< दानिएल 6 >
1 दारालाई १२० जना प्रान्तिय गभर्नरहरू नियुक्त गर्न मन लाग्यो, जसले सारा राज्यभरि शासन गर्नेछन् ।
ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಉಪರಾಜರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ಇರಿಸಿದನು.
2 तिनीहरूमाथि तिन जना प्रमुख प्रशासकहरू थिए, र तिनीहरूमध्ये दानिएल एक जना थिए । ती प्रमुख प्रशासकहरूले प्रान्तिय गभर्नरहरूको निगरानी गरून् जसले गर्दा राजालाई कुनै नोक्सान नहोस् भनेर तिनीहरूलाई नियुक्त गरिएको थियो ।
ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವುದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ನಷ್ಟವಾಗದಂತೆ ಲೆಕ್ಕ ಒಪ್ಪಿಸಲಾಯಿತು. ಇವರಲ್ಲಿ ದಾನಿಯೇಲನು ಒಬ್ಬನಾಗಿದ್ದನು.
3 अन्य प्रमुख प्रशासकहरू र प्रान्तिय गभर्नरहरूभन्दा दानिएल विशिष्ट थिए, किनभने उनमा असाधारण आत्मा थियो । राजाले उनलाई सारा राज्यमा प्रमुख बनाउने योजना गर्दै थिए ।
ಈ ದಾನಿಯೇಲನಲ್ಲಿ ಉತ್ತಮ ಯೋಗ್ಯತೆಗಳು ಇದ್ದುದರಿಂದ ಅವನು ಉಪರಾಜರಿಗಿಂತಲೂ, ದೇಶಾಧಿಪತಿಗಿಂತಲೂ ಶ್ರೇಷ್ಠನಾಗಿದ್ದನು. ಈ ಕಾರಣದಿಂದ ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಉದ್ದೇಶಿಸಿದ್ದನು.
4 अनि अरू प्रमुख प्रशासकहरू र प्रान्तिय गभर्नरहरूले त्यस राज्यको निम्ति दानिएलले गर्ने काममा त्रुटी खोज्न थाले, तर तिनीहरूले उनको काममा कुनै पनि भ्रष्टचार वा उनको जिम्मेवारीमा असफलता भेट्टाउन सकेनन्, किनभने उनी विश्वासयोग्य थिए । उनमा कुनै त्रुटी वा हेलचेक्र्याइँ भेट्टाइएन ।
ಹೀಗಿರಲು ಉಪರಾಜರೂ, ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪು ಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ನಿರ್ಲಕ್ಷ್ಯತೆ ಇಲ್ಲದಿರುವುದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.
5 अनि यी मानिसहरूले भने, “आफ्नो परमेश्वरको व्यवस्थासँगको दानिएलको सम्बन्धको कुरामा तिनको विरुद्ध केही खोट नदेखाएसम्म हामीले तिनको विरुद्ध अरू कुनै अभियोग लगाउन सक्दैनौं ।”
ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪು ಹೊರಿಸಬೇಕಾದರೆ ಇವನ ದೇವರ ಹಾಗೂ ಧರ್ಮದ ಮೂಲಕವೇ ಹೊರತು ಇನ್ನಾವುದರಲ್ಲೂ ನಮಗೆ ಅವಕಾಶ ದೊರಕದು,” ಎಂದುಕೊಂಡರು.
6 अनि यी मुख प्रशासकहरू र प्रान्तिय गभर्नरहरूले राजाको सामु एउटा योजना ल्याए । तिनीहरूले उनलाई भने, “महाराजा दारा, हजुर दिर्घायु हुनुहोस्!
ಆಗ ಉಪರಾಜರೂ, ದೇಶಾಧಿಪತಿಯೂ ಅರಸನ ಬಳಿಯಲ್ಲಿ ಕೂಡಿಬಂದು, “ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು.
