< उत्पत्ति 47 >

1 तब भित्र गएर योसेफले फारोलाई भने, “मेरा बुबा र दाजुभाइहरू, उनका बगाल र बथानहरू र उनीहरूका सबै थोक लिएर कनानबाट आएका छन्‌ । हेर्नुहोस्, अहिले उनीहरू गोशेन प्रदेशमा छन्‌ ।”
ಆಗ ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ, ಅಣ್ಣತಮ್ಮಂದಿರೂ, ಕುರಿದನಗಳನ್ನೂ, ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್‌ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿ ಉಳಿದುಕೊಂಡಿದ್ದಾರೆ” ಎಂದನು.
2 तिनले आफ्‍ना दाजुहरूमध्‍येबाट पाँच जनालाई लिएर फारोलाई चिनाइदिए ।
ಅಲ್ಲದೆ ತನ್ನ ಅಣ್ಣತಮ್ಮಂದಿರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು.
3 फारोले तिनका दाजुभाइहरूलाई सोधे, “तिमीहरूको कामधन्‍धा के हो?” उनीहरूले फारोलाई भने, “हामी हजुरका दासहरू हाम्रा पिता-पुर्खादेखि नै गोठाला हौँ ।”
ಫರೋಹನು ಯೋಸೇಫನ ಅಣ್ಣತಮ್ಮಂದಿರಿಗೆ, “ನಿಮ್ಮ ಕಸುಬು ಏನು?” ಎಂದು ಅವರನ್ನು ಕೇಳಲು ಅವರು, “ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಹಾಗೆ ಕುರಿಕಾಯುವವರು” ಎಂದು ಹೇಳಿದರು.
4 त्यसपछि उनीहरूले फारोलाई भने, “हामी यस देशमा अस्थायी बसोबास गर्न आएका छौँ । कनान देशमा घोर अनिकाल परेको हुनाले हजुरका दासहरूका बगालहरूको निम्ति चरन छैन । त्यसैले अब बिन्‍ती छ, हामी हजूरका दासहरूलाई गोशेन प्रदेशमा बसोबास गर्ने अनुमति दिनुहोस् ।”
ಅದಲ್ಲದೆ ಅವರು ಫರೋಹನಿಗೆ, “ಕಾನಾನ್‌ ದೇಶದಲ್ಲಿ ಬರಗಾಲವು ಘೋರವಾಗಿರುವುದರಿಂದ ನಿನ್ನ ಸೇವಕರ ಕುರಿದನಗಳಿಗೆ ಮೇವು ಸಿಕ್ಕಲಿಲ್ಲ; ಆದುದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ನಾವು ಗೋಷೆನ್ ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡರು.
5 त्यसपछि फारोले योसेफलाई भने, “तिम्रा बुबा र तिम्रा दाजुभाइहरू तिमीकहाँ आएका छन्‌ ।
ಆಗ ಫರೋಹನು ಯೋಸೇಫನಿಗೆ, “ನಿನ್ನ ತಂದೆಯೂ, ಅಣ್ಣತಮ್ಮಂದಿರೂ ನಿನ್ನ ಬಳಿಗೆ ಬಂದಿದ್ದಾರೆ;
6 मिश्रदेश तिम्रै अगि छ । देशको सबैभन्‍दा असल ठाउँ गोशेन प्रदेशमा नै तिम्रा बुबा र तिम्रा दाजुभाइहरूलाई बस्‍ने बन्दोबस्त गर । उनीहरूमध्‍ये सक्षम मानिसहरूलाई गाईबस्‍तुहरूको जिम्मा देऊ ।”
ಐಗುಪ್ತ ದೇಶವು ನಿನ್ನ ಮುಂದೆ ಇದೆ, ಅದರೊಳಗೆ ಉತ್ತಮ ಭಾಗದಲ್ಲಿ ನಿನ್ನ ತಂದೆ, ನಿನ್ನ ಅಣ್ಣತಮ್ಮಂದಿರು ವಾಸಮಾಡುವಂತೆ ಮಾಡು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಸಮರ್ಥರೆಂದು ತಿಳಿದರೆ ಅವರನ್ನು ನನ್ನ ಕುರಿದನ ಮಂದೆಗಳ ಮೇಲ್ವಿಚಾರಣೆಗಾಗಿ ನೇಮಿಸು” ಎಂದು ಹೇಳಿದನು.
