< २ राजाहरू 7 >

1 एलीशाले भने, “परमप्रभुको वचन सुन्‍नुहोस् । परमप्रभु यसो भन्‍नुहुन्छ, 'भोलि यतिबेला सामरियाको मूल ढोकामा एक ग्राम चाँदीमा डेढ माना पिठो र एक ग्राम चाँदीमा तिन माना जौ बिक्री हुनेछ' ।”
ಆಗ ಎಲೀಷನು, “ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಿಲಲ್ಲಿ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೆ ಮತ್ತು ಆರು ಕಿಲೋಗ್ರಾಂ ಜವೆಗೋಧಿ ಒಂದು ಬೆಳ್ಳಿ ನಾಣ್ಯಕ್ಕೆ ಮಾರಲಾಗುವುದು,” ಎಂದನು.
2 तब जुन अधिकारीको हातको भरमा राजा हिंड्थे तिनले परमेश्‍वरका मानिसलाई जवाफ दिए र भने, “हेर्नुहोस्, परमेश्‍वरले स्वर्गमा झ्यालहरू बनाउनुभयो भने पनि यसो हुन सक्ला र?” एलीशाले जवाफ दिए, “तिम्रा आफ्नै आँखाले यसो भएको तिमी देख्‍नेछौ, तर तिमीले यो खान पाउनेछैनौ ।”
ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಉತ್ತರವಾಗಿ, “ಇಗೋ, ಯೆಹೋವ ದೇವರು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೆ, ಈ ಕಾರ್ಯ ಸಂಭವಿಸುವುದೋ?” ಎಂದನು. ಅದಕ್ಕವನು, “ನೀನು ನಿನ್ನ ಕಣ್ಣುಗಳಿಂದ ಅದನ್ನು ನೋಡುವೆ, ಆದರೆ ಅದರಲ್ಲಿ ಯಾವುದನ್ನೂ ತಿನ್ನುವುದಿಲ್ಲ,” ಎಂದನು.
3 मूल ढोकाको ठिक बाहिर कुष्ठरोग लागेका चार जना मानिस थिए । तिनीहरूले एक-अर्कालाई भने, “हामी नमरेसम्म हामी यहाँ किन बसिरहने?
ಆಗ ಊರು ಬಾಗಿಲ ದ್ವಾರದಲ್ಲಿ ನಾಲ್ಕು ಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರು, “ನಾವು ಸಾಯುವವರೆಗೂ ಇಲ್ಲಿ ಕುಳಿತುಕೊಂಡಿರುವುದೇನು?
4 हामी सहरमा जाऔं भनौं भने, सहरमा अनिकाल परेको छ र हामी त्यहाँ मर्नेछौं । हामी यहीँ बसौँ भने पनि हामी मर्नेछौँ । अब हामी अरामीहरूका सेना भएको ठाउँमा जाऔँ । तिनीहरूले हामीलाई जिउँदै राखे भने हामी जिउनेछौँ, र तिनीहरूले हामीलाई मारे भने हामी मर्नेछौँ ।”
ನಾವು ಇಲ್ಲಿಯೇ ಇದ್ದರೆ, ಪಟ್ಟಣದಲ್ಲಿ ಬರವಿರುವುದರಿಂದ ಅಲ್ಲಿ ಸಾಯುತ್ತೇವೆ. ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯುತ್ತೇವೆ. ಆದ್ದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಅವರಿಗೆ ಶರಣಾಗೋಣ. ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಅವರು ನಮ್ಮನ್ನು ಕೊಲ್ಲುವುದಾದರೆ ಕೊಲ್ಲಲಿ,” ಎಂದುಕೊಂಡರು.
5 त्यसैले अरामी छाउनीभित्र जानलाई तिनीहरू साँझपख उठे । जब तिनीहरू छाउनीको बाहिरी भागमा आइपुगे, त्यहाँ कोही पनि थिएन ।
ಹಾಗೆಯೇ ಸಂಜೆಯಲ್ಲಿ ಎದ್ದು, ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ, ಅಲ್ಲಿ ಯಾರೂ ಇರಲಿಲ್ಲ.
