< प्रस्थान 9 >
1 तब परमप्रभुले मोशालाई भन्नुभयो, “फारोकहाँ गएर भन्, 'हिब्रूहरूका परमप्रभु यसो भन्नुहुन्छः मेरो आराधना गर्नलाई मेरो मानिसहरूलाई जान दे ।
೧ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು, ಫರೋಹನ ಬಳಿಗೆ ಹೋಗಿ ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬುದಾಗಿ ಹೇಳಿದ್ದಾನೆ.
2 तैँले तिनीहरूलाई जान दिन इन्कार गरिस् र तिनीहरूलाई अझै पनि रोकिस् भने
೨ನೀನು ಅವರಿಗೆ ಅಪ್ಪಣೆ ಕೊಡದೆ ಇನ್ನೂ ಅವರನ್ನು ತಡೆದರೆ,
3 परमप्रभुको हात खेतहरू, घोडाहरू, गधाहरू, ऊँटहरू, गाईवस्तुहरू र भेडा-बाख्राहरूमाथि पर्नेछ र यसले डरलाग्दो रोग उत्पन्न गराउनेछ ।
೩ಯೆಹೋವನು ಅಡವಿಯಲ್ಲಿರುವ ನಿನ್ನ ಎಲ್ಲಾ ಪಶುಗಳಿಗೂ, ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲವುಗಳಿಗೂ ವಿರೋಧವಾಗಿ ತನ್ನ ಕೈಯನ್ನು ಎತ್ತಿ ಘೋರವ್ಯಾಧಿಯನ್ನು ಉಂಟುಮಾಡುವನೆಂದು ತಿಳಿದುಕೋ.
4 परमप्रभुले इस्राएलका गाईवस्तु र मिश्रका गाईवस्तु छुट्ट्याउनेहुनेछ र इस्राएलीहरूको कुनै पनि गाईवस्तु मर्नेछैन ।
೪ಯೆಹೋವನು ಇಸ್ರಾಯೇಲರ ಪಶುಗಳಿಗೂ, ಐಗುಪ್ತರ ಪಶುಗಳಿಗೂ ವ್ಯತ್ಯಾಸವನ್ನುಂಟು ಮಾಡುವನು. ಇಸ್ರಾಯೇಲರಿಗಿರುವ ಪಶುಗಳಲ್ಲಿ ಒಂದೂ ಸಾಯುವುದಿಲ್ಲ’ ಎಂದು ಹೇಳಬೇಕು” ಎಂದನು.
5 परमप्रभुले समय निधो गरिसक्नुभएको छ । उहाँले भन्नुभएको छ, “भोलि यस देशमा म यो काम गर्नेछु ।”
೫ಇದಲ್ಲದೆ ಯೆಹೋವನು, “ನಿರ್ದಿಷ್ಟವಾದ ಸಮಯವನ್ನು ನೇಮಿಸಿ, ನಾಳೆಯೇ ಈ ಕಾರ್ಯವನ್ನು ಈ ದೇಶದಲ್ಲಿ ಮಾಡುವನು ಎಂದು ಹೇಳು” ಎಂದನು.
6 परमप्रभुले अर्को दिन त्यही गर्नुभयो । मिश्रका सबै गाईवस्तु मरे, तर इस्राएलीहरूका पशुहरू भने जीवितै रहे, एउटै पनि मरेन ।
೬ಮರುದಿನ ಯೆಹೋವನು ಆ ಕಾರ್ಯವುಂಟಾಗುವಂತೆ ಮಾಡಿದನು. ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.
7 फारोले अनुसन्धान गर्दा इस्राएलीहरूका एउटै पनि पशु नमेरोको पाए । तर तिनको ह्रदय हठी भयो, त्यसैले तिनले मानिसहरूलाई जान दिएनन् ।
೭ಫರೋಹನು ವಿಚಾರಿಸಿದಾಗ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂಬುದನ್ನು ತಿಳಿದುಕೊಂಡನು. ಆದರೂ ಫರೋಹನ ಹೃದಯವು ಕಠಿಣವಾಗಿದ್ದರಿಂದ ಆ ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲಿಲ್ಲ.
