< प्रेरित 27 >
1 जब हामीले इटालीको यात्रा गर्नुपर्छ भन्ने निर्णय गरियो, तिनीहरूले पावल र केही कैदीहरूलाई अगस्टसको फौजको कप्तान युलियसको जिम्मा लगाइदिए ।
ನಾವು ಇಟಲಿಗೆ ಸಮುದ್ರ ಪ್ರಯಾಣ ಮಾಡಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಇತರ ಕೈದಿಗಳನ್ನೂ ಯೂಲ್ಯನೆಂಬ ಹೆಸರಿನ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. ಅವನು ಚಕ್ರವರ್ತಿಯ ದಳಕ್ಕೆ ಸೇರಿದವನು.
2 हामी एड्रामिटेनोसबाट जहाजमा चढ्यौँ, जुन एसियाको समुद्रीतट भएर जान लाग्दै थियो । त्यसैले, हामी समुद्रतिर गयौँ । माकेडोनियामा पर्ने थेसेलोनिकेका अरिस्तार्खस हामीसँगै गए ।
ಆಗ ಅದ್ರಮಿತ್ತಿಯದಿಂದ ಬಂದು ಏಷ್ಯಾ ಪ್ರಾಂತದ ಬಂದರುಗಳಿಗೆ ಹೋಗಲು ಸಿದ್ಧವಾಗಿದ್ದ ನೌಕೆಯನ್ನೇರಿ ನಾವು ಪ್ರಯಾಣ ಪ್ರಾರಂಭಿಸಿದೆವು. ಥೆಸಲೋನಿಕದಿಂದ ಬಂದ ಮಕೆದೋನ್ಯದ ಅರಿಸ್ತಾರ್ಕನು ನಮ್ಮೊಂದಿಗಿದ್ದನು.
3 अर्को दिन हामी जहाजबाट सिदोन सहरमा उत्रियौँ, जहाँ युलियसले पावललाई दयापूर्ण व्यवहार गरे, र उनलाई उनका साथीहरूकहाँ जान अनुमति दिए ताकि उनले तिनीहरूबाट वास्ता पाउन सकून् ।
ಮರುದಿನ ನಾವು ಸೀದೋನಿಗೆ ತಲುಪಿದೆವು. ಪೌಲನಿಗೆ ಯೂಲ್ಯನು ದಯೆತೋರಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗುವುದಕ್ಕೂ ಅವರಿಂದ ಉಪಚಾರವನ್ನು ಹೊಂದುವುದಕ್ಕೂ ಅನುಮತಿಸಿದನು.
4 त्यहाँबाट हामी समुद्रतिर लाग्यौँ, अनि बतासबाट सुरक्षित भएको साइप्रसको टापु नजिक जहाजमा यात्रा गर्यौँ, किनभने बतास हाम्रो विपरीत दिशाबाट चलेको थियो ।
ಅಲ್ಲಿಂದ ಹೊರಟು, ಎದುರುಗಾಳಿ ಬೀಸುತ್ತಿದ್ದದರಿಂದ ನಾವು ಸಮುದ್ರ ಪ್ರಯಾಣಮಾಡಿ ಸೈಪ್ರಸ್ ದ್ವೀಪ ಸಮೀಪವಾಗಿ,
5 किलिकिया र पामफिलियाको नजिकैबाट जहाजमा यात्रा गर्दै हामी लुकिया सहरको माइरा आइपुग्यौँ ।
ಕಿಲಿಕ್ಯಯ ಹಾಗೂ ಪಂಫುಲ್ಯ ಪ್ರಾಂತ ತೀರಗಳ ಎದುರಾಗಿರುವ ಸಮುದ್ರವನ್ನು ದಾಟಿ, ಲುಕೀಯ ಪ್ರಾಂತದ ಮುರ ಪಟ್ಟಣ ಎಂಬಲ್ಲಿಗೆ ತಲುಪಿದೆವು.
6 त्यहाँ सिपाहीका कप्तानले इटाली गइरहेको अलेक्जेन्ड्रियाको एउटा जहाज भेट्टाए । उनले हामीलाई त्यसमा चढाइदिए ।
ಅಲ್ಲಿ ಇಟಲಿಗೆ ಪ್ರಯಾಣಮಾಡುತ್ತಿದ್ದ ಅಲೆಕ್ಸಾಂದ್ರಿಯದ ನೌಕೆಯನ್ನು ಶತಾಧಿಪತಿಯು ಕಂಡು ನಮ್ಮನ್ನು ಆ ನೌಕೆಯಲ್ಲಿ ಹತ್ತಿಸಿದನು.
