< २ शमूएल 15 >

1 यसपछि यस्‍तो भयो, अब्शालोमले आफ्नो निम्ति एउटा रथ र घोडाहरू र आफ्नो अगिअगि दौडिनलाई पचास जना मानिस तयार पारे ।
ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನು, ಕುದುರೆಗಳನ್ನೂ ತೆಗೆದುಕೊಂಡು, ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಪುರುಷರನ್ನು ನೇಮಿಸಿದನು.
2 अब्शालोम बिहान सबेरै उठ्थे र सहरको ढोकातिर जाने बाटोमा खडा हुन्थे । जब कोही विवाद भएका व्यक्‍ति न्यायको निम्ति राजाकहाँ आउँथ्यो, तब अब्शालोमलले त्यसलाई बोलाउँथे र भन्‍थे, “तपाईं कुन सहरबाट आउनुभएको हो?” अनि त्यो मानिसले जवाफ दिन्थ्यो, “तपाईंको दास इस्राएलको एउटा कुलबाट हो ।”
ಅವನು ಹೊತ್ತಾರೆಯಲ್ಲಿ ಎದ್ದು ಊರ ಬಾಗಿಲಿನ ಬಳಿಯಲ್ಲಿ ನಿಂತುಕೊಳ್ಳುವನು. ಯಾರಾದರೂ ತಮ್ಮ ವ್ಯಾಜ್ಯವನ್ನು ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋಮನು ಕಂಡರೆ ಅಂಥವರನ್ನು ತನ್ನ ಬಳಿಗೆ ಕರೆದು, “ನೀವು ಯಾವ ಊರಿನರವರು?” ಎಂದು ಕೇಳುವನು. ಅವರು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಒಂದು ಕುಲಕ್ಕೆ ಸೇರಿದವರು” ಎಂದು ಉತ್ತರ ಕೊಡುವರು.
3 त्यसैले अब्शालोमले त्यसलाई भन्‍थे, “हेर्नुहोस्, तपाईंको मुद्दा असल र ठिक छ तर तपाईंको मुद्दा हेर्नलाई राजाले कसैले शक्ति दिनुभएको छैन ।”
ಆಗ ಅಬ್ಷಾಲೋಮನು, “ನೋಡಿ ನಿಮ್ಮ ಕಾರ್ಯವು ಒಳ್ಳೆಯದೂ, ನ್ಯಾಯವಾದದ್ದೂ ಆಗಿದೆ. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ಅರಸನಿಂದ ಯಾರೂ ನೇಮಕವಾಗಿಲ್ಲ.
4 अब्शालोमलले थप्थे, “मलाई यस देशको न्यायकर्ता बनाइदिएको भए हुन्थ्यो, ताकि कुनै पनि मुद्दा वा झगडा भएका हरेक मानिस मकहाँ आउँथ्‍यो र म त्यसलाई न्याय दिलाउँथे ।”
ವ್ಯಾಜ್ಯವಾಗಲಿ, ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ದೇಶದ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು” ಎಂದು ಹೇಳುವನು.
5 यसैले यस्‍तो भयो, जब कुनै पनि मानिस अब्शालोमलाई आदर गर्न आउँथ्‍यो, तब अब्शालोमले आफ्नो हात काँधमा राख्‍थे र त्यसलाई अङ्गालो हाल्‍थे र त्यसलाई चुम्बन गर्थे ।
ಯಾರಾದರೂ ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದಕ್ಕೆ ಬಂದರೆ ಅಂಥವರನ್ನು ಕೂಡಲೆ ಕೈಚಾಚಿ ಅವರನ್ನು ಹಿಡಿದು ಮುದ್ದಿಡುವನು.
6 राजाकहाँ न्यायको निम्ति आउने सबै इस्राएलसित अब्शालोमले यसरी नै व्‍यवहार गरे । यसरी अब्शालोमले इस्राएलका मानिसहरूका हृदय चोरे ।
ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲರಿಗೂ ಅಬ್ಷಾಲೋಮನು ಹೀಗೆಯೇ ಮಾಡಿ, ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.
