< यशैया 24 >

1 हेर्, परमप्रभुले पृथ्वीलाई रित्तो बनाउन, यसलाई विनाश पार्न, यसको सतहलाई बिगार्न र यसका बासिन्दाहरूलाई तितरबितर पार्न लाग्‍नुभएको छ ।
ಇಗೋ, ಯೆಹೋವ ದೇವರು ಭೂಮಿಯನ್ನು ಬರಿದುಮಾಡಿ, ನಿರ್ಜನ ಪ್ರದೇಶವನ್ನಾಗಿ ಮಾಡಿ, ತಲೆಕೆಳಗಾಗಿ ತಿರುಗಿಸಿ, ಅದರ ನಿವಾಸಿಗಳನ್ನು ಚದರಿಸಿಬಿಡುವವರಾಗಿದ್ದಾರೆ.
2 यो मानिसहरूलाई झैं पुजारीहरूलाई, नोकरलाई झैं मालिकलाई, दासीलाई झैं मलिक्‍नीलाई, किन्‍नेलाई झैं बेच्‍नेलाई, ऋण दिनेलाई झैं ऋण लिनेलाई, ब्याज लिनेलाई झैं ब्याज दिनेलाई हुनेछ ।
ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೆ; ದಾಸನಿಗೆ ಹೇಗೋ ಹಾಗೆಯೇ ಯಜಮಾನನಿಗೆ; ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ಸಾಲ ಪಡೆಯುವವನಿಗೆ; ಬಡ್ಡಿ ತೆಗೆಯುವವನಿಗೆ ಹೇಗೋ ಹಾಗೆಯೇ ಬಡ್ಡಿ ತರುವವನಿಗೆ ಆಗುವುದು.
3 पृथ्वीलाई पुर्ण रूपमा विनाश गरिनेछ र पुर्ण रूपमा नाङ्गो बनाइनेछ । किनकि परमप्रभुले यो वचन बोल्नुभएको छ ।
ಭೂಮಿಯು ಬಟ್ಟಬರಿದಾಗುವುದು, ಸಂಪೂರ್ಣ ಸುಲಿಗೆಯಾಗುವುದು. ಯೆಹೋವ ದೇವರು ತಾವೇ ಈ ಮಾತನ್ನು ಹೇಳಿದ್ದಾರೆ.
4 पृथ्वी सुख्‍खा हुनेछ र ओइलाउनेछ, संसार सुक्‍नेछ र ओइलाएर जानेछ। पृथ्वीका विशिष्‍ट मानिसहरू दुर्बल हुनेछन् ।
ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವುದು. ಲೋಕವು ಸೊರಗಿ ಬಾಡಿಹೋಗುವುದು. ಆಕಾಶವು ಭೂಮಿಯೊಂದಿಗೆ ಕುಗ್ಗಿಹೋಗುವುದು.
5 पृथ्वीलाई यसका बासिन्दाहरूले दूषित पारेका छन्, किनभने तिनीहरूले व्यवस्था भङ्ग गरेका छन्, नियमहरू तोडेका छन् र अनन्‍तको करार उलङ्घन गरेका छन् ।
ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ದೈವನಿಯಮಗಳನ್ನು ಬದಲಾಯಿಸಿ, ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆಯಿಂದ ಅಪವಿತ್ರವಾಗುವುದು.
6 यसकारण सरापले पृथ्वीलाई विनाश पार्छ र यसका बासिन्दाहरू दोषी भेट्टाइएका छन् । पृथ्‍वीका बासिन्दाहरू जलाइन्‍छन् र थोरै मानिसहरू मात्र बाँकी छन् ।
ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ. ಅದರಲ್ಲಿ ವಾಸವಾಗಿರುವವರು ದಂಡನೆಗೆ ಒಳಗಾಗಿದ್ದಾರೆ. ಆದ್ದರಿಂದ ಭೂನಿವಾಸಿಗಳು ಸುಟ್ಟು ಹೋಗಿ, ಕೆಲವರು ಮಾತ್ರ ಉಳಿದಿದ್ದಾರೆ.
7 नयाँ दाखमद्य सुक्छ, दाख ओइलिन्छ, सबै आनन्दि हृदयहरूले शोक गर्छन् ।
ದ್ರಾಕ್ಷಾರಸವು ಬತ್ತಿಹೋಗುವುದು, ದ್ರಾಕ್ಷಿಯು ಬಾಡುವುದು. ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ.
