< दानिएल 2 >
1 नबूकदनेसरको शासनकालको दोस्रो वर्षमा, तिनले सपनाहरू देखे । तिनको मन विचलित भयो, र तिनी सुत्न सकेनन् ।
೧ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು.
2 त्यसपछि राजाले जादुगरहरू र मृतहरूसँग बोल्न सक्छौं भनेर दावी गर्नेहरूलाई बोलाए । उनले जोखना हेर्नेहरू र बुद्धिमान् मानिसहरूलाई पनि बोलाए । उनका सपनाहरूका अर्थ तिनीहरूले उनलाई बताऊन् भन्ने उनको इच्छा थियो । यसैले तिनीहरू भित्र आए र राजाको सामु खडा भए ।
೨ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು.
3 राजाले तिनीहरूलाई भने, “मैले एउटा सपना देखें, र त्यो सपनाको अर्थ के हुन सक्छ भनेर जान्नलाई मेरो मन विचलित भएको छ ।”
೩ರಾಜನು ಅವರಿಗೆ, “ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಿಸುತ್ತದೆ” ಎಂಬುದಾಗಿ ಹೇಳಿದನು.
4 तब ती बुद्धिमान् मानिसहरूले आरमेइक भाषामा राजालाई भने, “महाराजा, अमर रहून्! हामी तपाईंका सेवकहरूलाई उक्त सपना भन्नुहोस्, र हामी त्यसको अर्थ खोल्नेछौं ।”
೪ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು.
5 राजाले ती बुद्धिमान् मानिसहरूलाई जवाफ दिए, “निर्णय यो भएको छ । तिमीहरूले त्यो सपना मलाई प्रकट गरेनौ अनि त्यसको अर्थ खोलेनौ भने, तिमीहरूका शरीरहरू टुक्रा-टुक्रा पारिनेछन् र तिमीहरूका घरहरू भग्नावशेषको थुप्रो हुनेछन् ।
೫ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ, “ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಬಿಡುವೆನು.
6 तर तिमीहरूले मलाई सपना र त्यसको अर्थ भन्यौ भने, तिमीहरूले मबाट उपहारहरू, इनाम अनि उच्च-सम्मान पाउनेछौ । यसैले उक्त सपना र त्यसको अर्थ मलाई भन ।”
೬ನೀವು ಆ ಕನಸನ್ನೂ, ಅದರ ಅರ್ಥವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನ ಮತ್ತು ಬಹುಮಾನಗಳೂ, ವಿಶೇಷ ಸನ್ಮಾನಗಳೂ ಲಭಿಸುವವು. ಆದಕಾರಣ ಆ ಕನಸನ್ನೂ, ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ” ಎಂದು ಹೇಳಿದನು.
7 तिनीहरूले फेरि जवाफ दिए र यसो भने, “महाराजाले हामी आफ्ना सेवकहरूलाई त्यो सपना भन्नुहोस् र तपाईंलाई हामी त्यसको अर्थ भन्नेछौं ।”
೭ಪಂಡಿತರು ಉತ್ತರವಾಗಿ, “ರಾಜನು ತನ್ನ ದಾಸರಿಗೆ ಕನಸನ್ನು ತಿಳಿಸಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು” ಎಂಬ ಉತ್ತರವನ್ನೇ ಪುನಃ ಕೊಟ್ಟರು.
8 राजाले जवाफ दिए, “मलाई यो निश्चय थाहा छ, कि तिमीहरू धेरै समय चाहन्छौ किनकी यस विषयमा मेरो निर्णय कति दृढ छ भनी तिमीहरूले देखेका छौ।
೮ಅದಕ್ಕೆ ರಾಜನು, “ನೀವು ಆ ಕನಸನ್ನು ನನಗೆ ತಿಳಿಸದಿದ್ದರೆ ಮರಣದಂಡನೆಯ ನಿಯಮವೇ ನಿಮಗೆ ಗತಿಯಾಗುವುದು ಎಂಬ ನನ್ನ ಮಾತು ಖಂಡಿತವೆಂದು ನೀವು ತಿಳಿದುಕೊಂಡು ಕಾಲಹರಣ ಮಾಡುತ್ತಿದ್ದೀರಿ, ಇದು ನನಗೆ ಚೆನ್ನಾಗಿ ಗೊತ್ತು.
