< दानिएल 3 >

1 नबूकदनेसर राजाले तिस मिटर अग्लो र तिन मिटर चौडा एउटा सुनको मूर्ति बनाए । तिनले त्यो बेबिलोन प्रदेशमा दूराको मैदानमा खडा गरे ।
ಅರಸನಾದ ನೆಬೂಕದ್ನೆಚ್ಚರನು ಸುಮಾರು 27 ಮೀಟರ್ ಎತ್ತರ ಮತ್ತು ಸುಮಾರು ಎರಡೂವರೆ ಮೀಟರ್ ಅಗಲ ಇರುವ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬಿಲೋನ್ ಪ್ರಾಂತದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
2 त्यसपछि नबूकदनेसरले आफूले स्थापना गरेका मूर्ति अर्पण गर्नका निम्ति प्रदेशका गभर्नरहरू, क्षेत्रीय गभर्नरहरू, र स्थानीय गभर्नरहरूका साथै सल्लाहकारहरू, कोषाध्यक्षहरू, न्यायाधीशहरू, जिल्‍ला अधिकारीहरू र सबै उच्‍च पदस्‍त अधिकारीहरूलाई भेला गराउन सन्देशहरू पठाए ।
ಆಮೇಲೆ ನೆಬೂಕದ್ನೆಚ್ಚರನು ಉಪರಾಜರನ್ನೂ ರಾಜ್ಯಪಾಲರನ್ನೂ ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಖಜಾಂಚಿದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ಕರೆಯಿಸಿದನು.
3 तब प्रदेशका गभर्नरहरू, क्षेत्रीय गभर्नरहरू, र स्थानीय गभर्नरहरूका साथै सल्लाहकारहरू, कोषाध्यक्षहरू, न्यायाधीशहरू, जिल्‍ला अधिकारीहरू र सबै उच्‍च पदस्‍त अधिकारीहरू नबूकदनेसरले स्थापना गरेका मूर्ति अर्पण गर्नका निम्ति एकसाथ भेला भए । तिनीहरू त्यसको सामु खडा भए ।
ಆಗ ಉಪರಾಜರು, ರಾಜ್ಯಪಾಲರು, ಅಧಿಕಾರಸ್ಥರು, ನ್ಯಾಯಾಧಿಪತಿಗಳು, ಖಜಾಂಚಿದವರು, ಸಲಹೆಗಾರರು, ಪಂಡಿತರು, ಎಲ್ಲಾ ಪ್ರಾಂತಗಳ ಅಧಿಕಾರಿಗಳು ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ಕೂಡಿಬಂದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತರು.
4 तब उद्घोषकले ठुलो सोरले कराएर भन्‍यो, “जाति-जातिका मानिसहरू र धेरै भाषाहरू बोल्‍ने, तपाईंहरूलाई यो हुकुम छ,
ಆಗ ಘೋಷಣೆ ಮಾಡುವವರು ಗಟ್ಟಿಯಾಗಿ ಕೂಗಿ, “ಪ್ರಜೆಗಳೇ, ಜನಾಂಗಗಳೇ, ವಿವಿಧ ಭಾಷೆಯವರೇ
5 कि तपाईंहरूले नरसिङ्गा, बाँसुरी, वीणा, सारङ्गी, सितार, न्याउली-बाजा, र सबै किसिमका बाजाका धुन सुन्‍ने बित्तिकै तपाईंहरू सबै जनाले आफूलाई भुइँमा घोप्टो पार्नुपर्छ अनि नबूकदनेसर महाराजाले स्थापना गर्नुभएको सुनको मूर्तिको सामु लम्‍पसार हुनुपर्छ ।
ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳಿದ ಕೂಡಲೇ, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.
6 जसले भुइँमा घोप्टो पार्दैन र आराधना गर्दैन, उसलाई दन्किरहेको आगोको भट्टीमा फालिनछ ।”
ಯಾರು ಅಡ್ಡಬೀಳದೆ, ನಮಸ್ಕರಿಸದೆ ಇರುವರೋ ಅಂಥವರನ್ನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಲಾಗುವುದು. ಇದು ರಾಜಾಜ್ಞೆ,” ಎಂದನು.
