< २ शमूएल 17 >
1 त्यसपछि अहीतोपेलले अब्शालोमलाई भने, “अब म बाह्र हजार मानिस छान्ने छु र म उठ्ने छु र दाऊदलाई आज राती नै खेदने छु ।
೧ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾಗಲಿ, ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು.
2 तिनी थकित र कमजोर हुँदा नै तिनीकहाँ म पुग्ने छु र तिनलाई भयङ्कर त्रासमा पार्ने छु । तिनीसँग भएका मानिसहरू भाग्ने छन् र म राजालाई मात्र आक्रमण गर्ने छु ।
೨ಅವನು ದಣಿದವನೂ, ಧೈರ್ಯಗುಂದಿದವನೂ ಆಗಿರುವಾಗಲೇ ಪಕ್ಕನೇ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು. ಅವನ ಜನರೆಲ್ಲರೂ ಓಡಿಹೋಗುವರು.
3 दुलही आफ्नो दुलाहाकहाँ आएजस्तै सबै मानिसलाई म तपाईंकहाँ फर्काएर ल्याउने छु र सबै मानिस तपाईंको अधीनमा शान्तिमा रहने छन् ।”
೩ನಾನು ಅರಸನೊಬ್ಬನನ್ನೇ ಕೊಂದು, ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರನ್ನು ನಿನ್ನ ಬಳಿಗೆ ತಿರುಗಿ ಬರಮಾಡುವೆನು. ನಿನ್ನ ದೇಶದಲ್ಲೆಲ್ಲಾ ಸಮಾಧಾನವುಂಟಾಗುವುದು” ಎಂದು ಹೇಳಿದನು.
4 अहीतोपेलले भनेको कुरा अब्शालोम र इस्राएलका सबै धर्म-गुरुलाई मन पर्यो ।
೪ಈ ಮಾತು ಅಬ್ಷಾಲೋಮನಿಗೂ, ಇಸ್ರಾಯೇಲರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.
5 त्यसपछि अब्शालोमले भने, “अरकी हूशैलाई पनि बोलाऊ र उनले के भन्छन् हामी सुनौं ।”
೫ಆಮೇಲೆ ಅಬ್ಷಾಲೋಮನು, “ಅರ್ಕೀಯನಾದ ಹೂಷೈಯನ್ನು ಕರೆದು ಅವನ ಅಭಿಪ್ರಾಯವನ್ನು ಕೇಳೋಣ” ಎಂದು ಹೇಳಿದನು.
6 जब हूशै अब्बशालोमकहाँ आए, अब्बशालोमले उनलाई अहीतोपेलले भनेका सबै कुरा बताइदिए र हूशैलाई सोधे, “के हामीले अहीतोपेलले भनेका कुरा गरौं? होइन भने, हामीलाई तपाईंको सल्लाह भन्नुहोस् ।”
೬ಹೂಷೈಯನು ಅಬ್ಷಾಲೋಮನ ಬಳಿಗೆ ಬಂದಾಗ ಅವನನ್ನು, “ಅಹೀತೋಫೆಲನು ಹೀಗೆ ಹೇಳುತ್ತಿದ್ದಾನೆ, ಇದರಂತೆ ಮಾಡಿದರೆ ಒಳ್ಳೆಯದಾಗುವುದೋ, ಇಲ್ಲವಾದರೆ ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.
7 त्यसैले हूशैले अब्शालोमलाई भने, “अहीतोपेलले दिएका सल्लाह यस पटक ठिक छैन ।”
೭ಹೂಷೈಯು ಅಬ್ಷಾಲೋಮನಿಗೆ, “ಈ ಸಾರಿ ಅಹೀತೋಫೆಲನು ಹೇಳಿದ ಆಲೋಚನೆ ಒಳ್ಳೆಯದಲ್ಲ.
8 हूशैले थपे, “तपाईंले आफ्नो बुबालाई चिन्नुहुन्छ र उहाँका मानिसहरू बलिया योद्धाहरू छन्, तिनीहरू तितो छन्, र तिनीहरू मैदानका बच्चा खोसिएका भालुहरूजस्ता छन् । तपाईंको बुबा एक योद्धा हुनुहुन्छ । उहाँ आज फौजसँग सुत्नुहुने छैन ।
೮ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ.
