< उत्पत्ति 2 >
1 सारा आकाशमण्डल र पृथ्वी, र तिनमा भएका सबै जीवित प्राणीहरूको सृष्टि पुरा भयो ।
ಹೀಗೆ ಭೂಮ್ಯಾಕಾಶಗಳೂ ಅವುಗಳಲ್ಲಿರುವ ಸಮಸ್ತವೂ ಸಂಪೂರ್ಣವಾಗಿ ನಿರ್ಮಿತವಾದವು.
2 सातौँ दिनसम्ममा परमेश्वरले आफूले गर्नुभएको कामलाई पुरा गर्नुभयो ।यसैकारण उहाँले सातौँ दिनमा सबै कामबाट विश्राम लिनुभयो ।
ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.
3 परमेश्वरले सातौँ दिनलाई आशिष्् दिनुभयो र त्यसलाई पवित्र तुल्याउनुभयो, किनभने आफ्नो सृष्टिमा गर्नुभएका सबै कामबाट यसै दिनमा उहाँले विश्राम लिनुभयो ।
ಅನಂತರ ದೇವರು ಏಳನೆಯ ದಿನವನ್ನು ಆಶೀರ್ವದಿಸಿ, ಅದನ್ನು ಪವಿತ್ರ ದಿನವನ್ನಾಗಿ ಮಾಡಿದರು. ಏಕೆಂದರೆ ಆ ದಿನದಲ್ಲಿ ದೇವರು ಸೃಷ್ಟಿಸಿದ ತಮ್ಮ ಎಲ್ಲಾ ಕೆಲಸಗಳಿಂದ ವಿಶ್ರಮಿಸಿಕೊಂಡರು.
4 परमप्रभु परमेश्वरले आकाश र पृथ्वीलाई सृष्टि गर्नुभएको समयमा भएका घटनाक्रमहरूको वृत्तान्त यही थियो ।
ಯೆಹೋವ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದರು. ಇದೇ ಭೂಮ್ಯಾಕಾಶಗಳ ನಿರ್ಮಾಣ ಚರಿತ್ರೆ.
5 पृथ्वीको भूमिमा अझै कुनै वनस्पति थिएन, र कुनै बिरुवा पनि उम्रेको थिएन, किनभने परमप्रभु परमेश्वरले पृथ्वीमा पानी वर्साउनुभएको थिएन, र भूमिमा खेती गर्नको निम्ति त्यहाँ कुनै मानिस थिएन ।
ಭೂಮಿಯಲ್ಲಿ ಯಾವ ಗಿಡವೂ ಇನ್ನೂ ಬೆಳೆದಿರಲಿಲ್ಲ, ಯಾವ ಪಲ್ಯವೂ ಇನ್ನೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ. ಆಗ ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.
6 तर पृथ्वीबाट माथि आएको कुइरोले जम्मै भूमिको सतहलाई भिजाउने गर्थ्यो ।
ಆದರೆ ಭೂಮಿಯಿಂದ ಮಂಜು ಏರಿಬಂದು ನೆಲವನ್ನೆಲ್ಲಾ ತೋಯಿಸಿತು.
7 परमप्रभु परमेश्वरले भूमिको माटोबाट मानिस बनाउनुभयो, र त्यसको नाखबाट जीवनको सास फुकिदिनुभयो, र मानिस जीवित प्राणी भयो ।
ಹೀಗಿರಲು ಯೆಹೋವ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ, ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು ಆಗ ಅವನು ಜೀವಿಸುವ ವ್ಯಕ್ತಿಯಾದನು.
8 परमप्रभु परमेश्वरले अदनको पूर्वतिर एउटा बगैँचा लगाउनुभयो, र उहाँले बनाउनुभएको मानिसलाई त्यहीँ राख्नुभयो ।
ಯೆಹೋವ ದೇವರು ಪೂರ್ವದಿಕ್ಕಿಗಿರುವ ಏದೆನ್ ಸೀಮೆಯಲ್ಲಿ ತೋಟವನ್ನು ಮಾಡಿ, ತಾವು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದರು.
9 हेर्नमा राम्रो र खानको निम्ति असल फल भएको सबै रुखलाई परमप्रभु परमेश्वरले भूमिबाट उमार्नुभयो । बगैँचाको बिचमा भएको जीवनको रुख, अनि असल र खराबको ज्ञान दिने रुख पनि उहाँले उमार्नुभयो ।
ಯೆಹೋವ ದೇವರು ನೋಟಕ್ಕೆ ರಮ್ಯವೂ ಊಟಕ್ಕೆ ಒಳ್ಳೆಯವೂ ಆದ ಎಲ್ಲಾ ಮರಗಳನ್ನೂ ಭೂಮಿಯಲ್ಲಿ ಬೆಳೆಯುವಂತೆ ಮಾಡಿದರು. ತೋಟದ ಮಧ್ಯದಲ್ಲಿ ಜೀವದ ಮರವನ್ನೂ ಒಳ್ಳೆಯದರ ಮತ್ತು ಕೆಟ್ಟದ್ದರ ತಿಳುವಳಿಕೆಯ ಮರವನ್ನೂ ಬೆಳೆಯುವಂತೆ ಮಾಡಿದರು.