8 तब परमप्रभुले मोशा र हारूनलाई भन्नुभयो, “भट्टीबाट मुट्ठीभर खरानी लेओ । तँ मोशाले फारोले हेरिरहँदा त्यस खरानीलाई आकाशमा फ्याँक्नू ।
೮ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ಒಲೆಯ ಬೂದಿಯನ್ನು ಕೈತುಂಬಾ ತೆಗೆದುಕೊಳ್ಳಿರಿ. ಮೋಶೆ ಅದನ್ನು ಫರೋಹನ ಕಣ್ಣುಗಳ ಮುಂದೆ ಆಕಾಶದ ಕಡೆಗೆ ತೂರಲಿ.
9 ती मिश्र देशभरि मसिनो धुलो बन्नेछन् । तिनले मिश्र देशका सबै मानिस र पशुहरूमा फोका र खटिरा ल्याउनेछन् ।”
೯ಆಗ ಅದು ಐಗುಪ್ತ ದೇಶದಲ್ಲೆಲ್ಲಾ ಧೂಳಿನ ಕಣಗಳಾಗಿ ಮಾರ್ಪಟ್ಟು ಅದು ಐಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವವು” ಎಂದು ಹೇಳಿದನು.
10 त्यसैले मोशा र हारूनले भट्टीबाट खरानी लिएर फारोको सामुन्ने खडा भए । त्यसपछि मोशाले खरानीलाई हावामा फ्याँके । खरानीले मानिस र पशुहरूमा फोका र खटिरा ल्याए ।
೧೦ಅದರಂತೆ ಮೋಶೆ ಮತ್ತು ಆರೋನರು ಒಲೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಆ ಬೂದಿಯನ್ನು ಆಕಾಶದ ಕಡೆಗೆ ತೂರಿದನು. ಆಗ ಅದು ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹರಡಿ ಹುಣ್ಣುಗಳಾಗುವಂತೆ ಬೊಕ್ಕೆಗಳನ್ನೆಬ್ಬಿಸಿತು.
11 फोकाको कारणले जादुगरहरूले मोशाको विरोध गर्न सकेनन् । किनकि फोका सबै मिश्रीमाथि आइपरेको थियो ।
೧೧ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಐಗುಪ್ತ್ಯರ ಮೇಲೆಯೂ ಎದ್ದಿದ್ದವು.
12 परमप्रभुले फारोको ह्रदय कठोर पारिदिनुभयो । त्यसैले फारोले मोशा र हारूनको कुरा सुनेनन् । फारोले मोशाको कुरा सुन्नेथिएन भनी परमप्रभुले भन्नुभएझैँ भयो ।
೧೨ಆದರೂ ಯೆಹೋವನು ಮೋಶೆಗೆ ಹೇಳಿದಂತೆಯೇ ಆಯಿತು. ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.
13 त्यसपछि परमप्रभुले मोशालाई भन्नुभयो, “बिहान सबेरै उठेर फारोको सामुन्ने खडा हो र त्यसलाई भन्, 'हिब्रूहरूका परमप्रभु परमेश्वर यसो भन्नुहुन्छः मेरो आराधना गर्न मेरा मानिसहरूलाई जान दे ।
೧೩ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.
14 किनकि यो पटक तँ, तेरा अधिकारीहरू र तेरा मानिसहरूमाथि म मेरा सबै विपत्ति ल्याउनेछु । सारा पृथ्वीमा मजस्तो कोही रहेनछ भनी तैँले जान् भनी म यसो गर्नेछु ।
೧೪ಈ ಸಾರಿ ನಾನು ನನ್ನ ವಶದಲ್ಲಿರುವ ಈ ಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ, ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಆದುದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳಿದುಕೊಳ್ಳುವಿ.
