< दानिएल 9 >
1 दारा मादी वंशका अहासूरसका छोरा थिए । यी तिनै अहासूरस थिए जसलाई बेबिलोनको राज्यमाथि राजा बनाइएको थियो ।
೧ಅಹಷ್ವೇರೋಷನ ಮಗನೂ, ಮೇದ್ಯ ವಂಶದವನೂ ಕಸ್ದೀಯ ರಾಜ್ಯದ ದೊರೆತನವನ್ನು ಹೊಂದಿದವನೂ ಆದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,
2 अब दाराले राज्य सुरु गरेको पहिलो वर्षमा, म दानिएलले, परमप्रभुको वचन पढ्दै थिएँ, जुन वचन यर्मियाकहाँ अगमवक्ता आएको थियो । यरूशलेम त्यागिएको अवस्थामा सत्तरी वर्षसम्म रहन्छ भनिएको मैले देखें ।
೨ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮ್ ಹಾಳು ಬಿದ್ದಿರಬೇಕಾದ ಪೂರ್ಣಕಾಲದ ವರ್ಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದೆನು.
3 उपवाससहित प्रार्थना र बिन्ती गर्न, भाङ्ग्रा लगाउँदै र खरानीमा बस्दै परमप्रभु परमेश्वरको खोजी गर्न मैले आफ्नो अनुहार उहाँतर्फ फर्काएँ ।
೩ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.
4 परमप्रभु आफ्नो परमेश्वरसँग मैले प्रार्थना गरें, अनि मैले हाम्रा पापहरू स्वीकारें । मैले भनें, “कृपया, हे परमप्रभु, तपाईं महान् र भययोग्य परमेश्वर हुनुहुन्छ, तपाईंले आफ्नो करारको पालन गर्नुहुन्छ र तपाईंलाई प्रेम गर्ने र तपाईंका आज्ञाहरू मान्नेलाई प्रेम गर्न तपाईं विश्वासयोग्य हुनुहुन्छ ।
೪ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, “ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ,
5 हामीले पाप गरेका छौं र गलत काम गरेका छौं। हामीले दुष्टतापुर्वक काम गरेका छौं र तपाईंका आज्ञा र विधिहरूबाट तर्केर हामीले बागी भएका छौं।
೫ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು
6 तपाईंका नाउँमा हाम्रा राजाहरू, अगुवाहरू, पुर्खाहरू र देशका सबै मानिसहरूसँग बोलेका तपाईंका सेवक अगमवक्ताहरूका वचन हामीले सुनेका छैनौं ।
೬ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯ ಜನರು, ಇವರಿಗೆಲ್ಲ ನಿನ್ನ ಹೆಸರಿನ ನಿಮಿತ್ತ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.
7 हे परमप्रभु, धार्मिकता तपाईंको हो । तर आज, हाम्रो अनुहार, अनि यहूदाका मानिसहरू र यरूशलेममा बस्नेहरू, र सारा इस्राएलीहरू लाजमा परेका छन् । अनि तपाईंले विभिन्न ठाउँहरूमा छरपष्ट पार्नुभएका नजिक र टाढाका सबै मानिसहरू त्यसमा समावेश हुन्छन् । हामीले तपाईंको विरुद्धमा गरेका विश्वासघातको कारणले नै यस्तो भएको हो ।
೭ಕರ್ತನೇ, ನೀನು ಧರ್ಮಸ್ವರೂಪನು, ನಾವೋ ನಾಚಿಕೆಗೆ ಈಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇಮಿನ ನಿವಾಸಿಗಳೂ ನಿನ್ನ ವಿರುದ್ಧವಾಗಿ ಮಾಡಿದ ದ್ರೋಹದ ನಿಮಿತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ, ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲರೂ ನಾಚಿಕೆಗೆ ಈಡಾಗಿದ್ದಾರೆ.
8 हे परमप्रभु, हामीले तपाईंको विरुद्धमा पाप गरेका कारणले गर्दा, हामी, हाम्रा राजाहरू, अगुवाहरू, र पुर्खाहरूका अनुहार शर्ममा परेका छन् ।
೮ಸ್ವಾಮೀ, ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದರಿಂದ ನಾವೂ ನಮ್ಮ ಅರಸರೂ, ಪ್ರಧಾನರೂ, ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.
9 दया र क्षमा परमप्रभु हाम्रा परमेश्वरका हुन्, किनकि हामीले उहाँको विरुद्धमा विद्रोह गरेका छौं ।
೯ಕರ್ತನಾದ ನಮ್ಮ ದೇವರು ಕರುಣಿಸುವವನೂ, ಕ್ಷಮಿಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ.