7 चार वर्षको अन्ततिर यस्‍तो भयो कि अब्शालोमले राजालाई भने, “कृपया, मैले हेब्रोनका परमप्रभुलाई गरेको भाकल पुरा गर्न मलाई जान दिनुहोस् ।
ನಾಲ್ಕು ವರ್ಷಗಳಾದ ನಂತರ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ.
8 किनकि तपाईंको दासले अरामको गशूरमा बस्दा यसो भनेर एउटा भाकल गरें, “परमप्रभुले मलाई यरूशलेममा ल्याउनुभयो भने, म परमप्रभुको आराधना गर्ने छु ।”
ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ” ಎಂದು ವಿಜ್ಞಾಪಿಸಿದನು.
9 त्यसैले राजाले उनलाई भने, “शान्तिसित जाऊ ।” यसैले अब्शालोम उठे र हेब्रोनमा गए ।
ಆಗ ಅರಸನು, “ಹೋಗಿಬಾ, ನಿನಗೆ ಶುಭವಾಗಲಿ” ಎಂದನು. ಅಬ್ಷಾಲೋಮನು ಹೆಬ್ರೋನಿಗೆ ಹೊರಟು ಹೋದನು.
10 तर अब्शालोमले इस्राएलका सबै कुलमा यसो भनेर जासुसहरू पठाए, “तिमीहरूले तुरहीको आवाज सुन्‍ने बित्तिकै, तिमीहरूले यसो भन्‍नू, “हेब्रोनमा अबशालोम राजा हुनुभयो' ।”
೧೦ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’” ಎಂದು ಹೇಳಿಸಿದ್ದನು.
11 अब्शालोमसँगै यरूशलेमका दुई सय जना मानिस गए जसले निमन्त्रणा पाएका थिए । अब्शालोमले योजना गरेका कुनै कुरा पनि थाहा नपाई तिनीहरू आफ्‍नो अज्ञानतामा गए ।
೧೧ಅಬ್ಷಾಲೋಮನು ಯೆರೂಸಲೇಮಿನಿಂದ ಆರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು. ಅವರಿಗೇನೂ ಗೊತ್ತಿರಲಿಲ್ಲ.
12 अब्शालोमले बलिदान चाढाउँदा, उनले गिलोका अहीतोपेललाई पनि बोलाए । तिनी दाऊदका सल्लाहकार थिए । अब्शालोमको षड्यान्त्र प्रबल थियो, किनकि अब्शालोमको पछि लाग्‍ने मानिसहरूका सङ्‍ख्‍या निरन्‍तर बढ्‍दै थियो ।
೧೨ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.
13 दाऊदकहाँ एक जना दूत यसो भन्‍दै आए, “इस्राएलका मानिसहरूका हृदयहरू अब्शालोमतिर लागेको छ ।”
೧೩ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿತು.
14 त्यसैले दाऊदले आफूसँग यरूशलेममा भएका आफ्‍ना सबै सेवकलाई भने, “उठ र हामी भागौं नत्रता हामी कोही पनि अब्शालोमबाट बाँच्‍ने छैनौं । तुरुन्तै जानलाई तयार होओ, नत्रता त्यसले हामीलाई चाँडै आक्रमण गर्ने छ र त्यसले हामीमाथि विपद् ल्याउने छ र तरवारले यो सहरलाई आक्रमण गर्ने छ ।”
೧೪ಅವನು ಯೆರೂಸಲೇಮಿನಲ್ಲಿ ತನ್ನ ಸೇವಕರಿಗೆ, “ಏಳಿರಿ, ಓಡಿಹೋಗೋಣ. ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ. ಅವನು ಆಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು, ನಮಗೆ ದುರ್ಗತಿಯನ್ನು ಉಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸುವನು” ಎಂದು ಹೇಳಿದನು.
15 राजाका सेवकहरूले राजालाई भने, “हेर्नुहोस्, तपाईंका दासहरू हाम्रो मालिक महाराजाले जे भन्‍नुहुन्छ सो गर्न तयार छन् ।”
೧೫ಸೇವಕರು ಅರಸನಿಗೆ, “ನಮ್ಮ ಒಡೆಯನಾದ ಅರಸನಿಗೆ ಸರಿ ತೋರಿದ್ದನ್ನು ಮಾಡಲು ನಾವು ಸಿದ್ಧರಾಗಿದ್ದೇವೆ” ಎಂದು ಉತ್ತರ ಕೊಟ್ಟರು.
