< एस्तर 9 >
1 बाह्रौँ महिना अर्थात् अदार महिनाको तेह्रौँ दिनमा राजाको कानुन र आदेशलाई कार्यान्वयन गर्ने दिन, यहूदीहरूका शत्रुहरूले तिनीहरूमाथि शक्ति जमाउनलाई आशा गरेको दिन जब आयो, परिणाम उल्टो भयो । यहूदीहरूले आफूलाई घृणा गर्नेहरूमाथि शक्ति पाए ।
೧ಅರಸನ ಆಜ್ಞಾನಿರ್ಣಯಗಳನ್ನು ನೆರವೇರಿಸತಕ್ಕ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ಆ ದಿನದಲ್ಲಿ ಯೆಹೂದ್ಯರನ್ನು ಸ್ವಾಧೀನ ಮಾಡಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿಕೊಂಡಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು.
2 यहूदीहरूमाथि विपत्ती ल्याउन कोसिस गर्नेहरूलाई आक्रमण गर्न राजा अहासूरसका सबै प्रान्तभरि नै तिनीहरूका आ-आफ्ना सहरहरूमा तिनीहरू भेला । तिनीहरूको विरुद्धमा कोही खडा हुन सकेन, किनकि सबै मानिसमाथि तिनीहरूको डर परेको थियो ।
೨ಆದುದರಿಂದ ಅರಸನಾದ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಯಸಿದವರಿಗೆ ವಿರುದ್ಧವಾಗಿ ಕೈಯೆತ್ತುವುದಕ್ಕೆ ಸೇರಿಕೊಂಡಾಗ ಯಾರಿಗೂ ಅವರ ಎದುರಿನಲ್ಲಿ ನಿಲ್ಲಲಾಗಲಿಲ್ಲ.
3 सबै प्रान्तका अधिकारीहरू, प्रान्तीय गभर्नरहरू, सथानीय गभर्नरहरू र राजाका प्रशासकहरूले यहूदीहरूलाई मदत गरे किनकि तिनीहरूमाथि मोर्दकैको डर परेको थियो ।
೩ಅವರಿಂದ ಎಲ್ಲಾ ಜನಾಂಗದವರಿಗೆ ಭಯವುಂಟಾಯಿತು; ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಪ್ರಾಬಲ್ಯವು ಹೆಚ್ಚಾಗುತ್ತಾ ಬಂದ ಹಾಗೆಲ್ಲಾ, ಅವನ ಸುದ್ದಿಯೂ ಸಕಲ ಸಂಸ್ಥಾನಗಳಲ್ಲಿಯೂ ಹಬ್ಬಿತು.
4 मोर्दकै राजदरबारमा महान् मानिस थिए, अनि तिनको ख्याति सबै प्रान्तभरि फैलियो किनकि यी मानिस मोर्दकै झनझन महान् बन्दै थिए ।
೪ಸರ್ವ ಸಂಸ್ಥಾನಾಧಿಕಾರಿಗಳೂ, ಉಪರಾಜರೂ, ದೇಶಾಧಿಪತಿಗಳೂ ಮತ್ತು ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು.
5 यहूदीहरूले आफ्ना शत्रुहरूलाई तरवारले आक्रमण गरेर मारे र विनाश गरे अनि आफूलाई घृणा गर्नेहरूलाई आफ्नो इच्छाअनुसार गरे ।
೫ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ, ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ವೈರಿಗಳನ್ನು ಇಷ್ಟವಿದ್ದಂತೆ ಮಾಡಿದರು.
6 शूशनको किल्लामा मात्रै यहूदीहरूले पाँच सय जना मानिसलाई मारेर नष्ट पारे ।
೬ಯೆಹೂದ್ಯರು ಶೂಷನ್ ಕೋಟೆಯಲ್ಲೇ ಐನೂರು ಜನರನ್ನು ಕೊಂದುಬಿಟ್ಟರು.