7 यसैले जब मानिसहरूले नरसिङ्गा, बाँसुरी, वीणा, सारङ्गी, सितार, न्याउली-बाजा, र सबै किसिमका बाजाका धुन सुने, सबै मानिसहरू जातिहरू र भाषा बोल्नेहरू भुइँमा घोप्टो परे र नबूकदनेसर राजाले स्थापना गरेका सुनको मूर्तिको सामु आफूलाई लम्‍पसार भए ।
ಆದ್ದರಿಂದ ಜನರೆಲ್ಲರು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ಶಬ್ದವನ್ನು ಕೇಳಿದ ಕೂಡಲೇ, ಎಲ್ಲಾ ಪ್ರಜೆಗಳು ಜನಾಂಗಗಳು ವಿವಿಧ ಭಾಷೆಯವರು ಅಡ್ಡಬಿದ್ದು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.
8 यति बेला केही कल्‍दीहरू आए र यहूदीहरूको विरुद्धमा अभियोगहरू लगाए ।
ಆ ಸಮಯದಲ್ಲಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸಲು ಅರಸನ ಸನ್ನಿಧಿಗೆ ಬಂದು
9 तिनीहरूले नबूकदनेसर राजालाई यसो भने, “महाराजा, अमर रहून्!
ಅರಸನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು.
10 हजुर महाराजाले नरसिङ्गा, बाँसुरी, वीणा, सारङ्गी, सितार, न्याउली-बाजा, र सबै किसिमका बाजाका धुन सुन्‍ने सबै मानिसहरू घोप्टो हुनुपर्छ र त्यो सुनको मूर्तिको सामु आफूलाई लम्पसार पार्नुपर्छ भनेर उर्दी निकाल्नुभएको छ ।
ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾಗಸ್ವರ ಮುಂತಾದ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿದಾಗ ಪ್ರತಿಯೊಬ್ಬ ಮನುಷ್ಯನು ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ ಅರಸನು ಆಜ್ಞೆಯನ್ನು ಹೊರಡಿಸಿದ್ದಾನೆ.
11 जसले भुइँमा घोप्टो पार्दैन र आराधना गर्दैन, उसलाई त्‍यसै बेला नै दन्किरहेको आगोको भट्टीमा फालिनुपर्छ ।
ಅಡ್ಡಬೀಳದೆ ಆರಾಧಿಸದೆ ಇರುವವರನ್ನು ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಬೇಕೆಂದು ಆಜ್ಞೆಮಾಡಿದಿಯಲ್ಲಾ?
12 यति बेला त्यहाँ कोही यहूदीहरू छन् जसलाई हजुरले बेबिलोनको प्रदेशका मामिलाहरू हेर्न नियुक्त गर्नुभएको छ । तिनीहरूका नाउँ शद्रक, मेशक, र अबेद्‍नगो हुन् । हे महाराजा, यी मानिसहरूले हजुरका कुरामाथि ध्यान दिंदैनन् । तिनीहरूले हजुरका देवताहरूलाई दण्डवत् गर्दैनन् वा हजुरले स्थापना गर्नुभएको सुनको मूर्तिको सामु आफूलाई लम्‍पसार पार्दैनन् ।”
ಆದರೆ ನೀನು ಬಾಬಿಲೋನಿನ ಪ್ರಾಂತದ ಕೆಲಸಗಳ ಮೇಲೆ ಇಟ್ಟಿರುವ ಯೆಹೂದ್ಯರಾದ ಕೆಲವರು ಎಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರು ನಿನ್ನನ್ನು ಲಕ್ಷಿಸುವುದಿಲ್ಲ. ಅವರು ನಿನ್ನ ದೇವರುಗಳನ್ನಾಗಲಿ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನಾದರೂ ಆರಾಧಿಸುವುದಿಲ್ಲ,” ಎಂದು ಹೇಳಿದರು.
13 त्यसपछि नबूकदनेसर रिस र क्रोधले चूर भए अनि शद्रक, मेशक, र अबेद्‍नगोलाई आफूकहाँ ल्याउने हुकुम दिए । यसैले तिनीहरूले यी मानिसहरूलाई राजाको सामु ल्याए ।
ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆತಂದರು.
