिचको ढोकाको बाटोबाट सबै योद्धा भागे, जबकि कल्दीहरूले सहरको चारैतिर घेरा लगाई राखेकै थिए । राजा अराबाको दिशातिर गए ।
೪ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.
5 तर कल्दीहरूका सेनाले सिदकियाह राजालाई खेदे, र यरीहो नजिकैको यर्दन नदीका मैदानहरूमा तिनलाई भेट्टाए । तिनका सबै सेना तिनीबाट तितर-बितर भए ।
೫ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬಯಲಿನಲ್ಲಿ ಅವನನ್ನು ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿ ಹೋಗಿದ್ದರು.
6 तिनीहरूले राजालाई गिरफ्तार गरे र तिनलाई रिब्लामा बेबिलोनका राजाकहाँ ल्याए, जहाँ तिनीहरूले तिनलाई फैसला सुनाए ।
೬ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.
7 तिनीहरूले सिदकियाहका छोराहरूलाई तिनकै आँखाका सामु मारे । तब तिनका आँखा तिनले निकाले, तिनलाई काँसाका साङ्लाहरूले बाँधे र तिनलाई बेबिलोनमा ल्याए ।
೭ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.
8 अब बेबिलोनका राजा नबूकदनेसरको शासनकालको उन्नाइसौँ वर्षको पाँचौँ महिनाको सातौँ दिनमा बेबिलोनका राजाका सेवक अनि अङ्गरक्षकहरूका सेनापति नबूजरदान यरूशलेममा आए ।
೮ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವವನು ಯೆರೂಸಲೇಮಿಗೆ ಬಂದನು.
9 परमप्रभुको मन्दिर, राजदरबार र यरूशलेमका सबै घरहरूमा तिनले आगो लगाए । सहरका हरेक महत्त्वपूर्ण भवनमा पनि तिनले आगो लगाए ।
೯ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.
10 अङ्गरक्षकहरूको सेनापतिको अधीनमा रहेका बेबिलोनका सबै सेनाले यरूशलेम वरिपरिको पर्खालहरू नष्ट पारिदिए ।
೧೦ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯರ ಸೈನ್ಯದವರು ಯೆರೂಸಲೇಮಿನ ಸುತ್ತುಗೋಡೆಗಳನ್ನು ಕೆಡವಿದರು.
11 बेबिलोनका राजालाई वेवास्ता गरेका सहरमा बाँकी बचेका मानिसहरू अनि बाँकी रहेका अरू मानिसहरूका सम्बन्धमा अङ्गरक्षकहरूका सेनापति नबूजरदानले, तिनीहरूलाई निर्वासनमा लगे ।
೧೧ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.
12 तर अङ्गरक्षकहरूका सेनापतिले दाखबारी र खेतबारीमा काम गर्न सबैभन्दा गरिबहरूलाई त्यहीँ छाडिदिए ।
೧೨ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.
13 परमप्रभुको मन्दिरमा राखिएका काँसाका स्तम्भहरू, आधारहरू र काँसाको विशाल खड्कुँलोलाई कल्दीहरूले टुक्राटुक्रा पारे र काँसालाई बेबिलोनमा लगे ।
೧೩ಕಸ್ದೀಯರು ಯೆಹೋವನ ಆಲಯದಲ್ಲಿದ್ದ ತಾಮ್ರದ ಕಂಬಗಳನ್ನು, ಪೀಠಗಳನ್ನೂ, ಕಡಲಿನ ಆಕಾರದ ಪಾತ್ರೆಯನ್ನೂ ಒಡೆದು ಅವುಗಳ ತಾಮ್ರವನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.
14 भाँडाहरू, बेल्चाहरू, सलेदाका चिम्टाहरू, चम्चाहरू र मन्दिरमा पुजारीहरूले सेवा गर्दा प्रयोग गरिने काँसाका सबै सामान पनि कल्दीहरूले लगे ।
೧೪ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ತೆಗೆದುಕೊಂಡು ಹೋದರು.