7 तिनीहरूले पर्शन्दाता, दल्फोन, अस्पाता,
೭ಹತರಾದವರಲ್ಲಿ ಪರ್ಷಂದಾತ, ದಲ್ಫೋನ್, ಅಸ್ಪಾತ,
8 पोराता, अदलिया, अरीदाता,
೮ಪೋರಾತ, ಆದಲ್ಯ, ಅರೀದಾತ,
9 पर्मशता, अरीशै, अरीदै र बैजाता,
೯ಪರ್ಮಷ್ಟ, ಅರೀಸೈ, ಅರಿದೈ, ವೈಜಾತ ಎಂಬುವವರಿದ್ದರು.
10 र हम्मदाताको छोरा यहूदीहरूका शत्रु हामानका दस जना छोरालाई मारे । तर तिनीहरूले कुनै कुरा पनि लुटेर लिएनन् ।
೧೦ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಜನರನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.
11 त्यो दिन शूशनको किल्लामा मारिएकाहरूको सङ्ख्याको विवरण राजालाई दिइयो ।
೧೧ಆ ದಿನ ಶೂಷನ್ ಕೋಟೆಯಲ್ಲಿ ಹತರಾದವರ ಸಂಖ್ಯೆಯನ್ನು ಅರಸನಿಗೆ ತಿಳಿಸಲಾಯಿತು.
12 राजाले रानी एस्तरलाई भने, “यहूदीहरूले हामानका दस छोरासहित शूशनको किल्लामा पाँच सय मानिसलाई मारेका छन् । तब राजाका बाँकी प्रान्तहरूमा तिनीहरूले झन् के गरेका होलान्? अब तिम्रो बिन्ती के हो? त्यो तिमीलाई दिइनेछ । तिम्रो अनुरोध के हो? त्यो तिमीलाई दिइनेछ ।”
೧೨ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನ್ ಕೋಟೆಯಲ್ಲೇ ಐನೂರು ಜನರನ್ನೂ, ಹಾಮಾನನ ಹತ್ತು ಮಂದಿ ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ; ಉಳಿದ ರಾಜಸಂಸ್ಥಾನಗಳಲ್ಲಿ ಎಷ್ಟೋ ಜನರು ಹತರಾಗಿರಬಹುದು. ನಿನ್ನ ವಿಜ್ಞಾಪನೆ ಇನ್ನು ಯಾವುದಿದ್ದರೂ ನೆರವೇರುವುದು, ನೀನು ಏನು ಕೇಳಿಕೊಂಡರೂ ಕೊಡುವೆನು” ಎಂದು ಹೇಳಿದನು.
13 एस्तरले भनिन्, “राजालाई खुसी लागेमा शूशनमा भएका यहूदीहरूलाई आजको आदेश भोलीको निम्ति पनि कार्यान्वयन गर्न अनुमति दिइयोस् र हामानका दसै जना छोराका लाशलाई फाँसीको काठमा झुण्ड्याइयोस् ।”
೧೩ಅದಕ್ಕೆ ಎಸ್ತೇರಳು, “ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವುದಕ್ಕೂ ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವುದಕ್ಕೂ ಶೂಷನಿನಲ್ಲಿರುವ ಯೆಹೂದ್ಯರಿಗೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡಳು.
14 त्यसैले राजाले त्यसै गरियोस् भनी आज्ञा दिए । शूशनमा एउटा आदेश निकालियो, र तिनीहरूले हामानका दसै जना छोरालाई झुण्ड्याए ।
೧೪ಆಗ ಅರಸನು ಹಾಗೆ ಮಾಡುವುದಕ್ಕೆ ಅಪ್ಪಣೆಕೊಟ್ಟನು. ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾಯಿತು ಮತ್ತು ಹಾಮಾನನ ಹತ್ತು ಮಕ್ಕಳನ್ನು ಗಲ್ಲಿಗೆ ಏರಿಸಲಾಯಿತು.
15 अदार महिनाको चौधौँ दिनमा शूशनमा भएका यहूदीहरू एकै ठाउँमा भेला भए, र शूशनमा थप तिन सय जना मानिसलाई मारे, तर तिनीहरूले लुटपाटमा हात हालेनन् ।
೧೫ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಲ್ಲೂ ಒಟ್ಟಿಗೆ ಸೇರಿ ಅಲ್ಲಿನ ಮುನ್ನೂರು ಜನರನ್ನು ಕೊಂದರು; ಆದರೆ ಕೊಳ್ಳೆಗೆ ಕೈಹಾಕಲಿಲ್ಲ.