7 तब योसेफले आफ्‍ना बुबा याकूबलाई पनि फारोकहाँ हाजिर गराए । याकूबले फारोलाई आशीर्वाद दिए ।
ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರೆದುಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು, ಯಾಕೋಬನು ಫರೋಹನನ್ನು ಆಶೀರ್ವದಿಸಿದನು.
8 फारोले याकूबलाई सोधे, “तपाईंको उमेर कति भयो?”
ಫರೋಹನು, “ನಿನಗೆ ಈಗ ಎಷ್ಟು ವರ್ಷ?” ಎಂದು ಕೇಳಿದನು.
9 याकूबले फारोलाई भने, “मेरो प्रवासी जीवनको उमेर एक सय तिस वर्ष भयो । मेरो यस जीवनका वर्षहरू थोरै र दु: खमय भएका छन् । मेरो उमेर मेरा पिता-पुर्खाहरूको जति पुगेकै छैन ।”
ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು.
10 त्यसपछि याकूबले फारोलाई आशीर्वाद दिए, र तिनको उपस्‍थितिबाट निस्‍केर गए ।
೧೦ಪುನಃ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.
11 तब योसेफले आफ्‍ना बुबा र दाजुभाइहरूलाई बसोबास गराए । फारोको हुकुमअनुसार तिनले मिश्रमा भएको सबैभन्‍दा असल ठाउँ, अर्थात्‌ रामसेस भन्‍ने इलाकाको एउटा क्षेत्र उनीहरूलाई दिए ।
೧೧ಫರೋಹನ ಅಪ್ಪಣೆಯ ಮೇರೆಗೆ ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಐಗುಪ್ತ ದೇಶದಲ್ಲಿ ವಾಸಮಾಡಲು ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸ್ವತ್ತು ಕೊಟ್ಟನು.
12 योसेफले आफ्‍ना बुबा, दाजुभाइहरू र आफ्‍ना बुबाका परिवारका सबैलाई उनीहरूका आस्रित परिवारको सङ्ख्याअनुसार खानेकुरा उपलब्ध गराए ।
೧೨ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.
13 घोर अनिकालको कारण पुरै देशमा कुनै खानेकुरा थिएन । अनिकालद्वारा मिश्र र कनान दुवै देश कमजोर भए ।
೧೩ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್‌ ದೇಶವು ಕ್ಷಾಮದಿಂದ ಬರಡಾದವು.
14 मिश्र र कनान देशका बासिन्दाहरूलाई बेचेका अन्‍नबाट प्राप्‍त सबै रुपियाँ योसेफले जम्‍मा गरे । त्यसपछि योसेफले त्यो रुपियाँ फारोको महलमा ल्याए ।
೧೪ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನು ಕೂಡಿಸಿಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು.
15 जब मिश्र र कनानमा भएका सबै आफ्‍ना रुपियाँ-पैसा खर्च भयो, सबै मिश्रीहरू यसो भन्दै योसेफकहाँ आए, “हामीलाई अन्‍न दिनुहोस्‌ । हाम्रो रुपियाँ-पैसा सकिएको कारण तपाईंका आँखाको सामुन्‍ने हामी किन मरौँ?”
೧೫ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು.
16 योसेफले तिनीहरूलाई भने, “यदि तिमीहरूका रुपियाँ-पैसा सिद्धिए भने गाईबस्‍तु ल्‍याओ र तिमीहरूका गाईबस्‍तुका सट्टामा म तिमीहरूलाई अन्‍न दिनेछु ।”
೧೬ಅದಕ್ಕೆ ಯೋಸೇಫನು, “ನಿಮ್ಮ ಕುರಿದನಗಳನ್ನು ತೆಗೆದುಕೊಂಡು ಬನ್ನಿರಿ; ಹಣವಿಲ್ಲದಿದ್ದರೆ ಕುರಿದನಗಳನ್ನು ತೆಗೆದುಕೊಂಡು, ಧಾನ್ಯವನ್ನು ನಿಮಗೆ ಕೊಡುತ್ತೇನೆ” ಎಂದನು.