15 राजाका सेनापतिले खरानी उठाउने भाँडाहरू अनि सुन र चाँदीले बनेका कचौराहरू लिएर गए ।
೧೫ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಕೆ, ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.
16 सोलोमनले मन्दिरको लागि बनाएका दुईवटा स्तम्भ, विशाल खड्कुँलो र आधारहरूमा भएका काँसा जोख्नै सकिंदनथ्यो ।
೧೬ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಡಲೆನಿಸಿಕೊಂಡ ಪಾತ್ರೆಯು, ಪೀಠಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರವನ್ನು ಬಳಸಲಾಗಿತ್ತು.
17 पहिलो स्तम्भको उचाइ अठार हात थियो, र स्तम्भमाथि एउटा स्तम्भ-शिर थियो । स्तम्भ-शिर तिन हात अग्लो थियो, र यो काँसाको जाली र दारिमका बुट्टाले चारैतिर भरिएको थियो । अर्को स्तम्भ र यसका जालीसमेत सबै पहिलेको जस्तै थियो ।
೧೭ಪ್ರತಿಯೊಂದು ಕಂಬವು ಹದಿನೆಂಟು ಮೊಳ ಎತ್ತರವಿತ್ತು. ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ದಾಳಿಂಬೆ ಹಣ್ಣುಗಳೂ ಇದ್ದವು.
18 अङ्गरक्षकहरूका सेनापतिले मुख्य पुजारी सरायाह, दोस्रो दर्जाका पुजारी सपन्याह र तिन जना द्वारपाललाई लिएर गए ।
೧೮ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಫನ್ಯನು ಮೂರು ಮಂದಿ ದ್ವಾರಪಾಲಕರು,
19 सिपाहीहरूको जिम्मामा भएका अधिकारी, अनि सहरमा अझै बाँकी रहेका राजाका पाँच जना सल्लाहकारलाई तिनले सहरबाट कैद गरेर लगे । मानिसहरूलाई सेनामा भर्ती गर्ने मुख्य अधिकृत र देशमा भएका अन्य साठी जना विशिष्ट मानिसलाई पनि तिनले कैद गरेर लगे ।
೧೯ಸೈನ್ಯ ಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುತ್ತಿದ್ದ ಕಂಚುಕಿ, ಪಟ್ಟಣದಲ್ಲಿ ಉಳಿದಿದ್ದ ಅರಸನಿಗೆ ಆಪ್ತರಾಗಿದ್ದ ಐದು ಮಂದಿ ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ಮಂದಿ ಜನರೂ ಇದ್ದರು.
20 तब अङ्गरक्षकका सेनापति नबूजरदानले तिनीहरूलाई लगे र रिब्लामा बेबिलोनका राजाकहाँ ल्याए ।
೨೦ನಂತರ ನೆಬೂಜರದಾನನು, ಇವರನ್ನೆಲ್ಲಾ ಹಿಡಿದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು,
21 बेबिलोनका राजाले हमात देशको रिब्लामा तिनीहरूलाई मारे । यसरी यहूदा आफ्नो देशबाट निर्वासनमा लगियो ।
೨೧ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.
22 बेबिलोनका राजा नबूकदनेसरले शापानका नाति, अहीकामका छोरा गदल्याहलाई यहूदामा बाँकी छोडिएका मानिसहरूमाथि निरिक्षक नियुक्त गरे ।
೨೨ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ, ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬುವನನ್ನು ಅಧಿಪತಿಯನ್ನಾಗಿ ನೇಮಿಸಿದನು.
23 बेबिलोनका राजाले गदल्याहलाई राज्यपाल बनाए भनेर जब सिपाहीहरूका सबै सेनापति र तिनीहरूका मानिसहरूले सुने, तब तिनीहरू मिस्पामा गदल्याहकहाँ गए । यी मानिसहरू नतन्याहका छोरा इश्माएल, कारेहका छोरा योहानान, नतोपाती तन्हूमेतका छोरा सरायाह र माकातीका छोरा याजन्याह र तिनीहरूका मानिसहरू थिए ।
೨೩ತಪ್ಪಿಸಿಕೊಂಡು ಉಳಿದಿದ್ದ ಯೆಹೂದ ಸೇನಾಧಿಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇಮಿಸಲ್ಪಟ್ಟಿದ್ದಾನೆಂಬ ವರ್ತಮಾನವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅವರು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನಾದ, ತನ್ಹುಮೆತನ ಮಗನಾದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.
