< इजकिएल 7 >

1 परमप्रभुको वचन यसो भनेर मकहाँ आयो,
ಯೆಹೋವ ದೇವರ ವಾಕ್ಯವು ನನಗೆ ಬಂದಿತು:
2 “ए मानिसको छोरो—इस्राएलको देशलाई परमप्रभु परमेश्‍वर यसो भन्‍नुहुन्‍छ ।“'अन्‍त्‍य! देशका चारै सिमानामा अन्‍त्‍य आइपुगेको छ ।
“ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಇಸ್ರಾಯೇಲ್ ದೇಶಕ್ಕೆ ಹೀಗೆ ಹೇಳುತ್ತಾರೆ: “‘ಅಂತ್ಯವು ಬಂದಿದೆ! ಈ ದೇಶದ ನಾಲ್ಕು ಮೂಲೆಗಳಲ್ಲಿಯೂ ಅಂತ್ಯವು ಬಂದಿದೆ!
3 अब अन्‍त्‍य तँमाथि आएको छ, किनकि म आफ्‍नो क्रोध तँमाथि पठाउँदैछु, र तेरो चालअनुसार म तेरो न्‍याय गर्नेछु । तब तेरा सबै घिनलाग्‍दा कामहरू तँमाथि नै ल्याउनेछु ।
ಈಗಲೇ ನಿನಗೆ ಅಂತ್ಯವು ಬಂದಿದೆ. ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡುತ್ತೇನೆ. ನಿನ್ನ ನಡತೆಯ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯ ಕಾರ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿತೀರಿಸುವೆನು.
4 किनकि मेरा आँखाले तँलाई दया देखाउनेछैनन्, र म तँलाई छोड्नेछैन । बरु, तेरा कामहरू तँमाथि नै ल्याउनेछु, र तेरा घिनलाग्‍दा कामहरू तेरा माझमा हुनेछन्, यसरी म नै परमप्रभु हुँ भनी तैंले जान्‍नेछस्‌ ।
ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. ನಾನು ನಿನ್ನನ್ನು ಬಿಡುವುದೂ ಇಲ್ಲ. ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’
5 परमप्रभु परमेश्‍वर यसो भन्‍नुहुन्‍छः विपत्ति! विशेष विपत्ति! हेर्, त्‍यो आउँदैछ ।
“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಕೇಡು! ಎಂದೂ ಕೇಳದ ಕೇಡು, ಇಗೋ ಬಂದಿತು.
6 अन्‍त्‍यचाहिं साँच्‍चै नै आउँदैछ । अन्‍त्‍य तिमीहरूका विरुद्धमा उठेको छ । हेर्, त्यो आउँदैछ!
ಅಂತ್ಯವು ಬಂದಿತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ ಬಂದೇ ಬಂತು.
7 तिमीहरू जो देशमा बस्‍छौ, तिमीहरूको सर्वनाश आउँदैछ । समय आएको छ । सर्वनाशको दिन नजिकै छ, र पर्वतहरू आनन्‍दित हुनेछैनन् ।
ಓ ದೇಶ ನಿವಾಸಿಯೇ, ನಿನಗಾಗಿ ವಿನಾಶದ ದಿನ ಬಂದಿತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು. ಪರ್ವತಗಳ ಮೇಲೆ ಸಂತೋಷವಲ್ಲ ಭೀತಿಯಿದೆ.
8 अब चाँडै मेरो क्रोध म तँमाथि पोखाउनेछु, र मेरो रिस तेरो विरिद्धमा खन्‍याउनेछु । तेरो चालअनुसार म न्‍याय गर्नेछु, र तेरा सबै घिनलाग्‍दा कामहरू तँमाथि ल्याउनेछु ।
ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು.