16 राजाका प्रान्तहरूमा भएका बाँकी यहूदीहरू आफ्नो ज्यान जोगाउन एकै ठाउँमा भेला भए, र तिनीहरूले आफ्ना शत्रुहरूबाट छुटकारा पाए, अनि आफूलाई घृणा गर्ने पचहत्तर हजार मानिसलाई मारे, तर आफूले मारेका मनिसहरूका मुल्यवान थोकहरूमा भने तिनीहरूले आफ्ना हात लगाएनन् ।
೧೬ಅದೇ ಮೇರೆಗೆ ರಾಜಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ಪ್ರಾಣ ರಕ್ಷಿಸಿಕೊಳ್ಳುವುದಕ್ಕಾಗಿ ಕೂಡಿಕೊಂಡು ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರ ಜನರನ್ನು ಸಂಹರಿಸಿದರು; ಆದರೆ ಸುಲಿಗೆಮಾಡುವುದಕ್ಕೆ ಕೈ ಹಾಕಲಿಲ್ಲ.
17 यो अदार महिनाको तेह्रौँ दिनमा भएको थियो । चौधौँ दिनमा तिनीहरूले विश्राम लिए, र त्यस दिनलाई एउटा चाड र हर्षको दिन बनाए ।
೧೭ಇದು ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ನಡೆಯಿತು. ಅವರು ಹದಿನಾಲ್ಕನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು. ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನು ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡರು.
18 तर शूशनमा भएका यहूदीहरूचाहिँ तेह्रौँ र चौधौँ दिनमा एकसाथ भेला भए । पन्ध्रौँ दिनमा तिनीहरूले विश्राम गरे, र त्यस दिनलाई एउटा चाड र हर्षको दिन बनाए ।
೧೮ಆದರೆ ಶೂಷನಿನ ಯೆಹೂದ್ಯರು ಹದಿಮೂರನೆಯ ಮತ್ತು ಹದಿನಾಲ್ಕನೆಯ ದಿನಗಳನ್ನು ವೈರಿಗಳನ್ನು ವಧಿಸುವುದಕ್ಕೆ ನೇಮಿಸಿಕೊಂಡಿದ್ದರಿಂದ ಹದಿನೈದನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು.
19 त्यसकारण दुर्गम गाउँहरूतिर घर बनाएका यहूदीहरूले अदार महिनाको चौधौँ दिनलाई हर्ष र चाडको एउटा दिन अनि एक-अर्कालाई खानेकुराका उपहारहरू पठाउने दिनको रूपमा मान्छन् ।
೧೯ಆದುದರಿಂದ ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ, ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ.
20 मोर्दकैले यी कुराहरूका विवरण गरे, अनि राजा अहासूरसका टाढा र नजिकका सबै प्रान्तमा भएका सबै यहूदीलाई चिट्ठीहरू पठाए,
೨೦ಮೊರ್ದಕೈಯು ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಯೆಹೂದ್ಯರಿಗೆ ಪತ್ರಗಳ ಮುಖಾಂತರ ತಿಳಿಯಪಡಿಸಿದ ಸಂಗತಿಗಳು:
21 जसमा हरेक वर्ष अदार महिनाको चौधौँ र पन्ध्रौ दिनलाई तिनीहरूले अनिवार्य मान्नुपर्ने गराए ।
೨೧ಪ್ರತಿವರ್ಷವೂ ಫಾಲ್ಗುಣಮಾಸದ ಹದಿನಾಲ್ಕನೆಯ ಮತ್ತು ಹದಿನೈದನೆಯ ದಿನಗಳನ್ನು ಉತ್ಸವದಿನಗಳನ್ನಾಗಿ ಆಚರಿಸುವುದು ಶಾಶ್ವತನಿಯಮ ಎಂದೆಣಿಸಬೇಕು.
22 यी दिनमा नै यहूदीहरूले आफ्ना शत्रुहरूबाट छुटकारा पाए, र यही महिनामा नै तिनीहरूको दुःख आनन्दमा र शोक उत्सवमा परिणत भएको थियो । ति दिनलाई तिनीहरूले चाड र हर्षका दिनको रूपमा मनाउनुपर्ने अनि एक-अर्कालाई र गरिबहरूलाई खनेकुरा उपहार पठाउनुपर्ने भनी स्थापित गरियो ।
೨೨ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು.