9 हेर्नुहोस्, यति बेला उहाँ सायद कुनै खाडल वा अर्कै ठाउँमा लुकिरहनुभएको छ । आक्रमणको सुरुमा नै तपाईंका केही मानिसहरू मारिए भने सुन्ने जोसकैले भन्ने छन्, 'अब्शालोमसँग हुनेहरू माझ नरसंहार भएको छ ।'
೯ಅವನು ಈಗ ಒಂದು ಗುಹೆಯಲ್ಲಾಗಲಿ, ಬೇರೆ ಯಾವುದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಸತ್ತರೆ, ಜನರು ಇದನ್ನು ಕೇಳಿ ಅಬ್ಷಾಲೋಮನ ಪಕ್ಷದವರಿಗೆ ಅಪಜಯವುಂಟಾಯಿತೆಂದು ಸುದ್ದಿ ಹಬ್ಬಿಸುವರು.
10 त्यसपछि सिंहको जस्तो हृदय हुने सबैभन्दा सिपाही पनि भयभीत हुने छ, किनभने तपाईंको बुबा वीर योद्धा हुनुहुन्छ भनी सारा इस्राएलले जान्दछ र उहाँसँग भएका मानिसहरू धेरै बलिया छन् ।
೧೦ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.
11 त्यसैले दानदेखि बेर्शेबासम्मका सबै इस्राएल तपाईंकहाँ भेला भएर समुद्रको बालुवा जत्तिकै असंख्या हुनुपर्छ र तपाईं स्वयम् युद्ध गर्न जानुपर्छ भन्ने सल्लाह म तपाईंलाई दिन्छु ।
೧೧ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.
12 त्यसपछि हामीले उनलाई जहाँ भेट्टाए पनि उनमाथि जाइलाग्ने छौं र जमिनमा शीत परेझैं हामीले उनलाई छोप्ने छौं । हामीले उनका मानिसहरू वा उनी स्वयम् एउटालाई पनि जीवित छोड्ने छेनौं ।
೧೨ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ, ಇಬ್ಬನಿಯು ನೆಲದ ಮೇಲೆ ಹೇಗೊ, ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಮತ್ತು ಅವನ ಜನರೂ ನಮ್ಮ ಕೈಗೆ ಸಿಕ್ಕುವರು. ಒಬ್ಬನೂ ತಪ್ಪಿಸಿಕೊಳ್ಳಲಾರನು.
13 उनी सहरमा शरण लिन्छन् भने, त्यस सहरमा सारा इस्राएलले डोरी ल्याउने छन् र त्यहाँ एउटा सानो ढुङ्गा पनि नभेटिने गरी त्यसलाई हामी घिसारेर नदीमा झार्ने छौं ।”
೧೩ಅವನು ಒಂದು ಪಟ್ಟಣವನ್ನು ಹೊಕ್ಕಿರುವುದಾದರೆ, ಇಸ್ರಾಯೇಲ್ಯರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ. ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿ ಬಿಡೋಣ” ಎಂದನು.
14 अनि अब्बशालोम र इस्राएलका मानिसले भने, “आरकी हूशैको सल्लाह अहीतोपेलको सल्लाहभन्दा राम्रो छ ।” परमप्रभुले अब्शालोममाथि विनाश ल्याउनको निम्ति अहीतोपेलको सल्लाह इन्कार गर्ने निश्चय गर्नुभएको थियो ।
೧೪ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.
15 तब हूशैले सादोक र अबियाथार पुजारीहरूलाई भने, “अहीतोपेलले अब्शालोम र इस्राएलका धर्म-गुरुहरूलाई यस्तो-यस्तो सल्लाह दिए, तर मैले अरू नै सल्लाह दिएको छु ।
೧೫ತರುವಾಯ ಹೂಷೈಯು ಯಾಜಕನಾದ ಚಾದೋಕ್ ಎಬ್ಯಾತಾರರಿಗೆ, “ಅಹೀತೋಫೆಲನು ಅಬ್ಷಾಲೋಮನಿಗೂ ಮತ್ತು ಇಸ್ರಾಯೇಲರ ಹಿರಿಯರಿಗೂ ಇಂಥಿಂಥ ಆಲೋಚನೆಯನ್ನು ಹೇಳಿದನು, ನಾನು ಹೀಗೆ ಹೇಳಿದ್ದೇನೆ.