7 राज्यका सबै प्रमुख प्रशासकहरू र क्षेत्रीय गभर्नरहरू र प्रदेशीय गभर्नरहरू, सल्लाहकारहरू, र अन्य गभर्नरहरूले एकसाथ सल्लाह गरी यो निर्णय गरेका छौं, कि राजाले एउटा यस्तो उर्दि निकाली त्यसलाई लागु गर्नुहोस्, र भन्नुहोस्, तिस दिनसम्म हजुरबाहेक अरू कुनै देवता वा मानिसलाई कसैले प्रार्थना गर्यो भने, त्यो मानिस सिंहको खोरमा फालिनुपर्छ ।
ರಾಜ್ಯದ ಎಲ್ಲಾ ದೇಶಾಧಿಪತಿಗಳೂ, ರಾಜ್ಯಪಾಲರೂ, ನಾಯಕರೂ, ಉಪರಾಜರೂ, ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನೆಂದರೆ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ಪ್ರಾರ್ಥನೆ ಮಾಡಿದ್ದಾದರೆ ಅಂಥವರು ಸಿಂಹಗಳ ಗವಿಗೆ ಹಾಕಲಾಗುವುದು ಎಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆಯನ್ನು ಕೊಡತಕ್ಕದ್ದು.
8 अनि राजाले एउटा उर्दि निकाले र कागजातमा दस्तखत गरे, ताकि मादी र फारसीहरूका नियमअनुसार त्यो परिवर्तन नहोस्, यसरी त्यसलाई हेरफेर गर्न सकिन्न ।”
ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಬದಲಾಗದ ಮೇದ್ಯರ ಮತ್ತು ಪಾರಸಿಯರ ನಿಯಮಗಳ ಪ್ರಕಾರ ಇದು ರದ್ದಾಗದಂತೆ ನಿರ್ಣಯವನ್ನು ರೂಪಿಸಿ, ಶಾಸನಕ್ಕೆ ರುಜುಹಾಕು,” ಎಂದು ವಿನಂತಿಸಿದರು.
9 यसरी राजा दाराले कागजातमा दस्तखत गरेर त्यस उर्दिलाई ऐन बनाए ।
ಆದಕಾರಣ ದಾರ್ಯಾವೆಷನು ಆ ಬರಹಕ್ಕೂ, ನಿರ್ಣಯಕ್ಕೂ ರುಜು ಹಾಕಿದನು.
10 कागजातमा ऐन बनाउनलाई दस्तखत भएको छ भनी दानिएल थाहा पाएपछि, उनी आफ्नो घरमा गए (यरूशलेमतर्फ फर्केका उनको माथिल्लो कोठाका झ्यालहरू खुल्ला थिए), र जसरी उनले दिनको तिनपटक गर्ने गर्थे, त्यसरी नै उनले आफ्ना घुँडाहरू टेके, अनि उनले पहिले गरेझैं प्रार्थना गरे र आफ्ना परमेश्वरलाई धन्यवाद दिए ।
ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು.
11 अनि यी एकसाथ मिलेर षड्यन्त्र गरेका मानिसहरूले दानिएलले परमेश्वरसँग बिन्ती गरेका र उहाँसँग मदत मागेका देखे ।
ಆಮೇಲೆ ಆ ಮನುಷ್ಯರೆಲ್ಲಾ ಕೂಡಿಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಮಾಡುತ್ತಿರುವುದನ್ನು ಕಂಡರು.
