< २ शमूएल 11 >
1 बसन्त ऋतुमा यस्तो भयो, यो समयमा राजाहरू सामान्यतया युद्धमा जान्छन्, जसले गर्दा दाऊदले योआब, तिनका सेवकहरू र इस्राएलका सबै फौजलाई पठाए । तिनीहरूले अम्मोनका फौजलाई नाश गरे र रब्बालाई घराबन्दी गरे । तर दाऊदचाहिं यरूशलेममा नै बसे ।
ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ, ಅವನ ಸಂಗಡದಲ್ಲಿದ್ದ ಅವನ ಸೇವಕರನ್ನೂ, ಸಮಸ್ತ ಇಸ್ರಾಯೇಲರನ್ನೂ ಕಳುಹಿಸಿದನು. ಅವರು ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ ರಬ್ಬ ನಗರಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.
2 त्यसैले एक साँझ यस्तो भयो, दाऊद आफ्नो ओछ्यानबाट उठे र आफ्नो दरबारको छतमा हिंडिरहे । त्यहाँबाट तिनले एक जना स्त्रीलाई देखे जो नुहाइरहेकी थिइन्, र ती महिला हेर्दा साह्रै सुन्दरी थिइन् ।
ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು, ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇದ್ದು, ಸ್ನಾನ ಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಕಂಡನು.
3 त्यसैले दाऊदले मानिसहरू बोलाए र ती स्त्रीलाई चिन्नेहरूलाई सोधे । कसैले भन्यो, “के यिनी एलीआमकी छोरी बतशेबा र हित्ती उरियाहकी पत्नी होइनन् र?”
ಆ ಸ್ತ್ರೀಯು ಬಹು ಸೌಂದರ್ಯವುಳ್ಳ ರೂಪವತಿಯಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವುದಕ್ಕೆ ಕಳುಹಿಸಿದಾಗ ಒಬ್ಬನು, “ಅವಳು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಬತ್ಷೆಬೆಳು,” ಎಂದನು.
4 दाऊदले दूतहरू पठाए र तिनलाई ल्याए । तिनकहाँ उनी आइन् र तिनी उनीसँग सुते (किनकि उनले आफूलाई रजस्वलाबाट भर्खरै मात्र शुद्ध पारेकी थिइन्)। त्यसपछि उनी आफ्नै घरमा फर्किन् ।
ಆಗ ದಾವೀದನು ದೂತರನ್ನು ಕಳುಹಿಸಿ ಅವಳನ್ನು ಬರಮಾಡಿಕೊಂಡನು. ಅವಳು ಅವನ ಬಳಿಗೆ ಬಂದಾಗ, ಅವಳು ತನ್ನ ಮೈಲಿಗೆಯನ್ನು ಕಳೆದುಕೊಂಡು ಶುಚಿಯಾಗಿದ್ದದರಿಂದ, ದಾವೀದನು ಅವಳ ಸಂಗಡ ಮಲಗಿದನು.
5 ती स्त्री गर्भवती भइन् र उनले दाऊदलाई खबर पठाइन् र भनिन् । उनले भनिन्, “म गर्भवती भएछु ।”
ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ, “ತಾನು ಗರ್ಭವತಿ,” ಎಂಬ ವಿಷಯವನ್ನು ದಾವೀದನಿಗೆ ಹೇಳಿ ಕಳುಹಿಸಿದಳು.
6 त्यसपछि दाऊदले यआबलाई यसो भनेर खबर पठाए, “हित्ती उरियाहलाई मकहाँ पठाऊ ।” त्यसैले योआबले उरियाहलाई दाऊदकहाँ पठाए ।
ಆಗ ದಾವೀದನು, “ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸು,” ಎಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯನನ್ನು ದಾವೀದನ ಬಳಿಗೆ ಕಳುಹಿಸಿದನು.
7 जब उरियाह आइपुगे, तब दाऊदले योआब कस्ता छन्, फौज कस्तो छ र युद्ध कस्तो भइरहेको छ भनी सोधपुछ गरे ।
ಊರೀಯನು ದಾವೀದನ ಬಳಿಗೆ ಬಂದಾಗ, ದಾವೀದನು ಅವನನ್ನು, “ಯೋವಾಬನೂ ಸೈನ್ಯದವರೂ ಹೇಗಿದ್ದಾರೆ? ಮತ್ತು ಯುದ್ಧವು ಹೇಗಿದೆ?” ಎಂದು ವಿಚಾರಿಸಿದನು.
8 दाऊदले उरियाहलाई भने, “तल आफ्नो घरमा जाऊ र आफ्नो खुट्टा धोऊ ।” त्यसैले उरियाह राजाको दरबारबाट गए र राजाले उरियाह गएपछि तिनको पछिपछि उपहार पठाए ।
ದಾವೀದನು ಊರೀಯನಿಗೆ, “ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ,” ಎಂದನು. ಊರೀಯನು ಅರಸನ ಮನೆಯಿಂದ ಹೊರಟುಹೋದನು. ನಂತರ ಅರಸನು ಅವನಿಗೆ ಉಪಹಾರ ಕಳುಹಿಸಿದನು.
9 तर उरियाह राजाको दरबारको ढोकामा आफ्ना मालिकका सेवकहरूसँगै सुते र तिनी तल आफ्नो घरमा गएनन् ।
ಆದರೆ ಊರೀಯನು ತನ್ನ ಮನೆಗೆ ಹೋಗದೆ, ಅರಮನೆಯ ಬಾಗಿಲ ಬಳಿಯಲ್ಲಿ ತನ್ನ ಅರಸನ ಸಮಸ್ತ ಸೇವಕರ ಸಂಗಡ ಮಲಗಿದ್ದನು.
10 जब तिनीहरूले दाऊदलाई भने, “उरियाह तल आफ्नो घरमा गएनन् ।” दाऊदले उरियाहलाई भने, “के तिमी यात्राबाट आएका होइनौ? तिमी तल आफ्नो घरमा किन नगएको?”
ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ದಾವೀದನು ಊರೀಯನಿಗೆ, “ನೀನು ಪ್ರಯಾಣದಿಂದ ಬರಲಿಲ್ಲವೋ? ಏಕೆ ನಿನ್ನ ಮನೆಗೆ ಹೋಗಲಿಲ್ಲ?” ಎಂದನು.
11 उरियाहले जवाफ दिए, “सन्दुक, इस्राएल र यहूदा पालमा बसिरहेका छन्, अनि मेरो मालिक योआब र मेरा मलिकका सेवकहरू खुल्ला मैदानमा छाउनीमा छन् । तब म आफ्नो घरमा खान, पिउन र मेरो पत्नीसँग सुत्नलाई कसरी जानु? जस्तो तपाईं जीवित हुनुहुन्छ, म यसो गर्ने छैन ।”
ಊರೀಯನು ದಾವೀದನಿಗೆ, “ಮಂಜೂಷವೂ, ಇಸ್ರಾಯೇಲಿನವರೂ, ಯೆಹೂದದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ; ನನ್ನ ಒಡೆಯನಾದ ಯೋವಾಬನೂ, ನನ್ನ ಒಡೆಯನ ಸೇವಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವುದಕ್ಕೂ, ಕುಡಿಯುವುದಕ್ಕೂ, ನನ್ನ ಹೆಂಡತಿಯ ಸಂಗಡ ಮಲಗುವುದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವುದಿಲ್ಲ,” ಎಂದನು.
12 त्यसैले दाऊदले उरियाहलाई भने, “आज पनि यहीं बस र म तिमीलाई भोलि पठाउने छु ।” त्यसैले उरियाह त्यस दिन र अर्को दिन यरूशलेममा नै बसे ।
ಆಗ ದಾವೀದನು ಊರೀಯನಿಗೆ, “ಈ ಹೊತ್ತು ಇಲ್ಲಿರು. ನಾಳೆ ನಿನ್ನನ್ನು ಕಳುಹಿಸುತ್ತೇನೆ,” ಎಂದನು. ಹಾಗೆಯೇ ಊರೀಯನೂ ಆ ದಿನವೂ, ಮಾರನೆಯ ದಿವಸವೂ ಯೆರೂಸಲೇಮಿನಲ್ಲಿ ಇದ್ದನು.
13 जब दाऊदले उनलाई बोलाए, उनले तिनको सामु खाए र पिए र दाऊदले तिनलाई मत्याए । साँझमा उरियाह आफ्नो मालिकका सेवकहरूसँगै भएको आफ्नो ओछ्यानमा सुत्न गए । उनी तल आफ्नो घरमा गएनन् ।
ದಾವೀದನು ಅವನನ್ನು ಕರೆದಾಗ, ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ, ತನ್ನ ಯಜಮಾನನ ಸೇವಕರ ಸಂಗಡ ಮಲಗುವುದಕ್ಕೆ ಹೊರಟುಹೋದನು.