8 खैंजडीको सुमधुर आवाज बन्द हुन्छ र आनन्द मनाउनेहरूको आनन्‍दको सोर पनि बन्द हुन्छ । वीणाको आनन्द बन्द हुन्छ ।
ದಮ್ಮಡಿಗಳ ಉತ್ಸಾಹವು ಮುಗಿದಿದೆ. ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.
9 तिनीहरूले फेरि दाखमद्य पिउँदैनन् र गाउँदैनन्, र कडा मद्य पिउनेलाई त्‍यो तीतो हुन्छ ।
ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು, ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವುದು.
10 गोलमालको सहरलाई भत्काइएको छ । हरेक घर बन्द गरिएको र रित्तो छ ।
ಹಾಳುಪಟ್ಟಣವು ಬಿದ್ದುಹೋಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ.
11 दाखमद्यको कारणले गर्दा सडकमा चिच्याहट छ । सबै आनन्द अन्धकार भएको छ, देशको खुसी लोप भएको छ ।
ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ. ಉಲ್ಲಾಸವೆಲ್ಲ ಅಸ್ತಮಿಸಿದೆ. ಭೂಮಿಯ ಮೇಲಿನ ಸಂತೋಷವು ತೊಲಗಿಹೋಗಿದೆ.
12 सहरमा उजाड छोडिएको छ र ढोका भग्‍नावशेष भएर फुटेको छ ।
ಪಟ್ಟಣದಲ್ಲಿ ಹಾಳೇ ಉಳಿದಿವೆ. ನಾಶನವು ಹೆಬ್ಬಾಗಿಲಿಗೆ ಬಡಿದಿದೆ.
13 किनकि जस्‍तो जैतूनको रूखलाई हल्लाउँदा, जस्‍तो अङ्गुर टिप्‍दा फाटफुट छुट्छ, सारा पृथ्वीभरि जातिहरू माझ यस्तै नै हुनेछ ।
ಓಲಿವ್ ಮರವನ್ನು ಬಡಿದ ಮೇಲೆಯೂ, ದ್ರಾಕ್ಷಿ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವುದು.
14 आफ्‍नो सोरलाई तिनीहरूले उचाल्‍नेछन् र परमप्रभुको वैभवको जयजयकार गर्नेछन् र समुद्रबाट आनन्दसाथ कराउनेछन् ।
ಅವರು ತಮ್ಮ ಸ್ವರವನ್ನೆತ್ತಿ ಯೆಹೋವ ದೇವರ ಮಹಿಮೆಯನ್ನು ಕುರಿತು ಹಾಡುವರು. ಪಶ್ಚಿಮ ದಿಕ್ಕಿನ ಕಡೆಯಿಂದ ಆರ್ಭಟಿಸುವರು.
15 यसकारण पुर्वमा परमप्रभुको महिमा गर, समुद्रा टापुहरूमा परमप्रभु इस्राएलका परमेश्‍वरको नाउँलाई महिमा देओ ।
ಆದ್ದರಿಂದ ಪೂರ್ವದಿಕ್ಕಿನವರೇ, ಯೆಹೋವ ದೇವರನ್ನು ಮಹಿಮೆಪಡಿಸಿರಿ; ಸಮುದ್ರದ ದ್ವೀಪಗಳಲ್ಲಿ ಇಸ್ರಾಯೇಲರ ದೇವರಾದ ಯೆಹೋವ ದೇವರ ಹೆಸರನ್ನು ನೀವು ಘನಪಡಿಸಿರಿ, ಎಂದು ಕೂಗುವರು.
16 हामीले पृथ्वीको सुदूर भागबाट गीतहरू सुनेका छौं, “धर्मी जनको महिमा होस्!” तर मैले भनें, “म सुकेर जाँदैछु, म सुकेर जाँदैछु, मलाई धिक्‍कार! धोकेबाजले धोकापुर्ण व्यवहार गरेको छ । हो, धोकेबाजले धेरै धोकापुर्ण व्यवहार गरेको छ ।
ಭೂಮಂಡಲದ ಕಟ್ಟಕಡೆಯಿಂದ “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿಬರುತ್ತಿವೆ. ಆದರೆ, “ನಾನಾದರೋ ಕ್ಷಯಿಸೇ ಕ್ಷಯಿಸುತ್ತೇನೆ. ನನಗೆ ಕಷ್ಟ! ಬಾಧಕರು ಬಾಧಿಸುವುದರಲ್ಲಿಯೇ ನಿರತರಾಗಿದ್ದಾರೆ. ಹೌದು, ಬಾಧಕರು ಬಹಳವಾಗಿ ಬಾಧಿಸುವುದರಲ್ಲಿ ನಿರತರಾಗಿದ್ದಾರೆ.”