16 अब चाँडो जाओ र दाऊदलाई खबर गर । उनलाई भन, 'आज राती आराबाको जाँघरहरूमा छाउनी नलगाउनुहोस्, तर कुनै पनि उपायले पारि तर्नुहोस्, नत्र राजाका अनि उहाँको साथमा भएका सबै मानिस समेत नाश पारिने छन्' ।”
೧೬ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀನು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡ. ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಬೇಕು. ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ’ ಎಂದು ಹೇಳಿಕಳುಹಿಸಿರಿ” ಎಂದನು
17 यति बेला जोनाथन र अहीमास एन-रोगेलको पानीको मूलमा पर्खिरहेका थिए । तिनीहरूले जान्नुपर्ने कुरा एक जना दासी गएर तिनीहरूलाई खबर गर्थिन्, किनकि तिनीहरू सहरभित्र गएर देखिने जोखिममा पर्न सक्दैनथे । जब खबर आउँथ्यो, तब तिनीहरू गएर राजालाई भन्थे ।
೧೭ಯೋನಾತಾನ ಮತ್ತು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿಯು ಎಲ್ಲಾ ವರ್ತಮಾನಗಳನ್ನು ಇವರಿಗೂ ಮತ್ತು ಇವರ ಅರಸನಾದ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಕ್ಕೆ ಬರಲಿಲ್ಲ.
18 तर योपल्ट एक जना जवान मानिसले तिनीहरूलाई देख्यो र अब्बशालोमलाई बतायो । त्यसैले जोनाथन र अहीमास तुरुन्तै गए र बहूरिममा एक जना मानिसको घरमा आए जसको आँगनमा एउटा इनार थियो, जसभित्र तिनीहरू पसे ।
೧೮ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಓಡಿಹೋಗಿ ಬಹುರೀಮಿನಲ್ಲಿ ಇದ್ದ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದುಕೊಂಡರು.
19 ती मानिसकी पत्नीले त्यो इनारको ढकनी ल्याइन् र इनारको मुख ढाकिन् अनि त्यसमाथि बिस्कुन सुकाइन्, त्यसैले इनारमा जोनाथन र अहीमास थिए भनेर कसैले थाहा पाएनन् ।
೧೯ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ಗೋದಿಯ ನುಚ್ಚನ್ನು ಹರಡಿದಳು. ಇದರಿಂದ ಅವರು ಅಲ್ಲಿ ಅಡಗಿರುವ ವಿಷಯ ಯಾರಿಗೂ ಗೊತ್ತಾಗಲಿಲ್ಲ.
20 अब्शालोमका मानिसहरू त्यो घरकी स्त्रीकहाँ आए र भने, “अहीमास र जोनाथन कहाँ छन्?” ती स्त्रीले भनिन्, “तिनीहरू नदी तरेर गाइसके ।” त्यसैले तिनीहरूले वरिपरि हेरे र तिनीहरूलाई भेट्टउन सकेनन्, तब तिनीहरू यरूशलेम फर्के ।
೨೦ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ ಮತ್ತು ಯೋನಾತಾನರು ಎಲ್ಲಿದ್ದಾರೆ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು, “ಅವರು ಹಳ್ಳ ದಾಟಿ ಹೋಗಿಬಿಟ್ಟರು” ಎಂದು ಉತ್ತರ ಕೊಟ್ಟಳು. ಅವರು ಅಹೀಮಾಚ ಮತ್ತು ಯೋನಾತಾನರನ್ನು ಹುಡುಕುವುದಕ್ಕೆ ಹೋಗಿ, ಕಾಣದೆ ಯೆರೂಸಲೇಮಿಗೆ ಹಿಂತಿರುಗಿದರು.