24 गदल्याहले तिनीहरू र तिनीहरूका मानिसहरूसँग शपथ खाए र तिनीहरूलाई भने, “कल्दीका अधिकारीहरूदेखि नडराओ । यही देशमा बसे र बेबिलोनका राजाको सेवा गर, र तिमीहरूको भलो हुने छ ।”
೨೪ಗೆದಲ್ಯನು ಇವರಿಗೂ ಇವರ ಜನರಿಗೂ, “ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ, ಬಾಬೆಲಿನ ಅರಸನಿಗೆ ವಿಧೇಯರಾಗಿದ್ದು ಸೇವೆಮಾಡಿಕೊಂಡು ಇಲ್ಲಿಯೇ ವಾಸಮಾಡಿರಿ. ಆಗ ನಿಮಗೆ ಒಳಿತಾಗುವಾಗುವುದು” ಎಂದು ಹೇಳಿದನು.
25 तर सातौँ महिनामा एलीशामाका नाति, नतन्याहका छोरा इश्माएल जो राजकीय वंशका थिए, तिनले दस जना मानिसलाई लिएर आए र गदल्याहलाई आक्रमण गरे । मिस्पामा आफूसँग भएका यहूदाका मानिसहरू र बेबिलोनीहरूसँगै गदल्याहको मृत्यु भयो ।
೨೫ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಕಸ್ದೀಯರನ್ನೂ ಸಂಹರಿಸಿದನು.
26 तब सानादेखि ठुलासम्म सबै मानिससाथै सिपाहीहरूका सेनापतिहरू उठे, र तिनीहरू मिश्रमा गए किनकि तिनीहरू बेबिलोनीहरूदेखि डराएका थिए ।
೨೬ಆಗ ಎಲ್ಲಾ ಚಿಕ್ಕವರೂ, ದೊಡ್ಡವರೂ, ಸೇನಾಧಿಪತಿಗಳೂ ಕಸ್ದೀಯರಿಗೆ ಹೆದರಿ ಐಗುಪ್ತಕ್ಕೆ ಓಡಿಹೋದರು.
27 यहूदाका राजा यहोयाकीन निर्वासन भएको सैँतिसौँ वर्षको बाह्रौं महिनाको सत्ताइसौँ दिनमा बेबिलोनका राजा एबील-मरोदकले यहूदाका राजा यहोयाकीनलाई झ्यालखानाबाट मुक्त गरिदिए । एबील-मरोदकले राज्य गर्न सरु गरेको वर्षमा यो भएको थियो ।
೨೭ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನು ಸೆರೆಯಾಗಿದ್ದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಕಟಾಕ್ಷಿಸಿ ಅವನನ್ನು ಸೆರೆಮನೆಯಿಂದ ಬಿಡಿಸಿ, ಅವನನ್ನು ಅಭಿವೃದ್ಧಿಗೆ ತಂದನು.
28 राजाले तिनीसँग दयापूर्वक कुरा गरे, र बेबिलोनमा तिनीसित भएका अरू राजाहरूलाई भन्दा तिनलाई इज्जतदार ठाउँमा बसाए ।
೨೮ಅಲ್ಲದೆ ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.
29 एबील-मरोदकले यहोयाकीनका कैदका लुगाहरू उतारे, र यहोयाकीनले आफ्नो बाँकी जीवनकालभरि राजाको टेबुलमा बसेर नियमित रूपमा खाए ।
೨೯ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು.
30 तिनको जीवनको बाँकी समयभरि हरेक दिन खानाको भत्ता तिनलाई नियमित रूपमा दिइयो ।
೩೦ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಅರಸನಿಂದಲೇ ಅವನಿಗೆ ಕೊಡಲಾಗುತ್ತಿತ್ತು.