15 यति बेलासम्म त मैले मेरो हात पसारेर तँ र तेरा मानिसहरूलाई रोगले आक्रमण गरेको भए तँ यस धरतीबाट मटिनेथिइस् ।
೧೫ನಾನು ಕೈಯನ್ನೆತ್ತಿ ನಿನ್ನನ್ನೂ, ನಿನ್ನ ಪ್ರಜೆಗಳನ್ನೂ, ವ್ಯಾಧಿಯಿಂದ ಬಾಧಿಸುವೆನು. ನಿನ್ನನ್ನು ಭೂಮಿಯೊಳಗಿಂದ ನಿರ್ಮೂಲ ಮಾಡುವೆನು.
16 मेरो नाउँ सारा पृथ्वीभरि घोषणा हुन सकोस् भनेर मेरो शक्ति देखाउनलाई मैले तँलाई जीवित रहने अनुमति दिएँ ।
೧೬ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.
17 मेरा मानिसहरूलाई जान नदिएर तैँले अझै पनि आफूलाई उचालिरहेको छस् ।
೧೭ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?
18 सुन्! भोलि यसै बेलातिर म निकै शक्तिशाली असिना बर्साउनेछु जुन मिश्र सुरु भएदेखि आजको दिनसम्म बर्सिएको छैन ।
೧೮ಹಾಗಾದರೆ, ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಐಗುಪ್ತ ರಾಜ್ಯವು ಸ್ಥಾಪಿತವಾದ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿರುವುದಿಲ್ಲ.
19 अब मानिसहरू पठाएर तेरा खेतहरूमा भएका तेरा गाईवस्तु र हरेक जे-जति छन् तिनलाई सुरक्षित स्थानमा जम्मा गर् । खेतमा भएका र घरमा नल्याइएका हरेक मानिस र पशुमाथि असिना बर्सनेछ र तिनीहरू मर्नेछन् ।”
೧೯ಆದಕಾರಣ ನೀನು ಆಳುಗಳನ್ನು ಕಳುಹಿಸಿ ನಿನ್ನ ಪಶುಗಳನ್ನೂ, ನಿನಗೆ ಹೊಲದಲ್ಲಿರುವುದೆಲ್ಲವನ್ನೂ ಬೇಗ ಭದ್ರಪಡಿಸು. ಮನೆಯೊಳಗೆ ಬಾರದೆ ಬಯಲಿನಲ್ಲೇ ಇರುವ ಎಲ್ಲಾ ಮನುಷ್ಯರೂ, ಪಶುಗಳೂ ಆ ಕಲ್ಲಿನ ಮಳೆಯ ಹೊಡೆತದಿಂದ ಸಾಯುವರು’” ಎಂದು ಹೇಳಿದನು.
20 परमप्रभुको सन्देशमा विश्वास गर्ने फारोका अधिकारीहरूले दासदासीहरू र गाईवस्तुहरूलाई घरहरूमा हुल्न हतार गरे ।
೨೦ಆಗ ಫರೋಹನ ಸೇವಕರಲ್ಲಿ ಯಾರಾರು ಯೆಹೋವನ ಮಾತಿಗೆ ಹೆದರಿದರೋ ಅವರು ತಮ್ಮ ಆಳುಗಳನ್ನೂ ಪಶುಗಳನ್ನೂ ಬೇಗ ಮನೆಗೆ ಬರಮಾಡಿಕೊಂಡರು.
21 तर परमप्रभुको सन्देशलाई गम्भीरतापूर्वक नलिनेहरूले तिनीहरूका दासदासीहरू र गाईवस्तुहरूलाई खेतहरूमा छाडिदिए ।
೨೧ಯಾರು ಯೆಹೋವನ ಮಾತನ್ನು ಮನಸ್ಸಿಗೆ ತೆಗೆದುಕೊಳ್ಳಲಿಲ್ಲವೋ, ಅವರು ತಮ್ಮ ಆಳುಗಳನ್ನೂ, ಪಶುಗಳನ್ನೂ ಹೊಲದಲ್ಲಿಯೇ ಬಿಟ್ಟರು.