9 तर तिमीहरूले मलाई सपना भनेनौ भने, तिमीहरूका निम्ति एउटै मात्र सजाय छ । मैले आफ्नो मन नबद्लेसम्म तिमीहरूले झुटो र छलपूर्ण शब्दहरू मलाई भन्ने तयारी गर्नलाई तिमीहरूले मिलेर निर्णय गरेका छौ । यसैले, मलाई सपना बताओ, र त्यसको अर्थ तिमीहरूले भन्न सक्छौ भनी मलाई थाहा हुनेछ ।”
೯ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಒಪ್ಪಂದ ಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಆದುದರಿಂದ ನೀವು ಅದರ ಅರ್ಥವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು.
10 ती बुद्धिमान् मानिसहरूले राजालाई जवाफ दिए, “महाराजाको माग पुरा गर्नलाई यस पृथ्वीमा कुनै मानिस छैन । कुनै यस्तो महान् र शक्तिशाली राजा पनि छैन जसले कुनै जादुगर, वा मृतसँग बोल्न सक्छु भनेर दावी गर्ने कुनै व्यक्ति, वा कुनै बुद्धिमान् मानिसबाट यस्तो कुराको माग गरेका छन् ।
೧೦ಆಗ ಆ ಪಂಡಿತರು ರಾಜನ ಸನ್ನಿಧಿಯ ಮುಂದೆ, “ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾರೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸರನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ.
11 महाराजाले जे माग गर्नुभएको छ त्यो अत्यन्तै कठिन छ, र यो कुरा महाराजालाई देवहरूले बाहेक अरू कसैले बताउन सक्दैन, र तिनीहरू मानिसहरूका बिचमा बस्दैनन् ।”
೧೧ರಾಜನು ಕೇಳುವ ಸಂಗತಿಯು ಅತಿ ಕಷ್ಟವಾದದ್ದು. ನರಜನ್ಮದವರ ಮಧ್ಯೆ ವಾಸಿಸುವ ದೇವರುಗಳೇ ಹೊರತು ಇನ್ಯಾರೂ ರಾಜನ ಸಮ್ಮುಖದಲ್ಲಿ ಅದನ್ನು ತಿಳಿಸಲಾರರು” ಎಂದು ಉತ್ತರಕೊಟ್ಟರು.
12 यस कुराले राजालाई रिस उठायो र अत्यन्तै क्रोधित बनायो, र तिनले बेबिलोनमा भएका सबै बुद्धिमान् मानिसहरूलाई मार्ने एउटा आदेश दिए ।
೧೨ಇದನ್ನು ಕೇಳಿ, ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.
13 यसैले आफूमा भएका बुद्धिको निम्ति प्रख्यात भएका सबै जनालाई मार्नको निम्ति उर्दी जारी भयो । यही उर्दीको कारणले, तिनीहरूले दानिएल र तिनका साथीहरूलाई पनि खोजे ताकि तिनीहरूलाई मार्न सकियोस् ।
೧೩ಕೂಡಲೆ ಆ ಆಜ್ಞೆಯು ಪ್ರಕಟವಾಯಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು; ದಾನಿಯೇಲನನ್ನೂ, ಅವನ ಸ್ನೇಹಿತರನ್ನೂ ಕೊಲ್ಲುವುದಕ್ಕೆ ಹುಡುಕಿದರು.
14 तब बेबिलोनका आफूमा भएको बुद्धिको निम्ति प्रख्यात सबै जनालाई मार्नको निम्ति आएका राजाका अङ्गरक्षकका कमान्डर अर्योकलाई दानिएलले विवेकपूर्ण र बुद्धिमान् किसिमले जवाफ दिए ।
೧೪ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬೆಲಿನ ವಿದ್ವಾಂಸರ ಸಂಹಾರಕ್ಕೆ ಹೊರಟಾಗ, ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತನಾಡಿ,
15 दानिएलले राजाका कमान्डरलाई सोधे, “किन महाराजाबाट तुरुन्तै यस्तो उर्दी आयो?” अनि अर्योकले जे भएको थियो त्यो दानिएललाई बताए ।
೧೫“ಈ ರಾಜಾಜ್ಞೆಯು ಏಕೆ ಇಷ್ಟು ಉಗ್ರವಾಗಿದೆ?” ಎಂದು ಕೇಳಲು ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.