23 त्यसैले मोर्दकैले तिनीहरूलाई जे लेखेका थिए त्यो गरेर यहूदीहरूले थालनी गरेका उत्सवलाई तिनीहरूले निरन्तरता दिए ।
೨೩ಅದರಂತೆ ಯೆಹೂದ್ಯರು ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾದದ್ದನ್ನು ಅಂಗೀಕರಿಸಿ, ಆ ವರ್ಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಿ ಆಚರಿಸಬೇಕೆಂದು ಗೊತ್ತುಮಾಡಿಕೊಂಡರು.
24 त्यस बेला सारा यहूदीका शत्रु अगागी हम्मदाताको छोरा हामानले, यहूदीहरूलाई नष्ट गर्न तिनीहरूको विरुद्धमा षड्यन्त्र रचेको थियो, र तिनीहरूलाई थिचोमिचो गर्न र नाश पार्न उसले ‘पुर’ अर्थात् चिट्ठा हाल्यो ।
೨೪ಎಲ್ಲಾ ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡು ಅವರನ್ನು ತಳಮಳಗೊಳಿಸಿ ಹಾಳುಮಾಡುವುದರ ವಿಷಯವಾಗಿ ಪೂರ್ ಅಂದರೆ ಚೀಟನ್ನು ಹಾಕಿಸಿದನಲ್ಲಾ.
25 तर जब त्यो कुरो राजाको सामु पुग्यो, तब यहूदीहरूको विरुद्धमा हामानले रचेको दुष्ट योजना त्यसकै थाप्लोमा परोस् अनि ऊ र उसका छोराहरूलाई फाँसीको काठमा झुण्ड्याइयोस् भनी राजाले चिट्ठीहरू लेखेर आदेश दिए ।
೨೫ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ.
26 त्यसकारण तिनीहरूले यी दिनलाई “पूरीम” भने जुन “पूर” नामबाट आएको थियो । यस पत्रमा लेखिएको र तिनीहरूले देखेका र तिनीहरूमाथि आइपरेका हरेक कुराको कारणले गर्दा,
೨೬ಆ “ಪೂರ್” ಎಂಬ ಶಬ್ದದ ಆಧಾರದಿಂದ ಆ ದಿನಗಳಿಗೆ “ಪೂರೀಮ್” ಎಂದು ಹೆಸರಾಯಿತು.
27 यहूदीहरूले नयाँ चलन र कर्तव्यलाई स्वीकार गरे । यो चलन तिनीहरू, तिनीहरूका सन्तानहरू र तिनीहरूसँग मिल्ने हरेकको लागि थियो । हरेक वर्ष तिनीहरूले यी दुई दिनको उत्सव मनाउनुपर्ने भयो । हरेक वर्ष उही समयमा तिनीहरूले विशेष तवरले यो चाड मान्नुपर्ने भयो ।
೨೭ಯೆಹೂದ್ಯರು ಆ ಪತ್ರದ ಮಾತುಗಳನ್ನೂ ಅವುಗಳ ಸಂಬಂಧವಾಗಿ ತಾವೇ ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ ಮನಸ್ಸಿಗೆ ತೆಗೆದುಕೊಂಡು,
28 हरेक पुस्ता, हरेक परिवार, हरेक प्रान्त र हरेक सहरमा यी दिनमा उत्सव मनाउनुपर्ने र पालन गर्नुपर्ने भयो । पूरीमका यी दिनहरूलाई यहूदीहरूले कहिल्यै नबिर्सून् भनेर तिनीहरू र तिनका सन्तानहरूले विश्वस्ततासाथ यो उत्सव मान्न कहिल्यै पनि छोड्दैनन् ।
೨೮ಪ್ರತಿವರ್ಷವೂ ಆ ಎರಡು ದಿನಗಳನ್ನು ಅವುಗಳ ಕುರಿತಾದ ಶಾಸನದ ಪ್ರಕಾರ ನೇಮಿತವಾದ ಕಾಲದಲ್ಲಿ ಆಚರಿಸುವುದು ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಮೀರಬಾರದ ಪದ್ಧತಿ ನಿಯಮಗಳಾಗಬೇಕೆಂದೂ ಯುಗಯುಗಾಂತರಗಳಲ್ಲಿ ಎಲ್ಲಾ ಗೋತ್ರ ಸಂಸ್ಥಾನ ನಗರಗಳವರು ಈ ಪೂರೀಮ್ ಹಬ್ಬದ ಆಚರಣೆ ಯೆಹೂದ್ಯರಲ್ಲಿ ಎಂದೂ ನಿಂತುಹೋಗಬಾರದು. ಅದರ ಜ್ಞಾಪಕವು ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ಗೊತ್ತುಮಾಡಿಕೊಂಡರು.