10 आफ्ना सेवक अगमवक्ताहरूद्वारा परमप्रभुले हामीलाई दिनुभएका उहाँका व्यवस्थामा हिंड्नलाई हामीले उहाँको वचन मानेका छैनौं ।
೧೦ಕರ್ತನಾದ ನಮ್ಮ ದೇವರ ಮಾತನ್ನು ಕೇಳಲಿಲ್ಲ, ತನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಗೊತ್ತು ಮಾಡಿದ ಧರ್ಮಮಾರ್ಗದಲ್ಲಿ ನಡೆಯಲಿಲ್ಲ.
11 तपाईंको वचन पालन गर्नलाई इन्कार गरेर सबै इस्राएलले तपाईंको व्यवस्थाको विरुद्धमा अपराध गरेका छन्। परमेश्वरका सेवक मोशाका व्यवस्थामा लेखिएका सराप र प्रतिज्ञा हामीमाथि खनिएका छन्, किनकि हामीले उहाँको विरुद्ध पाप गरेका छौं।
೧೧ಇಸ್ರಾಯೇಲರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿನ್ನ ಶಾಪದ ಕೇಡುಗಳೂ, ದೇವಸೇವಕನಾದ ಮೋಶೆಯ ಧರ್ಮನಿಯಮದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವ ದ್ರೋಹಿಗಳೇ ಸರಿ.
12 परमप्रभुले हामीमाथि ठुलो विपत्ति ल्याउनुभएर उहाँले हामी र हाम्रा शासकहरूका विरुद्धमा बोल्नुभएका वचनहरू पुरा गर्नुभएको छ । किनभने यरूशलेमलाई जे गरिएको छ सारा स्वर्गमुनि त्यस्तो कहिल्यै गरिएको छैन ।
೧೨ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.
13 मोशाको व्यवस्थामा लेखिएझैं सबै विपत्ति हामीमाथि आइपरेको छन्, तापनि आफ्ना पापबाट फर्केर र तपाईं परमप्रभु परमेश्वरका सत्यतामा ध्यान दिएर हामीले तपाईंबाट कृपा पाउन अझैसम्म बिन्ती गरेका छैनौं ।
೧೩ಮೋಶೆಯ ಧರ್ಮನಿಯಮಗಳಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.
14 यसकारण परमप्रभुले विपत्तिलाई पठाउन तयार राख्नुभएको छ, र त्यो हामीमाथि ल्याउनुभएको छ, किनभने परमप्रभु हाम्रा परमेश्वर आफूले गर्नुहुने सबै काममा धर्मी हुनुहुन्छ, तापनि हामीले उहाँको वचन पालना गरेका छैनौं ।
೧೪ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ.
15 अब हे परमप्रभु हाम्रा परमेश्वर, शक्तिशाली हातले तपाईंले आफ्ना मानिसहरूलाई मिश्रदेशबाट बाहिर ल्याउनुभयो, र आजको दिनसम्म तपाईंले आफ्नो नामको ख्याति कायम राख्नुभएको छ । तापनि हामीले अझै पाप गर्यौं, र हामीले दुष्ट काम गरेका छौं ।
೧೫ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರು ಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.
16 हे परमप्रभु, तपाईंका सबै धार्मिक कामहरूका कारणले, तपाईंको सहर यरूशलेम, तपाईंको पवित्र पर्वतबाट तपाईंको रिस र क्रोध हटोस् । हाम्रा पापहरू र हाम्रा पुर्खाहरूका अपराधहरूका कारणले, यरूशलेम र हाम्रा वरिपरि भएका तपाईंका मानिस सबै घृणाका पात्र भएका छन् ।
೧೬ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ಮತ್ತು ನಿನ್ನ ಪವಿತ್ರ ಪರ್ವತವೂ ಆದ ಯೆರೂಸಲೇಮಿನ ಮೇಲೆ ನಿನಗಿರುವ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪೂರ್ವಿಕರ ಪಾಪಾಪರಾಧಗಳ ನಿಮಿತ್ತ ಯೆರೂಸಲೇಮೂ, ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.
17 अब हे हाम्रा परमेश्वर, तपाईंको दासको प्रार्थना र कृपाको निम्ति गरिएको उसको निवेदन सुन्नुहोस् । हे परमप्रभु, तपाईंको खातिर, उजाड भएको तपाईंको पवित्र स्थानमा आफ्नो अनुहार चम्काउनुहोस् ।
೧೭ನಮ್ಮ ದೇವರೇ, ನಿನ್ನ ಸೇವಕನ ಪ್ರಾರ್ಥನೆಯ ವಿಜ್ಞಾಪನೆಗಳನ್ನು ಈಗ ಲಾಲಿಸು; ಹಾಳಾಗಿರುವ ನಿನ್ನ ಪವಿತ್ರಾಲಯವನ್ನು ಕರ್ತನಾದ ನಿನ್ನ ಹೆಸರಿನ ನಿಮಿತ್ತವೇ ಪ್ರಸನ್ನಮುಖದಿಂದ ನೋಡು.