9 किनकि मेरा आँखाले तँलाई दयापूर्वक हेर्नेछैनँ, र तँलाई म छोड्‍नेछैन । जस्‍तो तैंले गरेको छस् तेस्‍तै म तँलाई गर्नेछु । अनि तेरा घृणित कुराहरू तेरै माझमा हुनेछन् ताकि तँलाई दण्ड दिनेचाहिं म परमप्रभु नै हुँ भनी तैंले जान्‍नेछस्‌ ।
ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.
10 हेर्, त्‍यो दिन! हेर्, त्‍यो आउँदैछ । तेरो सर्वनाश निस्‍केर आएको छ । लट्ठी फुलेको छ, अहङ्कारको कोपिला लागेको छ!
“‘ಇಗೋ ಆ ದಿನವು ಬಂತು, ನೋಡು ವಿನಾಶದ ದಿನ ಹೊರಟುಹೋಯಿತು, ಕೋಲು ಚಿಗುರಿತು, ಅಹಂಕಾರವು ಅರಳಿತು,
11 हिंसा बढेर दुष्‍टताको लठ्ठी भएको छ—तिमध्‍ये कुनै पनि, ति भीडमध्‍ये कुनै पनि, तिनका धन-सम्‍पत्तिमध्‍ये केही पनि, र तिनीहरूका कुनै पनि बहुमूल्‍य चीज छोडिनेछैन!
ಬಲಾತ್ಕಾರವು ದುಷ್ಟತನದ ಕೋಲಿನಲ್ಲಿ ಬೆಳೆದಿತ್ತು. ಅವರಲ್ಲಿಯೂ ಅವರ ಜನಸಮೂಹದಲ್ಲಿಯೂ, ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಮೌಲ್ಯವು ಇರುವುದಿಲ್ಲ.
12 समय आउँदैछ । दिन नजिकै आएको छ । किन्‍नेले आनन्‍द नगरोस्, बेच्‍नेले शोक नगरोस्, किनकि मेरो क्रोध जम्‍मै भीडमाथि परेको छ!
ಸಮಯವು ಬಂತು, ದಿನವು ಬಂದೇಬಿಟ್ಟಿತು. ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲದಿರಲಿ, ಮಾರುವವನು ದುಃಖಿಸದಿರಲಿ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ರೌದ್ರವಿದೆ.
13 किनकि जहिलेसम्‍म ती दुवै बाँच्‍नेछन्, बेच्‍ने आफूले बेचेको जमिनमा फर्केर आउनेछैन, किनभने समस्‍त भीडको बारेमा यो दर्शन बद्‌लिनेछैन । अनि तिनीहरूका पापहरूका कारणले तिमध्ये कोही पनि बलियो पारिनेछैन!
ಮಾರಿದವನು ಎಷ್ಟು ವರ್ಷ ಬದುಕಿದರೂ, ಮಾರಿದ ಸೊತ್ತು ಅವನ ವಶಕ್ಕೆ ತಿರುಗಿ ಬಾರದು. ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಎಂದಿಗೂ ತಿರುಗದು, ಯಾರೂ ತಮ್ಮ ಪಾಪಗಳಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು.
14 तिनीहरूले तुरही फुकेका छन् र हरेक कुरा तयार पारेका छन्, तर कोही पनि युद्ध गर्न गइरहेको छैन । किनकि मेरो क्रोध ती जम्‍मै भीडमाथि छ ।
“‘ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧ ಮಾಡಿಕೊಂಡಿದ್ದಾರೆ. ಆದರೆ ಯಾರೂ ಯುದ್ಧಕ್ಕೆ ಹೋಗುವುದಿಲ್ಲ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ಕೋಪವಿದೆ.
15 घर बाहिर तरवार अनि भित्र रूढी र अनिकाल छन्‌ । खेतमा हुनेहरू तरवारले मारिनेछन्‌, जबकी सहरमा हुनेचाहिं अनिकाल र रूढीले नष्‍ट हुनेछन्‌ ।
ಹೊರಗೆ ಖಡ್ಗವೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊರಗಿರುವವರನ್ನು ಖಡ್ಗವು ಸಾಯಿಸುವುದು, ಪಟ್ಟಣದಲ್ಲಿರುವವರನ್ನು ವ್ಯಾಧಿಯೂ ಕ್ಷಾಮವೂ ತಿಂದುಬಿಡುವುದು.