7 जब हामी धेरै दिन यात्रा गर्दै बिस्तारै र कष्टसाथ अन्तमा क्निडस नजिकै आइपुग्यौँ, बतासले हामीलाई त्यताबाट अगाडि बढ्न दिएन । त्यसैले, हामीले सल्मोनको सामुन्ने रहेको क्रेटको आड लिएर यात्रा गर्यौँ ।
ಅನೇಕ ದಿನಗಳವರೆಗೆ ನಮ್ಮ ಪ್ರಯಾಣ ನಿಧಾನವಾಗಿ ಸಾಗಿತು. ಕ್ನೀದ ಪಟ್ಟಣ ಎಂಬಲ್ಲಿಗೆ ತಲುಪುವವರೆಗೆ ಬಹಳ ಪ್ರಯಾಸ ಪಡಬೇಕಾಯಿತು. ಎದುರುಗಾಳಿಯು ಅಡ್ಡಿಯಾದದ್ದರಿಂದ, ಸಲ್ಮೋನೆ ಭೂಶಿರವನ್ನು ದಾಟಿ, ಅದರ ಎದುರಾಗಿರುವ ಕ್ರೇತದ್ವೀಪವನ್ನು ತಲುಪಿದೆವು.
8 समुद्रीतट भएर लासिया सहरको नजिकै रहेको सुन्दर बन्दरगाह भन्ने ठाउँसम्म नपुगेसम्म हामीले कष्टसाथ यात्रा गर्यौँ ।
ಆ ದ್ವೀಪದ ಕರಾವಳಿಯಲ್ಲಿಯೇ ಕಷ್ಟದಿಂದ ಮುಂದೆ ಸಾಗುತ್ತಾ, “ಚಂದರೇವುಗಳು” ಎಂದು ಕರೆಯಲಾಗುವ ಸ್ಥಳಕ್ಕೆ ಬಂದೆವು. ಅದು ಲಸಾಯ ಪಟ್ಟಣಕ್ಕೆ ಸಮೀಪದಲ್ಲಿತ್ತು.
9 हामीले ज्यादै धेरै समय लगायौँ । यहूदी उपवासको समय पनि बितिसकेको थियो । सामुद्रिक यात्रा खतरनाक भएको थियो । त्यसैले, पावलले तिनीहरूलाई चेताउनी दिए,
ಬಹಳ ಸಮಯ ಕಳೆದುಹೋಯಿತು. ದೋಷಪರಿಹಾರದ ದಿನವು ಸಹ ಮುಗಿದು ಹೋಯಿತು. ಈ ಸಂದರ್ಭದಲ್ಲಿ ಸಮುದ್ರ ಪ್ರಯಾಣ ಅಪಾಯಕರವಾಗಿದ್ದುದರಿಂದ ಪೌಲನು,
10 र भने, “मानिसहरू हो, हामीले सुरु गर्न लागेको सामुद्रिक यात्रामा हाम्रा सामानहरू र जहाजलाई मात्र होइन, हामीलाई पनि ठुलो चोटपटक लाग्नेछ र नोक्सानी हुनेछ भन्ने म देख्छु ।”
“ಸಹೋದರರೇ, ನಮ್ಮ ಸಮುದ್ರ ಪ್ರಯಾಣವು ಅಪಾಯಕಾರಿಯಾಗಿರುವಂತೆ ತೋರುತ್ತದೆ. ಇದರಿಂದ ನಮ್ಮ ನೌಕೆಗೂ ಸರಕಿಗೂ ಅಷ್ಟೇ ಅಲ್ಲ, ನಮ್ಮ ಪ್ರಾಣಗಳಿಗೂ ದೊಡ್ಡ ಹಾನಿ ಬರುವ ಸಂಭವವಿದೆ,” ಎಂದು ಎಚ್ಚರಿಸಿದನು.
11 तर सिपाहीका कप्तानले पावलले बोलेका कुरामा भन्दा जहाजका चालक र जहाजको मालिकको कुरामा बढ्ता ध्यान दिए ।
ಆದರೆ ಶತಾಧಿಪತಿಯು ಪೌಲನು ಹೇಳಿದ್ದಕ್ಕೆ ಕಿವಿಗೊಡದೆ ನೌಕೆಯ ನಾವಿಕನು ಹಾಗೂ ಯಜಮಾನನು ಹೇಳಿದ ಮಾತುಗಳಿಗೆ ಕಿವಿಗೊಟ್ಟನು.
12 किनभने जाडो समयमा त्यो बन्दरगाहमा समय बिताउन सजिलो थिएन । त्यसैले, जहाज चालकहरूमध्ये धेरै जनाले जसरी भएपनि फोनिक्स सहरमा पुगेर जाडो बिताउनको लागि त्यहाँबाट यात्रा गर्न सल्लाह दिए । फोनिक्स क्रेटको एउटा बन्दरगाह हो, जुन उत्तर-पूर्व र दक्षिण-पूर्वपट्टि फर्केको छ ।
ಆದರೆ ಚಳಿಗಾಲ ಕಳೆಯಲು ಆ ಬಂದರು ಅನುಕೂಲವಾಗಿರಲಿಲ್ಲ. ಆದ್ದರಿಂದ ಹೆಚ್ಚು ಮಂದಿ ಪ್ರಯಾಣ ಮುಂದುವರಿಸಬೇಕೆಂದು ತೀರ್ಮಾನಿಸಿದರು. ಸಾಧ್ಯವಾದರೆ ಫೊಯಿನಿಕ್ಸನ್ನು ತಲುಪಿ ಅಲ್ಲಿಯೇ ಚಳಿಗಾಲವನ್ನು ಕಳೆಯಬೇಕೆಂಬುದು ಅವರ ಯೋಚನೆಯಾಗಿತ್ತು. ಫೊಯಿನಿಕ್ಸ, ಕ್ರೇತದ್ವೀಪದ ಒಂದು ಬಂದರು. ಇದು ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿತ್ತು.
13 जब दक्षिणी बतास मन्द रूपले बहन थाल्यो, तब जहाज चालकहरूले जे चाहेका थिए त्यो प्राप्त गरे भनी उनीहरूले सोचे । त्यसकारण, तिनीहरूले लङ्गर निकाली समुद्रमा खसाले, र क्रेटको समुद्र किनार हुँदै यात्रा गरे ।
ದಕ್ಷಿಣ ಸುಳಿಗಾಳಿ ಬೀಸಲು ಪ್ರಾರಂಭಿಸಿದಾಗ, ಅವರು ತಾವು ಬಯಸಿದ್ದು ದೊರೆಯಿತೆಂದು ಭಾವಿಸಿದರು; ಆದ್ದರಿಂದ ಅವರು ಲಂಗರು ಎತ್ತಿಕಟ್ಟಿ ಕ್ರೇತದ್ವೀಪದ ತೀರದ ಸಮೀಪವಾಗಿಯೇ ಸಮುದ್ರ ಪ್ರಯಾಣ ಬೆಳೆಸಿದರು.
14 तर त्यसको केही समयपछि डरलाग्दो उत्तर-पूर्वी नामक तुफान चल्यो र त्यो सम्पूर्ण टापुभरि हामीमाथि बज्रन थाल्यो ।
ಆದರೆ ಸ್ವಲ್ಪ ಸಮಯದಲ್ಲಿಯೇ “ಈಶಾನ್ಯ ಮಾರುತ” ಎಂಬ ಪ್ರಚಂಡ ಗಾಳಿ ದ್ವೀಪದ ಕಡೆಯಿಂದ ಬೀಸತೊಡಗಿತು.
15 जहाजले त्यस आँधीको सामना गर्न नसकेपछि हामीले हार मान्यौँ, र त्यसले जता लैजान्थ्यो, त्यतै गयौँ ।
ನೌಕೆ ಬಿರುಗಾಳಿಗೆ ಸಿಕ್ಕಿಕೊಂಡು ಮುಂದೆ ಹೋಗಲಾರದೆ ಇರಲು, ಗಾಳಿ ಬೀಸಿದ ಕಡೆಗೆ ನೂಕಿಸಿಕೊಂಡು ಹೋದೆವು.
16 हामी क्लौडा नाउँ गरेको एउटा सानो टापुको सुरक्षित स्थान हुँदै लाग्यौँ, अनि बडो कष्टका साथ पानी जहाजमा रहेको सानो डुङ्गालाई जोगाउन सक्षम भयौँ ।
ಕ್ಲೌಡ ಎಂಬ ಪುಟ್ಟ ದ್ವೀಪದ ಮರೆಯಲ್ಲಿ ಹೋಗುತ್ತಿದ್ದಾಗ, ಜೀವರಕ್ಷಕ ದೋಣಿಯನ್ನು ಸರಿಪಡಿಸಿಕೊಂಡು ಹೋಗುವುದು ನಮಗೆ ಕಷ್ಟಕರವಾಯಿತು.
17 जब तिनीहरूले यसलाई माथि उचाले, त्यसपछि त्यसका डोरीहरू जहाजको मुख्य भागलाई बाँध्नको लागि प्रयोग गरे । हामीहरू सिरटिसको बलौटे धापमा फस्छौँ कि भनेर तिनीहरू डराएका थिए । त्यसैले, तिनीहरूले लङ्गरहरू झारिदिए, र जहाज आफैँ तैरन थाल्यो ।
ನೌಕೆಯವರು ಅದನ್ನು ಮೇಲಕ್ಕೆಳೆದು ಹಗ್ಗಗಳಿಂದ ನೌಕೆಯ ಕೆಳಭಾಗಕ್ಕೆ ಬಿಗಿಯಾಗಿ ಕಟ್ಟಿದರು. ಸುರ್ತಿಸ್ ಎಂಬ ಉಸುಬಿನಲ್ಲಿ ನೌಕೆ ಸಿಕ್ಕಿಕೊಳ್ಳಬಹುದೆಂಬ ಭಯದಿಂದ ಅವರು ನೌಕೆಯ ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಗೆ ನೌಕೆ ತೇಲುವಂತೆ ಬಿಟ್ಟರು.
18 हामी आँधीद्वारा धेरै धकेलियौँ । त्यसकारण, अर्को दिन जहाज चालकहरूले जहाजमा राखिएका समानहरू समुद्रमा फाल्न लागे ।
ಚಂಡಮಾರುತದಿಂದ ನಾವು ಬಹಳ ಹೊಯ್ದಾಡಿದ್ದರಿಂದ ಮರುದಿನ ಅವರು ಸರಕುಗಳನ್ನು ನೌಕೆಯಿಂದ ಹೊರಗೆ ಎಸೆಯಲು ಪ್ರಾರಂಭಿಸಿದರು.
19 तेस्रो दिन जहाज चालकहरूले जहाजलाई नियन्त्रण गर्न सामान पुन: फाले ।
ಮೂರನೆಯ ದಿನ ನೌಕೆಯ ಅಡ್ಡ ಮರವನ್ನು ತಮ್ಮ ಕೈಗಳಿಂದಲೇ ಎತ್ತಿ ಹೊರಗೆ ಎಸೆದರು.
20 जब धेरै दिनसम्म सूर्य र ताराहरू हाम्रामाझ चम्किएनन्, र ठुलो आँधी हामीमाथि बज्रिरह्य ो, तब हामीले बच्न सक्छौँ कि भन्ने आशा नै त्यागेका थियौँ ।
ಅನೇಕ ದಿನಗಳವರೆಗೆ ಸೂರ್ಯನನ್ನಾಗಲಿ, ನಕ್ಷತ್ರಗಳನ್ನಾಗಲಿ ಕಾಣದೆ ಚಂಡಮಾರುತ ಬೀಸುತ್ತಲೇ ಇದ್ದುದರಿಂದ ನಾವು ತಪ್ಪಿಸಿಕೊಳ್ಳುವ ಎಲ್ಲಾ ನಿರೀಕ್ಷೆಯನ್ನು ಕಳೆದುಕೊಂಡೆವು.
21 जब तिनीहरूले खानाविना धेरै दिन बिताइसकेका थिए, त्यसपछि पावल जहाज चालकहरूका माझमा खडा भए, र भने, “मानिसहरू हो, यो चोट र हानि नभोग्नलाई मेरो कुरा मानेर क्रेटबाट यात्रा नगरेको भए असल हुने थियो ।
ಬಹಳ ದಿನಗಳವರೆಗೆ ಜನರು ಊಟ ಮಾಡದೇ ಇದ್ದಾಗ, ಪೌಲನು ಅವರ ಮುಂದೆ ಎದ್ದು ನಿಂತುಕೊಂಡು ಹೀಗೆ ಹೇಳಿದನು: “ಸ್ನೇಹಿತರೇ, ನೀವು ಕ್ರೇತದಿಂದ ಮುಂದೆ ಪ್ರಯಾಣ ಮಾಡಬಾರದೆಂದು ಹೇಳಿದ ನನ್ನ ಮಾತಿಗೆ ವಿಧೇಯರಾಗಿದ್ದರೆ ಈ ಕಷ್ಟನಷ್ಟವನ್ನು ತಡೆಯಬಹುದಿತ್ತು.
22 अब म तपाईंहरूलाई साहसी बन्न उत्साह दिन्छु, किनभने तपाईंहरूका माझमा कुनै पनि मानवीय क्षति हुनेछैन, जहाजको मात्रै क्षति हुनेछ ।
ಈಗಲಾದರೂ ನೀವು ಧೈರ್ಯ ಕಳೆದುಕೊಳ್ಳಬೇಡಿರಿ ಎಂದು ನಿಮಗೆ ಸಲಹೆ ಕೊಡುತ್ತೇನೆ. ನಿಮ್ಮಲ್ಲಿ ಯಾರಿಗೂ ಪ್ರಾಣ ಹಾನಿಯಾಗುವುದಿಲ್ಲ. ನೌಕೆ ಮಾತ್ರವೇ ನಾಶವಾಗಿ ಹೋಗುವುದು.
23 किनभने गएको रात मैले आराधना गर्ने परमेश्वर जसको म हुँ, उहाँका एक स्वर्गदूत मेरो छेउमा उभिए
ನಾನು ಯಾವ ದೇವರಿಗೆ ಸೇರಿದ್ದೇನೋ ಮತ್ತು ಯಾರನ್ನು ಸೇವೆ ಮಾಡುತ್ತಿದ್ದೇನೋ ಆ ದೇವರ ದೂತನೊಬ್ಬನು ನಿನ್ನೆ ರಾತ್ರಿ ನನ್ನ ಬಳಿ ನಿಂತುಕೊಂಡು,
24 र भने, “नडराऊ, पावल । तिमी कैसरको अगाडि उभिनु पर्छ र हेर परमेश्वरले आफ्नो कृपामा तिमीसँग यो जहाजमा यात्रा गरिरहेका सबैलाई तिम्रो हातमा दिनु भएको छ ।
‘ಪೌಲನೇ, ಭಯಪಡಬೇಡ. ನೀನು ಕೈಸರನ ಮುಂದೆ ನಿಲ್ಲಬೇಕು. ಇಗೋ, ದೇವರು ನಿನ್ನೊಂದಿಗೆ ಪ್ರಯಾಣ ಮಾಡುತ್ತಿರುವವರ ಪ್ರಾಣಗಳನ್ನು ನಿನಗೆ ಉಳಿಸಿಕೊಟ್ಟಿದ್ದಾರೆ,’ ಎಂದನು.
25 त्यसकारण, मानिसहरू, साहसी हुनुहोस् किनभने म परमेश्वरलाई भरोसा गर्दछु, कि मलाई जे भनिएको छ त्यस्तै हुनेछ ।
ಆದ್ದರಿಂದ ಗೆಳೆಯರೇ, ಧೈರ್ಯಗೊಳ್ಳಿರಿ, ನನಗೆ ಹೇಳಿದಂತೆಯೇ ಸಂಭವಿಸುವುದೆಂದು ನಾನು ದೇವರನ್ನು ನಂಬುತ್ತೇನೆ.
26 तर हाम्रो जहाज भने कुनै टापुमा पुगेर क्षतिग्रस्त हुनुपर्नेछ ।”
ಆದರೆ ನಾವು ಯಾವುದೋ ಒಂದು ದ್ವೀಪದ ದಡದಲ್ಲಿ ಅಪ್ಪಳಿಸುತ್ತೇವೆ,” ಎಂದನು.
27 जब चौधौँ रात आयो, हामी यताउता गर्दै भएर एड्रियाटिक समुद्रमा यात्रा गरिरहेका थियौँ, मध्यरातमा जहाज चालकहरूले कुनै जमिन नजिक पुगिरहेका छौँ भन्ने विचार गरे ।
ಹದಿನಾಲ್ಕನೇ ರಾತ್ರಿ ಬಂದ ಮೇಲೆ ನಾವು ಆದ್ರಿಯ ಸಮುದ್ರದಲ್ಲಿ ಬಿರುಗಾಳಿಯು ನಮ್ಮನ್ನು ಹೊಯ್ದಾಡಿಸುತ್ತಿದ್ದಾಗ, ಸುಮಾರು ಮಧ್ಯರಾತ್ರಿಯಲ್ಲಿ ನಾವು ನೆಲವನ್ನು ತಲುಪುತ್ತಿದ್ದೇವೆಂದು ನಾವಿಕರು ಭಾವಿಸಿ,
28 तिनीहरूले गहिराइ नापे र गहिराइ लगभग छत्तिस मिटर भएको पत्ता लगाए, केही समय पछि फेरि उनीहरूले नाप लिए र गहिराइ सत्ताइस मिटर भएको पत्ता लगाए ।
ನೀರಿನ ಆಳವನ್ನು ಪರೀಕ್ಷಿಸಿದಾಗ, ಅದು ನೂರಿಪ್ಪತ್ತು ಅಡಿ ಆಳವೆಂದು ಕಂಡುಕೊಂಡರು. ಸ್ವಲ್ಪ ಸಮಯದ ತರುವಾಯ ಆಳ ನೋಡಿದಾಗ, ಅದು ತೊಂಬತ್ತು ಅಡಿಯಿತ್ತು.
29 हामीहरू चट्टानहरूमा ठोकिएर दुर्घटनामा पर्छौं कि भनेर तिनीहरू डराए, त्यसैले तिनीहरूले जहाजको पछाडि पट्टिबाट चारवटा लंगर तल खसालेर चाँडै बिहान होस् भनेर प्रार्थना गरे ।
ನಾವು ಬಂಡೆಗಳಿಗೆ ಅಪ್ಪಳಿಸಬಹುದೆಂಬ ಭಯದಿಂದ, ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಕೆಳಗಿಳಿಸಿ, ಬೆಳಗಾಗಲೆಂದು ಹಾರೈಸುತ್ತಿದ್ದೆವು.
30 जहाज चालकहरूले त्यो जहाजलाई त्याग्नको लागि बाटो खोजिरहेका थिए र सानो डुङ्गा समुद्रमा तल झारे अनि जहाजको अगाडिको भागबाट लंगरहरू तल खसाल्छौँ भनी बहाना बनाए ।
ನೌಕೆಯಿಂದ ತಪ್ಪಿಸಿಕೊಂಡು ಹೋಗಲು ನಾವಿಕರು ನೌಕೆಯ ಮುಂಭಾಗದಲ್ಲಿದ್ದ ಲಂಗರುಗಳನ್ನು ಕೆಳಗಿಳಿಸುವ ನೆಪದಿಂದ ದೋಣಿಯನ್ನು ಸಮುದ್ರದಲ್ಲಿ ಇಳಿಸಿದರು.
31 तर पावलले सिपाहीहरू र उनीहरूका कप्तानलाई भने, “यी मानिसहरू यस जहाजमा बसेनन् भने तपाईंहरू जीवित रहन सक्नुहुने छैन ।”
ಆಗ ಪೌಲನು ಶತಾಧಿಪತಿಗೂ ಸೈನಿಕರಿಗೂ, “ಈ ಜನರು ನೌಕೆಯಲ್ಲಿ ಉಳಿದುಕೊಳ್ಳದಿದ್ದರೆ ನೀವು ತಪ್ಪಿಸಿಕೊಳ್ಳುವುದಕ್ಕಾಗುವುದಿಲ್ಲ,” ಎಂದನು.
32 त्यसपछि सिपाहीहरूले त्यो डुङ्गाको डोरी काटिदिए र त्यसलाई त्यही पानीमा नै बगेर जान दिए ।
ಆದ್ದರಿಂದ ಸೈನಿಕರು ದೋಣಿಗೆ ಕಟ್ಟಿದ್ದ ಹಗ್ಗಗಳನ್ನು ಕಡಿದುಹಾಕಿ ಅದು ಸಮುದ್ರದ ಪಾಲಾಗುವಂತೆ ಮಾಡಿದರು.
33 जब बिहानको हुनै लागेको थियो, पावलले ती सबैलाई खाना खान बिन्ती गरे । उनले भने, “तपाईंहरूले खाना नखाई पर्खिएको आज यो चौधौँ दिन हो, तपाईंहरूले केही पनि खानु भएको छैन ।
ಬೆಳಗಾಗುತ್ತಿದ್ದಂತೆ ಪೌಲನು ಅವರೆಲ್ಲರೂ ಏನನ್ನಾದರೂ ತಿನ್ನಬೇಕೆಂದು ಒತ್ತಾಯ ಮಾಡಿ, “ಕಳೆದ ಹದಿನಾಲ್ಕು ದಿನಗಳಿಂದ ನೀವು ಕಾದುಕೊಂಡವರಾಗಿ ಊಟವನ್ನೇ ಮಾಡಿಲ್ಲ.
34 त्यसैले तपाईंहरूले केही खानुहोस् किनकि यो तपाईंहरूलाई बाँच्नको लागि हो र तपाईंहरूको टाउकोको एउटै रौँ पनि नष्ट हुन पाउने छैन ।”
ಆದ್ದರಿಂದ ಊಟಮಾಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕಾಗಿಯೇ. ನೀವು ಜೀವದಿಂದ ಉಳಿಯಬೇಕು. ಏಕೆಂದರೆ ನಿಮ್ಮ ತಲೆಕೂದಲು ಒಂದಾದರೂ ನಾಶವಾಗುವುದಿಲ್ಲ,” ಎಂದನು.
35 त्यति भनिसकेपछि, उनले रोटी लिए र सबैको सामु परमेश्वरलाई धन्यवाद दिए । त्यसपछि उनले त्यो रोटी भाँचे अनि खान सुरु गरे ।
ಹೀಗೆ ಹೇಳಿದ ನಂತರ ಅವನು ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಎದುರಿನಲ್ಲಿ ದೇವರಿಗೆ ಕೃತಜ್ಞತೆ ಸಲ್ಲಿಸಿ, ಅದನ್ನು ಮುರಿದು ತಿನ್ನಲು ಪ್ರಾರಂಭಿಸಿದನು.
36 त्यसपछि तिनीहरू सबै उत्साहित भए र खाना खाए ।
ಅವರೆಲ್ಲರೂ ಧೈರ್ಯಹೊಂದಿ ಊಟಮಾಡಿದರು.
37 हामी जहाजमा 276 जना मानिस थियौँ ।
ಅಲ್ಲಿ ನೌಕೆಯಲ್ಲಿ ನಾವೆಲ್ಲಾ ಒಟ್ಟು ಇನ್ನೂರ ಎಪ್ಪತ್ತಾರು ಜನರಿದ್ದೆವು.
38 जब उनीहरूले पर्याप्त खाना खाए, त्यसपछि तिनीहरूले गहुँलाई समुद्रमा फ्याँकेर जहाजलाई हलुका बनाए ।
ಎಲ್ಲರೂ ಸಾಕಷ್ಟು ಊಟಮಾಡಿದ ಮೇಲೆ ಗೋಧಿಯನ್ನು ಸಮುದ್ರದಲ್ಲಿ ಎಸೆದು ನೌಕೆಯ ಭಾರವನ್ನು ಹಗುರಗೊಳಿಸಿದರು.
39 जब उज्यालो भयो, तिनीहरूले जमिनलाई चिन्न सकेनन्, तर तिनीहरूले समुद्रबाट बलौटे किनारा भएको खाडी देखे, अनि तिनीहरूले जहाजलाई त्यहाँ लैजान सक्छन् कि सक्दैनन् भनी छलफल गरे ।
ಬೆಳಗಾದ ಮೇಲೆ ನೆಲವನ್ನು ಗುರುತಿಸಲು ಅವರಿಗೆ ಸಾಧ್ಯವಾಗಲಿಲ್ಲ. ಆದರೆ ಅವರು ದಡವನ್ನು ಕಂಡು ಸಾಧ್ಯವಾದರೆ ಅಲ್ಲಿ ನೌಕೆಯನ್ನು ನಿಲ್ಲಿಸಬೇಕೆಂದು ತೀರ್ಮಾನಿಸಿದರು.
40 त्यसैले तिनीहरूले लंगरहरू काटेर र समुद्रमा नै छोडिदिए । त्यही समयमा तिनीहरूले जहाजमा भएका पतवारको डोरीहरू खोलि दिए अनि बतासतिर जहाजका पालहरू फर्काए, र त्यसपछि तिनीहरू समुद्र किनारतिर अगि बढे ।
ಲಂಗರುಗಳನ್ನು ಸಡಿಲಗೊಳಿಸಿ ಅವುಗಳನ್ನು ಸಮುದ್ರದಲ್ಲಿ ಬಿಟ್ಟರು. ಚುಕ್ಕಾಣಿಗಳಿಗೆ ಕಟ್ಟಿದ್ದ ಹಗ್ಗಗಳನ್ನು ಬಿಚ್ಚಿದರು. ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ನೌಕೆ ದಡದ ಕಡೆಗೆ ಚಲಿಸುವಂತೆ ಮಾಡಿದರು.
41 तर तिनीहरू दुईओटा पानीको प्रवाह मिलेको ठाउँमा पुगे अनि जहाज जमिनमा भासियो । जहाजको अगाडिको भाग त्यहीँ अड्कियो र जहाज हलचल गर्न सकेन । तर प्रचण्ड बतासको कारणले जहाजको पछाडिको भाग भाँचिन सुरु भयो ।
ಆದರೆ ನೌಕೆ ಮಧ್ಯದಲ್ಲಿ ಮರುಳು ದಿಬ್ಬಕ್ಕೆ ಅಪ್ಪಳಿಸಿ ಮುಳುಗಲಿಕ್ಕೆ ಪ್ರಾರಂಭಿಸಿತು. ನೌಕೆಯ ಮುಂಭಾಗ ಮರಳಲ್ಲಿ ಸಿಕ್ಕಿ ಅಲ್ಲಾಡದೇ ನಿಂತಿತು; ಹಿಂಭಾಗ ಬಿರುಗಾಳಿಯ ಹೊಡೆತಕ್ಕೆ ಸಿಕ್ಕಿ ಮುರಿದುಹೋಯಿತು.
42 कैदीहरू पौडेर नाभागून् भनेर सिपाहीहरूले तिनीहरूलाई मार्ने योजना गरे
ಆಗ ಕೈದಿಗಳು ಈಜಿಕೊಂಡು ತಪ್ಪಿಸಿಕೊಳ್ಳದಂತೆ ಸೈನಿಕರು ಅವರನ್ನು ಕೊಲ್ಲಲು ಯೋಚನೆ ಮಾಡಿದರು.
43 तर सिपाहीको कप्तानले पावललाई बचाउने चाहना गरे, त्यसकारण उनले तिनीहरूको योजनालाई रोके, र जसलाई पौडी खेल्न आउँछ तिनीहरूले पहिले जहाजबाट हाम फालेर उत्रून् र जमिनमा जाऊन् भन्ने आदेश दिए ।
ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಬಯಸಿ, ಸೈನಿಕರು ಹಾಗೆ ಮಾಡದಂತೆ ನೋಡಿಕೊಂಡು, ಈಜಲು ಬಲ್ಲವರು ಮೊದಲು ಸಮುದ್ರದಲ್ಲಿ ಜಿಗಿದು ಭೂಮಿಯನ್ನು ತಲುಪಬೇಕೆಂದು ಆಜ್ಞಾಪಿಸಿದನು.
44 त्यसपछि तिनले बाँकी मानिसहरू जाऊन्, कोही काठका तख्ताहरूमा र केही जहाजका अन्य सामानहरूमा चढेर जाऊन् भने । यसरी हामी सबै जना जमिनमा सुरक्षित आइपुग्यौँ ।
ಕೆಲವರು ಹಲಗೆಗಳ ಮೇಲೆ ಮತ್ತು ಕೆಲವರು ನೌಕೆಯ ತುಂಡುಗಳ ಸಹಾಯದಿಂದ ದಡ ಸೇರಬೇಕೆಂದು ಆಜ್ಞಾಪಿಸಿದನು. ಹೀಗೆ ಎಲ್ಲರೂ ಸುರಕ್ಷಿತವಾಗಿ ದಡ ಸೇರಿದರು.