< हाग्‍गै 1 >

1 दारा राजाको दोस्रो बर्षको छैटौँ महिनाको पहिलो दिनमा, शालतिएलका छोरा यहूदाका राज्यपाल यरुबाबेल, र यहोसादाकका छोरा प्रधान पूजाहारी यहोशूकहाँ अगमवक्ता हाग्गैद्धारा परमप्रभुको यस्तो वचन आयो,
ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು:
2 “सेनाहरूका परमप्रभु यस्तो भन्‍नुहुन्छ: यी मानिसहरू भन्छन्, ‘हामी आएर परमप्रभुको भवन निर्माण गर्ने समय अझै आएको छैन’ ।”
“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಯೆಹೋವ ದೇವರ ಆಲಯವನ್ನು ಕಟ್ಟುವ ಕಾಲವು ಇನ್ನೂ ಬಂದಿಲ್ಲ,’ ಎಂದು ಈ ಜನರು ಅಂದುಕೊಳ್ಳುತ್ತಾರೆ.”
3 त्यसपछि अगमवक्ता हाग्गैद्धारा परमप्रभुको यस्तो वचन आयो,
ಆಗ ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಬಂದಿತು:
4 “यो मन्दिर ध्वस्त हुँदा के यो तिमीहरू आफ्ना सुन्दर घरहरूमा बस्‍ने समय हो?
“ಈ ಆಲಯ ಹಾಳುಬಿದ್ದಿರುವಾಗ, ನೀವು, ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವುದಕ್ಕೆ ಇದು ನಿಮಗೆ ಕಾಲವೋ?”
5 यसैकारण सेनाहरूका परमप्रभु यस्तो भन्‍नुहुन्छ: आफ्ना मार्गहरूमाथि ध्यान देओ!
ಈಗ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ.
6 तिमीहरूले प्रशस्त बीऊ छरेका छौ, तर फसल भने थोरै मात्र ल्याउँछौ, तिमीहरू खान्छौ तर तिमीहरूसँग पर्याप्‍त छैन । तिमीहरू पिउँछौ, तर प्रशस्त मद्य तिमीहरूसँग छैन । तिमीहरू लुगा लगाउँछौ तर आफैँलाई तातो राख्‍न सक्दैनौ, र ज्यालादारीमा काम गर्नेहरूले पैसा कमाउँछन् तर तिनीहरूले ती प्वालहरू भएका झोलामा राख्दछन् ।”
ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ಸುಗ್ಗಿ ಮಾಡಿದ್ದೀರಿ; ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿಯಾಗಲಿಲ್ಲ; ಬಟ್ಟೆಯನ್ನು ಧರಿಸುತ್ತೀರಿ, ಆದರೆ ಬೆಚ್ಚಗೆ ಆಗಲಿಲ್ಲ; ಸಂಬಳ ಸಂಪಾದಿಸುತ್ತೀರಿ, ಅದನ್ನು ತೂತುಗಳುಳ್ಳ ಚೀಲಗಳಲ್ಲಿ ಹಾಕಿಡುತ್ತೀರಿ.”
7 सेनाहरूका परमप्रभु यस्तो भन्‍नुहुन्छ: “आफ्ना मार्गहरूमाथि ध्यान देओ ।
ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ.
8 माथि पर्वतमा जाओ, काठहरू ल्याओ, र मेरो भवन बनाओ, अनि म त्यसमा आनन्द मनाउनेछु, र म महिमित हुनेछु - परमप्रभु भन्‍नुहुन्छ ।”
ಬೆಟ್ಟಕ್ಕೆ ಹೋಗಿ ಮರವನ್ನು ತಂದು, ಆಲಯವನ್ನು ಕಟ್ಟಿರಿ. ಆಗ ನಾನು ಅದಕ್ಕೆ ಮೆಚ್ಚಿ, ಮಹಿಮೆ ಹೊಂದುವೆನೆಂದು, ಯೆಹೋವ ದೇವರು ಹೇಳುತ್ತಾರೆ.
9 “तिमीहरूले धेरै कुराको खोजी गर्‍यौ, तर हेर! तिमीहरूले घरमा थोरै कुरा ल्यायौ, कनभने मैले ती उडाइदिएँ । किन?” सेनाहरूका परमप्रभु घोषणा गर्नुहुन्छ । “किनभने मेरो भवन भग्‍नावशेषको बिचमा छ, तर तिमीहरू हरेक भने आफ्नै घर बनाउन लागिपरेका छौ ।
ಬಹಳ ಆಗಬೇಕೆಂದು ನೋಡಿಕೊಂಡಿರಿ. ಆದರೆ ಇದೋ ಕೊಂಚವು. ನೀವು ಇದನ್ನು ಮನೆಗೆ ತಂದಾಗ, ನಾನು ಅದರ ಮೇಲೆ ಊದಿ ಬಿಟ್ಟೆನು. ಏತಕ್ಕೆ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ನನ್ನ ಆಲಯವು ಹಾಳುಬಿದ್ದಿರುವಾಗ, ನೀವು ನಿಮ್ಮ ನಿಮ್ಮ ಸ್ವಂತ ಮನೆಗಳ ಕಡೆಗೆ ಹೆಚ್ಚು ಗಮನ ಕೊಡುತ್ತೀರಿ.
10 यसैकारण आकाशले आफ्नो शीत रोकिदिनेछ, र पृथ्वीले आफ्नो उब्जनी दिनेछैन ।
ಆದ್ದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ.
11 मैले भूमि, पर्वतहरू, अन्‍न, नयाँ मद्य, तेल, पृथ्वीका उब्जनीहरू, मानिसहरू, पशुहरू, र तिमीहरूका हातका परिश्रममाथि अनिकाल बोलाएको छु ।”
ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆಯೂ ಎಣ್ಣೆಯ ಮೇಲೆಯೂ ಭೂಮಿಯ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕೈಕಸುಬುಗಳ ಮೇಲೆಯೂ ಬರಗಾಲವನ್ನು ತಂದಿದ್ದೇನೆ.”
12 अनि शालतिएलका छोरा यरुबाबेल, र येहोसादाकका छोरा प्रधान पूजाहारी यहोशूले, बाँकी रहेका सबै मानिसका साथमा तिनीहरूका परमेश्‍वर परमप्रभुको आवाज र अगमवक्ता हाग्‍गैका वचनलाई पालन गरे, किनभने तिनीहरूका परमेश्‍वर परमप्रभुले तिनलाई पठाउनुभएको थियो र मानिसहरूले परमप्रभुको भय मान्थे ।
ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನೂ ಜನರಲ್ಲಿ ಉಳಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರ ಮಾತನ್ನೂ ತಮ್ಮ ದೇವರಾದ ಯೆಹೋವ ದೇವರು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು. ಜನರು ಯೆಹೋವ ದೇವರಿಗೆ ಭಯಪಟ್ಟರು.
13 त्यसपछि परमप्रभुका समाचारवाहक, हाग्‍गैले मानिसहरूलाई यसो भनी परमप्रभुको सन्देश सुनाए, “म तिमीहरूसँग छु - परमप्रभु घोषणा गर्नुहुन्छ ।”
ಆಗ ಯೆಹೋವ ದೇವರ ಸೇವಕನಾದ ಹಗ್ಗಾಯನು, ಯೆಹೋವ ದೇವರ ಜನರಿಗೆ, “ನಾನು ನಿಮ್ಮ ಸಂಗಡ ಇದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ.
14 यसकारण परमप्रभुले यहूदाका राज्यपाल, शालतिएलका छोरा यरुबाबेल, येहोसादाकका छोरा प्रधान पुजारी यहोशू, र सबै बाँकी रहेका मानिसहरूका आत्मालाई उत्तेजित गरिदिनुभयो, अनि तिनीहरू गए र तिनीहरूका परमेश्‍वर सेनाहरूका परमप्रभुको भवनमा काम गरे ।
ಯೆಹೋವ ದೇವರು ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನ ಆತ್ಮವನ್ನೂ, ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನ ಆತ್ಮವನ್ನೂ, ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಪ್ರೇರೇಪಿಸಿದರು. ಅವರು ಬಂದು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೇ ವರ್ಷದ, ಆರನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಯೆಹೋವ ದೇವರ ಆಲಯದ ಕೆಲಸ ಪ್ರಾರಂಭಿಸಿದರು. ಅರಸನಾದ ದಾರ್ಯಾವೆಷನ ಎರಡನೇ ವರ್ಷದಲ್ಲಿ,
15 दारा राजाको दोस्रो वर्षको छैटौँ महिनाको चौबीसौँ दिनमा यो भयो ।

< हाग्‍गै 1 >