14 नबूकदनेसरले तिनीहरूलाई सोधे, “ए शद्रक, मेशक, र अबेद्‍नगो, के तिमीहरूले मेरा देवताहरूको पुजा नगर्ने वा मैले स्थापना गरेको सुनको मूर्तिको सामु आफूलाई लम्‍पसार नपार्ने निर्णय गरेका छौ?
ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇದ್ದೀರಿ ಎಂಬ ಮಾತು ನಿಜವೋ?
15 अब तिमीहरूले नरसिङ्गा, बाँसुरी, वीणा, सारङ्गी, सितार, न्याउली-बाजा, र सबै किसिमका बाजाका धुन सुन्‍ने बित्तिकै घोप्टो पर्‍यौ र मैले बनाएको मूर्तिको सामु लम्‍पसार पर्‍यौ भने, सबै कुरा ठिक हुनेछ । तर तिमीहरूले पुजा गरेनौ भने, तिमीहरू तुरुन्‍तै दन्किरहेको आगोको भट्टीमा फालिनेछौ । त्‍यो कुन देवता होला जसले तिमीहरूलाई मेरा हातबाट बचाउन सक्‍छ?”
ಈಗ ನೀವು ಸಿದ್ಧವಾಗಿದ್ದು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಆರಾಧಿಸದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಲಾಗುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು?” ಎಂದು ಹೇಳಿದನು.
16 शद्रक, मेशक, र अबेद्‍नगोले राजालाई जवाफ दिए, “हे नबूकदनेसर, हामीले हजुरलाई यस बारेमा जवाफ दिनु आवश्यक छैन ।
ಆಗ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಅರಸನಿಗೆ ಉತ್ತರವಾಗಿ, “ನೆಬೂಕದ್ನೆಚ್ಚರನೇ, ಈ ವಿಷಯದ ಬಗ್ಗೆ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.
17 त्यहाँ कुनै जवाफ छ भने, त्यो यही हो, कि हामीले सेवा गर्ने परमेश्‍वरले हामीलाई दन्किरहेको आगोको भट्टीबाट सुरक्षित राख्‍न सक्‍नुहुन्छ, र उहाँले नै हामीलाई हजुर महाराजाको हातबाट बचाउनुहुनेछ ।
ಒಂದು ವೇಳೆ ಹಾಗೆ ಇದ್ದರೆ, ನಿಶ್ಚಯವಾಗಿ ನಾವು ಆರಾಧಿಸುವ ನಮ್ಮ ದೇವರು ಉರಿಯುವ ಬೆಂಕಿಯ ಕುಲುಮೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥರಾಗಿದ್ದಾರೆ. ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವರು.
18 तर उहाँले त्यस्तो गर्नुभएन भने पनि, महाराजालाई यो थाहा होस्, कि हामी हजुरका देवताहरूको पुजा गर्नेछैनौं र हजुरले स्थापना गर्नुभएको सुनको मूर्तिको सामु आफैंलाई लम्‍पसार पार्नेछैनौं ।”
ಆದರೆ ಒಂದು ವೇಳೆ ಅವರು ತಪ್ಪಿಸದಿದ್ದರೂ, ಅರಸನೇ ನಾವು ನಿನ್ನ ದೇವರುಗಳನ್ನು ಸೇವಿಸುವುದಿಲ್ಲವೆಂದೂ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲವೆಂದೂ ನಿನಗೆ ತಿಳಿದಿರಲಿ,” ಎಂದರು.
19 तब नबूकदनेसर रिसले चूर भए । शद्रक, मेशक, र अबेद्‍नगोप्रति तिनको अनुहार भाव बद्लियो । अनि तिनले आगोको भट्टीलाई साधारण रूपमा तताउनेभन्दा सात गुणा बढी तताउने आदेश दिए ।
ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ, ಅವನ ಮುಖಭಾವವು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಆ ಕುಲುಮೆಯನ್ನು ಸಾಧಾರಣವಾದ ಉರಿಗಿಂತ ಏಳರಷ್ಟು ಹೆಚ್ಚಾಗಿ ಉರಿ ಹಾಕಬೇಕೆಂದು ಆಜ್ಞಾಪಿಸಿದನು.
20 तब तिनले आफ्ना सेनामा अत्यन्तै बलिया मानिसहरूलाई शद्रक, मेशक, र अबेद्‍नगोलाई बाँध्‍न र दन्किरहेको आगोको भट्टीमा फाल्न आदेश दिए ।
ಇದಲ್ಲದೆ ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾದವರಿಗೆ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು.
