< प्रस्थान 13 >

1 तब परमप्रभुले मोशालाई यसो भन्‍नुभयो,
ಯೆಹೋವನು ಮೋಶೆಯ ಸಂಗಡ ಮಾತನಾಡಿ,
2 “इस्राएलीहरूमध्येका मानिस र पशुहरू दुवैबाट पहिले जन्मेका सबै नरलाई मेरो निम्ति अलग गर् । पहिले जन्मेकाहरू मेरा हुन् ।”
“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.
3 मोशाले मानिसहरूलाई भने, “आजको दिन सम्झना राख । आजकै दिन परमप्रभुको शक्तिशाली हातद्वारा तिमीहरू मिश्रको दासत्वबाट यस ठाउँमा ल्याइएका छौ । खमिर हालेको कुनै पनि रोटी खाइनेछैन ।
ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.
4 तिमीहरू आबीब महिनाको आजकै दिनमा मिश्रबाट बाहिर जाँदै छौ ।
ಚೈತ್ರ ಮಾಸದ ಈ ದಿನದಲ್ಲೇ ನೀವು ಹೊರಗೆ ಬಂದಿರುವಿರಿ.
5 परमप्रभुले तिमीहरूलाई कनानी, हित्ती, एमोरी, हिव्वी र यबूसीहरूको दूध र मह बग्‍ने देशमा लैजानुहुँदा तिमीहरूले यही महिनामा आराधनाको यो चाड मान्‍नू ।
ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು.
6 सात दिनसम्म तिमीहरूले खमिर नहालेको रोटी खानू । सातौँ दिनमा परमप्रभुको निम्ति चाड हुनेछ ।
ಏಳು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು, ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಆಚರಿಸಬೇಕು.
7 सात दिनसम्म खमिर नहालेको रोटी खानू । खमिर हालेको रोटी तिमीहरूका बिचमा नदेखियोस् ।
ಆ ಏಳು ದಿನವೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮಾತ್ರವಲ್ಲದೆ, ನಿಮ್ಮಲ್ಲಿ ಹುಳಿಹಿಟ್ಟು ಕಾಣಿಸಬಾರದು. ಇಲ್ಲವೆ ಹುಳಿಹಿಟ್ಟು ನಿಮ್ಮ ಗಡಿಯಲ್ಲೇ ಕಾಣಬಾರದು.
8 त्यस दिन तिमीहरूले आ-आफ्ना छोराछोरीहरूलाई भन्‍नू, 'म मिश्रबाट बाहिर आउँदा परमप्रभुले मेरो निम्ति जे गर्नुभएको थियो, त्यसैको खातिर मैले यसो गरेको हुँ ।'
ಆ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ನಮ್ಮ ಜನರು ಐಗುಪ್ತ ದೇಶದಿಂದ ಹೊರಟು ಬಂದಾಗ ಯೆಹೋವನು ನಮಗೋಸ್ಕರ ಮಾಡಿದ್ದನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ಈ ಆಚರಣೆಯನ್ನು ಆಚರಿಸುತ್ತೇವೆ.
9 यो तिमीहरूका निम्ति हातमा र तिमीहरूको निधारमा सम्झना गराउने कुरो हुनेछ । परमप्रभुको शक्तिशाली हातले तिमीहरूलाई मिश्रबाट बाहिर ल्याएकोले तिमीहरूको मुखमा यो उहाँको विधि हुनेछ ।
ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.
10 त्यसकारण वर्षैपिच्छे तिमीहरूले तोकिएको समयमा यो विधिको पालन गर्नू ।
೧೦ಹೀಗಿರುವುದರಿಂದ ಪ್ರತಿವರ್ಷವು ನಿಯಮಿತವಾದ ಕಾಲದಲ್ಲಿ ನೀವು ಈ ಆಚರಣೆಯನ್ನು ಮಾಡಬೇಕು.
11 परमप्रभुले तिमीहरू र तिमीहरूका पिता-पुर्खाहरूसित शपथ खानुभएझैँ उहाँले तिमीहरूलाई कनानीहरूको देशमा पुर्‍याई त्यो देश तिमीहरूलाई दिनुहुँदा
೧೧“ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಪ್ರಮಾಣಮಾಡಿದ ಪ್ರಕಾರ ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಆ ದೇಶವನ್ನು ನಿಮಗೆ ಕೊಟ್ಟ ನಂತರ,
12 तिमीहरूले हरेकको गर्भको पहिले फल परमप्रभुको निम्ति अलग गर्नू ।
೧೨ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮ ಗರ್ಭಫಲವು ಗಂಡಾದ ಪಕ್ಷಕ್ಕೆ ಅದು ಯೆಹೋವನ ಭಾಗವೆಂದು ತಿಳಿದುಕೊಂಡು ಅದನ್ನು ಆತನಿಗೆ ಸಮರ್ಪಿಸಬೇಕು.
13 गधाको हरेक पहिलो फललाई एउटा पाठोद्वारा छुटाउनू । त्यो छुटाएनौ भने त्यसको घाँटी निमोठिदिनू । तर तिमीहरूका सबै छोराका बिचमा पहिलो फललाई तिमीहरूले छुटाउनैपर्छ ।
೧೩ಮೊದಲು ಹುಟ್ಟಿದ ಕತ್ತೆಯ ಚೊಚ್ಚಲಮರಿಗೆ ಬದಲಾಗಿ ಕುರಿಮರಿಯನ್ನು ಬಿಡಿಸಿಕೊಳ್ಳಬಹುದು. ಹಾಗೆ ಬಿಡಿಸದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲ ಗಂಡು ಮಕ್ಕಳನ್ನು ಯೆಹೋವನಿಗಾಗಿ ಬಿಡಿಸಿಕೊಳ್ಳಲೇ ಬೇಕು.