12 तब तिनीहरू राजाको नजिक गए र तिनको उर्दिको विषयमा तिनीसँग कुरा गरे: “हे महाराजा, के आउँदो तिस दिनसम्म हजुर, महाराजाबाहेक अरू कुनै देवता वा मानिसलाई प्रार्थना गर्ने मानिस सिंहको खोरमा फालिनुपर्छ भनेर हजुरले उर्दि निक्लनुभएको थिएन र?” राजाले जवाफ दिए, “मादी र फारसीहरूको ऐनअनुसार यो निश्चित छ, र यो हेरफेर हुन सक्दैन ।”
ಅನಂತರ ಅವರು ಅರಸನ ಮುಂದೆ ಬಂದು ರಾಜಾಜ್ಞೆಯ ವಿಷಯವಾಗಿ: “ಅರಸನೇ ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡುವರೋ, ಅವರನ್ನು ಸಿಂಹದ ಗವಿಯಲ್ಲಿ ಹಾಕಲಾಗುವುದು ಎಂಬ ಶಾಸನಕ್ಕೆ ನೀನು ರುಜು ಹಾಕಲಿಲ್ಲವೇ?” ಎಂದರು. ಅದಕ್ಕೆ ಅರಸನು ಉತ್ತರವಾಗಿ, “ಮೇದ್ಯ, ಪಾರಸಿಯರ ಬದಲಾಗದಂಥ ಧರ್ಮವಿಧಿಗಳ ಪ್ರಕಾರ ಅದು ಸ್ಥಿರವಾದ ನಿಬಂಧನೆ” ಎಂದನು.
13 तब तिनीहरूले राजालाई जवाफ दिए, “यहूदाका निर्वासितहरूमध्ये एक जना ती दानिएलले हजुर, महाराजा, वा हजुरले दस्तखत गर्नुभएको उर्दिको वेवास्ता गर्छन् । तिनले आफ्नो परमेश्वरलाई दिनको तिन पटक प्रार्थना गर्छन् ।”
ಆಗ ಅವರು ಉತ್ತರವಾಗಿ ಅರಸನ ಮುಂದೆ, “ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ, ನೀನು ರುಜು ಹಾಕಿದ ನಿರ್ಣಯವನ್ನೂ ಲಕ್ಷಿಸದೆ, ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ,” ಎಂದರು.
14 जबा राजाले यो कुरा सुने, तिनी धेरै विचलित भए, र दानिएललाई यस कानूनबाट बचाउन तिनले दिमाग लगाए । तिनले सूर्यास्तसम्मै दानिएललाई बचाउने हरसम्भव प्रयास गरे ।
ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ, ಆಗ ತನ್ನಲ್ಲಿಯೇ ಬಹಳವಾಗಿ ಬೇಸರಗೊಂಡು ದಾನಿಯೇಲನನ್ನು ಅದರಿಂದ ತಪ್ಪಿಸಬೇಕೆಂದು ತನ್ನ ಹೃದಯದಲ್ಲಿ ತಿಳಿದು, ಸೂರ್ಯಾಸ್ತಮಾನದವರೆಗೂ ಪ್ರಯತ್ನಪಟ್ಟನು.
15 त्यसपछि षड्यन्त्र रच्ने यी मानिसहरू एकसाथ राजाकहाँ भेला भए र तिनलाई भने, “हे महाराजा हजुरलाई यो थाहा होस्, कि यो मादी र फारसीहरूको ऐन हो, जसलाई राजाले जारी गर्ने अर्को कुनै उर्दि वा नियमले हेरफेर गर्न सक्दैन ।”
ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿಬಂದು ಅರಸನಿಗೆ, “ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ, ಆಜ್ಞೆಯಾದರೂ ರದ್ದಾಗಬಾರದು ಎಂಬ ಮೇದ್ಯ ಮತ್ತು ಪಾರಸಿಯರ ನಿಯಮದಲ್ಲಿದೆ ಎಂದು ನಿನಗೆ ತಿಳಿದಿರಬೇಕು,” ಎಂದರು.
16 अनि राजाले आज्ञा दिए र तिनीहरूले दानिएललाई भित्र ल्याए र तिनीहरूले उनलाई सिंहको खोरमा फाले । राजाले दानिएललाई भने, “तिमीले निरन्तर सेवा गर्ने तिम्रो परमेश्वरले तिमीलाई बचाऊन् ।”
ಆಗ ರಾಜನು ಆಜ್ಞಾಪಿಸಲು, ಅವರು ದಾನಿಯೇಲನನ್ನು ತಂದು ಸಿಂಹದ ಗುಹೆಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ, “ನೀನು ಯಾವಾಗಲೂ ಸೇವಿಸುವ ನಿನ್ನ ದೇವರು ನಿನ್ನನ್ನು ಕಾಪಾಡಲಿ!” ಎಂದು ಹೇಳಿದನು.