16 राजा र तिनका सबै परिवार तिनीसितै विदा भए, तर दरबारको रेखदेख गर्न दश जना उपपत्‍नीलाई राजाले छोडिराखे ।
೧೬ಆಗ ಅರಸನು ತನ್ನ ಅರಮನೆ ಕಾಯುವುದಕ್ಕಾಗಿ ಹತ್ತು ಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.
17 राजा र तिनीसँग भएका सबै मानिस बाहिर गएपछि, तिनीहरू अन्तिम घरमा रोकिए ।
೧೭ಅರಸನು ಅವನ ಜೊತೆಯಲ್ಲಿ ಹೊರಟು ಹೋದ ಜನರೆಲ್ಲರೂ ಪಟ್ಟಣದ ಕಡೆಯ ಮನೆಯ ಬಳಿಯಲ್ಲಿ ಸ್ವಲ್ಪ ಹೊತ್ತು ನಿಂತರು.
18 तिनका सबै फौज तिनीसँगै हिंडे र सबै करेतीहरू, पेलेथीहरू र गित्तीहरू गरी गातबाट तिनलाई पछ्याउने छ सय जना मानिसहरू तिनको अगिअगि गए ।
೧೮ದಾವೀದನೂ, ಅವನ ಎಲ್ಲಾ ಸೇವಕರೂ, ಎಲ್ಲಾ ಕೆರೇತ್ಯ ಮತ್ತು ಎಲ್ಲಾ ಪೆಲೇತ್ಯ ಎಂಬ ಕಾವಲು ದಂಡುಗಳೂ, ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಗಿತ್ತೀಯರೂ ಅರಸನ ಮುಂದೆ ಹಾದು ಹೋದರು.
19 तब राजाले गित्ती इत्तैलाई भने, “तिमी किन हामीसँग आउँछौ? फर्क र राजासँगै बस, किनकि तिमी परदेशी र निर्वासित छौ । तिम्रो आफ्नै ठाउँमा फर्क ।
೧೯ಆಗ ಅರಸನು ಗಿತ್ತೀಯನಾದ ಇತ್ತೈ ಎಂಬುವನಿಗೆ, “ನೀನೂ ನಮ್ಮ ಸಂಗಡ ಯಾಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ. ಹಿಂದಿರುಗಿ ಹೋಗಿ ಅರಸನಾದ ಅಬ್ಷಾಲೋಮನ ಬಳಿಯಲ್ಲಿ ವಾಸಮಾಡು.
20 किनकि तिमी भर्खर मात्र आएका हौ । तिमीलाई हामीसँगै भौंतारिन म किन लगाउछु र? म कहाँ जाँदै छु भन्‍ने मलाई नै थाहा छैन । त्यसैले फर्क र तिम्रा गाउँले मित्रहरूलाई फर्काएर लैजाऊ । बफदारीता र विश्‍वासनीयता तिमीसँगै रहोस् ।”
೨೦ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ” ಎಂದು ಹೇಳಿದನು.
21 तर इत्तैले राजालाई जवाफ दिए र भने, “जस्तो परमप्रभु जीवित हुनुहुन्छ र जस्‍तो मेरो मालिक महाराजा जीवित हुनुहुन्छ, मर्न वा बाँच्‍ने जेसुकै परोस् हजुको दास मेरो मालिक महाराजा जुन ठाउँमा जहाँ जानुहुन्छ त्यहीं नै जाने छ ।”
೨೧ಅದಕ್ಕೆ ಇತ್ತೈ, “ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಪ್ರಾಣ ಹೋದರೂ, ಉಳಿದರೂ ನನ್ನ ಒಡೆಯನಾದ ಅರಸನು ಇರುವಲ್ಲೇ ಇರುವೆನು” ಎಂದು ಉತ್ತರಕೊಟ್ಟನು.