17 यसकारण तिनीहरूले आफ्‍ना गाईबस्‍तुहरू योसेफकहाँ ल्‍याए । योसेफले तिनीहरूका घोडा, भेडाबाख्रा, गाईबस्‍तु, गधाका सट्टामा तिनीहरूलाई खानेकुरा दिए । त्‍यस साल गाईबस्‍तुका सट्टामा तिनीहरूलाई तिनले अन्‍न खुवाए ।
೧೭ಅವರು ತಮ್ಮ ಕುರಿದನಗಳನ್ನು ಯೋಸೇಫನ ಬಳಿಗೆ ತೆಗೆದುಕೊಂಡು ಬರಲು, ಅವನು ಅವರ ಕುದುರೆಗಳನ್ನೂ, ಕುರಿದನಗಳನ್ನೂ, ಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಟ್ಟನು. ಆ ವರ್ಷದಲ್ಲಿ ಅವರ ಕುರಿದನಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.
18 त्‍यो साल बितेपछि अर्को साल आएर तिनीहरूले योसेफलाई भने, “हामी हाम्रा मालिकदेखि केही कुरा पनि लुकाउँदैनौँ कि हाम्रा रुपियाँ-पैसा सबै सकिए र गाईबस्‍तुका बथान पनि सबै मालिककै भएका छन् । अब हजुरको आँखाको सामुन्‍ने हामीसँग हाम्रै जिउ र जग्‍गाजमिनबाहेक अरू केही छैन ।
೧೮ಆ ವರ್ಷ ಕಳೆದ ನಂತರ ಅವರು ಎರಡನೆಯ ವರ್ಷದಲ್ಲಿ ಅವನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದು ಹೋಗಿದೆ; ನಮ್ಮ ಕುರಿದನಗಳು ಸ್ವಾಮಿಯ ವಶವಾದವು; ಹೀಗಿರುವುದರಿಂದ ನಮ್ಮ ಭೂಮಿಯೂ, ನಮ್ಮ ದೇಹಗಳೂ ಹೊರತು ಬೇರೆ ಇನ್ನೇನೂ ಉಳಿದಿಲ್ಲವೆಂದು ನಮ್ಮ ಸ್ವಾಮಿಗೆ ಮರೆಮಾಡದೆ ತಿಳಿಸುತ್ತೇವೆ” ಎಂದರು.
19 हामी र हाम्रा जमिन हजूरका आँखाको सामुन्‍ने किन नष्‍ट हुने? अन्‍नको साटोमा हामी र हाम्रो जमिनलाई किन्‍नुहोस्, र हामी आफ्‍ना जग्‍गाजमिनसमेत फारोका कमारा-कमारी हुनेछौँ । हामीलाई बिउ दिनुहोस्, ताकि हामी जीवित हुन सकौँ र हाम्रा जग्‍गाजमिन पनि उजाड नहोऊन् ।”
೧೯“ನಿನ್ನ ಕಣ್ಣೆದುರಿಗೆ ನಾವು ಏಕೆ ಸಾಯಬೇಕು; ನಮ್ಮ ಭೂಮಿಯು ಏಕೆ ಹಾಳಾಗಬೇಕು; ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿಯು ಹಾಳಾಗದ ಹಾಗೆ ನೀನು ನಮಗೆ ಬಿತ್ತನೆ ಬೀಜವನ್ನು ಕೊಡಬೇಕು” ಎಂದು ಹೇಳಿದರು.
20 यसरी योसेफले मिश्रका सबै जग्‍गाजमिन फारोको निम्‍ति किने । अनिकाल धेरै भएको हुनाले हरेक मिश्रीले आफ्‍ना जग्‍गाजमिन बेच्यो । यसरी जग्‍गाजमिन फारोको भयो ।
೨೦ಹೀಗೆ ಯೋಸೇಫನು ಐಗುಪ್ತರಿಂದ ಎಲ್ಲಾ ಸಾಗುವಳಿಯ ಭೂಮಿಯನ್ನು ಫರೋಹನಿಗಾಗಿ ಕೊಂಡುಕೊಂಡನು. ಪ್ರತಿಯೊಬ್ಬ ಐಗುಪ್ತನ್ನು ತನ್ನ ಹೊಲಗದ್ದೆಗಳನ್ನು ಮಾರಿಬಿಟ್ಟನು. ಬರವು ಐಗುಪ್ತದಲ್ಲಿ ಘೋರವಾಗಿದ್ದದರಿಂದ ಅವರೆಲ್ಲರ ಭೂಮಿಯು ಫರೋಹನ ವಶವಾಯಿತು.
