< एज्रा 4 >
1 यतिबेला निर्वासनबाट फर्केका मानिसहरूले परमप्रभु इस्राएलका परमेश्वरको लागि मन्दिर बनाउँदै छन् भनी यहूदा र बेन्यामीनका केही शत्रुहरूले सुने ।
೧ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿದ್ದಾರೆ ಎಂಬ ಸುದ್ದಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ತಿಳಿದುಬಂತು.
2 त्यसैले तिनीहरू यरुबाबेल र परिवारका मुख्य मानिसहरूकहाँ आए । तिनीहरूले उनीहरूलाई भने, “हामीलाई पनि तपाईंहरूसँगै निर्माण गर्न दिनुहोस्, किनकि अश्शूरका राजा एसरहदोनले हामीलाई यहाँ ल्याएदेखि नै तपाईंहरूजस्तै हामी तपाईंका परमेश्वरको खोजी गर्छौं, र हामीले उहाँलाई नै बलिदान चढाएका छौं ।”
೨ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, “ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ” ಎಂದು ಹೇಳಿದರು.
3 तर यरुबाबेल, येशूअ र परिवारका मुख्य मानिसहरूले भने, “तपाईंहरूले होइन, तर हामीले परमेश्वरको मन्दिर बनाउनुपर्छ, किनकि हामीले नै परमप्रभु इस्राएलका परमेश्वरको निम्ति मन्दिर बनाउनेछौं, जस्तो फारसका राजा कोरेसले आज्ञा गर्नुभएको छ ।”
೩ಆಗ ಜೆರುಬ್ಬಾಬೆಲ್, ಯೇಷೂವ ಮತ್ತು ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ, “ನೀವು ನಮ್ಮ ದೇವರ ಆಲಯ ಕಟ್ಟುವುದರಲ್ಲಿ ನಮ್ಮೊಡನೆ ಸೇರಲೇ ಕೂಡದು. ಪರ್ಷಿಯ ದೇಶದ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್ ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ” ಎಂದು ಉತ್ತರ ಕೊಟ್ಟರು.
4 त्यसैले त्यस देशका मानिसहरूले यहूदीहरूका हात कमजोर तुल्याए । तिनीहरूले निर्माणमा यहूदीहरूलाई डर देखाए ।
೪ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಧೈರ್ಯಗುಂದಿಸಿ ದೇವಾಲಯ ಕಟ್ಟದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು.
5 यहूदीहरूका योजनालाई निराश तुल्याउन तिनीहरूले सल्लाहकारहरूलाई घुस पनि दिए । तिनीहरूले फारसका राजा कोरेसको शासनकाल र दाराको शासनकालभरि नै यसो गरे ।
೫ಪರ್ಷಿಯ ರಾಜನಾದ ಕೋರೆಷನ ಕಾಲದಿಂದ ಪರ್ಷಿಯ ರಾಜನಾದ ದಾರ್ಯಾವೆಷನ ಆಳ್ವಿಕೆಯವರೆಗೂ ಇದು ಮುಂದುವರಿಯಿತು.
6 तब अहासूरस (अर्तासास्त) को शासनकालको सुरुमा तिनीहरूले यहूदा र यरूशलेमका बासिन्दाहरूको विरुद्धमा एउटा अभियोग-पत्र लेखे ।
೬ಅಹಷ್ವೇರೋಷನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ವಾಸ ಮಾಡುತ್ತಿದ್ದವರ ವಿರುದ್ಧವಾಗಿ ಆಪಾದನೆಯ ಪತ್ರವನ್ನು ಬರೆದರು.
7 अर्तासास्तको शासनकालमा विश्लाम, मित्रेता, ताबेल र तिनका सहयोगीहरूले अर्तासास्तलाई लेखे ।उक्त चिट्ठी आरमेइक भाषामा लेखियो र अनुवाद गरियो ।
೭ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್ ಈ ಮೊದಲಾದವರು ಪರ್ಷಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಮತ್ತು ಅರಾಮ್ಯ ಭಾಷೆಯಲ್ಲಿಯೂ ಇತ್ತು.