22 त्यसैले दाऊदले इत्तैलाई भने, “अगि बढ, हामी निरन्‍तर बस ।” त्यसैले गित्ती इत्तै राजा, तिनका सबै मानिस र सबै परिवार सँगसँगै हिंडे ।
೨೨ಆಗ ದಾವೀದನು ಅವನಿಗೆ, “ಒಳ್ಳೆಯದು, ಮುಂದೆ ನಡೆ” ಎಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೇವಕರನ್ನೂ, ಕುಟುಂಬದವರನ್ನೂ ಕರೆದುಕೊಂಡು ಮುಂದೆ ನಡೆದನು.
23 राजाले किद्रोनको बेसी तर्दा देशभरिका सबै मानिस धुरुधुरु रोए र सबै मानिस पनि राजासँगै पारि तरे । सबै मानिस उजाडस्‍थान जाने बाटोसम्म गए ।
೨೩ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಮುತ್ತಲಿನ ಜನರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯ ಮಾರ್ಗವನ್ನು ಹಿಡಿದರು.
24 परमेश्‍वरको करारको सन्दुक बोक्‍ने सबै लेवीसहित सादोक पनि थिए । तिनीहरूले परमेश्‍वरको सन्दुकलाई भुईंमा राखे र त्‍यसपछि अबियाथार तिनीहरूसँगै सहभागी भए । सबै मानिस सहरबाट बाहिर नआएसम्म तिनीहरूले पर्खे ।
೨೪ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದರು. ಎಬ್ಯಾತಾರನೂ ಯಜ್ಞವನ್ನು ಅರ್ಪಿಸುತ್ತಿದ್ದನು.
25 राजाले सादोकलाई भने, “परमेश्‍वरको सन्दुकलाई सहरमा नै फर्काएर लेजाऊ । मैले परमप्रभुको दृष्‍टिमा निगाह पाएँ भने, उहाँले मलाई यहाँ फर्काएर ल्याउनुहुने छ र सन्दुक र उहाँ बस्‍नुहुने ठाउँ मलाई फेरि देखाउनुहुने छ ।
೨೫ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು.
26 तर उहाँले यसो भन्‍नुहुन्छ भने, 'तँसँग म प्रशन्‍न छैन,' हेर, म यहाँ छु, उहाँलाई जे असल छ सो उहाँले मलाई गर्नुभएको होस् ।”
೨೬ಒಂದು ವೇಳೆ ಆತನು ‘ನಿನ್ನಲ್ಲಿ ನನಗೆ ಇಷ್ಟವಿಲ್ಲ’ ಎಂದುಕೊಂಡರೆ ಇಗೋ, ನಾನು ಇಲ್ಲಿದ್ದೇನೆ. ಆತನು ತನಗೆ ಸರಿ ಕಂಡಂತೆ ಮಾಡಲಿ” ಎಂದನು.
27 राजाले सादोक पुजारीलाई यसो पनि भने, “के तिमी दर्शी होइनौ? सहरमा शान्तिसँग फर्क र तिम्रा दुई छोरा, तिम्रा छोरा अहीमास र अबियाथारका छोरा जोनाथन तिम्रो साथमा छन् ।
೨೭ಇದಲ್ಲದೆ ಆತನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನರು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸಮಾಧಾನದಿಂದ ಪಟ್ಟಣಕ್ಕೆ ಹಿಂದಿರುಗು.
28 हेर, मलाई जानकारी दिनलाई तिमीबाट खबर नआएसम्म म अराबाको जँघारहरूमा पर्खिने छु ।”
೨೮ನಿಮ್ಮಿಂದ ವರ್ತಮಾನ ಬರುವ ತನಕ ನಾನು ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇರುವೆನು” ಎಂದು ಹೇಳಿದನು.
29 त्यसैले सादोक र अबियाथारले परमेश्‍वरको सन्दुक यरूशलेममा नै फिर्ता ल्याए र तिनीहरू त्यहीं बसे ।
೨೯ಆಗ ಚಾದೋಕನೂ ಮತ್ತು ಎಬ್ಯಾತಾರನೂ ದೇವರ ಮಂಜೂಷವನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗಿ ಅಲ್ಲೇ ವಾಸ ಮಾಡಿದರು.
