< यशैया 14 >
1 परमप्रभुले याकूबलाई दया गर्नुहुनेछ । उहाँले फेरि पनि इस्राएललाई रोज्नुहुनेछ र तिनीहरूलाई आफ्नै देशमा पुनर्स्थापना गर्नुहुनेछ । परदेशीहरू पनि तिनीहरूसँगै सहभागी हुनेछन् र आफूलाई याकूबको घरानासँग आवद्ध गराउनेछन् ।
೧ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
2 जातिहरूले तिनीहरूलाई आफ्नै ठाउँमा ल्याउनेछन् । तब इस्राएलको घरानाले तिनीहरूलाई सेवक र सेविकाको रूपमा परमप्रभुको देशमा लानेछन् । तिनीहरूलाई कैदी बनाउनेहरूलाई तिनीहरूले कैदी बनाउनेछन् र तिनीहरूले आफ्ना अत्याचारीहरूमाथि राज्य गर्नेछन् ।
೨ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.
3 त्यो दिनमा तिमीहरूका कष्ट र पीडाबाट, अनि तिमीहरूले गर्नुपर्ने कडा परिश्रमबाट परमप्रभुले तिमीहरूलाई विश्राम दिनुहुन्छ,
೩ಯೆಹೋವನು ನಿಮ್ಮನ್ನು ಸಂಕಟದಿಂದಲೂ, ಕಳವಳದಿಂದಲೂ, ಕಠಿಣವಾದ ಬಿಟ್ಟಿ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ,
4 तब तिमीहरूले बेबिलोनको राजाको विरुद्ध यो गिल्लाको गीत गाउनेछौ, “अत्याचारीको अन्त्य कसरी भएको छ, घमण्डी क्रोधको अन्त्य भयो!
೪ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: “ಆಹಾ, ಹಿಂಸಕನು ಕೊನೆಗೊಂಡನು, ಕೋಪವು ನಿಂತು ಹೋಯಿತು!
5 परमप्रभुले दुष्टहरूको लट्ठी र ती शासकहरूको राजदण्ड भाँच्नुभएको छ,
೫ಯೆಹೋವನು ಆಳುತ್ತಿದ್ದ ದುಷ್ಟರ ಕೋಲನ್ನೂ, ಅರಸರ ದಂಡವನ್ನೂ ಮುರಿದುಬಿಟ್ಟನು.
6 जसले मानिसहरूलाई क्रोधमा निरन्तर रूपमा प्रहार गर्यो, जसले अनियन्त्रित रूपमा आक्रमण गरेर जातिहरूमाथि क्रोधमा राज्य गर्यो ।
೬ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು, ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು.
7 सम्पूर्ण पृथ्वी नै विश्राममा छ र शान्त छ । तिनीहरूले गीत गाउँदै उत्सव मनाउन सुरु गर्छन् ।
೭ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿಗೊಂಡಿದೆ, ಅವರು ಹರ್ಷಧ್ವನಿಗೈಯುತ್ತಾರೆ.
8 सल्लाका रूखहरू लेबनानको देवदारुहरूसँगै तँलाई देखेर रमाउँछन् । तिनीहरू भन्छन्, 'तँलाई तल खसालिएको हुनाले, हामीलाई काटेर ढाल्न काठ काट्ने कुनै मानिस माथि आउनेछैन ।'
೮ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ, ‘ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ’ ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
9 तँ चिहानमा जाँदा, तँलाई भेट्न चिहान उत्सुक हुन्छ । पृथ्वीका सबै राजालाई, जातिहरूका सबै राजालाई, आफ्ना सिंहासनबाट माथि खडा हुन लगाएर तेरो निम्ति त्यसले मृतहरूलाई जगाउँछ । (Sheol )
೯ಬರುತ್ತಿರುವ ನಿನ್ನನ್ನು ಎದುರುಗೊಳ್ಳುವುದಕ್ಕೆ ಪಾತಾಳವು ತಳಮಳಪಡುತ್ತದೆ. ನಿನಗೋಸ್ಕರ ಸತ್ತವರನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ, ಜನಾಂಗಗಳ ಸಕಲ ಅರಸರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ. (Sheol )
10 तिनीहरू सबै बोल्नेछन् र तँलाई यसो भन्नेछन्, 'तँ पनि हामीजस्तै कमजोर भएको छस् । तँ पनि हामीजस्तै भएको छस् ।
೧೦ಅವರೆಲ್ಲರು ನಿನ್ನನ್ನು ಕುರಿತು, ‘ನೀನು ಸಹ ನಮ್ಮ ಹಾಗೆ ಬಲಹೀನನಾಗಿದ್ದೀ? ನಮಗೆ ಸರಿಸಮಾನನಾಗಿದ್ದೀ?’ ಎಂದು ಮಾತನಾಡಿಕೊಳ್ಳುವರು.
