< हाग्गै 2 >
1 सातौँ महिनाको एक्काईसौँ दिनमा, अगमवक्ता हाग्गैद्धारा परमप्रभुको यस्तो वचन आयो,
೧ದಾರ್ಯಾವೆಷನ ಆಳ್ವಿಕೆಯ ಏಳನೆಯ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಮತ್ತೊಮ್ಮೆ ಈ ವಾಕ್ಯವನ್ನು ಕೊಟ್ಟು,
2 यहूदाका राज्यपाल, शालतिएलका छोरा यरुबाबेल, र यहोसादाकका छोरा प्रधान पूजाहारी यहोशू, र बाँकी रहेका मानिसहरूलाई यस्तो भन् ।
೨“ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ,
3 ‘तिमीहरूमध्ये को बाँकी छ जसले यो भवनलाई त्यसको पहिलेको महिमामा देखेको थियो? अहिले तिमीहरूले यो कस्तो देख्छौ? के तिमीहरूका नजरमा यो केही मोल नभएको जस्तो छैन र?
೩‘ಈ ಆಲಯದ ಪೂರ್ವ ವೈಭವವನ್ನು ನೋಡಿದವರು, ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲವಾಗಿ ತೋರುತ್ತಿದೆಯಲ್ಲವೇ?’
4 अब, यरुबाबेल साहसी हो! - परमप्रभु घोषणा गर्नुहुन्छ, र यहोसादाकका छोरा यहोशू साहसी हो, र भूमिका सबै मानिसहरू, साहसी होओ! - परमप्रभु घोषणा गर्नुहुन्छ- र काम गर्, किनकि म तिमीहरूसँग छु! यो सेनाहरूका परमप्रभुको घोषणा हो ।
೪ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.
5 यो त्यही करार हो जुन मैले तिमीहरू मिश्रदेशबाट बाहिर आउँदा तिमीहरूसँग स्थापित गरेको थिएँ, र मेरो आत्मा तिमीहरूसँग छ । नडराओ!
೫‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’
6 किनभने सेनाहरूका परमप्रभु यस्तो भन्नुहुन्छ: केही समयमा, म फेरि आकाश र पृथ्वी, र समुद्र र सुक्खा भूमिलाई हल्लाउनेछु!
೬ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ, ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು;
7 म हरेक जातिलाई हल्लाउनेछु, र हरेक जातिले तिनीहरूका बहुमुल्य थोकहरू मकहाँ ल्याउनेछन्, अनि म यो भवनलाई महिमाले भर्नेछु, सेनाहरूका परमप्रभु भन्नुहुन्छ ।
೭ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
8 चाँदी र सुन मेरै हुन्! - सेनाहरूका परमप्रभु यो घोषणा गर्नुहुन्छ ।
೮‘ಬೆಳ್ಳಿಯೆಲ್ಲಾ ನನ್ನದು, ಬಂಗಾರವೆಲ್ಲಾ ನನ್ನದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
9 यस भवनको महिमा सुरुवातको समयको भन्दा पछि अति महान् हुनेछ, सेनाहरूका परमप्रभु भन्नुहुन्छ, र म यस ठाउँमा शान्ति दिनेछु - सेनाहरूका परमप्रभु यो घोषणा गर्नुहुन्छ ।”
೯‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
10 दाराको दोस्रो वर्षको नवौँ महिनाको चौबीसौँ दिनमा, अगमवक्ता हाग्गैद्धारा परमप्रभुको यस्तो वचन आयो,
೧೦ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು.
11 “सेनाहरूका परमप्रभु यस्तो भन्नुहुन्छ: व्यवस्थाको विषयमा पूजाहारीहरुलाई सोध्,
೧೧ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯಾಜಕರ ಹತ್ತಿರ ಹೋಗಿ,
12 ‘परमप्रभुको निम्ति अलग गरिएको मासुलाई कसैले आफ्नो लुगामा पोको पारेर लग्यो, र त्यो पोकोले रोटी वा सुरुवा, मद्य वा तेल, वा कुनै भोजनलाई छोयो भने, के त्यो पवित्र हुन्छ?’” पूजाहारीहरुले यस्तो जवाफ दिए, “हुँदैन ।”
೧೨ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.