21 तिनीहरूका वस्‍त्रहरू, अलखाहरू, फेटाहरू र अन्य लुगाहरूसमेत तिनीहरूलाई बाँधियो, र तिनीहरूलाई दन्किरहेको भट्टीमा फालियो ।
ಆಗ ಆ ಮನುಷ್ಯರು ತಮ್ಮ ಶಲ್ಯ, ಇಜಾರು, ಮುಂಡಾಸ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡವರಾಗಿರುವಾಗ, ಧಗಧಗನೆ ಉರಿಯುವ ಬೆಂಕಿಯ ಕುಲುಮೆಯಲ್ಲಿ ಅವರನ್ನು ಹಾಕಿದರು.
22 राजाको आज्ञालाई सख्त रूपमा पालना गरिएको हुनाले र त्यो भट्टी अत्यन्तै तातो भएको हुनाले शद्रक, मेशक, र अबेद्‍नगोलाई त्यहाँ लाने मानिसहरू आगोको ज्वालाले मार्‍यो ।
ಅರಸನ ಆಜ್ಞೆಯು ಅವಸರವಾಗಿಯೂ, ಕುಲುಮೆಯು ಬಹು ಉರಿಯಾಗಿಯೂ ಇದ್ದುದರಿಂದ, ಬೆಂಕಿಯ ಜ್ವಾಲೆಯು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಬೆಂಕಿಗೆ ಹಾಕಲು ಎತ್ತಿದ ಆ ಸೈನಿಕರನ್ನೇ ಸಂಹರಿಸಿತು.
23 यी तिन मानिस, शद्रक, मेशक, र अबेद्‍नगो बाँधिएकै अवस्थामा दन्किएको भट्टीमा फालिए ।
ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಕಟ್ಟಿನೊಂದಿಗೆ ಧಗಧಗನೆ ಉರಿಯುವ ಬೆಂಕಿಯ ಕುಲುಮೆಯ ನಡುವೆ ಬಿದ್ದರು.
24 अनि राजा नबूकदनेसर आश्‍चर्यचकित भए र झट्टै खडा भए । तिनले आफ्ना सल्लाहकारहरूलाई सोधे, “के हामीले ती तिन जना मानिसहरूलाई बाँधेर आगोमा फालेका होइनौं र?” तिनीहरूले राजालाई जवाफ दिए, “निश्‍चय नै महाराजा ।”
ಆಗ ಅರಸನಾದ ನೆಬೂಕದ್ನೆಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು, ತನ್ನ ಆಲೋಚನಾಗಾರರ ಸಂಗಡ ಮಾತನಾಡಿ, “ನಾವು ಮೂವರು ಮನುಷ್ಯರನ್ನು ಕಟ್ಟಿ, ಬೆಂಕಿಯಲ್ಲಿ ಹಾಕಿದೆವಲ್ಲವೇ?” ಎಂದನು. ಆಗ ಅವರು ಅರಸನಿಗೆ, “ಅರಸನೇ, ಹೌದು ಸತ್ಯ,” ಎಂದು ಉತ್ತರಿಸಿದರು.
25 तिनले भने, “तर चार जना मानिसलाई नबाँधिएर आगोमा हिंडिरहेका म देख्दैछु, र तिनीहरूलाई कुनै हानी भएको छैन । अनि चौथोचाहिं देवताहरूका पुत्रझैं चम्किरहेका छन् ।”
ಅರಸನು ಅವರಿಗೆ ಉತ್ತರವಾಗಿ, “ಇಗೋ, ಕಟ್ಟಿಲ್ಲದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿರುವುದನ್ನು ನೋಡುತ್ತೇನೆ. ಅವರಿಗೆ ಯಾವ ಹಾನಿಯೂ ಇಲ್ಲ. ಅಲ್ಲದೆ ನಾಲ್ಕನೆಯವರ ರೂಪವು ದೇವಪುತ್ರನ ಹಾಗಿದೆ,” ಎಂದು ಹೇಳಿದನು.