18 मेरा परमेश्वर, आफ्ना कान खोल्नुहोस् र सुन्नुहोस् । आफ्ना आँखा खोल्नुहोस् र हेर्नुहोस् । हामी तहस-नहस पारिएका छौं। तपाईंको नामद्वारा पुकारिने त्यो सहरलाई हेर्नुहोस् । हाम्रो धार्मिकताको कारणले होइन, तर तपाईंको महान् कृपाको कारणले तपाईंबाट सहायता पाउनलाई हामी बिन्ती गर्छौं ।
೧೮ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳು ಪ್ರದೇಶಗಳನ್ನೂ, ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೇನೂ ಅಲ್ಲ. ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆ ಮಾಡುತ್ತಿದ್ದೇವೆ.
19 हे परमप्रभु सुन्नुहोस्! हे परमप्रभु क्षमा गर्नुहोस्! हे परमप्रभु ध्यान दिनुहोस् र काम गर्नुहोस् । हे मेरा परमेश्वर, तपाईंको आफ्नै निम्ति ढिला नगर्नुहोस्, किनभने तपाईंको सहर र तपाईंका मानिस तपाईंकै नाउँले बोलाइन्छन् ।”
೧೯ಸ್ವಾಮೀ, ಕೇಳು! ಸ್ವಾಮೀ, ಕ್ಷಮಿಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ, ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!”
20 जब म बोलिरहेको, प्रार्थना गरिरहेको र आफू अनि आफ्ना मानिस इस्राएलका पाप स्विकार गरिरहेको थिएँ, र परमेश्वरको पवित्र पर्वत निम्ति परमप्रभु मेरा परमेश्वरको सामु मेरा बिन्तीहरू राख्दै थिएँ—
೨೦ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು.
21 मैले प्रार्थना गरिरहँदा, मैले दर्शनमा पहिला देखेको मानिस, गाब्रिएल साँझको बलिदानको समयमा तिव्र वेगले उडेर तल मकाहाँ आए ।
೨೧ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅವಸರವಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿದನು.
22 उनले मलाई समझ दिए र मलाई भने, “ए दानिएल, तिमीलाई अन्तर्दृष्टि र समझ दिनलाई अहिले म आएको हुँ ।
೨೨ಆತನು ನನ್ನೊಂದಿಗೆ ಹೀಗೆ ಮಾತನಾಡಿ ಉಪದೇಶಿಸಿದನು, “ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವುದಕ್ಕೆ ಈಗ ಬಂದೆನು.
23 तिमीले कृपाको निम्ति बिन्ती गर्न सुरु गर्दा, आज्ञा दिइयो र तिमीलाई जवाफको बारेमा बताउनलाई म आएको हुँ, किनकि तिमीलाई धेरै प्रेम गरिएको छ । यसकारण यो वचन विचार गर र प्रकट भएको कुरालाई बुझ ।
೨೩ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು ದೇವರಿಗೆ ಅತಿಪ್ರಿಯನು. ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.
24 तिम्रा मानिसहरू र तिम्रो पवित्र सहरको दोषको अन्त्य गर्न र पापलाई अन्त्य गर्न, दुष्टताको निम्ति पश्चात्ताप गर्न, अनन्त धार्मिकता ल्याउन, दर्शन र अगमवाणीलाई पुरा गर्न, र अति पवित्र स्थानलाई शुद्ध पार्नलाई सत्तरी सातहरूको आदेश दिइएको छ ।
೨೪ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
25 यो जान र बुझ, कि यरूशलेमलाई पुनर्स्थापित र पुनर्निर्माण गर्ने आज्ञा दिएपछि, अभिषिक्त जनको (जो अगुवा हुनेछन्) आगमनसम्म त्यहाँ सात सातहरू र बैसठ्ठी सातहरू हुनेछन् । धेरै विपदका समयहरू हुने भए तापनि, सडकहरू र सुरुङहरूसहित यरूशलेमको पुनर्निर्माण हुनेछ ।
೨೫ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.
26 बैसठ्ठी सातहरूपछि, अभिषिक्त जनलाई नाश पारिनेछ र तिनीसँग केही पनि हुनेछैन । आउनेवाला शासकका सेनाले सहर र पवित्र स्थानलाई नाश गर्नेछ । बाढीसँगै त्यसको अन्त्य आउनेछ, र अन्त्यसम्मै युद्ध हुनेछ । सर्वनाश पार्ने आज्ञा दिइएको छ ।
೨೬ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.
27 एउटा सातको निम्ति तिनले धेरै जनासँग करार सदर गर्नेछन् । सातको बिचमा तिनले बलिदान र भेटीलाई समाप्त गर्नेछन् । घृणित कुराहरूको पखेटामा कोही व्यक्ति आउनेछ जसले सर्वनाश गर्नेछ । सर्वनाश गर्ने व्यक्तिलाई पूर्ण रूपमा खत्तम गर्ने र विनाश पार्ने आदेश भएको छ ।”
೨೭ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”