10 बगैँचालाई भिजाउन अदनबाट एउटा नदी निस्केको थियो । त्यहाँबाट त्यो छुट्टिएर चारवटा नदी बनेका थिए ।
ಏದೆನ್ ಸೀಮೆಯಿಂದ ಒಂದು ನದಿ ಹರಿದು, ತೋಟವನ್ನು ತೋಯಿಸುತ್ತಿತ್ತು. ಅದು ಅಲ್ಲಿಂದ ಹರಿದು ವಿಭಾಗವಾಗಿ, ನಾಲ್ಕು ಉಪನದಿಗಳಾದವು.
11 पहिलो नदीको नाम पीशोन हो । यो त्यही नदी हो जुन हवीलाको सारा भूमिमा बग्दछ, जहाँ सुन पाइन्छ ।
ಮೊದಲನೆಯದರ ಹೆಸರು ಪೀಶೋನ್; ಅದು ಬಂಗಾರವಿರುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತಿತ್ತು.
12 त्यस भूमिको सुन असल छ । त्यहाँ खोटो र आनिक्स पत्थर पनि छन् ।
ಆ ದೇಶದ ಬಂಗಾರವು ಉತ್ತಮವಾಗಿತ್ತು. ಅಲ್ಲಿ ಬದೋಲಖ ಧೂಪ ಮತ್ತು ಗೋಮೇಧಿಕ ರತ್ನ ಇದ್ದವು.
13 दोस्रो नदीको नाम गीहोन हो । योचाहिँ कूशको सारा भूमिमा बग्दछ ।
ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತಿತ್ತು.
14 तेस्रो नदीको नाम टाइग्रिस हो, जुन अश्शूरको पूर्वबाट बग्दछ । चौथो नदी यूफ्रेटिस हो ।
ಮೂರನೆಯ ನದಿಯ ಹೆಸರು ಟೈಗ್ರಿಸ್; ಅದು ಅಸ್ಸೀರಿಯಾ ದೇಶದ ಪೂರ್ವಕ್ಕೆ ಹರಿಯುತ್ತಿತ್ತು. ನಾಲ್ಕನೆಯ ನದಿಯು ಯೂಫ್ರೇಟೀಸ್.
15 परमप्रभु परमेश्वरले मानिसलाई अदनको बगैँचामा लगी त्यहाँ खेतीपाती गर्न र त्यसको हेरचाह गर्न राख्नुभयो ।
ಯೆಹೋವ ದೇವರು ಮನುಷ್ಯನನ್ನು ಕರೆದುಕೊಂಡು ಹೋಗಿ, ಏದೆನ್ ತೋಟದಲ್ಲಿ ಕೆಲಸ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇಟ್ಟರು.
16 परमप्रभु परमेश्वरले यसो भनी आज्ञा गर्नुभयो, “बगैँचाको सबै रुखबाट खान तँलाई स्वतन्त्रता छ ।
ಇದಲ್ಲದೆ ಯೆಹೋವ ದೇವರು ಮನುಷ್ಯನಿಗೆ, “ನೀನು ತೋಟದ ಎಲ್ಲಾ ಮರಗಳ ಹಣ್ಣುಗಳನ್ನು ನಿನ್ನ ಇಷ್ಟಾನುಸಾರವಾಗಿ ತಿನ್ನಬಹುದು.
17 तर असल र खराबको ज्ञान दिने रुखबाट तैँले नखानू, किनभने जुन दिन तैँले त्यो फल खान्छस्, तँ निश्चय नै मर्नेछस् ।”
ಆದರೆ ಒಳ್ಳೆಯದರ, ಕೆಟ್ಟದ್ದರ ತಿಳುವಳಿಕೆಯ ಮರದ ಹಣ್ಣನ್ನು ನೀನು ತಿನ್ನಬಾರದು. ಏಕೆಂದರೆ, ನೀನು ಅದನ್ನು ತಿಂದ ದಿನವೇ ಸಾಯುವಿ,” ಎಂದು ಹೇಳಿದರು.