26 अनि नबूकदनेसर दन्किरहेको भट्टीको ढोका नजिक आए र बोलाए, “ए शद्रक, मेशक, र अबेद्‍नगो, अति उच्‍च, परमेश्‍वरका सेवकहरू, बाहिर निस्क! यहाँ आओ!” अनि शद्रक, मेशक, र अबेद्‍नगो आगोबाट बाहिर आए ।
ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಕುಲುಮೆಯ ಬಾಯಿಯ ಸಮೀಪಕ್ಕೆ ಬಂದು, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ,” ಎಂದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.
27 त्यहाँ भेला भएका प्रदेशका गभर्नरहरू, क्षेत्रीय गभर्नरहरू, अन्य गभर्नरहरू र राजाका सल्लाहकारहरूले यी मानिसहरूलाई देखे । आगोले तिनीहरूका शरीरलाई कुनै हानी गरेको थिएन । तिनीहरूका शिरको रौं खहरिएको थिएन । तिनीहरूका लुगालाई केही भएको थिएन । अनि तिनीहरूमा आगोको कुनै गन्ध नै थिएन ।
ಆಗ ಉಪರಾಜರು, ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು, ಎಲ್ಲರೂ ಒಟ್ಟುಗೂಡಿ ಅವರನ್ನು ಸುತ್ತುವರಿದು, ಅವರ ಶರೀರದ ಮೇಲೆ ಬೆಂಕಿಯಿಂದ ಯಾವ ಅಪಾಯವಾಗಿರದೇ ಇರುವುದನ್ನೂ, ಅವರ ತಲೆಗೂದಲುಗಳಲ್ಲಿ ಒಂದಾದರೂ ಸುಡದಿರುವುದನ್ನೂ, ಅವರ ಅಂಗಿಗಳು ನಾಶವಾಗದಿರುವುದನ್ನೂ, ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವುದನ್ನೂ ಕಂಡರು.
28 नबूकदनेसरले भने, “हामी शद्रक, मेशक, र अबेद्‍नगोका परमेश्‍वरको प्रशंसा गरौं, जसले आफ्नो सन्देशवाहक पठाउनुभएको छ र आफ्ना सेवकहरूलाई आफ्नो सन्देश दिनुभएको छ । तिनीहरूले मेरो आज्ञा नमानेर उहाँमा विश्‍वास गरे, र आफ्ना परमेश्‍वरबाहेक अरू कुनै देवताको पुजा गर्नु र तिनका सामु लम्‍पसार पर्नुको साटोमा तिनीहरूले आफ्ना शरीरलाई नै त्यागे ।
ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು.
29 त्यसैले म एउटा उर्दी जारी गर्छु, कि शद्रक, मेशक, र अबेद्‍नगोका परमेश्‍वरको विरुद्ध बोल्ने कुनै जाति, राष्‍ट्र, वा कुनै भाषा बोल्ने जोसुकैलाई टुक्रा-टुक्रा पारिनेछ, र तिनीहरूका घरहरू भग्‍नावशेषका थुप्रो हुनेछन्, किनभने यसरी बचाउन सक्‍ने अरू कुनै देवता छैन ।”
ಆದ್ದರಿಂದ ಸಕಲ ಪ್ರಜೆ, ಜನಾಂಗ, ಭಾಷೆಗಳಲ್ಲಿ ಯಾರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ವಿರೋಧವಾಗಿ ದೂಷಣೆ ಮಾಡುವರೋ, ಅವರನ್ನು ತುಂಡುತುಂಡಾಗಿ ಮಾಡಿರಿ, ಅವರ ಮನೆಗಳು ತಿಪ್ಪೆ ಗುಂಡಿಗಳಾಗಿ ಮಾಡಿರಿ, ಎಂದು ನಾನು ರಾಜಾಜ್ಞೆಯನ್ನು ವಿಧಿಸುತ್ತೇನೆ. ಏಕೆಂದರೆ ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರೂ ಇರುವುದಿಲ್ಲ,” ಎಂದನು.
30 त्यसपछि राजाले शद्रक, मेशक, र अबेद्‍नगोलाई बेबिलोनको प्रदेशमा पदोन्‍ननि गरिदिए ।
ಆಗ ಅರಸನು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರನ್ನು ಬಾಬಿಲೋನ್ ಪ್ರಾಂತದಲ್ಲಿ ಉನ್ನತ ಪದವಿಗೆ ತಂದನು.

< दानिएल 3 >