< उत्पत्ति 2 >

1 सारा आकाशमण्डल र पृथ्वी, र तिनमा भएका सबै जीवित प्राणीहरूको सृष्‍टि पुरा भयो ।
ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.
2 सातौँ दिनसम्ममा परमेश्‍वरले आफूले गर्नुभएको कामलाई पुरा गर्नुभयो ।यसैकारण उहाँले सातौँ दिनमा सबै कामबाट विश्राम लिनुभयो ।
ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು.
3 परमेश्‍वरले सातौँ दिनलाई आशिष्‍्‍ दिनुभयो र त्यसलाई पवित्र तुल्याउनुभयो, किनभने आफ्नो सृष्‍टिमा गर्नुभएका सबै कामबाट यसै दिनमा उहाँले विश्राम लिनुभयो ।
ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
4 परमप्रभु परमेश्‍वरले आकाश र पृथ्वीलाई सृष्‍टि गर्नुभएको समयमा भएका घटनाक्रमहरूको वृत्तान्त यही थियो ।
ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ.
5 पृथ्वीको भूमिमा अझै कुनै वनस्पति थिएन, र कुनै बिरुवा पनि उम्रेको थिएन, किनभने परमप्रभु परमेश्‍वरले पृथ्वीमा पानी वर्साउनुभएको थिएन, र भूमिमा खेती गर्नको निम्ति त्यहाँ कुनै मानिस थिएन ।
ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.
6 तर पृथ्वीबाट माथि आएको कुइरोले जम्मै भूमिको सतहलाई भिजाउने गर्थ्यो ।
ಆದರೂ ಭೂಮಿಯಿಂದ ನೀರಿನ ಬುಗ್ಗೆ ಉಕ್ಕಿ ಮೇಲೆ ಬಂದು ನೆಲವನ್ನೆಲ್ಲಾ ತೋಯಿಸುತ್ತಿದವು.
7 परमप्रभु परमेश्‍वरले भूमिको माटोबाट मानिस बनाउनुभयो, र त्यसको नाखबाट जीवनको सास फुकिदिनुभयो, र मानिस जीवित प्राणी भयो ।
ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.
8 परमप्रभु परमेश्‍वरले अदनको पूर्वतिर एउटा बगैँचा लगाउनुभयो, र उहाँले बनाउनुभएको मानिसलाई त्यहीँ राख्‍नुभयो ।
ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.
9 हेर्नमा राम्रो र खानको निम्ति असल फल भएको सबै रुखलाई परमप्रभु परमेश्‍वरले भूमिबाट उमार्नुभयो । बगैँचाको बिचमा भएको जीवनको रुख, अनि असल र खराबको ज्ञान दिने रुख पनि उहाँले उमार्नुभयो ।
ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.
10 बगैँचालाई भिजाउन अदनबाट एउटा नदी निस्केको थियो । त्यहाँबाट त्यो छुट्टिएर चारवटा नदी बनेका थिए ।
೧೦ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು.
11 पहिलो नदीको नाम पीशोन हो । यो त्यही नदी हो जुन हवीलाको सारा भूमिमा बग्दछ, जहाँ सुन पाइन्छ ।
೧೧ಮೊದಲನೆಯದರ ಹೆಸರು ಪೀಶೋನ್, ಅದು ಬಂಗಾರ ದೊರೆಯುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
12 त्यस भूमिको सुन असल छ । त्यहाँ खोटो र आनिक्स पत्थर पनि छन् ।
೧೨ಆ ಪ್ರದೇಶದ ಬಂಗಾರವು ಅಮೂಲ್ಯವಾದದ್ದು. ಅಲ್ಲಿ ಬದೋಲಖ ಧೂಪವೂ, ಗೋಮೇಧಿಕದ ಅಮೂಲ್ಯ ರತ್ನವು ಸಿಕ್ಕುತ್ತದೆ.
13 दोस्रो नदीको नाम गीहोन हो । योचाहिँ कूशको सारा भूमिमा बग्दछ ।
೧೩ಎರಡನೆಯ ನದಿಯ ಹೆಸರು ಗೀಹೋನ್, ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
14 तेस्रो नदीको नाम टाइग्रिस हो, जुन अश्शूरको पूर्वबाट बग्दछ । चौथो नदी यूफ्रेटिस हो ।
೧೪ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ.
15 परमप्रभु परमेश्‍वरले मानिसलाई अदनको बगैँचामा लगी त्यहाँ खेतीपाती गर्न र त्यसको हेरचाह गर्न राख्‍नुभयो ।
೧೫ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.
16 परमप्रभु परमेश्‍वरले यसो भनी आज्ञा गर्नुभयो, “बगैँचाको सबै रुखबाट खान तँलाई स्वतन्‍त्रता छ ।
೧೬ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.
17 तर असल र खराबको ज्ञान दिने रुखबाट तैँले नखानू, किनभने जुन दिन तैँले त्यो फल खान्छस्, तँ निश्‍चय नै मर्नेछस् ।”
೧೭ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.
18 त्यसपछि परमप्रभु परमेश्‍वरले भन्‍नुभयो, “मानिस एकलो रहन असल छैन । म त्यसको लागि एउटा सुहाउने सहयोगी बनाउनेछु ।”
೧೮ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.
19 परमप्रभु परमेश्‍वरले भूमिबाट सबै पशुहरू र आकाशका सबै पक्षीहरू बनाउनुभयो । त्यसपछि मानिसले ती सबैलाई के नामले बोलाउँदो रहेछ भनेर उहाँले ती त्यसको अगि ल्याउनुभयो । हरेक जीवित प्राणीलाई मानिसले जे-जे नामले बोलायो, त्यही-त्यही नै हरेकको नाम भयो ।
೧೯ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.
20 मानिसले सबै पाल्तु पशु, आकाशका सबै पक्षीहरू, र सबै जङ्गली जनावरहरूलाई नाम दियो । तर मानिसको निम्ति त्यहाँ कुनै सुहाउँदो सहयोगी पाइएन ।
೨೦ಹೀಗೆ ಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ.
21 परमप्रभु परमेश्‍वरले मानिसलाई गहिरो निद्रामा पार्नुभयो, यसैकारण मानिस निदायो । परमप्रभु परमेश्‍वरले त्यसका करङहरूमध्ये एउटा झिक्‍नुभयो र करङ झिकेको ठाउँमा मासु भरिदिनुभयो ।
೨೧ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.
22 परमप्रभु परमेश्‍वरले मानिसबाट झिक्‍नुभएको करङबाट एउटी स्‍त्री बनाउनुभयो र तिनलाई मानिसकहाँ ल्याउनुभयो ।
೨೨ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,
23 मानिसले भन्यो, “यिनी त मेरा हाडहरूको हाड र मासुको मासु हुन् । यिनलाई ‘नारी’ भनिनेछ, किनभने यिनी नरबाट झिकिएकी थिइन् ।”
೨೩“ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು.
24 त्यसैकारण मानिसले आफ्ना बुबा र आमालाई छोड्नेछ, त्यो आफ्नी पत्‍नीसँग एक हुनेछ, र तिनीहरू एउटै शरीर हुनेछन् ।
೨೪ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
25 मानिस र त्यसकी पत्‍नी दुवै नाङ्‍गै थिए, तर तिनीहरू लजाउँदैन थिए ।
೨೫ಆ ಮನುಷ್ಯನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.

< उत्पत्ति 2 >