11 तेरो तडकभडकलाई तेरो वीणाहरूको आवाजसँगै चिहनामा ल्याइएको छ । तँमुनि औंसाहरू फैलिएका छन् र तँलाई किराहरूले ढाकेको छ,' (Sheol )
೧೧ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ. ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು. (Sheol )
12 ए दिनको तारा, बिहानको पुत्र, तँ कसरी स्वर्गबाट तल झरेको छस्! जातिहरूमाथि विजय पाएको, तँलाई कसरी भूइँमा ढालिएको छ!
೧೨ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ!
13 तैंले आफ्नो हृदयमा भनेको थिइस्, 'म स्वर्गमा चढ्नेछु, परमेश्वरका ताराहरूभन्दा माथि म आफ्नो सिंहासनलाई उचाल्नेछु, र सभाको पहाडमाथि सूदूर उत्तरमा म विराजमान हुनेछु ।
೧೩ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಆಕಾಶಕ್ಕೆ ಏರಿ, ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ, ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು.
14 बादलहरूको उचाइभन्दा माथि म चड्नेछु । म आफैलाई सर्वोच्च परमेश्वरजस्तै बनाउनेछु ।'
೧೪ಉನ್ನತವಾದ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುವೆನು’ ಎಂದುಕೊಂಡೆಯಲ್ಲಾ!
15 तापनि तँलाई अब चिहानमा, खडालको गहिराइमा तल खसालिएको छ । (Sheol )
೧೫ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ. (Sheol )
16 तँलाई देख्नेहरूले तँलाई टुलुटुलु हेर्नेछन् र तिनीहरूले तँलाई ध्यान दिनेछन् । तिनीहरूले सोध्नेछन्, 'के यो त्यही मानिस हो, जसले पृथ्वीलाई थर्कमान पार्यो, जसले राज्यहरूलाई हल्लायो,
೧೬ನಿನ್ನನ್ನು ನೋಡುವವರು ನಿನ್ನನ್ನು ದಿಟ್ಟಿಸಿ ನೋಡಿ, ಯೋಚಿಸುತ್ತಾ, ‘ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ ಪಟ್ಟಣಗಳನ್ನು ನಾಶಮಾಡಿ,
17 जसले संसारलाई उजाड-स्थानजस्तो बनायो, जसले सहरहरूलाई नष्ट पार्यो र आफ्ना कैदीहरूलाई घर जान दिएन?'
೧೭ಲೋಕವನ್ನು ಕಾಡನ್ನಾಗಿ ಮಾಡಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಈ ಮನುಷ್ಯನೋ?’ ಎಂದುಕೊಳ್ಳುವರು.
18 जातिहरूका सबै राजा, तीमध्ये सबै जना, हरेक व्यक्ति आ-आफ्ना चिहानमा आदरसाथ सुत्छन् ।
೧೮ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ಅರಸರೂ ತಮ್ಮ ತಮ್ಮ ವೈಭವದೊಡನೆ ಸಮಾಧಿಗಳಲ್ಲಿ ದೀರ್ಘ ನಿದ್ರೆ ಮಾಡುತ್ತಾರೆ.
19 तर एउटा हाँगालाई फालेझैं, तेरो चिहानबाट तँलाई बाहिर फालिएको छ । तरवारले छेडेर मारिएका खाल्डोका ढुङ्गाहरूतिर जाने मृतकहरूले तँलाई कपडाले झैं ढाक्छन् ।
೧೯ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ; ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ,
20 तैंले आफ्नो देशलाई नाश पारेको र आफ्ना मानिसहरूलाई मारेको हुनाले तिनीहरूसँगै तेरो दफन हुनेछैन । दुष्ट काम गर्नेहरूका सन्तानलाई फेरि कहिल्यै याद गरिनेछैन ।”
೨೦ಕಾಲ ಕೆಳಗೆ ತುಳಿಯಲ್ಪಟ್ಟ ಹೆಣದಂತೆಯೂ, ನೀನು ಆ ಅರಸರೊಡನೆ ಸಮಾಧಿಗೆ ಸೇರುವುದಿಲ್ಲ, ಏಕೆಂದರೆ ನೀನು ದೇಶವನ್ನು ಹಾಳುಮಾಡಿ, ನಿನ್ನ ಪ್ರಜೆಯನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ಎಂದೆಂದಿಗೂ ಜ್ಞಾಪಕಕ್ಕೆ ಬರುವುದಿಲ್ಲ.”
21 त्यसका सन्तानलाई, तिनीहरूका पुर्खाहरूका अपराधको निम्ति मार्ने ठाउँ तयार पार्, यसरी तिनीहरू उठ्नेछैनन् र पृथ्वी अधीन गर्नेछैनन् र सारा संसारलाई सहरहरूले भर्नेछैनन् ।
೨೧ಪೂರ್ವಿಕರ ಅಧರ್ಮದ ನಿಮಿತ್ತ ಅವನ ಮಕ್ಕಳಿಗೂ, ವಧ್ಯಸ್ಥಾನವನ್ನು ಸಿದ್ಧಮಾಡಿರಿ, ಅವರು ತಲೆಯೆತ್ತಿ, ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ.