18 त्यसपछि परमप्रभु परमेश्वरले भन्नुभयो, “मानिस एकलो रहन असल छैन । म त्यसको लागि एउटा सुहाउने सहयोगी बनाउनेछु ।”
ಅನಂತರ ಯೆಹೋವ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಬೀಳುವ ಸಹಕಾರಿಣಿಯನ್ನು ಉಂಟುಮಾಡುವೆನು,” ಎಂದರು.
19 परमप्रभु परमेश्वरले भूमिबाट सबै पशुहरू र आकाशका सबै पक्षीहरू बनाउनुभयो । त्यसपछि मानिसले ती सबैलाई के नामले बोलाउँदो रहेछ भनेर उहाँले ती त्यसको अगि ल्याउनुभयो । हरेक जीवित प्राणीलाई मानिसले जे-जे नामले बोलायो, त्यही-त्यही नै हरेकको नाम भयो ।
ಯೆಹೋವ ದೇವರು ಭೂಮಿಯಲ್ಲಿರುವ ಎಲ್ಲಾ ಕಾಡುಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿದ ಮೇಲೆ, ಅವುಗಳಿಗೆ ಮನುಷ್ಯನು ಏನು ಹೆಸರಿಡುವನೋ ಎಂದು ನೋಡುವುದಕ್ಕೆ, ಅವುಗಳನ್ನು ಅವನ ಬಳಿಗೆ ತಂದರು. ಒಂದೊಂದು ಜೀವಿಗೂ ಮನುಷ್ಯನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.
20 मानिसले सबै पाल्तु पशु, आकाशका सबै पक्षीहरू, र सबै जङ्गली जनावरहरूलाई नाम दियो । तर मानिसको निम्ति त्यहाँ कुनै सुहाउँदो सहयोगी पाइएन ।
ಹೀಗೆ ಮನುಷ್ಯನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆದಾಮನಿಗೆ ಸರಿಬೀಳುವ ಸಹಕಾರಿಣಿಯು ಕಾಣಿಸಲಿಲ್ಲ.
21 परमप्रभु परमेश्वरले मानिसलाई गहिरो निद्रामा पार्नुभयो, यसैकारण मानिस निदायो । परमप्रभु परमेश्वरले त्यसका करङहरूमध्ये एउटा झिक्नुभयो र करङ झिकेको ठाउँमा मासु भरिदिनुभयो ।
ಆದಕಾರಣ ಯೆಹೋವ ದೇವರು ಮನುಷ್ಯನಿಗೆ ಗಾಢನಿದ್ರೆ ಬರಮಾಡಿದರು. ಅವನು ನಿದ್ರಿಸುತ್ತಿರುವಾಗ, ಅವರು ಅವನ ಪಕ್ಕೆಯನ್ನು ತೆಗೆದುಕೊಂಡು, ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು.
22 परमप्रभु परमेश्वरले मानिसबाट झिक्नुभएको करङबाट एउटी स्त्री बनाउनुभयो र तिनलाई मानिसकहाँ ल्याउनुभयो ।
ಬಳಿಕ ಯೆಹೋವ ದೇವರು ಮನುಷ್ಯನಿಂದ ತೆಗೆದಿದ್ದ ಪಕ್ಕೆಯಿಂದ ಒಬ್ಬ ಸ್ತ್ರೀಯನ್ನು ಉಂಟುಮಾಡಿ, ಆಕೆಯನ್ನು ಆ ಮನುಷ್ಯನ ಬಳಿಗೆ ತಂದರು.
23 मानिसले भन्यो, “यिनी त मेरा हाडहरूको हाड र मासुको मासु हुन् । यिनलाई ‘नारी’ भनिनेछ, किनभने यिनी नरबाट झिकिएकी थिइन् ।”
ಆಗ ಮನುಷ್ಯನು ಹೀಗೆ ಹೇಳಿದನು: “ಇದು ನನ್ನ ಎಲುಬಿನಿಂದಾದ ಎಲುಬು ಮತ್ತು ನನ್ನ ಮಾಂಸದಿಂದಾದ ಮಾಂಸವಾಗಿದೆ. ಈಕೆ ನರನಿಂದ ತೆಗೆದಿರುವುದರಿಂದ, ಈಕೆ, ‘ನಾರಿ’ ಎಂದು ಎನಿಸಿಕೊಳ್ಳುವಳು.”
24 त्यसैकारण मानिसले आफ्ना बुबा र आमालाई छोड्नेछ, त्यो आफ्नी पत्नीसँग एक हुनेछ, र तिनीहरू एउटै शरीर हुनेछन् ।
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.
25 मानिस र त्यसकी पत्नी दुवै नाङ्गै थिए, तर तिनीहरू लजाउँदैन थिए ।
ಆದಾಮನೂ ಅವನ ಹೆಂಡತಿಯೂ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.