17 खोरको ढोकामा एउटा ढुङ्गो ल्याएर राखियो, र दानिएलको विषयमा केही पनि परिवर्तन नहोस् भनेर राजाले त्यसमा आफ्नो अनि आफ्ना भारदारहरूका औंठीको मोहर लगाए ।
ಗುಹೆಯ ಬಾಯಿಯನ್ನು ಬಂಡೆಯಿಂದ ಮುಚ್ಚಲಾಯಿತು. ಇದಲ್ಲದೆ ದಾನಿಯೇಲನ ಪರಿಸ್ಥಿತಿಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನೂ, ತನ್ನ ಪ್ರಧಾನರ ಮುದ್ರೆಯನ್ನೂ ಅದಕ್ಕೆ ಹಾಕಿದನು.
18 त्यसपछि राजा आफ्नो महलमा गए र रातभरि उपवास बसे । तिनको अगि कुनै मनोरन्जनका कुरा ल्याइएन, र उनलाई कत्ति पनि निद्रा लागेन ।
ಆಮೇಲೆ ಅರಸನು ತನ್ನ ಅರಮನೆಗೆ ಹಿಂದಿರುಗಿ, ಉಪವಾಸದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳನ್ನು ಅವನ ಮುಂದೆ ತರಲಿಲ್ಲ. ಅರಸನಿಗೆ ನಿದ್ರೆ ಬರಲಿಲ್ಲ.
19 अनि राजा बिहान सबेरै उठे र उनी झट्टै सिंहको खोरतर्फ गए ।
ಮುಂಜಾನೆಗೆ ಮೊದಲೇ ಅರಸನು ಎದ್ದು, ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು.
20 जसै तिनी खोरको नजिक आए, तिनले निरास भएको सोरले दानिएललाई यसो भनेर बोलाए, “ए दानिएल, जीवित परमेश्वरका सेवक, के तिमीले निरन्तर सेवा गर्ने तिम्रा परमेश्वरले तिमीलाई सिंहहरूबाट बचाउन सक्षम हुनुभएको छ?”
ಅವನು ಗವಿಯ ಹತ್ತಿರ ಬಂದಾಗ, ದುಃಖದ ಧ್ವನಿಯಲ್ಲಿ ದಾನಿಯೇಲನನ್ನು ಕೂಗಿದನು. ಅರಸನು ಮಾತನಾಡಿ ದಾನಿಯೇಲನಿಗೆ, “ಜೀವಸ್ವರೂಪರಾದ ದೇವರ ಸೇವಕನಾದ ದಾನಿಯೇಲನೇ, ನೀನು ಯಾವಾಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಿ ಕಾಪಾಡಲು ಸಮರ್ಥರಾಗಿದ್ದಾರೆಯೇ?” ಎಂದು ಕೇಳಿದನು.
21 अनि दानिएलले राजालाई भने, “महाराजा, अमर रहून्!
ಆಗ ದಾನಿಯೇಲನು ಅರಸನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು.
22 मेरा परमेश्वरले आफ्नो सन्देशवाहक पठाउनुभएको अनि सिंहहरूका मुखहरूलाई बन्द गर्नुभएको छ, र तिनीहरूले मलाई कुनै हानी गरेका छैनन् । किनभने उहाँ अनि हजुर, महाराजाका सामु म दोषरहित भेट्टाइएँ, र मैले हजुरलाई कुनै हानी गरेको छैनँ ।”
ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು.