6 किनकि परमप्रभुले अरामी सेनालाई रथहरू, घोडाहरूको होहल्‍लाजस्‍तै— अर्को ठुलो सेनाको होहल्‍ला सुन्‍ने पार्नुभएको थियो, अनि, अनि तिनीहरूले एक-अर्कालाई भने, “इस्राएलका राजाले हित्तीहरू र मिश्रीहरूका राजाहरूलाई भाडामा लिएर हाम्रो विरुद्धमा आएका छन् ।”
ಏಕೆಂದರೆ ಯೆಹೋವ ದೇವರು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ, ಕುದುರೆಗಳ ಮತ್ತು ಮಹಾ ಸೈನ್ಯದ ಶಬ್ದವೂ ಕೇಳಿಸುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊಬ್ಬರು, “ಇಸ್ರಾಯೇಲಿನ ಅರಸನು ಹಿತ್ತಿಯರ ಅರಸರನ್ನೂ, ಈಜಿಪ್ಟಿನ ಅರಸರನ್ನೂ ನಮ್ಮ ಮೇಲೆ ದಾಳಿಮಾಡಲು ಅವರನ್ನು ಕೂಲಿಗೆ ಕರೆದಿದ್ದಾನೆ,” ಎಂದುಕೊಂಡರು.
7 त्यसैले सिपाहीहरू उठे र साँझमा नै भागे । तिनीहरूले आफ्ना पालहरू, घोडाहरू, गधाहरू र छाउनीलाई जस्ताको तस्तै छाडे र आफ्‍नो ज्यान बचाउन भागे ।
ಅವರು ಸಂಜೆಯಲ್ಲಿ ಎದ್ದು ಪಾಳೆಯದಲ್ಲಿದ್ದ ಹಾಗೆ ತಮ್ಮ ಗುಡಾರಗಳನ್ನೂ, ತಮ್ಮ ಕುದುರೆಗಳನ್ನೂ, ತಮ್ಮ ಕತ್ತೆಗಳನ್ನೂ ಬಿಟ್ಟುಬಿಟ್ಟು ತಮ್ಮ ಪ್ರಾಣಕ್ಕೋಸ್ಕರ ಓಡಿಹೋಗಿದ್ದರು.
8 जब कुष्‍टरोग लागेका मानिसहरू छाउनीको बाहिरी भागमा आइपुगे, तब तिनीहरू एउटा पालभित्र पसे र खानपान गरे अनि चाँदी, सुन र लुगाहरू उठाए र गएर ती लुकाए । तिनीहरू फर्केर आए र अर्को पालभित्र पसे र त्यहाँबाट पनि लुटका माल लगे र लुकाए ।
ಆ ಕುಷ್ಠರೋಗಿಗಳು ದಂಡಿನ ಅಂಚಿನವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ, ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿಬಂಗಾರವನ್ನೂ, ವಸ್ತ್ರಗಳನ್ನೂ ತೆಗೆದುಕೊಂಡುಹೋಗಿ ಬಚ್ಚಿಟ್ಟರು. ತಿರುಗಿಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ, ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡುಹೋಗಿ ಬಚ್ಚಿಟ್ಟರು.
9 तब तिनीहरूले एक-अर्कालाई भने, “हामीले ठिक गरिरहेका छैनौँ । आजको दिन शुभ खबरको दिन हो, तर हामी यस बारेमा मौन बसिरहेका छौँ । बिहन नभएसम्म हामीले पर्ख्यौं भने हामीमाथि दण्ड आइपर्नेछ । तब हामी अब जाऔं र राजाको घरानालाई भनौं ।”
ಅನಂತರ ಅವರು, “ಇದು ಶುಭವಾರ್ತೆಯ ದಿವಸ, ನಾವು ಇದನ್ನು ಪ್ರಕಟಿಸದಿರುವುದು ಒಳ್ಳೆಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ, ಶಿಕ್ಷೆಗೆ ಪಾತ್ರರಾಗಬಹುದು. ಆದ್ದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ,” ಎಂದು ಮಾತನಾಡಿಕೊಂಡರು.
10 त्यसैले तिनीहरू गए र सहरका पालेहरूलाई बोलाए । तिनीहरूले उनीहरूलाई यसो भने, “हामी अरामीहरूका छाउनीमा गयौँ तर त्यहाँ कोही थिएन, कुनै मानिसको आवाज त्‍यहाँ सुनिएन, तर त्‍यहाँ घोडाहरू र गधाहरू बाँधिएका थिए अनि पालहरू जस्ताको तस्तै थिए ।”
ಹಾಗೆಯೇ ಅವರು ಬಂದು ಪಟ್ಟಣದ ಬಾಗಿಲು ಕಾಯುವವನನ್ನು ಕರೆದು ಅವನಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು, ಅಲ್ಲಿ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ,” ಎಂದರು.