14 त्यसैले बिहान दाऊदले योआबलाई पत्र लेखे र यो उरियाहको हातमा पठाए ।
ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು, ಊರೀಯನ ಕೈಯಲ್ಲಿ ಕಳುಹಿಸಿದನು.
15 दाऊदले पत्र यसो भनेर लेखे, “धेरै भयङ्कर युद्धको अग्र पङ्तीमा उरियाहलाई राख्नू र त्यसबाट पछि हट्नू, ताकि त्यसलाई प्रहार गरियोस् र मारियोस् ।”
ಆ ಪತ್ರದಲ್ಲಿ, “ಊರೀಯನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂದೆ ನಿಲ್ಲಿಸಿ, ಅವನು ಗಾಯಗೊಂಡು ಸಾಯುವಂತೆ, ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿದುಕೊಳ್ಳಿರಿ,” ಎಂದು ಬರೆದಿದ್ದನು.
16 त्यसैले जब योआबले सहरमाथिको घेराबन्धीलाई हेरे, तब तिनले लड्नलाई बलियो शत्रु सिपाहीहरू छन् भनी जानेका ठाउँमा उरियाहलाई खटाए ।
ಹಾಗೆಯೇ ಯೋವಾಬನು ಆ ಪಟ್ಟಣವನ್ನು ಮುತ್ತಿಗೆ ಹಾಕುವಾಗ, ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳಿದುಕೊಂಡು, ಅಲ್ಲಿ ಊರೀಯನನ್ನು ನಿಲ್ಲಿಸಿದನು.
17 जब सहरका मानिसहरू बाहिर निस्के र योआबका फौजसँग युद्ध लडे, तब दाऊदका केही सिपाहीहरू मरे र हित्ती उरियाहलाई पनि त्यहीं मारियो ।
ಪಟ್ಟಣದ ಮನುಷ್ಯರು ಹೊರಟು ಯೋವಾಬನ ಸಂಗಡ ಯುದ್ಧಮಾಡುವಾಗ, ದಾವೀದನ ಸೇವಕರಾದವರಲ್ಲಿ ಕೆಲವರು ಸತ್ತರು. ಇದಲ್ಲದೆ ಹಿತ್ತಿಯನಾದ ಊರೀಯನೂ ಸತ್ತನು.
18 जब योआबले युद्धको बारेमा हरेक खबर दाऊदलाई पठाए,
ಆಗ ಯೋವಾಬನು ಯುದ್ಧದ ವರ್ತಮಾನಗಳನ್ನೆಲ್ಲಾ ದಾವೀದನಿಗೆ ತಿಳಿಸುವುದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನೆಂದರೆ:
19 तब तिनले दूतहरूलाई यसो भनेर आज्ञा दिए, “जब तैंले राजालाई युद्धका बारेमा सबै कुराहरू भनेर सिद्ध्याउँछस्,
“ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ,
20 तब राजा रिसाउन सक्छन् र तिनले भन्ने छन्, 'तिमीहरू युद्ध गर्न सहरको यति नजिक किन गयौ? के उनीहरूले पर्खालबाट काँड हान्छन् भन्ने तिमीहरूले जानेनौ?
ಅರಸನಿಗೆ ಕೋಪ ಉರಿದು, ‘ನೀವು ಯುದ್ಧಮಾಡುವುದಕ್ಕೆ ಪಟ್ಟಣಕ್ಕೆ ಇಷ್ಟು ಸಮೀಪವಾಗಿ ಸೇರಿದ್ದೇನು?
21 यरूब-बेसेतका छोरा अबीमेलेकलाई कसले मार्यो? के एक जना स्त्रीले जाँतोको माथिल्को ढुङ्गा पर्खालबाट खसालेर तिनी तेबेसमा मरेकी थिइनन्? तिमीहरू किन पर्खालको यति नजिक गयौ?' तब तैंले जवाफ दिनुपर्छ, 'तपाईंको दास हित्ती उरियाह पनि मरे' ।”
ಅವರು ಗೋಡೆಯಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗ ಅಬೀಮೆಲೆಕನನ್ನು ಕೊಂದವರ್ಯಾರು? ತೆಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ, ಅವನು ಸತ್ತನಲ್ಲವೋ? ನೀವು ಗೋಡೆಗೆ ಅಷ್ಟು ಸಮೀಪ ಏಕೆ ಹೋದಿರಿ?’ ಎಂದು ಕೇಳಿದರೆ; ಆಗ ನೀನು ಅವನಿಗೆ, ನಿಮ್ಮ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು,” ಎಂದನು.
22 त्यसैले त्यो दूत विदा भयो र दाऊदकहाँ गयो र योआबले तिनलाई भन्न पठाएका हरेक कुरा भनिदिए ।
ಹಾಗೆಯೇ ಆ ದೂತನು ಹೋಗಿ ದಾವೀದನಿಗೆ ಯೋವಾಬನು ತನ್ನೊಂದಿಗೆ ಕಳುಹಿಸಿದ ವರ್ತಮಾನಗಳನ್ನೆಲ್ಲಾ ತಿಳಿಸಿದನು.
23 त्यसपछि त्यो दूतले दाऊदलाई भने, “सुरुमा हामीभन्दा शत्रुहरू बलिया थिए । उनीहरू हामीमाथि खुल्ला मैदानमा आए, तर हामीले उनीहरूलाई भित्र पस्ने ढोकातिर नै फर्कायौं ।
ಆ ದೂತನು ದಾವೀದನಿಗೆ, “ಆ ಮನುಷ್ಯರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬಯಲಿನಲ್ಲಿ ನಮ್ಮ ಮೇಲೆ ಹೊರಟುಬಂದಾಗ, ನಾವು ಪಟ್ಟಣದ ಬಾಗಿಲವರೆಗೆ ಅವರ ಮೇಲೆ ಬಂದೆವು.
24 तब उनीहरूका काँड हान्नेहरूले पर्खाल माथिबाट तपाईंका केही सिपाहीलाई काँड हाने र राजाका केही सेवक मारिए र तपाईंको दास हित्ती उरियाह पनि मारिए ।”
ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದ ಕಾರಣ, ಅರಸನ ಸೇವಕರಲ್ಲಿ ಕೆಲವರು ಸತ್ತರು. ಇದಲ್ಲದೆ ನಿನ್ನ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನು,” ಎಂದನು.
25 दाऊदले त्यस दूतलाई भने, “योआबलाई भन्, 'यसले तिमीलाई दुःखित नतुल्याओस्, किनकि तरवारले एउटा वा अर्कोलाई नष्ट पार्छ । त्यो सहरको विरुद्ध तिम्रो युद्ध अझ धेरै बलियो पार र त्यसलाई नाश पार,' र तिनलाई उत्साह दिए ।”
ಆಗ ದಾವೀದನು ಆ ದೂತನಿಗೆ, “ನೀನು ಯೋವಾಬನಿಗೆ, ‘ಇದು ನಿನ್ನನ್ನು ಕದಲಿಸದಿರಲಿ. ಖಡ್ಗವು ಇವನನ್ನಾದರೂ ಸರಿ, ಅವನನ್ನಾದರೂ ಸರಿ ತಿಂದುಬಿಡುವುದು. ನೀನು ಪಟ್ಟಣವನ್ನು ನಿರ್ಮೂಲ ಮಾಡುವ ಹಾಗೆ, ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ,’ ಎಂದು ಹೇಳಿ, ಅವನನ್ನು ಬಲಪಡಿಸು,” ಎಂದನು.
26 जब उरियाहको पत्नीले आफ्नो पति उरियाह मरेको खबर सुनिन्, तब आफ्नो पतिको निम्ति तिनले गहिरो शोक गरिन् ।
ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ, ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.
27 जब उनको विलाप पुरा भयो, दाऊदले उनलाई आफ्नो दरबारमा ल्याउन लिन पठाए र उनी तिनको पत्नी भइन् र तिनको निति एउटा छोरा जन्माइन् । तर दाऊदले गरेको कुराले परमप्रभुलाई दुःखी तुल्यायो ।
ದುಃಖದ ದಿವಸಗಳು ತೀರಿದ ತರುವಾಯ, ದಾವೀದನು ಅವಳನ್ನು ತನ್ನ ಮನೆಗೆ ಕರೆಯಕಳುಹಿಸಿದನು. ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕಾರ್ಯವು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದಾಗಿತ್ತು.