13 अनि हाग्गैले भने, “मरेको मानिस छोएर अशुद्ध भएको कोहीले यी कुराहरू छोयो भने, के ती अशुद्ध हुन्छन्?” पूजाहारीहरुले जवाफ दिए, “हो, ती अशुद्ध हुन्छन् ।”
೧೩ಆ ಮೇಲೆ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರು ಸೋಕಿದರೆ ಅದು ಅಶುದ್ಧವಾಗುವುದೋ?” ಎಂದು ಕೇಳಿದ್ದಕ್ಕೆ ಯಾಜಕರು, “ಅಶುದ್ಧವೇ ಆಗುವುದು” ಎಂದು ಉತ್ತರಕೊಟ್ಟರು.
14 यसैकारण हाग्गैले जवाफ दिए, “यसैकारण मेरो अगि यी मानिसहरू र यो जाति, र तिनीहरूका हातले गरेका सबै कुरा यस्तै छन्! - परमप्रभु घोषणा गर्नुहुन्छ । तिनीहरूले मलाई अर्पण गरेका कुरा अशुद्ध छन्!
೧೪ಆಗ ಹಗ್ಗಾಯನು ಮುಂದುವರಿಸುತ್ತಾ, ಜನರಿಗೆ ಹೀಗೆಂದನು, “ಯೆಹೋವನು ಇಂತೆನ್ನುತ್ತಾನೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಅಶುದ್ಧವಾಗಿಯೇ ಕಾಣುತ್ತಿದ್ದೆ.
15 यसैकारण अब, आजको दिनसम्म पुर्याउने बितेको समयको बारेमा विचार गर । परमप्रभुको मन्दिरमा एउटा ढुङ्गामाथि अर्को ढुङ्गा राख्नअगि त्यो कस्तो थियो?
೧೫“ಯೆಹೋವನ ಆಲಯದ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ;
16 तिमीहरू बिस मुरी अन्नको छेऊमा आउँदा, त्यहाँ दश मात्र थिए, र तिमीहरू पचास लिटर दखमद्य लिन कोलमा आउँदा, त्यहाँ बिसमात्र थिए ।
೧೬ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು.
17 मैले तिमीहरू र तिमीहरूका सबै कामहरूलाई शीत र ढुसीले सताएँ, तर पनि तिमीहरू मकहाँ फर्केनौ, परमप्रभु घोषणा गर्नुहुन्छ ।
೧೭ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.
18 नवौँ महिनाको चौबीसौँ दिनबाट उसो परमप्रभुको मन्दिरको जग बसालिएको कुरामाथि ध्यान देओ ।
೧೮“ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.
19 के भण्डारमा अझै बीउ छ? दाखको बोट, अन्जिरको रूख, अनार, र जैतूनको रूखले फल दिएको छैन । तर यस दिनदेखि म तिमीहरूलाई आशिष् दिनेछु!”
೧೯ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”
20 त्यस महिनाको चौबीसौँ दिनमा परमप्रभुको यस्तो वचन फेरि एक पटक हाग्गैकहाँ आयो,
೨೦ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಹಗ್ಗಾಯನಿಗೆ ಈ ಎರಡನೆಯ ವಾಕ್ಯವನ್ನು ದಯಪಾಲಿಸಿ,
21 “‘मैले आकाश र पृथ्वी हल्लाउनेछु भनी यहूदाका राज्यपाल यरुबाबेललाई भन् ।
೨೧“ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ, ನಾನು ಭೂಮ್ಯಾಕಾಶಗಳನ್ನು ಅದುರಿಸಿ,
22 किनभने म जाति-जातिहरूका राज्यहरूको सिंहासनलाई पल्टाइदिनेछु र तिनीहरूका शक्तिलाई नष्ट गर्नेछु । रथहरू र तिनीहरूमा सवारहरूलाई म पल्टाइदिनेछु । घोडाहरू र तिनमा सवारहरू आफ्ना दाजुभाइहरूका तरवारद्धारा तल खस्नेछन् ।
೨೨ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”
23 सेनाहरूका परमप्रभु घोषणा गर्नुहुन्छ, त्यस दिन ए शालतिएलका छोरा यरुबाबेल, म तँलाई मेरो दास बनाउनेछु । म तँलाई छाप-औँठीझैँ बनाउनेछु, किनभने मैले तँलाई चुनेको छु! परमप्रभु घोषणा गर्नुहुन्छ!’”
೨೩ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಶೆಯಲ್ತೀಯೇಲನ ಮಗನೂ, ನನ್ನ ಸೇವಕನಾದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವನ್ನಾಗಿ ಮಾಡಿಕೊಳ್ಳುವೆನು, ಇದಕ್ಕೇ ನಿನ್ನನ್ನು ಆರಿಸಿಕೊಂಡಿದ್ದೇನೆ” ಇದು ಸೇನಾಧೀಶ್ವರ ಯೆಹೋವನ ನುಡಿ.