11 तब पालेहरूले त्यो खबर ठुलो स्‍वरले फैलाए, अनि त्‍यसपछि भित्र राजाको घरानालाई पनि त्‍यो कुरा बताइयो ।
ಅವನು ಬಾಗಿಲು ಕಾಯುವವರನ್ನು ಕರೆದನು. ಅವರು ಒಳಗಿರುವ ಅರಸನ ಮನೆಯವರಿಗೆ ತಿಳಿಸಿದರು.
12 तब रातमा राजा उठे र आफ्ना सेवकहरूलाई भने, “अब अरामीहरूले हामीलाई के गरेका छन् भनी म तिमीहरूलाई भन्‍नेछु । हामी भोकाएका छौँ भनी तिनीहरूलाई थाहा छ । त्यसैले तिनीहरू छाउनीबाहिर खेतबारीमा लुक्‍न गएका छन् । तिनीहरू भन्दैछन्, 'जब तिनीहरू सहरबाहिर आउँछन्, तब हामी तिनीहरूलाई जिउँदै समात्‍ने छौँ, र सहरभित्र पस्‍नेछौँ’ ।”
ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಅರಾಮ್ಯರ ಹಂಚಿಕೆಯನ್ನು ಹೇಳುತ್ತೇನೆ ಕೇಳಿ. ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುದನ್ನು ಅವರು ಬಲ್ಲರು. ಆದ್ದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ. ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೇ ನಮ್ಮನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ.”
13 राजाका एक जना सेवकले जवाफ दिए र भने, “केही मानिसहरूले सहरमा छाडिएका पाँचवटा घोडा लिएर जाऊन् । तिनीहरू इस्राएलका बाँकी जनसङ्ख्याजस्तै छन् अर्थात् अधिकांश मरिसकेका छन् । हामी तिनीहरूलाई पठाऊँ र हेरौँ।”
ಆಗ ಅವನ ಸೇವಕರಲ್ಲಿ ಒಬ್ಬನು ಉತ್ತರವಾಗಿ, “ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ಐದು ಕುದುರೆಗಳನ್ನು ಕೆಲವರು ತೆಗೆದುಕೊಂಡು ಹೋಗಲಿ. ಅವು ಇಸ್ರಾಯೇಲಿನ ಸಮಸ್ತ ಸಮೂಹದಲ್ಲಿ ಉಳಿದವುಗಳ ಹಾಗೆ ಇವೆ. ಅಂದರೆ ಇಸ್ರಾಯೇಲಿನ ಸಮಸ್ತ ಗುಂಪಿನಲ್ಲಿ ನಾಶವಾಗದೆ ಉಳಿದವುಗಳಂತಿವೆ, ನಾವು ಕಳುಹಿಸಿ ನೋಡೋಣ,” ಎಂದನು.
14 त्यसैले तिनीहरूले घोडाहरूसँगै दुईवटा रथ लिए र राजाले तिनीहरूलाई यसो भनेर अरामीहरूको सेनाको पछि पठाए, “जाओ र हेर ।”
ಆದ್ದರಿಂದ ಅವರು ಎರಡು ಜೋಡಿ ಕುದುರೆಗಳೊಂದಿಗೆ ಎರಡು ರಥಗಳನ್ನು ಆರಿಸಿಕೊಂಡರು ಮತ್ತು ಅರಸನು ಅರಾಮ್ಯರ ಸೈನ್ಯದ ಹಿಂದೆ ಅವರನ್ನು ಕಳುಹಿಸಿ, “ಹೋಗಿ ಏನಾಯಿತು ಎಂದು ತಿಳಿದುಕೊಳ್ಳಿ” ಎಂದು ಅವನು ರಾಹುತರಿಗೆ ಆಜ್ಞಾಪಿಸಿದನು.