8 सेनापति रेहूम र सचिव शिम्शैले यरूशलेमको बारेमा अर्तासास्तलाई यसरी चिट्ठी लेखे ।
೮ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರು ಯೆರೂಸಲೇಮಿಗೆ ವಿರುದ್ಧವಾಗಿ ಮುಂದಿನ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದರು.
9 रेहूम, शिम्शै र तिनीहरूका सहयोगीहरू अर्थात् फारस, एरेक र बेबिलोनका मानिसहरूमाथि अधिकार गर्ने न्यायाधीशहरू र अधिकारीहरू अनि शूशनका मानिसहरू (अर्थात् एलामीहरू) ले एउटा चिट्ठी लेखे,
೯ಅದರಲ್ಲಿ, ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೂಷನಿನವರು, ದೆಹಾಯರು ಮತ್ತು ಏಲಾಮ್ಯರು.
10 र महान् अनि प्रसिद्ध अशूरवनिपलले देश निकाला गरेर सामरिया र यूफ्रेटिस नदीपारिको प्रान्तमा बसालेका मानिसहरू पनि तिनीहरूसँगै मिले ।
೧೦ಇವರೂ ಮಹಾಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು ಇತ್ಯಾದಿ ಶಿರೋಲೇಖ.
11 तिनीहरूले अर्तासास्तलाई पठाएका चिट्ठीको प्रतिलिपी यही हो, “हजुरका सेवकहरू, यूफ्रेटिस नदी पारिको प्रान्तका मानिसहरू यसो लेख्छन्:
೧೧ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, “ಅರ್ತಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯವರು.
12 हजुरकहाँबाट आएका यहूदीहरू यरूशलेममा एउटा विद्रोही सहर निर्माण गर्न हाम्रो विरुद्ध आएका छन् भन्ने कुरो राजालाई जाहेर होस् । तिनीहरूले पर्खालहरू बनाएर सिद्ध्याएका छन्, र जगहरू मर्मत गर्दैछन् ।
೧೨ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.
13 यो सहर निर्मण भयो रउक्त पर्खाल सम्पन्न भयो भने, तिनीहरूले कुनै महसुल र कर तिर्नेछैनन्, तर तिनीहरूले राजाहरूलाई हानि पुर्याउनेछन् भन्ने कुरो राजाका हजुरीमा जाहेर होस् ।
೧೩ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.
14 हामीले दरबारको नून खाएका हुनाले राजालाई कुनै अनादर भएको देख्नु हाम्रो लागि निश्चय नै उचित हुँदैन । यही कारणले गर्दा हामीले राजालाई जानकारी गराउँदैछौं,
೧೪ನಾವಂತು ಅರಮನೆಯ ಉಪ್ಪನ್ನು ತಿನ್ನುವವರಾದುದರಿಂದ ಅರಸರಿಗೆ ಅಪಮಾನವುಂಟಾಗುವುದನ್ನು ನೋಡಿ ಸುಮ್ಮನಿರುವುದು ಸರಿಯಲ್ಲವೆಂದು ತಿಳಿದು ಅರಸರಿಗೆ ಈ ಪತ್ರದ ಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ.
15 जसले गर्दा हजुरले आफ्ना पिताको अभिलेख खोज्न र राजाहरूसाथै प्रान्तहरूलाई हानि गर्ने यो एउटा विद्रोही सहर रहेछ भनी पुष्टि गर्न सक्नुहुन्छ । यसले राजाहरू र प्रान्तहरूलाई धेरै समस्या दिएको छ । पहिले देखि नै यो विद्रोहको केन्द्र बनेको छ । यही कारणले गर्दा यो सहर नष्ट पारिएको थियो ।
೧೫ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಆ ಕಾರಣದಿಂದಲೇ ಈ ಪಟ್ಟಣವು ನೆಲಸಮವಾಯಿತು ಎಂದು ಆ ಚರಿತ್ರಾ ಗ್ರಂಥದಲ್ಲಿ ಕಂಡುಬರುತ್ತದೆ.