30 तर दाऊद खाली खुट्टाले हिंडेर रुँदै जैतूनको डाँडाको उकालो चढे र तिनले आफ्नो शिर ढाकेका थिए । तिनीसँग भएका हरेक मानिसले आआफ्ना शिर ढाके र तिनीहरू रुँदै माथि उकालो चढे ।
೩೦ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು.
31 कसैले दाऊदलाई भन्यो, “अहीतोपेल अब्शालोमसँगै षड्यान्त्र गर्नेहरूसित छ ।” त्यसैले दाऊदले प्रार्थना गरे, “हे परमप्रभु, कृपा गरी, अहीतोपेलको सल्लाहलाई मूर्खतामा परिणत गर्नुहोस् ।”
೩೧ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.
32 यस्‍तो भयो, जब दाऊद बाटोको टाकुरामा आइपुगे जहाँ परमेश्‍वरको आराधना गरिन्थ्यो, तब अरकी हुशै आफ्नो लुगा च्यातेर शिरमा धुलो छरेर दाऊदलाई भेट्न आए, ।
೩೨ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕಿಯನಾದ ಹೂಷೈ ಎಂಬುವವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅರಸನ ಬಳಿಗೆ ಬಂದನು.
33 दाऊदले तिनलाई भने, “तिमी मसँग गयौ भने, तिमी मेरो निम्ति बोझ बन्‍ने छौ ।
೩೩ಅರಸನು ಅವನಿಗೆ, “ನೀನು ನನ್ನ ಸಂಗಡ ಬರುವುದಾದರೆ ನನಗೆ ಹೊರೆಯಾಗಿರುವೆ.
34 तर तिमी सहरमा फर्केर गयौ र अबशालोमलाई यसो भन्यौ भने, 'जसरी म विगतमा हजुरका बुबाको सेवक भएँ त्यसरी नै, हे महाराजा, म हजुरको दास हुने छु,' तब तिमीले मेरो खातिर अहीतोपेलको सल्लाहलाई गोलमाल पार्नेछौ ।
೩೪ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ಅರಸನೇ, ‘ನಾನು ನಿನ್ನ ಸೇವಕನು; ಈ ಮೊದಲು ನಿನ್ನ ತಂದೆಯ ಸೇವೆ ಮಾಡಿದಂತೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳುವುದಾದರೆ, ಆಗ ನೀನು ಅಹೀತೋಫೆಲನ ಆಲೋಚನೆಯನ್ನು ನಿರರ್ಥಕಮಾಡುವುದಕ್ಕೆ ನನಗೋಸ್ಕರ ಅನುಕೂಲ ಮಾಡಿಕೊಟ್ಟಂತಾಗುವುದು.
35 के तिमीसँग सादोक पुजारी र अबियाथार हुने छैनन् र? त्यसैले तिमीले दरबारमा राजाबाट जे-जे सुन्छौ सो कुरा तिमीले पुजारी सादोक र अबियाथारलाई भन्‍नुपर्छ ।
೩೫ಅಲ್ಲಿ ನಿನ್ನ ಸಂಗಡ ಚಾದೋಕ್ ಮತ್ತು ಎಬ್ಯಾತಾರನೂ ಇರುತ್ತಾರಲ್ಲಾ. ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ.
36 हेर, तिनीहरूका साथमा तिनीहरूका दुई छोरा सादोकका छोरा अहीमास र अबियाथारका छोरा जोनाथन छन् । तिमीले सुनेका सबै कुरा तिमीले तिनीहरूको माध्यामद्वारा मकहाँ पठाउनू ।”
೩೬ಒಬ್ಬನು ಚಾದೋಕನ ಮಗನಾದ ಅಹೀಮಾಚನು ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು” ಎಂದು ಹೇಳಿ ಅವನನ್ನು ಕಳುಹಿಸಿದನು.
37 त्यसैले अब्शालोम सहरभित्र आइपुगेर यरूशलेम प्रवेश गर्दा दाऊदका मित्र हूशै आए ।
೩೭ಅಬ್ಷಾಲೋಮನು ಯೆರೂಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಯೆರೂಸಲೇಮ್ ಪಟ್ಟಣಕ್ಕೆ ಬಂದನು.

< २ शमूएल 15 >