16 त्यसपछि दानिएल भित्र गए र राजासँग भेट गर्न दिन अनुरोध गरे जसले गर्दा तिनले सपनाको अर्थ राजालाई बताउन सकून्।
೧೬ಆ ಮೇಲೆ ದಾನಿಯೇಲನು ಅರಮನೆಗೆ ಬಂದು, “ನನಗೆ ಸಮಯವನ್ನು ಕೊಟ್ಟರೆ ನಾನು ಆ ಕನಸಿನ ಅರ್ಥವನ್ನು ರಾಜನಿಗೆ ವಿವರಿಸುವೆನು” ಎಂದು ಅರಿಕೆ ಮಾಡಿದನು.
17 त्यसपछि दानिएल आफ्नो घरमा गए र जे भएको थियो त्यो हनन्याह, मीशाएल र अजर्याहलाई बताए ।
೧೭ಬಳಿಕ ದಾನಿಯೇಲನು ತನ್ನ ಮನೆಗೆ ಹೋಗಿ ಹನನ್ಯ, ಮೀಶಾಯೇಲ, ಅಜರ್ಯ ಎಂಬ ತನ್ನ ಸ್ನೇಹಿತರಿಗೆ,
18 यो रहस्यको विषयमा स्वर्गका परमेश्वरको कृपा खोज्न तिनले उनीहरूलाई अनुरोध गरे, ताकि उनीहरू र तिनी बेबिलोनका अन्य ख्यातिप्राप्त बुद्धिमान् मानिसहरूसँगै नमारिऊन् ।
೧೮“ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ” ಎಂದನು.
19 त्यो रात एउटा दर्शनमा दनिएललाई त्यो रहस्य प्रकट गरियो । तब दानिएलले स्वर्गका परमेश्वरको प्रशंसा गरे,
೧೯ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು,
20 र यसो भने, “परमेश्वरको नाउँको सदासर्वदा प्रशंसा होस्, किनकि बुद्धि र शक्ति उहाँकै हुन् ।
೨೦“ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಸ್ತುತಿಸ್ತೋತ್ರ ಉಂಟಾಗಲಿ! ಜ್ಞಾನ ತ್ರಾಣಗಳು ಆತನವುಗಳೇ.
21 उहाँले नै समय र ऋतुहरू परिवर्तन गर्नुहुन्छ । उहाँले राजाहरूलाई हटाउनुहुन्छ र राजाहरूलाई सिंहासनमा राख्नुहुन्छ । उहाँले बुद्धिमान्लाई बुद्धि र समझदारहरूलाई ज्ञान दिनुहुन्छ ।
೨೧ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.
22 उहाँले गहिरा र लुकेका कुराहरू प्रकट गर्नुहुन्छ किनभने अन्धकारमा के छ भनी उहाँले जानुहुन्छ र उज्यालोले उहाँसँग वास गर्छ ।
೨೨ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.
23 हे मेरा पुर्खाहरूका परमेश्वर, म तपाईंलाई धन्यावाद दिन्छु र तपाईंको प्रशंसा गर्छु, किनकि तपाईंले मलाई बुद्धि र शक्ति दिनुभयो । हामीले तपाईंसँग जे बिन्ती गर्यौं त्यो तपाईंले मलाई प्रकट गर्नुभएको छ, राजाको चिन्ताको विषयलाई तपाईंले हामीलाई जानकारी गराउनुभएको छ ।”
೨೩ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ” ಎಂದನು.
24 त्यसपछि दानिएल अर्योकलाई भेट्न गए (जसलाई बेबिलोनका सबै बुद्धिमान्लाई मार्नलाई राजाले नियुक्त गरेका थिए) । तिनी गए र उनलाई भने, “बेबिलोनका बुद्धिमान् मानिसहरूलाई नमार्नुहोस् । मलाई राजाकहाँ लानुहोस् र राजाको सपनाको अर्थ म उहाँलाई खोलिदिनेछु ।”
೨೪ನಂತರ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ, “ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು” ಎಂದು ಹೇಳಿದನು.
25 त्यसपछि अर्योकले तुरुन्तै दानिएललाई राजाको सामु लगे र यसो भने, “मैले यहूदाका निर्वासितहरूका बिचमा एक जना मानिस भेट्टाएको छु जसले, महाराजाको सपनाको अर्थ खोल्नेछ ।”
೨೫ಕೂಡಲೆ ಅರ್ಯೋಕನು ದಾನಿಯೇಲನನ್ನು ರಾಜನ ಬಳಿಗೆ ಶೀಘ್ರವಾಗಿ ಕರೆದುಕೊಂಡು ಹೋಗಿ, “ರಾಜನೇ, ಕನಸಿನ ಅಭಿಪ್ರಾಯವನ್ನು ನಿನಗೆ ತಿಳಿಸಬಲ್ಲವನೊಬ್ಬನು ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ನನಗೆ ಸಿಕ್ಕಿದ್ದಾನೆ” ಎಂದು ಅರಿಕೆಮಾಡಿದನು.
26 राजाले दानिएललाई (जसको नाउँ बेलतसजर थयो) सोधे, “मैले देखेको सपना र त्यसको अर्थ के तिमी मलाई भन्न सक्छौ?”
೨೬ರಾಜನು ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನನ್ನು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ?” ಎಂದು ಕೇಳಿದನು.
27 दानिएलले राजालाई जवाफ दिए र यसो भने, “राजाले सोध्नुभएको रहस्यलाई बुद्धि भएकाहरूले प्रकट गर्न सक्दैनन्, न त मृतहरूसँग बोल्न सक्छौं भनेर दावी गर्नेहरूले, न त जादुगरहरूले र ज्योतिषीहरूले नै गर्न सक्छन् ।
೨೭ಅದಕ್ಕೆ ದಾನಿಯೇಲನು ರಾಜನನ್ನು ಕುರಿತು, “ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು.
28 तापनि, त्यहाँ एक यस्तो परमेश्वर हुनुहुन्छ जो स्वर्गमा वास गर्नुहुन्छ, जसले रहस्यहरू प्रकट गर्नुहुन्छ र आउने दिनहरूमा के हुनेछ भनी उहाँले हजुर महाराजा नबूकदनेसरलाई प्रकट गर्नुभएको छ । हजुर आफ्नो ओछ्यानमा पल्टनुहुँदा हजुरले देख्नुभएको सपना र हजुरका मनका दर्शनहरू यसप्रकार थिए ।
೨೮ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.
29 महाराजा, हजुरको सम्बन्धमा, ओछ्यानमा हुँदा हजुरमा भएका विचारहरू हुन आउने कुराहरूका बारेमा थिए, र भविष्यमा के हुँदैछ भनेर रहस्य खोल्नुहुनेले नै हजुरलाई प्रकट गर्नुभएको छ ।
೨೯“ರಾಜನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನಾಗುವುದೋ? ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ; ರಹಸ್ಯಗಳನ್ನು ವ್ಯಕ್ತಗೊಳಿಸುವಾತನು ಮುಂದೆ ಸಂಭವಿಸುವುದನ್ನು ನಿನಗೆ ಗೋಚರಮಾಡಿದ್ದಾನೆ.
30 मेरो बारेमा, अरू कुनै जीवित मानिसभन्दा धेरै बुद्धि मसँग भएको कारण मलाई त्यो रहस्य प्रकट भएको होइन । हजुर, महाराजाले त्यसको अर्थ बुझ्न सक्नुभएको होस्, र आफूभित्रका गहिरा कुराहरू हजुरले जान्न सक्नुभएको होस् भनेर हजुरलाई त्यो रहस्य प्रकट भएको हो ।
೩೦ನಾನೇ ಎಲ್ಲಾ ಮನುಷ್ಯರಿಗಿಂತ ಹೆಚ್ಚು ಬುದ್ಧಿವಂತನಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದು ಬರಲಿ ಎಂದು ಈ ರಹಸ್ಯವು ನನಗೂ ಪ್ರಕಟವಾಗಿದೆ.
31 महाराजा, हजुरले माथि हेर्नुभयो र हजुरले एउटा ठुलो सालिक देख्नुभयो । त्यो धेरै शक्तिशाली र उज्यालो सालिक हजुरको सामु खडा भयो । त्यसको चमक डरलाग्दो थियो ।
೩೧“ರಾಜನೇ, ನೀನು ಕಂಡದ್ದು ಆಹಾ, ಅದ್ಭುತಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು.
32 त्यस सालिकको शिर निक्खर सुनले बनेको थियो । त्यसको छाती र हातहरू चाँदीका थिए । त्यसको पेट र तिघ्राहरू काँसाका थिए,
೩೨ಆ ಪ್ರತಿಮೆಯ ತಲೆಯು ಅಪರಂಜಿ, ಎದೆತೋಳುಗಳು ಬೆಳ್ಳಿ, ಹೊಟ್ಟೆಸೊಂಟಗಳು ತಾಮ್ರ,
33 र त्यसका गोडाहरू फलामका थिए । त्यसका पाउहरू केही फलाम र केही माटोले बनेका थिए ।
೩೩ಕಾಲುಗಳು ಕಬ್ಬಿಣ, ಪಾದಗಳು ಕಬ್ಬಿಣ ಮತ್ತು ಮಣ್ಣು.
34 हजुरले माथि हेर्नुभयो, र एउटा ढुङ्गो काटियो । तापनि त्यो मानिसको हातले होइन, अनि फलाम र माटोले बनेको सालिकको पाउहरूमा त्यो ठोक्कियो, र त्यसले ती चकनाचूर पार्यो ।
೩೪“ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.
35 तब फलाम, माटो, काँसा, चाँदी र सुन सबै सँगै टुक्रा-टुक्रा भए र ती ग्रीष्म ऋतुमा अन्न चुट्ने खलाका भुसझैं भए । बतासले तिनलाई उडायो र त्यहाँ तिनका कुनै नाउँ निशाना रहेन । तर त्यो सालिकलाई हिर्काउने ढुङ्गोचाहिं एउटा ठुलो पर्वत बन्यो र त्यसले सम्पूर्ण पृथ्वीलाई ढाक्यो ।
೩೫ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.
36 हजुरको सपना यही थियो । अब हामी महाराजालाई अर्थ बताउँछौं।
೩೬“ಕನಸು ಇದೇ; ಇದರ ಅರ್ಥವನ್ನೂ ನಿನ್ನಲ್ಲಿ ಅರಿಕೆಮಾಡುತ್ತೇನೆ.
37 महाराजा, हजुर राजाहरूका महाराजा हुनुहुन्छ जसलाई स्वर्गका परमेश्वरले राज्य, शक्ति, बल र सम्मान दिनुभएको छ ।
೩೭ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.
38 मानवजातिहरू बस्ने ठाउँ उहाँले हजुरका हातमा दिनुभएको छ । जमिनका पशुहरू र आकाशका चराहरू उहाँले हजुरका हातमा दिनुभएको छ, र ती माथि हजुरलाई शासन गर्ने बनाउनुभएको छ । हजुर नै त्यस सालिकको सुनको शिर हुनुहुन्छ ।
೩೮ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ.
39 हजुरपछि, अर्को एउटा राज्य खडा हुनेछ जुन हजुरको भन्दा कमजोर हुनेछ, र त्यसपछि अझै काँसाको अर्को तेस्रो राज्यले सबै पृथ्वीमाथि शासन गर्नेछ ।
೩೯“ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು.
40 त्यहाँ फलामझैं बलियो चौथो राज्य हुनेछ, किनकि फलामले अरू कुराहरूलाई टुक्रा-टुक्रा पार्छ र हरेक कुरालाई चकनाचूर पार्छ । त्यसले यी सबै कुराहरूलाई चकनाचूर पार्नेछ र कुल्चनेछ ।
೪೦“ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದು ಹಾಕುತ್ತದಷ್ಟೆ; ಸಕಲವನ್ನೂ ಧ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ಧ್ವಂಸಮಾಡುವುದು.
41 जसरी हजुरले देख्नुभयो, पाउहरू र बुढी औंलाहरू केही पाकेका माटो र केही फलामले बनेका थिए, त्यसरी नै त्यो एउटा विभाजित राज्य हुनेछ । त्यसमा केही फलामको शक्ति हुनेछ, जसरी हजुरले फलाम र नरम माटो मिसिएको देख्नुभयो ।
೪೧“ಪಾದಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ, ಒಂದಂಶವು ಕಬ್ಬಿಣವೂ ಆಗಿದ್ದುದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನ ಭಿನ್ನವಾಗಿರುವುದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ಮಿಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವುದು.