16 यो सहर र पर्खाल निर्माण गरियो भने हजुरको लागि यूफ्रेटिस नदीपारिको प्रान्तमा केही बाँकी रहने छैन भनी हामी राजालाई जानकारी गराउँदैछौं ।”
೧೬ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬುದೇ.”
17 त्यसैले राजाले सामरियामा बस्ने रेहूम, शिम्शै र तिनीहरूका सहयोगीहरू अनि यूफ्रेटिस नदीपारिको प्रान्तमा बस्ने बाँकी सबैलाई एउटा जवाफ पठाए, “तिमीहरूलाई शान्ति होस् ।
೧೭ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.
18 तिमीहरूले पठाएका चिट्ठी अनुवाद गरियो र मेरो सामु पढियो ।
೧೮ನೀವು ಕಳುಹಿಸಿದ ಪತ್ರವು ನನ್ನ ಮುಂದೆ ಓದಲಾಯಿತು. ಅದರ ಸಂಪೂರ್ಣ ವಿಷಯ ಮನದಟ್ಟಾಯಿತು.
19 त्यसैले मैले छानविन गर्न आदेश दिएँ, रपहिलौक दिनहरूमा तिनीहरू राजाहरूका विरुद्धमा बागी भएका र विद्रोह गरेका रहेछन् भनी पत्ता लगाइयो ।
೧೯ನನ್ನ ಆಜ್ಞಾನುಸಾರ ವಿಚಾರಣೆ ಮಾಡಿ ಪರಿಶೀಲಿಸಿದಾಗ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರುದ್ಧವಾಗಿ ತಿರುಗಿಬೀಳುತ್ತಾ, ದ್ರೋಹಮಾಡುತ್ತಾ, ದಂಗೆಯೆಬ್ಬಿಸುತ್ತಾ ಇದ್ದವರು ಎಂದು ತಿಳಿಯಿತು.
20 शक्तिशाली राजाहरूले यरूशलेममा राज्य गरेका रहेछन्, र यूफ्रेटिस नदीपारिको प्रान्तका हरेक कुरामा अधिकार जमाएका रहेछन् । तिनीहरूलाई करहरू र महसुलहरू तिरिएका रहेछन् ।
೨೦ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.
21 अब मैले आज्ञा नदिएसम्म यी मानिहरूले यो सहर निर्माण गर्न रोक्नुपर्छ भनी एउटा आज्ञा जारी गर्नू ।
೨೧ಆದುದರಿಂದ ಆ ಮನುಷ್ಯರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವ ವರೆಗೆ ಆ ಪಟ್ಟಣವನ್ನು ಕಟ್ಟಲು ಆವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ.
22 यसलाई बेवास्ता नगर्न होसियार हुनु । यस खतरालाई बढ्न दिने र राजकीय हितको बढी क्षति हुन किन दिने?
೨೨ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಉದಾಸೀನತೆಯಿಂದ ಲಕ್ಷಿಸದೆ ಇರಬೇಡಿ” ಎಂದು ತಿಳಿಸಿದನು.
23 जब राजा अर्तासास्तको आदेश रेहूम, शिम्शै र तिनीहरूका सहयोगीहरूका सामु पढियो, तिनीहरू तुरुन्तै यरूशलेममा गए, र यहूदीहरूलाई जबरदस्तसाथ निर्माण रोक्न लगाए ।
೨೩ಅರಸನಾದ ಅರ್ತಷಸ್ತನ ಈ ಪತ್ರವನ್ನು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಓದಿದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇಮಿಗೆ ಹೋಗಿ ಬಲವಂತದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು.
24 यसरी फारसका राजा दाराको शासनकालको दोस्रो वर्षसम्म यरूशलेममा परमेश्वरको मन्दिरको काम रोकियो ।
೨೪ಅಂದಿನಿಂದ ಪರ್ಷಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.