22 तब परमप्रभुले मोशालाई भन्नुभयो, “तेरो हात आकाशमाथि पसार् ताकि मिश्र देशमा असिना बर्सोस् । ती मिश्र देशभरिका मानिसहरू, पशुहरू खेतमा भएका सबै बोट-बिरुवामा बर्सून् ।”
೨೨ಯೆಹೋವನು ಮೋಶೆಗೆ, “ಆಕಾಶಕ್ಕೆ ನಿನ್ನ ಕೈಚಾಚು, ಆಗ ಐಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಹೊಲದಲ್ಲಿರುವ ಎಲ್ಲಾ ಪೈರುಗಳ ಮೇಲೆಯೂ ಆನೆಕಲ್ಲಿನ ಮಳೆ ಬೀಳುವುದು” ಎಂದು ಹೇಳಿದನು.
23 मोशाले आफ्नो लट्ठी आकाशतिर पसारे र परमप्रभुले जमिनमा गर्जन, असिना र बिजुली पठाइदिनुभयो । उहाँले मिश्र देशमा असिना बर्साइदिनुभयो । बिजुलीसँगै असिना मिसिएर आएको थियो ।
೨೩ಮೋಶೆಯು ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಯೆಹೋವನು ಗುಡುಗನ್ನು, ಆನೆಕಲ್ಲಿನ ಮಳೆಯನ್ನು ಕಳುಹಿಸಿದನು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಯೆಹೋವನು ಐಗುಪ್ತ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.
24 यो यति डरलाग्दो थियो कि मिश्र राज्य भएदेखि त्यस देशमा यस्तो कहिल्यै भएको थिएन ।
೨೪ಆನೆಕಲ್ಲಿನ ಮಳೆಯು ಬಹು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತಿತ್ತು. ಐಗುಪ್ತ್ಯದವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ.
25 मिश्र देशभरि असिनाले खेतमा भएका हरेक कुरासाथै मानिस र पशुहरू दुवैलाई प्रहार गर्यो । यसले खेतहरूमा भएको हरेक बोट-बिरुवालाई प्रहार गर्नुका साथै हरेक रुख भाँचिदियो ।
೨೫ಆ ಮಳೆಯಿಂದ ಐಗುಪ್ತ ದೇಶದ ಎಲ್ಲಾ ಕಡೆಗಳಲ್ಲಿದ್ದ ಮನುಷ್ಯರು, ಪಶುಗಳು, ಬಯಲಿನಲ್ಲಿದ್ದ ಎಲ್ಲವೂ ನಾಶವಾದವು. ಆನೆಕಲ್ಲಿನ ಮಳೆಯಿಂದ ಹೊಲಗಳಲ್ಲಿದ್ದ ಪೈರುಗಳು ಹಾಳಾದವು. ಹೊಲಗಳಲ್ಲಿದ್ದ ಮರಗಳು ಮುರಿದುಹೋದವು.
26 इस्राएलीहरू बसेको गोशेन प्रदेशमा मात्र असिना परेको थिएन ।
೨೬ಇಸ್ರಾಯೇಲರು ವಾಸವಾಗಿದ್ದ ಗೋಷೆನ್ ಸೀಮೆಯಲ್ಲಿ ಮಾತ್ರ ಆನೆಕಲ್ಲಿನ ಮಳೆ ಬೀಳಲಿಲ್ಲ.
27 त्यसपछि फारोले मोशा र हारूनलाई बोलाउन मानिसहरू पठाए । तिनले तिनीहरूलाई भने, “यस पटक मैले पाप गरेको छु । परमप्रभु धर्मी हुनुहुन्छ अनि म र मेरा मानिसहरू दुष्ट छौँ ।
೨೭ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಯೆಹೋವನು ನ್ಯಾಯವಂತನು. ನಾನೂ ನನ್ನ ಜನರೂ ದೋಷಿಗಳು.
28 परमप्रभुलाई बिन्ती चढाऊ किनकि शक्तिशाली गर्जन र असिना अति भएका छन् । म तिमीहरूलाई जान दिनेछु र अब उसो तिमीहरू यहाँ बस्नुपर्नेछैन ।”
೨೮ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸುವುದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೊರಡುವುದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ” ಎಂದನು.