21 मिश्रको एक छेउदेखि अर्को छेउसम्‍मका सबै मानिसहरूलाई तिनले कमारा बनाए ।
೨೧ಯೋಸೇಫನು ಐಗುಪ್ತ ದೇಶದ ಒಂದು ಮೇರೆಯಿಂದ ಮತ್ತೊಂದು ಮೇರೆಯವರೆಗೂ ಪ್ರಜೆಗಳನ್ನು ದಾಸರನ್ನಾಗಿ ಮಾಡಿದನು.
22 पुजारीहरूका जग्‍गाजमिन मात्र तिनले किनेनन्, किनभने पुजारीहरूलाई फारोबाट भत्ता दिइएको थियो । फारोले दिएकै हिस्‍साबाट तिनीहरूले खान्‍थे । त्‍यसकारण तिनीहरूले चाहिँ आफ्‍ना जग्‍गाजमिन बेचेनन् ।
೨೨ಪುರೋಹಿತರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಪುರೋಹಿತರು ಫರೋಹನ ಕಡೆಯಿಂದ ಭತ್ಯೆ ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಭತ್ಯೆದಿಂದಲೇ ಜೀವನ ಮಾಡುತ್ತಿದ್ದರು; ಆದುದರಿಂದ ತಮ್ಮ ಭೂಮಿಯನ್ನು ಮಾರಲಿಲ್ಲ.
23 योसेफले जनताहरूलाई भने, “हेर, आज मैले फारोको निम्‍ति तिमीहरूका जग्‍गाजमिन र तिमीहरूलाई पनि किनेको छु । अब तिमीहरूका निम्‍ति बिउ यहाँ छ, र तिमीहरूले जमिनमा बिउ छर ।
೨೩ಯೋಸೇಫನು ಪ್ರಜೆಗಳಿಗೆ, “ನಾನು ಈ ಹೊತ್ತು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗೋಸ್ಕರ ಕೊಂಡುಕೊಂಡಿದ್ದೇನೆ ಎಂದು ತಿಳಿದುಕೊಳ್ಳಿರಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ; ಭೂಮಿಯನ್ನು ಬಿತ್ತಿರಿ.
24 तर फसलको बेलामा उब्‍जनीको पाँचौँ हिस्‍सा तिमीहरूले फारोलाई दिनुपर्छ । चार हिस्‍साचाहिँ खेतीलाई बिउको निम्‍ति र तिमीहरू, तिमीहरूका परिवार र तिमीहरूका बालबच्‍चाको खानाको निम्‍ति तिमीहरूको आफ्‍नै हुनेछ ।”
೨೪ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ” ಎಂದು ಹೇಳಿದನು.
25 तिनीहरूले भने, “हजूरले हाम्रो प्राण बचाइदिनुभएको छ । हजुरको निगाह हामीमाथि रहोस्‌ । हामी फारोका कमारा हुनेछौँ ।”
೨೫ಅದಕ್ಕೆ ಅವರು, “ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾಮಿಯ ದಯೆ ನಿಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ” ಎಂದರು.
26 यसैले मिश्र देशमा योसेफले उब्‍जनीको पाँचौँ हिस्‍सा फारोको हुन्‍छ भन्‍ने कुरा समेटिएको जग्‍गाजमिनको विषयमा एउटा ऐन बनाए, जुन आजसम्‍म प्रचलित छ । पुजारीहरूका जग्‍गाजमिन मात्र फारोको भएन ।
೨೬ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬುದನ್ನು ಯೋಸೇಫನು ಐಗುಪ್ತ ದೇಶದಲ್ಲಿ ಕಟ್ಟಳೆಯಾಗಿ ಮಾಡಿದನು. ಈ ದಿನದ ವರೆಗೂ ಅದು ಹಾಗೆಯೇ ಇದೆ. ಪುರೋಹಿತರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.