21 तिनीहरू गएपछि जोनाथन र अहीमास इनारबाट बाहिर निस्के । उनीहरू दाऊद राजालाई खबर दिन गए । तिनीहरूले उनलाई भने, “उठ्नुहोस् चाँडो नदी तर्नुहोस, किनभने अहीतोपेलले तपाईंको बारेमा यस्तो-यस्तो सल्लाह दिएका छन् ।”
೨೧ಅವರು ಹೋದ ಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋದರು. ಅವರು ದಾವೀದನಿಗೆ, “ಅಹೀತೋಫೆಲನು ನಿನಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ. ಆದುದರಿಂದ ಬೇಗನೆ ಎದ್ದು ನದಿದಾಟಿ ಹೋಗು” ಎಂದು ಹೇಳಿದನು.
22 त्यसपछि दाऊद र तिनीसँग भएका सबै मानिस उठे र तिनीहरूले यर्दन नदी तरे । बिहान उज्यालो हुँदासम्मा तीमध्ये यर्दन तर्न बाँकी कोही पनि थिएन ।
೨೨ಆಗ ದಾವೀದನೂ ಮತ್ತು ಅವನ ಜೊತೆಯಲ್ಲಿದ್ದವರೆಲ್ಲರೂ ಯೊರ್ದನ್ ನದಿಯನ್ನು ದಾಟಿದರು. ಬೆಳಗಾದಾಗ ದಾಟಬೇಕಾದವನು ಒಬ್ಬನೂ ಇರಲಿಲ್ಲ.
23 जब अहीतोपेलले आफ्नो सल्लाहको अनुसरण नभएको देखे, उनले आफ्नो गधामा जीन-लगाम कसे र विदा भए । उनी आफ्नो सहरमा भएको घरमा गए, आफ्ना सबै कुरा मिलाए र आफूलाई झुण्डाए । यसरी उनी मरे र आफ्नै बुबाको चिहानमा गाडिए ।
೨೩ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
24 त्यसपछि दाऊद महनोममा आए । अब्शालोमचाहीं र आफूसित भएका इस्राएलका सबै मानिसलाई लिएर यर्दन नदी तरे ।
೨೪ದಾವೀದನು ಮಹನಯಿಮಿಗೆ ಹೋದನು. ಅಬ್ಷಾಲೋಮನು ಮತ್ತು ಇಸ್ರಾಯೇಲರೆಲ್ಲರೂ ಕೂಡಿಕೊಂಡು ಯೊರ್ದನ್ ನದಿಯನ್ನು ದಾಟಿದರು.
25 अब्बशालोमले योआबको सट्टामा अमासालाई फौजका कमाण्डर बनाएका थिए । अमासा इश्माएली येतेरका छोरा थिए, जो अबीगेलसँग सुते जो नाहाशकी छोरी र योआबकी आमा सरूयाहकी बहिनी थिइ ।
೨೫ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು.
26 तब इस्राएल र अब्बशालोमले गिलादको जमिनमा छाउनी हाले ।
೨೬ಇಸ್ರಾಯೇಲ್ಯರೂ ಅಬ್ಷಾಲೋಮನೂ ಗಿಲ್ಯಾದ್ ದೇಶದಲ್ಲಿ ಪಾಳೆಯಮಾಡಿಕೊಂಡರು.
27 जब दाऊद महनोममा आएका थिए, अम्मोनीहरूको रब्बाका नाहाशका छोरा शोबी अनि लो-देबारका अम्मीएलको छोरा माकीर र रोगेलिमबाट आएका गिलादी बर्जिल्लैले
೨೭ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗನಾದ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವರು
28 सुत्ने ओछ्यान र ओड्ने कम्बलहरू, भाँडाहरू, जौको पिठो भुटेको अन्न, सिमी, दाल
೨೮ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳೊಂದಿಗೆ, ಊಟಕ್ಕಾಗಿ ಗೋದಿ, ಜವೆಗೋದಿ, ಹಿಟ್ಟು, ಹುರಿಗಾಳು, ಅವರೆಕಾಳು, ಅಲಸಂದಿ, ಬೇಳೆ ಜೇನುತುಪ್ಪ,
29 मह, नौनी, भेडा र दही ल्याए, ताकि दाऊद र तिनीसँग भएका मसनिहरूले खान सकुन् । यी मानिसले भनेका थिए, “मानिसहरू उजाडस्थानमा भोकाएका, थकित, र तिर्खाएका छन् ।”
೨೯ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು.