< प्रेरित 1 >
1 थियोफिलस, मैले पहिला लेखेको पुस्तकले येशूलाई माथि नलगिएसम्म उहाँले गर्न र सिकाउन थाल्नुभएका सबै कुरा बताएको छ ।
ಥೆಯೊಫಿಲನೇ, ನಾನು ನಿನಗೆ ನನ್ನ ಮೊದಲನೆಯ ಗ್ರಂಥದಲ್ಲಿ ಯೇಸು ಮಾಡುವುದಕ್ಕೂ ಬೋಧಿಸುವುದಕ್ಕೂ ಪ್ರಾರಂಭಿಸಿದ್ದೆಲ್ಲವನ್ನೂ ಕುರಿತು ನಿಮಗೆ ಬರೆದಿದ್ದೇನೆ.
2 उहाँले चुन्नुभएका प्रेरितहरूलाई पवित्र आत्माद्वारा उहाँले आज्ञा दिनुभएपछि यसो भएको थियो ।
ಅಂದರೆ, ಯೇಸು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮ ದೇವರ ಮುಖಾಂತರ ಆಜ್ಞಾಪಿಸಿದ ದಿನ ಮೊದಲುಗೊಂಡು ಸ್ವರ್ಗಕ್ಕೆ ಏರಿಹೋಗುವ ದಿನದವರೆಗೆ ಮಾಡಿದ್ದೆಲ್ಲವನ್ನೂ ಬರೆದಿದ್ದೇನೆ.
3 उहाँको कष्टभोगपछि उहाँले धेरै विश्वसनीय प्रमाणसहित आफैँलाई तिनीहरूकहाँ जीवित प्रस्तुत गर्नुभयो । उहाँ चालिस दिनसम्म उनीहरूकहाँ देखा पर्नुभयो र परमेश्वरको राज्यको बारेमा बताउनु भयो ।
ಯೇಸು ಬಾಧೆಪಟ್ಟು ಸತ್ತ ನಂತರ, ಅಪೊಸ್ತಲರಿಗೆ ಪ್ರತ್ಯಕ್ಷರಾಗುತ್ತಾ ತಾವು ಜೀವಂತವಾಗಿರುವುದನ್ನು ಅನೇಕ ನಿಶ್ಚಿತ ರುಜುವಾತುಗಳಿಂದ ತೋರಿಸಿಕೊಟ್ಟರು ಮತ್ತು ನಲವತ್ತು ದಿನಗಳ ಅವಧಿಯಲ್ಲಿ ಯೇಸು ಅವರಿಗೆ ಕಾಣಿಸಿಕೊಂಡು ದೇವರ ರಾಜ್ಯವನ್ನು ಕುರಿತು ತಿಳಿಸಿದರು.
4 उहाँले तिनीहरूसँग भेटघाट गरिरहँदा उहाँले तिनीहरूलाई यरूशलेम नछोड्न, तर पिताको प्रतिज्ञाको प्रतीक्षा गर्नलाई आज्ञा दिनुभयो । त्यसको बारेमा उहाँले भन्नुभयो, “तिमीहरूले मबाट सुन्यौ
ಒಮ್ಮೆ ಯೇಸು ಶಿಷ್ಯರೊಂದಿಗೆ ಊಟಮಾಡುತ್ತಿದ್ದಾಗ ಶಿಷ್ಯರಿಗೆ, “ನೀವು ಯೆರೂಸಲೇಮನ್ನು ಬಿಟ್ಟು ಹೋಗಬೇಡಿರಿ, ನಾನು ನಿಮಗೆ ತಿಳಿಸಿದಂತೆ ನನ್ನ ತಂದೆ ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.
5 कि वास्तवमा यूहन्नाले पानीले बप्तिस्मा दिए, तर केही दिनमा नै तिमीहरूलाई पवित्र आत्मामा बप्तिस्मा दिइनेछ ।
ಏಕೆಂದರೆ ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದನು. ಆದರೆ ಇನ್ನು ಕೆಲವೇ ದಿನಗಳಲ್ಲಿ ಪವಿತ್ರಾತ್ಮ ದೇವರಿಂದ ನೀವು ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು.
6 तिनीहरू सँगै भेलाहुँदा, तिनीहरूले उहाँलाई सोधे, “प्रभु, के तपाईंले इस्राएल राज्य पुनर्स्थापना गर्नुहुने समय यही हो?”
ಶಿಷ್ಯರು ಯೇಸುವಿನ ಸಂಗಡ ಇದ್ದಾಗ, “ಸ್ವಾಮೀ, ಇಸ್ರಾಯೇಲರ ರಾಜ್ಯವನ್ನು ಈ ಕಾಲದಲ್ಲಿ ಪುನಃ ಸ್ಥಾಪಿಸುವಿಯೋ?” ಎಂದು ಪ್ರಶ್ನೆ ಮಾಡಿದರು.
7 उहाँले तिनीहरूलाई भन्नुभयो, “पिताले उहाँको अधिकारद्वारा तोक्नुभएको समय र ऋतुहरू जान्ने काम तिमीहरूको होइन ।
ಅದಕ್ಕೆ ಯೇಸು: “ತಂದೆ ತಮ್ಮ ಸ್ವಂತ ಅಧಿಕಾರದಿಂದ ನೇಮಿಸಿದ ಸಮಯವನ್ನಾಗಲಿ, ಕಾಲವನ್ನಾಗಲಿ, ತಿಳಿಯುವುದು ನಿಮ್ಮ ಕೆಲಸವಲ್ಲ.
8 तर जब पवित्र आत्मा तिमीहरूमाथि आउनुहुन्छ, तिमीहरूले शक्ति प्राप्त गर्नेछौ, अनि तिमीहरू यरूशलेममा र सारा यहूदियामा र सामरिया र पृथ्वीको अन्तिम छेउसम्मै मेरा साक्षीहरू हुनेछौ ।”
ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.
9 येशूले यी कुराहरू भनिसक्नुभएपछि, तिनीहरूले माथि हेरिरहँदा उहाँलाई माथि उठाइयो, र बादलले उहाँलाई तिनीहरूका आँखाबाट छेक्यो ।
ಇದನ್ನು ಹೇಳಿದ ತರುವಾಯ, ಯೇಸು ಅವರ ಕಣ್ಣೆದುರಿನಲ್ಲಿಯೇ ಸ್ವರ್ಗಕ್ಕೆ ಏರಿಹೋದರು. ಮೋಡವು ಯೇಸುವನ್ನು ಅವರ ಕಣ್ಣಿಗೆ ಮರೆಮಾಡಿತು.
10 उहाँ जाँदै गर्नुहुँदा तिनीहरूले स्वर्गतिर उत्कटतापूर्वक हेरिररहेका बेला सेतो वस्त्र पहिरेका दुई जना मानिस अचानक तिनीहरूका छेउमा खडा भए ।
ಯೇಸು ಮೇಲಕ್ಕೆ ಹೋಗುತ್ತಿರಲು ಶಿಷ್ಯರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರುವಾಗ, ಬಿಳಿವಸ್ತ್ರ ಧರಿಸಿದ್ದ ಇಬ್ಬರು ಪುರುಷರು ಅವರ ಪಕ್ಕದಲ್ಲಿ ನಿಂತುಕೊಂಡು,
11 तिनीहरूले भने, “हे गालीलका मानिसहरू हो, तिमीहरू यहाँ उभिएर किन स्वर्गतिर हेरिरहन्छौ? स्वर्ग आरोहण हुनुभएका यी येशूलाई तिमीहरूले जसरी स्वर्गतिर गइरहेका देखेका छौ, उहाँ त्यसरी नै फर्कनुहुनेछ ।
“ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು,” ಎಂದು ಹೇಳಿದರು.
12 त्यसपछि तिनीहरू यरूशलेम नजिकै पर्ने जैतून डाँडाबाट यरूशलेमतिर फर्के, जुन एक शबाथ दिनको यात्रा जति टाढा थियो ।
ಅನಂತರ ಅಪೊಸ್ತಲರು ಯೆರೂಸಲೇಮಿಗೆ ಸಮೀಪದಲ್ಲಿದ್ದ ಓಲಿವ್ ಗುಡ್ಡದಿಂದ ಇಳಿದು ಯೆರೂಸಲೇಮಿಗೆ ಹಿಂದಿರುಗಿ ಹೋದರು. ಅದು ಸಬ್ಬತ್ ದಿನದಲ್ಲಿ ಪ್ರಯಾಣ ಮಾಡುವಷ್ಟು ದೂರದಲ್ಲಿತ್ತು.
13 तिनीहरू आइपुगेपछि तिनीहरू बसिरहेका माथिल्लो कोठामा गए । तिनीहरू पत्रुस, यूहन्ना, याकूब, अन्द्रियास, फिलिप, थोमा, बारथोलोमाइ, मत्ती, अल्फयसका छोरा याकूब, उग्रवादी सिमोन र यकूबका छोरा यहूदा थिए ।
ಅವರು ಹಿಂದಿರುಗಿದಾಗ, ತಾವು ವಾಸಿಸುತ್ತಿದ್ದ ಮಾಳಿಗೆ ಮೇಲಿನ ಕೋಣೆಯೊಳಗೆ ಹೋದರು. ಅವರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ; ಫಿಲಿಪ್ಪ, ತೋಮ; ಬಾರ್ತೊಲೊಮಾಯ ಮತ್ತಾಯ; ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಸೀಮೋನ ಮತ್ತು ಯಾಕೋಬನ ಮಗ ಯೂದ.
14 तिनीहरू एकै मनको भएर प्रार्थनामा यत्नपूर्वक लागिरहे । त्यहाँ येशूकी आमा मरियम लगायत अन्य महिलाहरू र उहाँका भाइहरू पनि थिए ।
ಅಲ್ಲಿ ಕೆಲವು ಮಹಿಳೆಯರು, ಯೇಸುವಿನ ತಾಯಿ ಮರಿಯಳು, ಯೇಸುವಿನ ಸಹೋದರರು, ಇವರೆಲ್ಲರು ನಿತ್ಯವೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿ ಸೇರುತ್ತಿದ್ದರು.
15 ती दिनहरूमा झण्डै १२० जना भाइका माझमा पत्रुस खडा भए र भने,
ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:
16 “भाइहरू हो, येशूलाई पक्राऊ गर्नलाई अगुवाइ गर्ने यहूदाको बारे दाऊदको मुखबाट पवित्र आत्माले पहिला नै बोल्नुभएको धर्मशास्त्र पुरा हुनु आवश्यक थियो ।
“ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು.
17 किनभने त्यो हामीमध्ये एक जना थियो र त्यसले आफ्नो सेवाकाइको हिस्सा प्राप्त गर्यो ।”
ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದು ಈ ಸೇವೆಯಲ್ಲಿ ಪಾಲುಗಾರನಾಗಿದ್ದನು.”
18 (यो मानिसले उसको दुष्ट कर्मको कमाइबाट एउटा खेत किन्यो । त्यसपछि, उसको टाउको तल पारेर खस्यो, उसको शरीर फुट्यो, र उसको सबै आन्द्रा-भुँडी निस्क्यो ।
ಯೂದನು, ದ್ರೋಹ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡನು; ಅಲ್ಲಿಯೇ ಅವನು ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತನು.
19 यो कुरा यरूशलेममा बस्ने सबैले सुने त्यसैले तिनीहरूले आफ्नो भाषामा त्यस खेतको नाम अखेल्दमा राखे जसको अर्थ “रगतको खेत” हुन्छ । )
ಯೆರೂಸಲೇಮಿನಲ್ಲಿದ್ದ ಪ್ರತಿಯೊಬ್ಬರಿಗೂ ಈ ವಿಷಯ ತಿಳಿಯಿತು, ಹೀಗೆ ಆ ಹೊಲವನ್ನು ಅವರು ತಮ್ಮ ಭಾಷೆಯಲ್ಲಿ “ಅಕೆಲ್ದಮಾ” ಎಂದು ಕರೆದರು. “ರಕ್ತದ ಹೊಲ” ಎಂದು ಅದರ ಅರ್ಥ.
20 “किनभने भजनसंग्रहको पुस्तकमा लेखिएको छ, ‘त्यसको खेत उजाड बनाइयोस् र त्यहाँ कोही एक जना पनि नबसोस्’ र ‘त्यसको नेतृत्वको पद अरू कसैले लिओस् ।’
ಕೀರ್ತನೆಗಳ ಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “‘ಅವನ ವಾಸಸ್ಥಾನವು ಹಾಳಾಗಲಿ, ಅದರಲ್ಲಿ ಯಾರೂ ವಾಸಿಸದಿರಲಿ,’ ಮತ್ತು, “‘ಅವನ ಹುದ್ದೆಯನ್ನು ಇನ್ನೊಬ್ಬನು ತೆಗೆದುಕೊಳ್ಳಲಿ,’
21 यसकारण यो आवश्यक छ कि, यूहन्नाको बप्तिस्माको दिनदेखि उहाँलाई हामीबाट माथि लगिएको दिनसम्म, प्रभु येशू हाम्रो माझमा भित्र-बाहिर गर्नुहुँदा सधैँभरि हामीलाई साथ दिने मानिसहरूमध्येबाट एक जना हामीसँगै उहाँको उहाँको पुनरुत्थानको साक्षी भएको हुनुपर्छ ।”
ಆದ್ದರಿಂದ, ಕರ್ತ ಆಗಿರುವ ಯೇಸು ನಮ್ಮೊಂದಿಗೆ ಇದ್ದ ಕಾಲವೆಲ್ಲಾ ನಮ್ಮ ಜೊತೆಯಲ್ಲಿರುವ ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಎಲ್ಲಾ ಸೇವಾ ಸಂಚಾರದಲ್ಲಿಯೂ ನಮ್ಮೊಂದಿಗೆ ಇದ್ದವನಾಗಿರಬೇಕು,
ಅಂದರೆ, ಯೋಹಾನನಿಂದ ದೀಕ್ಷಾಸ್ನಾನ ಪಡೆದ ದಿನದಿಂದ, ಯೇಸು ಸ್ವರ್ಗಕ್ಕೆ ಏರಿಹೋದ ಕಾಲದವರೆಗೆ ನಮ್ಮ ಸಂಗಡ ಇದ್ದವನಾಗಿರಬೇಕು.” ಅವನು ಯೇಸುವಿನ ಪುನರುತ್ಥಾನಕ್ಕೆ ನಮ್ಮೊಂದಿಗೆ ಸಾಕ್ಷಿಯಾಗಿರಬೇಕು.
23 तिनीहरूले बरब्बा भनिने योसेफ जसको नाउँ युस्तस पनि थियो र मतियास दुई जनालाई अगि सारे ।
ಆಗ ಅವರು ಇಬ್ಬರು ಪುರುಷರ ಹೆಸರುಗಳನ್ನು ಸೂಚಿಸಿದರು: ಬಾರ್ಸಬ ಎಂಬ ಹೆಸರಿನ ಯೋಸೇಫ, ಇವನನ್ನು ಯೂಸ್ತ ಎಂಬುದಾಗಿಯೂ ಕರೆಯುತ್ತಿದ್ದರು ಮತ್ತು ಇನ್ನೊಬ್ಬನು ಮತ್ತೀಯ ಎಂಬುವನು.
24 तिनीहरूले प्रार्थना गरे र भने, “तपाईं प्रभुले सबै मानसिहरूको हृदय जान्नु हुन्छ, त्यसैले यी दुई जनामध्ये कसलाई चुन्नुभएको छ प्रकट गर्नुहोस्
ಆಮೇಲೆ ಅವರು, “ಕರ್ತ ಯೇಸುವೇ, ಪ್ರತಿಯೊಬ್ಬರ ಹೃದಯವನ್ನು ನೀವು ತಿಳಿದವರು. ಈ ಸೇವೆಯಿಂದ ಯೂದನು ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ,
25 यहूदाले अपराध गरेर उसको ठाउँमा गएपछि खाली भएको यो सेवाकाइ र प्रेरितको पद तिनले लिऊन् ।”
ಈ ಅಪೊಸ್ತಲರ ಸೇವೆಯನ್ನು ವಹಿಸಿಕೊಳ್ಳುವುದಕ್ಕಾಗಿ, ನೀವು ಈ ಇಬ್ಬರಲ್ಲಿ ಯಾರನ್ನು ಆಯ್ಕೆ ಮಾಡಿಕೊಂಡಿರುವಿರಿ ಎಂಬುದನ್ನು ನಮಗೆ ತೋರಿಸಿರಿ,” ಎಂದು ಪ್ರಾರ್ಥನೆ ಮಾಡಿದರು.
26 उनीहरूले तिनीहरूको निम्ति चिट्ठा हाले; र चिट्ठा मतियासको नाममा पर्यो र तिनलाई एघार जना प्रेरितसँगै गनियो ।
ಅನಂತರ ಅವರು ಚೀಟು ಹಾಕಲು, ಅದು ಮತ್ತೀಯನ ಪಾಲಿಗೆ ಬಂದಿತು; ಆದ್ದರಿಂದ ಅವನು ಹನ್ನೊಂದು ಜನ ಅಪೊಸ್ತಲರೊಂದಿಗೆ ಸೇರಿದನು.