< यशैया 28 >

1 एफ्राइमका प्रत्‍येक मतवालाहरूले लगाएका गौरवशाली फुलमाला र त्‍यसको महिमित सुन्दरताको ओइलाउने फुललाई, दाखमद्यले लट्ठ परेकाहरूका हरियाली बेसीको शिरमा लगाइएको फुलमालालाई धिक्‍कार!
ಕುಡುಕರಿಂದ ಕೂಡಿದ ಎಫ್ರಾಯೀಮಿನ ಕಿರೀಟದಂತಿರುವ ನಗರಕ್ಕೆ ಕಷ್ಟ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಕಷ್ಟ!
2 हेर, परमप्रभुले शक्तिशाली र बलियो एक जनालाई, असिनाको हुरीबतासझैं अनि विनाशकारी आँधीझैं, मुसलधार झरी र बाडीको पानीझैं पठाउनुहुन्‍छ र उहाँले प्रत्‍येक फुलमालालाई जमिनमा फाल्‍नुहुनेछ ।
ಇಗೋ, ಕರ್ತರಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ಹೊಡೆದು ಬಿಡುವ ಬಿರುಗಾಳಿಯಂತೆಯೂ, ಪ್ರಳಯ ಮಾಡುವ ದೊಡ್ಡ ನೀರನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈಯಿಂದ ಬೀಳಿಸುವನು.
3 एफ्राइमका मतवालाहरूका गौरवशाली फुलमालालाई खुट्टाले कुल्चिमिल्ची गरिनेछ ।
ಕುಡುಕರಾದ ಎಫ್ರಾಯೀಮ್ಯರ ಗರ್ವದ ಕಿರೀಟವು ಕಾಲಿನ ತುಳಿತಕ್ಕೆ ಈಡಾಗುವುದು.
4 त्‍यसको महिमित सुन्दरताको ओइलाउने फुल अर्थात् धनी बेसीको शिरमा रहेको छ, त्‍यो पहिले पाकेको अन्‍जिरजस्‍तो हुनेछ, जब कसैले त्‍यसलाई देख्‍छ, तब आफ्नो हातमा हुँदा नै त्यसले त्‍यो निलिहाल्‍छ ।
ಫಲವತ್ತಾದ ಕಣಿವೆಗೆ ತಲೆಯ ಮೇಲಿರುವ ಅಲಂಕಾರದ ಶೃಂಗಾರವಾಗಿದ್ದು, ಬೇಸಿಗೆ ಮುಂಚೆ ಮಾಗಿದ ಅಂಜೂರದ ಹಣ್ಣಿನ ಹಾಗೆ ಇರುವುದು. ಜನರು ಅವರನ್ನು ನೋಡಿ ಕೈಗೆ ತೆಗೆದುಕೊಂಡ ತಕ್ಷಣ ಅವರು ನುಂಗುತ್ತಾರೆ.
5 त्यो दिनमा सर्वशक्तिमान् परमप्रभु नै सुन्दर मुकुट बन्‍नुहुनेछ र आफ्‍ना बाँकी रहेका मानिसहरूका निम्‍ति महिमाको मुकुट बन्‍नुहुनेछ ।
ಆ ದಿನದಲ್ಲಿ ಸೇನಾಧೀಶ್ವರ ಯೆಹೋವ ದೇವರು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವೂ ಮತ್ತು ಸುಂದರವಾದ ಮಕುಟವೂ ಆಗಿರುವರು.
6 न्याय आसनमा बस्‍नेको निम्ति न्यायको आत्मा र आफ्‍ना ढोकाहरूमा आफ्ना शत्रुलाई फर्काउनेहरूका निम्ति सामर्थ्य हुनुहुनेछ ।
ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ, ಬಾಗಿಲಿನ ಕಡೆಗೆ ಯುದ್ಧವನ್ನು ತಿರುಗಿಸುವವನಿಗೆ ಪರಾಕ್ರಮವೂ ಆಗಿರುವನು.
7 तर यिनीहरू पनि दाखमद्यले लरबराउछन् र कडा मद्यले लरखराउछन् । पुजारी र अगमवक्ता कडा मद्यले लरखाराउछन् र दाखमद्यले तिनीहरूलाई निल्छ । कडा मद्यले तिनीहरू लरखराउँछन्, तिनीहरू दर्शनमा लरखराउँछन् र निर्णयमा लरबराउँछन् ।
ಇವರು ಸಹ ದ್ರಾಕ್ಷಾರಸದಿಂದ ಮತ್ತರಾಗಿದ್ದಾರೆ. ಮದ್ಯದಿಂದಲೂ ಓಲಾಡುತ್ತಿದ್ದಾರೆ. ಯಾಜಕನೂ ಪ್ರವಾದಿಯೂ ಮದ್ಯದಿಂದ ಮತ್ತರಾಗಿದ್ದಾರೆ. ದ್ರಾಕ್ಷಾರಸದಿಂದ ತೂರಾಡುತ್ತಿದ್ದಾರೆ. ಮದ್ಯದಿಂದ ಓಲಾಡುತ್ತಿದ್ದಾರೆ. ದರ್ಶನವಾಗುತ್ತಿರುವಾಗಲೂ ಅವರು ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
8 साँच्‍चै नै सबै टेबलहरू बान्ताले ढाकेकोछ, जसले गर्दा त्यहाँ कुनै सफा ठाउँ नै छैन ।
ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.
9 त्यसले कसलाई ज्ञान सिकाउनेछ र त्यसले कसलाई सन्देश बताउनेछ? जसलाई दूध छोडाइएका छन् वा जसलाई बरखरै दूधबाट अलग गरिका छन्?
ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಮತ್ತು ಯಾರಿಗೆ ಬೋಧನೆಯನ್ನು ತಿಳಿದುಕೊಳ್ಳುವ ಹಾಗೆ ಮಾಡುತ್ತಾನೆ? ಆಗತಾನೇ ಹಾಲು ಬಿಟ್ಟ ಕೂಸುಗಳಿಗೋ, ಎಳೆಯ ಮಕ್ಕಳಿಗೋ?
10 किनकि यो आज्ञामाथि आज्ञा, आज्ञामाथि आज्ञा, नियममाथि नियम, नियममाथि नियम, अलिकति यहाँ, अलिकति त्यहाँ ।
ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ.
11 साच्‍चै, यी मानिहरूसँग उहाँले गिल्‍ला गर्ने ओठहरू र विदेशी भाषामा बोल्‍नुहुनेछ ।
ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಆತನು ಈ ಜನರೊಡನೆ ಮಾತನಾಡುತ್ತಾನೆ.
12 विगतमा उहाँले तिनीहरूलाई भन्‍नुभयो, “यो विश्राम हो, जो थकित हुन्‍छ त्यसलाई विश्राम गर्न देओ । अनि यो ताजा हुने कुरा हो,” तर तिनीहरू सुन्‍दैनन् ।
ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ. ನಿಮಗೆ ಅನುಕೂಲವಾದ ಉಪಶಮನ ಇದೇ,” ಎಂದು ಹೇಳಿದಾಗಲೂ ಅವರು ಕೇಳಲಿಲ್ಲ.
13 त्यसैले तिनीहरूको निम्ति परमप्रभुको वचन आज्ञामाथि आज्ञा, आज्ञामाथि आज्ञा, नियममाथि नियम, नियममाथि नियम, अलिकति यहाँ, अलिकति त्यहाँ हुनेछ । ताकि तिनीहरू जान र पछि हट्न र तोडिन र समातिन सक्छन् ।
ಆಗ ಯೆಹೋವ ದೇವರು ಅವರಿಗೆ ಹೀಗೆ ಹೇಳಿದರು: ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಇದರಿಂದ ಅವರು ಎಡವಿಬಿದ್ದು ಗಾಯಗೊಳ್ಳಬಹುದು. ಮತ್ತು ಬಲೆಯಲ್ಲಿ ಸಿಕ್ಕಿ ಬೀಳುವರು.
14 त्यसैले ए गिल्ला गर्नेहरू हो, तिमीहरू जसले यरूशलेममा भएका यी मानिसहरूमाथि राज्‍य गर्छौ, तिमीहरूले परमप्रभुको वचन सुन ।
ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನರನ್ನು ಆಳುವ ಹಾಸ್ಯದ ಜನರಾದ ನೀವು ಯೆಹೋವ ದೇವರ ಮಾತನ್ನು ಕೇಳಿರಿ.
15 तिमीहरूले यसो भनेका हुनाले यस्‍तो हुनेछ, “हामीले मृत्युसित करार बाँधेका छौं र चिहनसँग हामी समहती गरेका छौं । त्यसैले डरलाग्‍दो कोर्राले हामीलाई भेट्टाउँदा, त्‍यो हामीकहाँ पुग्‍नेछैन । किनकि हामीले झुठलाई हाम्रो शरणस्थान बनाएका छौं र असत्‍यमा वास बसेका छौं।” (Sheol h7585)
“ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ. ವಿಪರೀತವಾದ ಶಿಕ್ಷೆಯು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು; ನಮ್ಮ ಅಸತ್ಯವನ್ನು ಆಶ್ರಯವಾಗಿ ಮಾಡಿಕೊಂಡು, ಮೋಸದಲ್ಲಿ ಅಡಗಿಕೊಂಡಿದ್ದೇವೆ,” ಎನ್ನುತ್ತೀರಲ್ಲಾ? (Sheol h7585)
16 यसकारण परमप्रभु परमेश्‍वर भन्‍नहुन्छ, “हेर्, म सियोनमा एउटा जगको ढुङ्गा, जाँचिएको ढुङ्गा, बहुमूल्‍य कुनेढुङ्गा, एउटा बलयो जग राख्‍नेछु । जसले विश्‍वास गर्छ ऊ लाजमा पर्नेछैन ।
ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.
17 न्यायलाई म नाप्‍ने लट्ठी र धर्मिकतालाई साहुल बनाउनेछु । असिनाले झुटको शरणस्थानलाई बढार्नेछ र बाढीले लुक्‍ने ठाउँलाई डुबाउनेछ ।
ನಾನು ನ್ಯಾಯವನ್ನು ಅಳತೆಗೋಲನ್ನಾಗಿಯೂ ಮತ್ತು ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು. ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು. ಅಡಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿ ಬಿಡುವುದು.
18 मृत्युसँग गरेको तिमीहरूको करार खारेज हुनेछ र चिहानसँगको तिमीहरूको सहमति रहनेछैन । जब उर्लंदो बाढी आउँछ, त्‍यसले तिमीहरूलाई डुबाउनेछ । (Sheol h7585)
ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವುದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವುದಿಲ್ಲ. ವಿಪರೀತ ಬಾಧೆಯು ಹಾದುಹೋಗುವಾಗ ನಿಮ್ಮನ್ನು ತುಳಿದುಹಾಕುವುದು. (Sheol h7585)
19 जब त्‍यो आउँछ त्‍यसले तिमीहरूलाई डुबाउनेछ, त्‍यो हरेक बिहान आउनेछ र त्‍यो दिन र रात आउनेछ । जब सन्देश बुझिन्छ, त्‍यसले त्रास पैदा गर्नेछ ।
ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು. ಏಕೆಂದರೆ ಅದು ಹೊತ್ತಾರೆಯಿಂದ ಹೊತ್ತಾರೆಗೆ, ಹಗಲು ರಾತ್ರಿಯೂ ಹಾದುಹೋಗುವುದು.” ಆಗ ದೇವರ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.
20 किनकि तन्केर सुत्‍नलाई ओछ्यान छोटो छ र आफूलाई ढाक्‍न कम्बल सानो छ ।”
ಮೈ ಚಾಚುವುದಕ್ಕೆ ಹಾಸಿಗೆ ಚಿಕ್ಕದಾಗಿರುವುದು. ಮುದುರಿಕೊಂಡು ಮಲಗುವುದಕ್ಕೆ, ಹೊದಿಕೆಯ ಅಗಲ ಸಾಲದು.
21 पराजीम पर्वतझैं परमप्रभु उठ्नुहुनेछ । गिबोनको बेंसीमा झैं आफ्‍नो काम, आफ्‍नो अनौठो काम र उहाँको अद्‍भुत काम गर्न उहाँ उठ्नुहुनेछ ।
ಯೆಹೋವ ದೇವರು ಪೆರಾಚೀಮ್ ಪರ್ವತದಲ್ಲಿ ಎದ್ದಂತೆ ಏಳುವರು. ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ, ಅಪರೂಪವಾದ ತಮ್ಮ ಕೆಲಸವನ್ನು ನಡಿಸಿ, ಅಪೂರ್ವವಾದ ತಮ್ಮ ಕಾರ್ಯವನ್ನು ನೆರವೇರಿಸುವನು.
22 यसकारण, अब गिल्ला नगर, नत्र तिमीहरूको बन्धन झन् कसिलो पारिनेछ । मैले सर्वशक्तिमान् परमप्रभु परमेश्‍वरबाट पृथ्वीको विनाशको उर्दी सुनेको छु ।
ಹೀಗಿರುವುದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗಬೇಡಿರಿ. ಸರ್ವಶಕ್ತ ಆಗಿರುವ ಕರ್ತ ಯೆಹೋವ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರ ತರಲು ನಿರ್ಣಯಿಸಿದೆ, ಎಂಬ ತೀರ್ಪನ್ನು ನಾನು ಕೇಳಿದ್ದೇನೆ.
23 ध्यान देओ र मेरो आवाज सुन । ध्यान मग्‍न होओ र मेरा वचनहरू सुन ।
ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.
24 छर्नलाई दिनभरि जोत्‍ने किसानले के जमिन जोत्‍ने काम मात्र गर्छ र? के उसले बाँजो फुटाउने र डल्लो फुटाउँछ मात्र गर्छ र?
ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣುಹೆಂಟೆಯನ್ನು ತೆಗೆದು, ದಿನವೆಲ್ಲಾ ಹೊಡೆಯುವನೋ?
25 जब त्यसले जमिन तयार पार्छ, के त्यसले सूँप छर्ने र जीराको बीउ फैलाउने, गहुँलाई ड्‍याङमा रोप्‍ने र जौलाई ठिक ठाउँमा र कठियालाई यसको छेउहरूमा रोप्दैन?
ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ, ಜೀರಿಗೆಯನ್ನು ಚದರಿಸಿ ಮತ್ತು ಗೋಧಿಯನ್ನು ಸಾಲುಸಾಲಾಗಿಯೂ, ಜವೆಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ.
26 त्यसको परमेश्‍वरले त्यसलाई सिकाउनुहुन्छ । उहाँले त्यसलाई बुद्धिमनीसाथ सिकाउनुहुन्छ ।
ಏಕೆಂದರೆ ಅವನ ದೇವರು ಅವನಿಗೆ ಸೂಚಿಸುತ್ತಾರೆ. ಮತ್ತು ಸರಿಯಾದ ಮಾರ್ಗವನ್ನು ಕಲಿಸುತ್ತಾರೆ.
27 अनि सूँपलाई हथौडाले झारिंदैन, न जीरालाई झार्न गाडा नै गुडाइन्छ । तर सूँपलाई लट्ठीले कुटिन्छ र जीरालाई लुहुरोले कुटिन्छ ।
ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವುದಿಲ್ಲ. ಜೀರಿಗೆಯನ್ನು ಒಕ್ಕುವುದು ಬಂಡಿಯ ಚಕ್ರ ತಿರುಗಿಸುವುದರಿಂದ ಅಲ್ಲ. ಅಗಸೆಯು ಕೋಲಿನಿಂದಲೂ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದ ಆಗಿರುತ್ತದೆ.
28 रोटी बनाउन अन्‍नलाई पिसिन्छ, तर अति मिहिन पारिंदैन, र त्‍यसको गाडाका पाङ्ग्राहरू र त्यसका घोडाहरूले यसलाई छरे तापनि त्यसका घोडाहरूले यसलाई चूरचूर पार्दैनन् ।
ರೊಟ್ಟಿಗಾಗಿ ಗೋಧಿಯ ಕಾಳನ್ನು ಪುಡಿಮಾಡಬೇಕು; ಯಾವಾಗಲೂ ಅದನ್ನು ಒಕ್ಕುತ್ತಿರುವುದಿಲ್ಲ. ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವುದಿಲ್ಲ ಅವನ ಕುದುರೆ ಸವಾರದಿಂದ ಒಕ್ಕುತ್ತಿರುವುದಿಲ್ಲ.
29 यो पनि सर्वशक्तिमान् परमप्रभुबाट नै आउँछ, जो शिक्षा दिनमा अति हसल र बुद्धिमा उत्कृष्‍ट हुनुहुन्छ । ‍
ಈ ವಿವೇಕವು ಸಹ ಅತಿಶಯ ಆಲೋಚನಾಪರರೂ, ಕಾರ್ಯಸಾಧಕ ಜ್ಞಾನ ಶ್ರೇಷ್ಠರೂ ಆಗಿರುವ ಸೇನಾಧೀಶ್ವರ ಯೆಹೋವ ದೇವರಿಂದಲೇ ಹೊರಡುತ್ತದೆ.

< यशैया 28 >