< यशैया 32 >

1 हेर, एक जना राजाले धर्मिकतामा राज्‍य गर्नेछन् र शासकहरूले न्यायमा राज्‍य गर्नेछन् ।
ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.
2 प्रत्‍येक व्‍यक्‍ति हावाबाट बच्‍ने ठाउँजस्तै, र आँधीबाट शरण लिने ठाउँजस्तै, सुख्‍खा ठाउँको पानीको धारहरूजस्तै, थकानको देशमा भएको ठुलो चट्टानको छायाजस्तै हुनेछ ।
ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ, ಬಿರುಗಾಳಿಗೋಸ್ಕರ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿಯ ನೀರಿನ ಕಾಲುವೆಗಳ ಹಾಗೂ, ಬಾಯಾರಿದ ನಾಡಿಗೆ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
3 तब हेर्नेहरूका आँखा धमिलो हुनेछैनन् र सुन्‍नेहरूका कानले ध्यानपुर्वक सुन्‍नेछन् ।
ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.
4 हडबडेले समझदार भएर होसियारसाथ विचार गर्नेछ, अनि भकभकेले प्रष्‍टसँग र सजिलोसँग बोल्‍नेछ ।
ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆ ಸ್ವಚ್ಛವಾಗಿ ಮಾತನಾಡುವುದಕ್ಕೆ ಸಿದ್ಧವಾಗಿರುವುದು.
5 मूर्खलाई कदापि आदरणीय भनिनेछैन न छलीलाई चरित्रवान भनिनेछ ।
ಇನ್ನು ಮೇಲೆ ಮೂರ್ಖನು ಘನವಂತನೆನಿಸಿಕೊಳ್ಳನು. ಮೋಸಗಾರನು ಮಹನೀಯನೆನಿಸಿಕೊಳ್ಳನು.
6 किनकि मूर्खले मूर्खताको कुरा गर्छ, उसको मनले दुष्‍ट र अधर्मी कामहरूका योजना बनाउछ र उसले परमप्रभुको विरुद्धमा गलत किसिमले बोल्छ । उसले भोकाएकोलाई रित्तो बनाउँछ र तिर्खाएकोलाई पानीको कमी तुल्याउँछ ।
ಏಕೆಂದರೆ ಮೂರ್ಖನು ಮೂರ್ಖವಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾಸಿಸುವಂತೆಯೂ, ಯೆಹೋವ ದೇವರಿಗೆ ವಿರೋಧವಾಗಿ ಸಂಪೂರ್ಣವಾಗಿ ತಪ್ಪಿ ಹೋಗುವವರಂತೆಯೂ, ಹಸಿವೆಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
7 छलीका विधिहरू खराब हुन्‍छन् । गरीबले ठिक कुरा भने पनि उसले गरीबलाई विनाश पार्ने दुष्‍ट योजनाहरू बनाउँछ ।
ಮೋಸಗಾರನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವನು ಬಡವರನ್ನು ಸುಳ್ಳು ಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.
8 तर आदरणीय मानिसले आदरणीय योजना बनाउँछ । अनि उसको आदरणीय कामहरूको कारणले नै ऊ खडा रहन्‍छ ।
ಘನವಂತನಾದರೋ, ಘನಕಾರ್ಯಗಳನ್ನು ಕಲ್ಪಿಸುವನು. ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
9 ए चैनमा बसेका स्‍त्रीहरू, खडा होओ र मेरो सोरलाई सुन । ए चिन्‍ता नभएका छोरीहरू, मेरो कुरा सुन ।
ನಿಶ್ಚಿಂತೆಯರಾದ ಮಹಿಳೆಯರೇ, ಏಳಿರಿ. ನನ್ನ ಸ್ವರವನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.
10 किनकि ए चिन्‍ता नभएका स्‍त्रीहरू, एक वर्षभन्दा केही बढी समयमा तिमीहरूको दृढतालाई तोडिनेछ, किनकि दाखको कटनी बितेर जानेछ, फसल जम्‍मा गर्ने समय आउनेछैन ।
ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷಿ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.
11 ए चैनमा बस्‍ने स्‍त्रीहरू, थरथर होओ । ए निर्धक्‍क हुनेहरू, घबराओ । आफ्ना राम्रा पोशाकहरू फुकाल र आफैलाई नाङ्गो पार । आफ्‍ना कम्मरको वरिपरि भाङ्ग्रा लगाओ ।
ನಿಶ್ಚಿಂತೆಯುಳ್ಳ ಸ್ತ್ರೀಯರೇ, ನೀವು ನಡುಗಿರಿ. ನಿರ್ಭೀತ ಪುತ್ರಿಯರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ, ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.
12 राम्रा खेतहरूका निम्ति र फलदायी दाखहरूका निम्ति तिमीहरूले विलाप गर्नेछौ ।
ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಳ ನಿಮಿತ್ತವೂ ನಿಮ್ಮ ಎದೆ ಬಡಿದುಕೊಳ್ಳಿರಿ.
13 मेरा मानिसहरूका जमिनमा, कुनै बेलाका आनन्‍द गर्ने सहरका घरहरूमा समेत काँढाहरू र सिउँडीहरू उम्रिनेछन् ।
ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉಲ್ಲಾಸದಿಂದ ಕೂಡಿದ್ದ ಮನೆಗಳೂ ಲವಲವಿಕೆಯಿಂದ ತುಂಬಿದ್ದ ನಗರಗಳೂ ಶೂನ್ಯವಾಗಿವೆ.
14 किनकि दरबारहरू त्यागिनेछन्, भीडको सहरलाई उजाड बनाइनेछ । पहाड र धरहरा सदाको निम्ति गुफाहरू, वन-गधाहरूका खुसी, गाइवस्तुका चरन हुनेछ ।
ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.
15 माथिबाट हामीमा आत्मा नखन्यासम्म र उजाड-स्‍थान एउटा फलदायी खेत नभएसम्म र फलदायी खेतलाई एउटा जङ्गझैं नसोचेसम्‍म ।
ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು.
16 तब न्यान उजाड-स्‍थान बास गर्नेछ । अनि धार्मिकताचाहिं फलदायी खेतमा बास गर्नेछ ।
ನ್ಯಾಯವು ಮರುಭೂಮಿಯಲ್ಲಿ ನೆಲೆಗೊಳ್ಳುವುದು, ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವುದು.
17 धार्मिकताको कामचाहिं शान्ति हुनेछ । अनि धार्मिकताको परिणामचाहिं सदासर्वदा शान्ति र दृढता हुनेछ ।
ನೀತಿಯ ಕೆಲಸವು ಸಮಾಧಾನವೂ, ನೀತಿಯ ಫಲವು ನಿತ್ಯವಾದ ಶಾಂತಿಯೂ, ಭರವಸೆಯೂ ಆಗಿರುವುದು.
18 मेरा मानिसहरू शान्तिपुर्ण बासस्थानमा, सुरक्षित घरहरूमा र शान्तसित विश्राम गर्ने ठाउँहरूमा बास गर्नेछन् ।
ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ, ಭದ್ರವಾದ ಸ್ಥಳಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
19 तर असिना परे पनि र जङ्गल नाश भए पनि र सहरलाई पुर्ण रूपमा निर्मूल पारिए पनि,
ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗುವುದು. ಪಟ್ಟಣವು ಸಂಪೂರ್ಣವಾಗಿ ನೆಲಸಮವಾಗುವುದು.
20 तिमीहरू जसले नदीहरूका किनारहरूमा बीउ छरेका छौ, तिमीहरूका जसले आफ्‍ना गोरु र गधालाई चर्न पठाएका छौ, आशिषित्‌ हुनेछौ ।
ನೀರಿರುವ ಎಲ್ಲಾ ಕಡೆಗಳಲ್ಲಿ ಬಿತ್ತನೆ ಮಾಡಿ, ದನಕತ್ತೆಗಳನ್ನು ಮೇಯಲು ಬಿಡುವ ನೀವು ಧನ್ಯರೇ ಸರಿ.

< यशैया 32 >