16 तर तिमध्येबाट केही बाँचेर उम्‍कनेछन्, र तिनीहरू पर्वतहरूमा जानेछन् । तिनीहरू सबैले बेसीका ढुकुरझैं शोक गर्नेछन्—हरेक मानिसले आ-आफ्‍ना अधर्मको निम्ति शोक गर्नेछ ।
ಆದರೆ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಳ್ಳುವರು. ಪ್ರತಿಯೊಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಗೋಳಾಡಿ, ಪರ್ವತಗಳ ಮೇಲೆ ಇರುವರು.
17 हरेक हात शिथिल हुनेछ र हरेक घुँडा पानीझैं निर्बल हुनेछ,
ಕೈಗಳೆಲ್ಲಾ ಜೋತಾಡುವುವು, ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ಆಗುವುವು.
18 र तिनीहरूले भाङ्‌ग्रा लाउनेछन्‌ र त्रासले तिनीहरूलाई ढाक्‍नेछ । हरेक अनुहारमा लाज हुनेछ, र तिनीहरू सबैका शिरमा कपाल हुनेछैन ।
ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡುವುದು. ಎಲ್ಲಾ ಮುಖಗಳ ಮೇಲೆ ನಾಚಿಕೆಯೂ, ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವುವು.
19 तिनीहरूले आफ्‍ना चाँदी गल्‍लीहरूमा फाल्‍नेछन्, र तिनीहरूको सुन त्यागिएको चिजजस्‍तो हुनेछ । परमप्रभुका क्रोधको दिनमा तिनीहरूका चाँदी र सुनले तिनीहरूलाई बचाउन सक्‍नेछैनन्‌ । तिनीहरूको जीवन बचाइनेछैन, र तिनीहरूको भोक मेटिनेछैन, किनकि तिनीहरूको अधर्म ठेसलाग्‍ने ढुङ्गो बनेको छ ।
“‘ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ವಸ್ತುವಿನಂತಿರುವುದು. ಅವರ ಬೆಳ್ಳಿ ಬಂಗಾರಗಳು ಯೆಹೋವ ದೇವರ ಕೋಪದ ದಿವಸದಲ್ಲಿ ಅವರನ್ನು ಪಾರು ಮಾಡಲಾರವು. ಇದರಿಂದ ಅವರ ಹಸಿವು ನೀಗುವುದಿಲ್ಲ, ಅವರ ಹೊಟ್ಟೆಗಳನ್ನು ತುಂಬಿಸುವುದಿಲ್ಲ. ಏಕೆಂದರೆ ಅವರ ಆಸ್ತಿಯು ಪಾಪ ಕೃತ್ಯಗಳಿಗೆ ಕಾರಣವಾಗಿತ್ತು.
20 आफ्‍ना सुन्दर गरगहनामा तिनीहरूले घमण्‍ड गरे, र तीबाट तिनीहरूले आफ्‍ना घिनलाग्‍दा मूर्तिहरू र तिनीहरूका घृणित कुराहरू बनाए । यसकारण म यिनलाई तिनीहरूका निम्‍ति अशुद्ध थोकमा परिणत गरिदिनेछु ।
ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ
21 तब म ती थोकहरू विदेशीहरू र दुष्‍टका हातमा लुटका रूपमा दिनेछु, र उनीहरूले ती बिटुला पार्नेछन्‌ ।
ನಾನು ಅದನ್ನು ವಿದೇಶಿಯರ ಕೈಗೆ ಕೊಳ್ಳೆಯಾಗಿಯೂ, ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು. ಅವರು ಅದನ್ನು ಅಪವಿತ್ರಪಡಿಸುವರು.