27 त्यसैले इस्राएल मिश्रको गोशेनमा बसोबास गरे । तिनका मानिसहरूले त्‍यहाँका जग्‍गाजमिन आफ्‍नो अधिकारमा लिए । तिनीहरूको फलिफाप भएर सङ्ख्या अत्यन्तै वृद्धि भयो ।
೨೭ಇಸ್ರಾಯೇಲರು ಐಗುಪ್ತ ದೇಶಕ್ಕೆ ಸೇರಿರುವ ಗೋಷೆನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಆಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು.
28 याकूब मिश्रमा सत्र वर्ष बसे । यसरी याकूबको जम्‍मा उमेर एक सय सतचालिस वर्ष भयो ।
೨೮ಯಾಕೋಬನು ಐಗುಪ್ತ ದೇಶದಲ್ಲಿ ಹದಿನೇಳು ವರ್ಷ ಬದುಕಿದನು. ಅವನ ಜೀವಿತ ಕಾಲದ ದಿನಗಳು ನೂರ ನಲ್ವತ್ತೇಳು ವರ್ಷಗಳು.
29 जब इस्राएलको मर्ने बेला आयो, तिनले आफ्‍ना छोरा योसेफलाई बोलाएर भने, “यदि मैले तेरो निगाह पाएको छु भने तेरो हात मेरो तिघ्रामुनि राखेर मप्रति तेरो विश्‍वासयोग्यता र भरोसा देखा । कृपा गरेर मलाई मिश्रदेशमा नगाड्‌ ।
೨೯ಇಸ್ರಾಯೇಲನಿಗೆ ಮರಣಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದ್ದಿದೆಯಾದ್ದರೆ ಪದ್ದತಿಯ ಪ್ರಕಾರ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನಗೆ ಉಪಕಾರವನ್ನು ನಂಬಿಗಸ್ತಿಕೆಯಿಂದ ತೋರಿಸು. ನನ್ನನ್ನು ಐಗುಪ್ತದೇಶದಲ್ಲಿ ಸಮಾಧಿ ಮಾಡಬೇಡ.
30 म मेरा पिता-पुर्खाहरूसँग सुत्दा मलाई मिश्रबाट बोकेर लगी उनीहरूकै चिहानमा गाडिदे ।” योसेफले भने, “तपाईंले भन्‍नुभएबमोजिम म गर्नेछु ।”
೩೦ನಾನು ಮರಣ ಹೊಂದಿ ನನ್ನ ಪೂರ್ವಿಕರ ಬಳಿಗೆ ಸೇರಿದಾಗ ನನ್ನ ಮೃತ ದೇಹವನ್ನು ಐಗುಪ್ತ ದೇಶದಿಂದ ತೆಗೆದುಕೊಂಡು ಹೋಗಿ ಆ ಪೂರ್ವಿಕರ ಸ್ಮಶಾನ ಭೂಮಿಯಲ್ಲಿಯೇ ಸಮಾಧಿ ಮಾಡಬೇಕು. ಹಾಗೆ ಮಾಡುತ್ತೇನೆಂಬುದಾಗಿ ನನಗೆ ಪ್ರಮಾಣ ಮಾಡಬೇಕು” ಎಂದು ಹೇಳಲು, ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದನು.
31 इस्राएलले भने, “मसँग शपथ खा ।” अनि योसेफले शपथ खाए । तब इस्राएल आफ्‍नो पलङ्गको सिरानमा घोप्‍टो परे ।
೩೧ಇಸ್ರಾಯೇಲನು, “ಪ್ರಮಾಣಮಾಡು” ಎನ್ನಲು ಅವನು ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ತನ್ನ ಊರುಕೋಲಿನ ಮೇಲೆ ಬಾಗಿ ದೇವರಿಗೆ ನಮಸ್ಕಾರ ಮಾಡಿದನು.

< उत्पत्ति 47 >