42 जसरी पाउहरूका बुढी औंलाहरू केही फलाम र केही माटोले बनेका थिए, त्यसरी नै त्यो राज्य केही शक्तिशाली र केही सजिलै टुक्रिने किसिमको हुनेछ ।
೪೨ಕಾಲ್ಬೆರಳುಗಳ ಒಂದಂಶವು ಕಬ್ಬಿಣ, ಒಂದಂಶವು ಮಣ್ಣು ಆಗಿದ್ದ ಹಾಗೆ ಆ ರಾಜ್ಯದ ಒಂದಂಶವು ಗಟ್ಟಿ, ಒಂದಂಶವು ಜೊಂಡಾಗಿರುವುದು.
43 जसरी हजुरले फलामलाई नरम माटोसँग मिसिएको देख्नुभयो, त्यसरी नै मानिसहरू पनि मिश्रित हुनेछन् । तिनीहरू मिलेर बस्नेछैनन्, जसरी फलाम माटोसँग मिल्न सक्दैन ।
೪೩ಕಬ್ಬಿಣವು ಜೇಡಿಮಣ್ಣಿನೊಂದಿಗೆ ಬೆರೆತಿರುವುದನ್ನು ನೀನು ನೋಡಿದ ಮೇರೆಗೆ, ಆ ರಾಜ್ಯಾಗಳ ಸಂತತಿ ಸಂಬಂಧದಿಂದ ಬೆರೆತುಕೊಳ್ಳುವವು. ಆದರೆ ಕಬ್ಬಿಣವು ಮಣ್ಣಿನೊಂದಿಗೆ ಹೇಗೆ ಕೂಡಿಕೊಳ್ಳುವುದಿಲ್ಲವೋ ಹಾಗೆ ಅವು ಒಂದಕ್ಕೊಂದು ಹೊಂದಿಕೊಳ್ಳುವುದಿಲ್ಲ.
44 ती राजाहरूको समयमा, स्वर्गका परमेश्वरले एउटा राज्य खडा गर्नुहुनेछ, जुन कहिल्यै नाश पारिनेछैन, नत कुनै अर्को जातिद्वारा परास्त हुनेछ । त्यसले अरू राज्यहरूलाई टुक्रा-टुक्रा पार्नेछ र तिनीहरू सबैको अन्त्य गर्नेछ, र त्योचाहिं सदाको निम्ति रहनेछ ।
೪೪“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
45 जसरी पर्वतबाट एउटा ढुङ्गो काटिएको हजुरले देख्नुभयो, तर मानिसको हातले होइन । त्यसले फलाम, काँसा, माटो, चाँदी र सुनलाई टुक्रा-टुक्रा पार्यो । महाराजा, महान् परमेश्वरले हजुरलाई यसपछि के हुनेछ भनेर बताउनुभएको छ । यो सपना साँचो हो र त्यसको अर्थ विश्वासयोग्य छ ।”
೪೫ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.
46 राजा नबूकदनेसर दानिएलको अगि घोप्टो परे र तिनको सम्मान गरे । तिनलाई भेटी चढाइयोस् र तिनको निम्ति धूप बालियोस् भनेर तिनले आज्ञा दिए ।
೪೬ಆಗ ರಾಜನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, “ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ ಧೂಪ ಹಾಕಬೇಕು” ಎಂದು ಆಜ್ಞಾಪಿಸಿದನು.
47 राजाले दानिएललाई भने, “साँच्चै नै तिम्रा परमेश्वरचाहिं देवताहरूका परमेश्वर, राजाहरूका परमप्रभु हुनुहुन्छ, र उहाँले रहस्यहरू प्रकट गर्नुहुन्छ, किनकि तिमीले यो रहस्य प्रकट गर्न सफल भएका छौ ।”
೪೭ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.
48 अनि राजाले दानिएललाई उच्च सम्मान दिए र तिनलाई धेरै असल उपहारहरू दिए । तिनले उनलाई बेबिलोनको सम्पूर्ण प्रदेशमाथि शासक बनाए । बेबिलोनका सबैभन्दा ज्ञानी मानिसहरूमाथि दानिएल प्रमुख गभर्नर भए ।
೪೮ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು.
49 दानिएलले राजासँग एउटा अनुरोध गरे, र राजाले शद्रक, मेशक, र अबेद्नगोलाई बेबिलोनको प्रदेशमाथि प्रशासकहरू नियुक्त गरे । तर दानिएल राजाको दरवारमा नै रहे ।
೪೯ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನು ಅರಮನೆಯಲ್ಲಿ ಉಳಿದನು.