17 ए पृथ्वीका बासिन्दाहरू, तिमीहरूमाथि त्रास, खाल्डो र पासो आइलागेको छ ।
ಭೂಮಿಯ ನಿವಾಸಿಗಳೇ, ಭಯವೂ, ಕುಳಿಯೂ, ಬಲೆಯೂ ನಿಮಗೆ ಕಾದಿವೆ.
18 त्रासको आवाजदेखि भाग्‍ने खाल्डोमा पर्नेछ, खाल्डोको बिचबाट बाहिर निस्‍कने पासोमा पर्नेछ । स्वर्गका झ्यालहरू खोलिनेछन् र पृथ्वीका जगहरू हल्लिनेछन् ।
ಆಗ ಭಯದ ಶಬ್ದಕ್ಕೆ ಓಡಿಹೋಗುವವನು ಗುಂಡಿಯೊಳಗೆ ಬೀಳುವನು. ಗುಂಡಿಯೊಳಗಿಂದ ಏರಿಬರುವವನು ಬಲೆಗೆ ಸಿಕ್ಕಿಬೀಳುವನು. ಆಕಾಶದ ದ್ವಾರಗಳು ತೆರೆದಿವೆ. ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.
19 पृथ्वी पुर्ण रूपमा टुट्‍नेछ, पृथ्वी चिरा पर्नेछ । पृथ्वीलाई डरलाग्‍दो किसिमले हल्लाइनेछ ।
ಭೂಮಿಯು ಬಿರುಕುಬಿಟ್ಟಿದೆ, ಬಿರಿದು ಬಿರಿದಿದೆ, ಭೂಮಿಯು ಕದಲಿಹೋಗಿದೆ.
20 पृथ्वी मद्यले मातेको मानिसझैं लरखराउनेछ र यो झुप्रोझैं यताउता हल्‍लिनेछ । यसमाथि यसको पाप भारि हुनेछ र यो पतन हुनेछ अनि फेरि कहिल्यै उठ्नेछैन ।
ಭೂಮಿಯು ಕುಡುಕನ ಹಾಗೆ ಓಲಾಡುತ್ತದೆ, ಗಾಳಿಗೆ ಸಿಕ್ಕಿದ ಗುಡಿಸಲಿನ ಹಾಗೆ ತೂಗಾಡುತ್ತದೆ, ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ, ಅದು ಬಿದ್ದು ಹೋಗುತ್ತದೆ, ತಿರುಗಿ ಏಳುವುದೇ ಇಲ್ಲ.
21 त्यस दिन परमप्रभुले स्वर्गका सेनाहरूलाई आकाशमा र पृथ्वीका राजाहरूलाई पृथ्वीमा दण्ड दिनुहुनेछ ।
ಆ ದಿವಸದಲ್ಲಿ ಯೆಹೋವ ದೇವರು ಆಕಾಶದಲ್ಲಿರುವ ಆಕಾಶದವರ ಸೈನ್ಯವನ್ನೂ, ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸುವರು.
22 तिनीहरूले कैदीको रूपमा खाल्डोमा एकसाथ जम्‍मा गरिनेछ र झ्यालखानमा बन्द गरिनेछ । अनि धेरै दिनपछि तिनीहरूलाई दण्ड दिइनेछ ।
ನೆಲಮಾಳಿಗೆಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಬಹಳ ದಿನಗಳಿದ್ದ ತರುವಾಯ ದಂಡನೆಗೆ ಗುರಿಯಾಗುವರು.
23 तब चन्द्रमा लज्‍जित हुनेछ र सूर्य अपमानमा पर्नेछ, किनकि सर्वशक्तिमान् परमप्रभुले सियोन पर्वतमा र यरूशलेममा अनि महिमामा आफ्‍ना धर्मगुरुहरूका सामु राज्‍य गर्नुहुनेछ ।
ಆಮೇಲೆ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಹಿರಿಯರ ಮುಂದೆ ಮಹಿಮೆಯಿಂದ ಆಳುವಾಗ, ಚಂದ್ರನಿಗೆ ಅವಮಾನವಾಗುವುದು, ಸೂರ್ಯನು ನಾಚಿಕೆ ಪಡುವನು.

< यशैया 24 >