22 तब तिनीहरूले मेरो वास्ता गरिएको ठाउँलाई बिटुलो पार्दा तिनीहरूदेखि म आफ्‍नो अनुहार फर्काउनेछु । लुटेराहरू त्‍यहाँ पस्‍नेछन् र त्‍यसलाई बिटुलो पार्नेछन्‌ ।
ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು. ನನ್ನ ಅತ್ಯಂತ ಅಮೂಲ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರಪಡಿಸುವರು.
23 साङ्‌ला बनाओ, किनभने देश रगतको न्यायले भरिएको छ, र सहर हिंसाले भरिएको छ ।
“‘ಸರಪಳಿಯನ್ನು ತಯಾರುಮಾಡು. ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.
24 यसैले म सबैभन्‍दा दुष्‍ट जातिलाई ल्याउनेछु, र तिनीहरूले यिनीहरूका घरहरूमाथि अधिकार गर्नेछन्, र बलिया मानिसहरूको घमण्‍ड म खतम गर्नेछु, किनकि तिनीहरूका पवित्र ठाउँहरू बिटुला पारिनेछन्‌ ।
ಆದಕಾರಣ ನಾನು ಇತರ ಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶಪಡಿಸಿಕೊಳ್ಳುವರು. ನಾನು ಬಲಿಷ್ಠರ ಅಹಂಕಾರವನ್ನು ನಿಲ್ಲಿಸುತ್ತೇನೆ. ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವುವು.
25 त्रास आउनेछ । तिनीहरूले शान्ति खोज्‍नेछन्, तर त्‍यहाँ केही हुनेछैन ।
ನಾಶವು ಬರುತ್ತದೆ. ಅವರು ಸಮಾಧಾನವನ್ನು ಹುಡುಕುತ್ತಾರೆ, ಆದರೆ ಅದು ಇರುವುದಿಲ್ಲ.
26 विपद्‌माथि विपद्‌ आउनेछ, र त्‍यहाँ हल्‍लामाथि हल्‍ला हुनेछ । तब तिनीहरूले अगमवक्ताबाट दर्शन खोज्‍नेछन्‌, तर पुजारीबाट व्‍यवस्‍था र धर्म-गुरुहरूबाट सल्‍लाह नष्‍ट हुनेछ ।
ಕೇಡಿನ ಮೇಲೆ ಕೇಡು ಬರುವುದು, ಸುದ್ದಿಯ ಮೇಲೆ ಸುದ್ದಿ ಬರುವುದು, ಅವರು ಪ್ರವಾದಿಯಿಂದ ದರ್ಶನವನ್ನು ಹುಡುಕುವರು. ಆದರೆ ಯಾಜಕರಿಂದ ನಿಯಮ ಬೋಧನೆಯು ಅಡಗಿಹೋಗುವುದು, ಹಿರಿಯರಿಂದ ಸಮಾಲೋಚನೆಯು ಇಲ್ಲವಾಗುವುದು.
27 राजाले शोक गर्नेछन् र शासकले निराशको पोशाक पहिरिनेछ, जबकि देशका मानिसहरूका हात त्रासले काँप्‍नेछन्‌ । तिनीहरूका आफ्‍नै चालअनुसार तिनीहरूलाई म यसो गर्नेछु । म नै परमप्रभु हुँ भनी तिनीहरूले नजानेसम्म तिनीहरूकै मानकअनुसार म तिनीहरूको न्‍याय गर्नेछु ।
ಅರಸನು ದುಃಖಿಸುವನು, ರಾಜಕುಮಾರನಿಗೆ ನಿರಾಶೆಯು ಅವನ ಉಡುಪಾಗಿರುತ್ತದೆ. ದೇಶದ ಜನರ ಕೈಗಳು ತತ್ತರಿಸುವುವು, ಅವರ ದುರ್ನಡತೆಗೆ ತಕ್ಕ ಪ್ರತೀಕಾರ ಮಾಡುವೆನು. ಅವರ ದುಷ್ಕರ್ಮಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. “‘ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’”

< इजकिएल 7 >