29 अबीहेलकी छोरी रानी एस्तर र यहूदी मोर्दकैले पुरा अधिकारसाथ लेखे र पूरीमको बारेमा यो दोस्रो चिट्ठीले पुष्टि गरे ।
೨೯ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಅಧಿಕಾರಯುಕ್ತಳಾಗಿ ಪೂರೀಮ್ ಸಂಬಂಧವಾದ ಆ ಎರಡನೆಯ ಶಾಸನವನ್ನು ದೃಢಪಡಿಸುವುದಕ್ಕೋಸ್ಕರ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಪತ್ರಗಳನ್ನು ಬರೆದಳು.
30 यहूदीहरूको सुरक्षा र सत्यताको कामना गर्दै चिट्ठीहरू अहासूरसका राज्यका एक सय सत्ताइसवटै प्रान्तका सबै यहूदीहरूकहाँ पठाइए ।
೩೦ಅವನು ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿದ್ದ ಯೆಹೂದ್ಯರೆಲ್ಲರಿಗೂ ಪತ್ರವನ್ನು ಕಳುಹಿಸಿದನು.
31 यहूदी मोर्दकै र रानी एस्तरले यहूदीहरूलाई आज्ञा दिएझैँ तिनीहरूको तोकिएको समयमा पूरीमका यी दिन मान्न चिट्ठीहरूले निश्चयता दिए । यहूदीहरूले उपवास र विलापको समयलाई स्वीकार गरेझैँ तिनीहरूले आफू र आफ्ना सन्तानहरूका लागि यस कर्तव्यलाई पनि स्वीकार गरे ।
೩೧ಆಕೆಯು ದಯಾಸತ್ಯತೆಗಳುಳ್ಳ ಮಾತುಗಳಿಂದ ಆ ಪತ್ರಗಳಲ್ಲಿ, “ಯೆಹೂದ್ಯರು ತಮ್ಮಲ್ಲಿಯೂ ಮತ್ತು ತಮ್ಮ ಸಂತಾನದವರಲ್ಲಿಯೂ ಉಪವಾಸ ಮತ್ತು ಪ್ರಲಾಪ ದಿನಗಳನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ತಾವೇ ಗೊತ್ತುಮಾಡಿಕೊಂಡ ಪ್ರಕಾರ ಈ ಪೂರೀಮ್ ದಿನಗಳನ್ನೂ ನನ್ನ ಮತ್ತು ಯೆಹೂದ್ಯನಾದ ಮೊರ್ದೆಕೈಯ ನಿರೂಪದಂತೆ ಪ್ರತಿವರ್ಷ ತಪ್ಪದೆ ನೇಮಿತವಾದ ಕಾಲದಲ್ಲಿ ಆಚರಿಸಬೇಕು” ಎಂದು ಬರೆದಿದ್ದಳು.
32 एस्तरको आज्ञाले पूरीमको सम्बन्धमा यी नियमहरूलाई पक्का गर्यो, र यसलाई पुस्तकमा लेखियो ।
೩೨ಎಸ್ತೇರಳ ಆ ಅಪ್ಪಣೆ ಪೂರೀಮ್ ಹಬ್ಬವನ್ನು ಸ್ಥಾಪಿಸಿತು. ಆ ನಿರೂಪವು ಅಪ್ಪಣೆಯು ಗ್ರಂಥದಲ್ಲಿ ದಾಖಲಿಸಲ್ಪಪಟ್ಟಿತು.