23 अनि राजा अत्यन्तै खुशी भए । तिनले दानिएललाई खोरबाट माथि निकाल्ने आदेश दिए । यसैले दानिएललाई खोरबाट माथि निकालियो । उनमा कुनै पनि चोट भेट्टाइएन, किनभने उनले आफ्ना परमेश्वरमाथि भरोसा गरेका थिए ।
ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆಮಾಡಿದನು. ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಅವನು ದೃಢವಾದ ಭರವಸೆ ಇಟ್ಟಿದ್ದರಿಂದ ಯಾವ ಹಾನಿಯೂ ಆಗಿರಲಿಲ್ಲ.
24 राजाले आदेश दिए र दानिएललाई दोष लगाउने मानिसहरूलाई तिनीहरूले ल्याए अनि तिनीहरू, तिनका छोराछोरी, र तिनका पत्नीहरूलाई सिंहहरूको खोरमा फालिदिए । तिनीहरू भुइँमा पुग्न नपाउँदै, सिंहहरूले तिनीहरूमाथि झम्टे, र तिनीहरूका हड्डीहरूलाई टुक्रा टुक्रा पारे ।
ಆಗ ಅರಸನು ಆಜ್ಞಾಪಿಸಲಾಗಿ, ದಾನಿಯೇಲನ ಮೇಲೆ ತಪ್ಪು ಹೊರಿಸಿದ್ದ ಮನುಷ್ಯರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗುಹೆಯಲ್ಲಿ ಹಾಕಿದರು. ಅವರು ಗುಹೆಯ ತಳವನ್ನು ಮುಟ್ಟುವುದಕ್ಕೆ ಮೊದಲೇ ಸಿಂಹಗಳು ಅವರ ಮೇಲೆ ಹಾರಿ ಬಂದು, ಅವರ ಎಲುಬುಗಳನ್ನೆಲ್ಲಾ ತುಂಡುತುಂಡಾಗಿ ಮುರಿದುಹಾಕಿದವು.
25 त्यसपछि राजा दाराले पृथ्वीमा बस्ने सबै मानिसहरू, जातिहरू, र भाषा बोल्नेहरूलाई यस्तो लेखे: “तिमीहरूमा प्रशस्त शान्ति होस् ।
ಆಗ ಅರಸನಾದ ದಾರ್ಯಾವೆಷನು ಭೂಲೋಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ, ಭಾಷೆಗಳವರೆಗೆ ಬರೆದದ್ದೇನೆಂದರೆ, “ನೀವು ಅಪಾರವಾಗಿ ಸಮೃದ್ಧಿಗೊಳ್ಳಿರಿ.
26 म अब यो एउटा उर्दि जारी गर्छु, कि मेरो अधिराज्यमा रहने सबै मानिसले दानिएलका परमेश्वरको भय मान्नू र आदर गर्नू, किनभने उहाँ नै जीवित परमेश्वर हुनुहुन्छ र उहाँ सदासर्वदा रहनुहुन्छ, र उहाँको राज्य नष्ट हुनेछैन, र उहाँको प्रभुत्व अन्त्यसम्म रहनेछ ।
“ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯನು ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂಬ ನಿರ್ಣಯ ಹೊರಡಿಸಿದ್ದೇನೆ.
27 उहाँले हामीलाई सुरक्षित राख्नुहुन्छ र हामीलाई बचाउनुहुन्छ, अनि उहाँले स्वर्गमा र पृथ्वीमा चिन्हहरू र आश्चर्य कामहरू गर्नुहुन्छ । उहाँले दानिएललाई सिंहहरूको शक्तिबाट सुरक्षित राख्नुभएको छ ।”
ಅವರೇ ಉದ್ಧರಿಸುವವರೂ ರಕ್ಷಿಸುವವರೂ ಆಗಿದ್ದು,
28 यसरी दाराको शासनकालमा अनि फारसी कोरेसको शासनकालमा दानिएल समृद्धि भयो ।
ಹೀಗೆ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸಮೃದ್ಧವಾಗಿ ಬಾಳಿದನು.