29 मोशाले तिनलाई भने, “मैले सहर छाड्ने बित्तिकै म मेरो हात परमप्रभुतिर फैलाउनेछु । गर्जन रोकिनेछ र अब उसो असिना पर्नेछैन । यसरी पृथ्वी परमप्रभुको हो रहेछ भनी तपाईंले थाहा पाउनुहुनेछ ।
೨೯ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೇ ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಆನೆಕಲ್ಲಿನ ಮಳೆಯು ನಿಂತುಹೋಗುವದು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧೀನದಲ್ಲಿದೆ ಎಂದು ನೀನು ತಿಳಿದುಕೊಳ್ಳುವಿ.
30 तर तपाईं र तपाईंका अधिकारीहरूको सवालमा तपाईंहरूले वास्तवमा परमप्रभुलाई आदर गर्नुहुन्न भनी म जान्दछु ।”
೩೦ಆದರೂ ನೀನಾಗಲಿ, ನಿನ್ನ ಪರಿವಾರದವರಾಗಲಿ, ದೇವರಾಗಿರುವ ಯೆಹೋವನಿಗೆ ಆಗಲೂ ಭಯಪಡುವುದಿಲ್ಲವೆಂದು ಬಲ್ಲೆನು” ಎಂದನು.
31 अब सनपाट र जौ नष्ट भए किनकि जौमा बाला लागेको थियो र सनपाटचाहिँ फुलिसकेको थियो ।
೩೧ಜವೆಗೋದಿ ಮತ್ತು ಅಗಸೆ ಬೆಳೆಗಳು ನಾಶವಾದವು. ಏಕೆಂದರೆ ಜವೆಗೋದಿ ತೆನೆ ಬಿಟ್ಟಿತ್ತು, ಅಗಸೆ ಮೊಗ್ಗು ಬಿಟ್ಟಿತ್ತು.
32 तर गहुँ र कठियागहुँलाई हानि भएन किनकि ती पछि पाक्छन् ।
೩೨ಆದರೆ ಗೋದಿ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ಹಾನಿಯಾಗಲಿಲ್ಲ.
33 जब मोशाले फारो र सहरलाई छाडे तिनले आफ्ना हात परमप्रभुतिर फैलाए । गर्जन र असिना रोकिए अनि पानी पर्न छाड्यो ।
೩೩ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಕ್ಕೆ ಬಂದು ಕೈಯನ್ನೆತ್ತಿ ಯೆಹೋವನನ್ನು ಪ್ರಾರ್ಥಿಸಿದನು. ಗುಡುಗೂ, ಆನೆಕಲ್ಲಿನ ಮಳೆಯೂ ನಿಂತುಹೋದವು.
34 वर्षा, असिना र गर्जन रोकिएको देखेपछि फारोले फेरि पाप गरे र तिनले आफ्नो ह्रदय कठोर पारे र तिनका अधिकारीहरूले पनि त्यसै गरे ।
೩೪ಆದರೆ ಆನೆಕಲ್ಲು ಮಳೆ, ಗುಡುಗು ನಿಂತುಹೋದದ್ದನ್ನು ಫರೋಹನು ಕಂಡಾಗ ಅವನೂ, ಅವನ ಪರಿವಾರದವರೂ ತಮ್ಮ ಹೃದಯಗಳನ್ನು ಕಠಿಣಮಾಡಿಕೊಂಡು ಇನ್ನೂ ಪಾಪ ಮಾಡಿದರು.
35 फारोको ह्रदय कठोर भयो । त्यसैले तिनले इस्राएलका मानिसहरूलाई जान दिएनन् । फारोले यसै गर्नेथिए भनी परमप्रभुले मोशालाई भन्नुभएको थियो ।
೩೫ಯೆಹೋವನು ಮೋಶೆಯಿಂದ ಹೇಳಿಸಿದಂತೆಯೇ ಆಯಿತು. ಫರೋಹನ ಹೃದಯವು ಕಠಿಣವಾಗಿತ್ತು. ಅವನು ಇಸ್ರಾಯೇಲರನ್ನು ಹೋಗಲು ಬಿಡಲಿಲ್ಲ.