15 तिनीहरू यर्दन नदीसम्मै तिनीहरूका पछि गए र अरामीहरूले हतारमा फालेका लुगा र सामनहरूले सबै बाटो भरिएका थिए । त्यसैले सन्देशवाहकहरू फर्के र राजालाई बताइदिए ।
ಅವರು ಅವರ ಹಿಂದೆ ಯೊರ್ದನಿನವರೆಗೆ ಹೋದರು. ಮಾರ್ಗದಲ್ಲೆಲ್ಲಾ ಅರಾಮ್ಯರು ಅವಸರದಿಂದ ಬಿಸಾಡಿದ ವಸ್ತ್ರಗಳೂ, ಪಾತ್ರೆಗಳೂ ತುಂಬಿದ್ದವು. ದೂತರು ತಿರುಗಿಬಂದು ಅರಸನಿಗೆ ತಿಳಿಸಿದರು.
16 मानिसहरू बाहिर निस्के र अरामीहरूको छाउनी लुटे । त्यसैले जस्‍तो परमप्रभुले भन्‍नुभएको थियो त्‍यस्‍तै भयो, एक ग्राम चाँदीमा डेढ माना पिठो र एक ग्राम चाँदीमा तिन माना जौ बेचियो ।
ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲಿದುಕೊಂಡರು. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರವೇ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೂ, ಆರು ಕಿಲೋಗ್ರಾಂ ಜವೆಗೋಧಿಯು ಒಂದು ಬೆಳ್ಳಿ ನಾಣ್ಯಕ್ಕೂ ಮಾರಲಾಯಿತು.
17 जसको हातमा भर परेर राजा हिंड्थे ती अधिकारीलाई तिनले मूल ढोका हेर्ने जिम्मा दिएका थिए र मानिसहरूले तिनलाई मूल ढोकामा कुल्चे । राजाले परमेश्‍वरका मानिसलाई तिनको घरमा भेट्न जाँदा तिनले अगमवाणी गरेजस्‍तै तिनको मृत्‍यु भयो ।
ಆದರೆ ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಿಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ, ದೇವರ ಮನುಷ್ಯನು ಹೇಳಿದ್ದ ಪ್ರಕಾರವೇ ಜನರು ಆ ಅಧಿಕಾರಿಯನ್ನು ಪಟ್ಟಣದ ಬಾಗಿಲಲ್ಲಿ ತುಳಿದುಹಾಕಿದ್ದರಿಂದ ಅವನು ಮರಣಹೊಂದಿದನು.
18 त्‍यसैले त्‍यस्‍तै भयो जास्‍तो परमेश्‍वरका मानिसले राजालाई यसो भनेका थिए, “यति बेलातिर सामरियाको मूल ढोकामा एक ग्राम चाँदीमा तिन माना जौ र एक ग्राम चाँदीमा डेढ माना पिठो पाइनेछ ।”
ಹಾಗೆಯೇ, “ಆರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೆ ಮತ್ತು ಜವೆಗೋಧಿ ಹನ್ನೆರಡು ಕಿಲೋಗ್ರಾಂ ಒಂದು ಬೆಳ್ಳಿ ನಾಣ್ಯಕ್ಕೆ ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಮಾರಲಾಗುವುದು,” ಎಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.
19 ती अधिकारीले परमेश्‍वरका मानिसलाई जवाफ दिएका थिए, “हेर्नुहोस्, परमेश्‍वरले स्वर्गमा झ्यालहरू बनाउनुभयो भने पनि यसो हुन सक्ला र?” एलीशाले जवाफ दिएका थिए, “तिम्रा आफ्नै आँखाले यसो भएको तिमी देख्‍नेछौ, तर तिमीले यो खान पाउनेछैनौ ।”
ಆ ಅಧಿಕಾರಿ ದೇವರ ಮನುಷ್ಯನಿಗೆ ಉತ್ತರವಾಗಿ, “ಇಗೋ, ಯೆಹೋವ ದೇವರು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ, ಸಂಭವಿಸುವುದೋ?” ಎಂದು ನುಡಿದಿದ್ದನು. ಅದಕ್ಕವನು, “ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವೆ, ಆದರೆ ನೀನು ಅದನ್ನು ತಿನ್ನುವುದಿಲ್ಲ,” ಎಂದು ಪ್ರವಾದಿಯು ಹೇಳಿದ್ದನು.
20 तिनलाई ठिक त्यस्तै हुन आयो, किनकि मानिसहरूले तिनलाई मूल ढोकामा कुल्चे र तिनी मरे ।
ಆ ಪ್ರಕಾರವೇ ಅವನಿಗೆ ಸಂಭವಿಸಿತು. ಬಾಗಿಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಮರಣಹೊಂದಿದನು.

< २ राजाहरू 7 >