14 'यसको मतलब के हो?' भनी पछि तिमीहरूको छोरोले सोध्दा तिमीहरूले यसो भन्‍नू, 'परमप्रभुले शक्तिशाली हातद्वारा हामीलाई मिश्रको दासत्वबाट निकालेर ल्याउनुभयो ।
೧೪ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.
15 हठी भएर फारोले हामीलाई जान दिन इन्कार गर्दा परमप्रभुले मिश्र देशमा मानिस र पशु दुवैका सबै पहिले जन्मेकाहरूलाई मार्नुभयो । त्यसकारण म हरेक पशुको पहिले जन्मेको नरलाई परमप्रभुको निम्ति बलिदान चढाउँछु, र मेरा छोराहरूमध्ये जेठोलाई छुटाउँछु ।'
೧೫ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು.
16 यो तिमीहरूको हात र तिमीहरूको निधारमा सम्झना दिलाउने कुरो हुनेछ किनकि परमप्रभुको शक्तिशाली हातद्वारा उहाँले हामीलाई मिश्रबाट बाहिर ल्याउनुभएको थियो ।”
೧೬ಯೆಹೋವನು ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವುದರ ಗುರುತಾಗಿ ಅದನ್ನು ನಿಮ್ಮ ಕೈಗಳ ಮೇಲೆಯೂ, ಹಣೆಯ ಮೇಲೆ ಜ್ಞಾಪಕಪಟ್ಟಿಯಂತೆಯೂ ಇರಬೇಕು.
17 फारोले मानिसहरूलाई जान दिएपछि परमेश्‍वरले तिनीहरूलाई पलिश्तीको देशको बाटो नजिकै भए तापनि त्यहाँबाट भएर अगुवाइ गर्नुभएन । किनकि उहाँले भन्‍नुभयो, “तिनीहरूले लडाइँ देखेर तिनीहरूको मन बद्ली तिनीहरू मिश्रमा नै फर्केर जान सक्छन् ।”
೧೭ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, “ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂದಿರುಗಿ ಹೋದಾರೂ” ಎಂದು ಹೇಳಿದನು.
18 त्यसैले परमेश्‍वरले ती मानिसहरूलाई उजाड-स्थानको बाटो भएर लाल समुद्रतिर लैजानुभयो । इस्राएलीहरू युद्धको लागि सशस्‍त्र भई मिश्र देशबाट अगि बढे ।
೧೮ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು ಯುದ್ಧಸನ್ನದ್ದರಾಗಿ ಐಗುಪ್ತ ದೇಶದೊಳಗಿಂದ ಹೊರಟುಬಂದರು.
19 मोशाले योसेफको अस्थि आफूसितै लगे किनकि योसेफले इस्राएलीहरूलाई यसरी गम्भीरतापूर्वक शपथ खान लगाएका थिए, “निश्‍चय नै परमेश्‍वरले तिमीहरूलाई छुटकारा दिनुहुनेछ र तिमीहरूले मेरो अस्थि आफूसितै लैजानू ।”
೧೯ಇದಲ್ಲದೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸಿ ತನ್ನ ವಾಗ್ದಾನವನ್ನು ನೆರವೇರಿಸುವವನಾಗಿರುವುದರಿಂದ ನೀವು ಹೋಗುವಾಗ ನನ್ನ ದೇಹದ ಅಸ್ತಿಮೂಳೆಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು” ಎಂದು ಖಂಡಿತವಾದ ಪ್ರಮಾಣವನ್ನು ಮಾಡಿಸಿದ್ದರಿಂದ ಮೋಶೆಯು ಅವನ ಮೂಳೆಗಳನ್ನು ತನ್ನ ಸಂಗಡ ತೆಗೆದುಕೊಂಡು ಹೋದನು.
20 इस्राएलीहरू सुक्‍कोतबाट यात्रा गरी उजाड-स्थानको नजिकै एथाममा आइपुगे र त्यहाँ तिनीहरूले पाल टाँगे ।
೨೦ಅವರು ಸುಕ್ಕೋತಿನಿಂದ ಪ್ರಯಾಣ ಮಾಡಿ ಮರಳುಗಾಡಿನ ಅಂಚಿನಲ್ಲಿರುವ ಏತಾಮಿನಲ್ಲಿ ಪಾಳೆಯಮಾಡಿ ಇಳಿದುಕೊಂಡರು.
21 परमप्रभु दिनमा बादलको खाँबो बनी तिनीहरूको अगिअगि जानुहुन्थ्यो । रातमा आगोको खाँबो बनी उहाँले तिनीहरूलाई ज्योति दिनुहुन्थ्यो । यसरी तिनीहरू दिन र रातमा यात्रा गर्न सक्थे ।
೨೧ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.
22 परमप्रभुले दिनमा बादलको खाँबो र रातमा आगोको खाँबो मानिसहरूबाट हटाउनुभएन ।
೨೨ಹಗಲಿನಲ್ಲಿ ಮೇಘಸ್ತಂಭವಾಗಿ, ರಾತ್ರಿಯಲ್ಲಿ ಅಗ್ನಿಸ್ತಂಭವಾಗಿ ಜನರನ್ನು ಬಿಟ್ಟು ಹೋಗದೆ ಅಲ್ಲಿಯೇ ಇರುತ್ತಿದ್ದನು.

< प्रस्थान 13 >