22 “तिनीहरू विरुद्धमा म खडा हुनेछु,”— यो सर्वशक्तिमान् परमप्रभुको घोषणा हो । “म बेबिलोनबाट नाउँ, सन्तान र वंशज नष्ट पार्नेछु,”— यो परमप्रभुको घोषणा हो ।
೨೨“ನಾನು ಅವರ ವಿರುದ್ಧವಾಗಿ ಏಳುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ನಾನು ಬಾಬೆಲಿನಿಂದ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಸಂತತಿಯನ್ನೂ ನಿರ್ಮೂಲ ಮಾಡುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
23 “म त्यसलाई लाटोकोसेरोको अधीनमा र पानीको तलाउमा राख्नेछु, र विनाशको कुचोले म त्यसलाई बढार्नेछु,”— यो सर्वशक्तिमान् परमप्रभुको घोषणा हो ।
೨೩“ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.
24 सर्वशक्तिमान् परमप्रभुले शपथ खानुभएको छ, “निश्चय नै, जस्तो मैले इच्छा गरेको छु, त्यस्तै हुनेछ । अनि जे उद्देश्य मैले राखेको छु, त्यो पुरा हुनेछ ।
೨೪ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.
25 अश्शूरलाई म आफ्नो देशमा चकनाचूर पार्नेछु र मेरो पर्वतमा म त्यसलाई खुट्टामुनि कुल्चिनेछु । तिनीहरूका काँधबाट त्यसको जुवा हटाइनेछ र तिनीहरूका पिठ्यूबाट त्यसको भारी निकालिनेछ ।”
೨೫ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು, ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು. ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ, ಹೊರಿಸಿದ ಹೊರೆಯು ನನ್ನ ಜನರ ಹೆಗಲ ಮೇಲಿನಿಂದ ದೂರವಾಗುವುದು.
26 सम्पूर्ण पृथ्वीको निम्ति इच्छा गरिएको योजना यही हो र सारा जातिहरूमाथि पसारिएको बहुली यही हो ।
೨೬ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
27 किनकि सर्वशक्तिमान् परमप्रभुले नै यो योजना गर्नुभएको छ । उहाँलाई कसले रोक्न सक्छ र? उहाँको हात उचालिएको छ र त्यसलाई कसले फर्काउने छ र?
೨೭ಏಕೆಂದರೆ ಸೇನಾಧೀಶ್ವರನಾದ ಯೆಹೋವನು ಉದ್ದೇಶಿಸಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು?” ಎಂಬುದೇ.
28 आहाज राजा मरेको वर्षमा यो घोषणा आयोः
೨೮ಅರಸನಾದ ಆಹಾಜನು ಮರಣ ಹೊಂದಿದ ವರ್ಷದಲ್ಲಿ ಈ ದೈವೋಕ್ತಿಯು ಬಂದಿತು:
29 ए सारा पलिश्तीहरू हो, तिमीहरूलाई प्रहार गर्ने छडी भाँचिएको छ भनेर आनन्दित नहोओ । किनकि साँपको वंशबाट झन् विषलु सर्प बढ्नेछ, र त्यसको सन्तान डरलाग्दो उड्ने सर्प हुनेछ ।
೨೯ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಏಕೆಂದರೆ ನಾಗರ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಸಂತತಿಯು ಹಾರುವ ಸರ್ಪವೇ.
30 गरीबको जेठा छोरोले मेरो खर्कहरूमा आफ्ना भेडाहरू चराउनेछन्, र खाँचामा परेकाहरू सुरक्षासँग पल्टिनेछन् । तेरो वंशलाई म अनिकाले मार्नेछु जसले तेरा बाँचेका सबैलाई मृत्युमा पुर्याउनेछ ।
೩೦ಬಡವರಲ್ಲಿ ಹಿರಿಯ ಮಕ್ಕಳು ಆಹಾರವನ್ನು ಕಂಡುಕೊಳ್ಳುವರು. ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು. ಆದರೆ ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು (ಆ ಸರ್ಪವೇ) ಕ್ಷಾಮವು ಕೊಲ್ಲುವುದು.
31 ए ढोका करा । ए सहर चिच्या । हे पलिश्ती, तिमीहरू सबै पग्लेर हराउनेछौ । किनकि उत्तरबाट धूँवाको बादल आउँछ र त्यसको पङ्तिमा धरमराउने कोही छैन ।
೩೧ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ! ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ.
32 जातिका दूलहरूलाई तिनीहरूले कसरी जवाफ दिनेछन्? “परमप्रभुले सियोनलाई बसाल्नुभएको छ, त्यसमा कष्टमा परेका मानिसहरूले शरण लिनेछन् ।”
೩೨ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ.