< यशैया 44 >
1 ए मेरो सेवक, याकूब, ए इस्राएल जसलाई मैले चुनेको छु, अब सुन्:
೧ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಇಸ್ರಾಯೇಲೇ, ಈಗ ಕೇಳು:
2 परमप्रभु जसले तँलाई गर्भमा बनाउनुभयो र आकार दिनुभयो, अनि जसले तँलाई सहायता गर्नुहुनेछः उहाँले यसको भन्नुहुन्छ, “ए याकूब, मेरो सेवक, नडरा । अनि ए यशूरून, जसलाई मैले चुनेको छु ।
೨ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!
3 किन सुकेको जमिनमाथि म पानी खन्याउनेछु र सुख्खा जमिनमाथि खोलाहरू बगाउनेछु । तेरो सन्तानमाथि मेरो आत्मा र तेरा छोराछोरीमाथि मेरो आशिष् म खन्याउनेछु ।
೩ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.
4 तिनीहरू घाँसहरू माझमा पानीको नदीको किनारको लहरे-पिपलहरू झैं उम्रनेछन् ।
೪ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು.
5 कसैले भन्नेछ, “म परमप्रभुको हुँ,' अनि अर्कोले याकूबको नाउँ लिनेछ, र अर्कोले आफ्नो हातमा 'म परमप्रभुको हुँ,' भनी लेख्नेछ र आफैलाई इस्राएलको नाउँ दिनेछ ।”
೫(ಅನ್ಯಜನರಲ್ಲಿ) ಒಬ್ಬನು, ‘ನಾನು ಯೆಹೋವನ ಭಕ್ತನು’ ಎಂದು ಹೇಳಿಕೊಳ್ಳುವನು. ಇನ್ನೊಬ್ಬನು, ‘ನಾನು ಯಾಕೋಬ್ಯನ ಹೆಸರಿನವನು’ ಮತ್ತೊಬ್ಬನು ತನ್ನ ಕೈಯ ಮೇಲೆ, ‘ದಾಸನು’ ಎಂದು ಬರೆದುಕೊಂಡು ಇಸ್ರಾಯೇಲ್ ಎಂಬ ಬಿರುದನ್ನು ಧರಿಸಿಕೊಳ್ಳುವನು.”
6 इस्राएलका राजा, त्यसको उद्धारक, सर्वशक्तिमान् परमप्रभु यसो भन्नुहुन्छ, “म नै पहिलो हुँ र म नै अन्तिम हुँ । र मबाहेक अरू कुनै परमेश्वर छैन ।
೬ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
7 मजस्तो को छ? आफ्ना प्राचीन मानिसहरूलाई मैले स्थापित गरेदेखि भएका घटनाहरू त्यसले मलाई घोषणा गरोस् र त्यो वर्णन गरोस्, अनि तिनीहरूले हुन आउने घटनाहरूका बारेमा घोषणा गरून् ।
೭ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ? ಅಂಥವರಿದ್ದರೆ ನನ್ನೆದುರಿಗೆ ಹೇಳಿ ಸ್ಥಾಪಿಸಲಿ. ಇಲ್ಲವೆ ಮುಂದಿನವುಗಳನ್ನು ಈಗ ತಿಳಿಸಲಿ, ಭವಿಷ್ಯತ್ತುಗಳನ್ನು ಹೇಳಲಿ.
8 नडरा अर्थात् भयभित हो । के मैले धेरै पहिले नै यो तँलाई घोषणा गरेको र सुचना दिएको होइन र? तिमीहरू मेरा गवाहीहरू हौः “के मबाहेक अरू कुनै परमेश्वर छ र? त्यहाँ अरू कुनै चट्टान छैन । म यस्ता कुनैलाई चिन्दिनँ ।”
೮ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”
9 मूर्तीहरू बनाउने सबै जना केही पनि होइनन् । तिनीहरू प्रशन्न हुने थोकहरू व्यर्थ हुन् । तिनीहरूका गवाहीहरूले कुनै कुरा पनि देख्न वा जान्न सक्दैनन् र तिनीहरू लजमा पारिनेछन् ।
೯ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.
10 कसले देवतालाई आकार दिन्छ वा व्यार्थको मूर्ती खोप्छ?
೧೦ದೇವತೆಯನ್ನು ರೂಪಿಸುವವರೂ, ವ್ಯರ್ಥವಿಗ್ರಹವನ್ನು ಎರಕ ಹೊಯ್ಯುವವರೂ ಎಂಥವರು?
11 हेर, त्यसका सबै सहकर्मी लाजमा पारिनेछन् । कारीगरहरू मानिसहरू मात्र हुन् । तिनीहरूले एकसाथ आफ्ना अडान लेऊन् । तिनीहरू तर्सिनेछन् र लजज्जित हुनेछन् ।
೧೧ವಿಗ್ರಹ ಶರಣರೆಲ್ಲಾ ಆಶಾಭಂಗಪಡುವರು, ಅದನ್ನು ಕೆತ್ತಿದವರು ಮನುಷ್ಯಮಾತ್ರದವರೇ. ಅವರೆಲ್ಲರು ಒಟ್ಟುಗೂಡಿಕೊಂಡು ನಿಲ್ಲಲಿ. ಅವರು ಒಟ್ಟಿಗೆ ಹೆದರಿಕೊಂಡು ಲಜ್ಜೆಪಡುವರು.
12 सुनारले आफ्ना औजारहरूले भुङ्ग्रोमा काम गरेर त्यो बनाउँछ । उसले त्यसलाई घनले आकार दिन्छ र आफ्नो बलियो पाखुराले त्यसको काम गर्छ । ऊ भोकाउँछ र उसको बल घट्छ । उसले पानी पिउँदैन र मुर्छा पर्छ ।
೧೨ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ, ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು. ಅವನು ಹಸಿದು ಬಳಲುವನು, ನೀರಿಲ್ಲದೆ ದಣಿಯುವನು.
13 सिकर्मीले काठलाई धागोले नाप्छ र कलमले त्यसमा चिन्ह लगाउँछ । उसले आफ्ना औजारहरूले त्यसलाई आकार दिन्छ र कम्पासले त्यसमा चिनो लगाउँछ । उसले त्यसलाई आकर्षक मानिसजस्तै मानिसको आकारमा बनाउँछ, ताकि त्यो घरमा नै रहोस् ।
೧೩ಬಡಗಿಯು ಮರಕ್ಕೆ ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು ಬಾಚಿಗಳಿಂದ ಕೆತ್ತಿ, ಕೈವಾರದಿಂದ ಗುರುತಿಸಿ, ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ಮನುಷ್ಯನ ಅಂದದಂತೆ ರೂಪಿಸುವನು.
14 उसले देवदारु काट्छ, वा सल्लाको रूख वा फलाँटको रूख छान्छ । उसले आफ्नो निम्ति वनका रूखहरू छान्छ । उसले सल्लाको रूख लगाउँछ र पानीले त्यसलाई बढाउँछ ।
೧೪ಅವನು ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುವನು, ತುರಾಯಿ, ಅಲ್ಲೋನ್ ಮರಗಳನ್ನು ತೆಗೆದುಕೊಳ್ಳುವನು. ವನವೃಕ್ಷಗಳನ್ನು ತನಗೋಸ್ಕರ ಬೆಳೆಯುವನು. ಅವನು ಪೀತದಾರವನ್ನು ನೆಡಲು, ಮಳೆಯು ಅದನ್ನು ಬೆಳೆಸುವುದು.
15 अनि मानिसले त्यसलाई दाउरा बाल्न र आफूलाई न्यानो पार्न प्रयोग गर्छ । हो, उसले आगो बाल्छ र रोटी पकाउँछ । त्यसपछि उसले त्यसबाट एउटा देउता बनाउँछ र त्यसमा घोप्टो पर्छ । उसले एउटा मूर्ती बनाउँछ र त्यसमा घोप्टो पर्छ ।
೧೫ಅದು ಸೌದೆಗಾಗುವುದು. ಅದರಿಂದ ಬೆಂಕಿಯನ್ನು ಉರಿಸಿ ಚಳಿಕಾಯಿಸಿಕೊಳ್ಳುವನು. ಅವನು ಬೆಂಕಿಯನ್ನು ಹಚ್ಚಿ ರೊಟ್ಟಿಯನ್ನು ಸುಡುವನು. ಅದರಲ್ಲೇ ಒಂದು ದೇವರನ್ನು ಮಾಡಿಕೊಂಡು ಪೂಜಿಸುವನು, ವಿಗ್ರಹವನ್ನು ಮಾಡಿ ಅದಕ್ಕೆ ಅಡ್ಡಬೀಳುವನು.
16 आफूले खाने मासु पकाउँछ त्यो रूखका केही भागलाई उसले दाउरा बाल्छ । उसले खान्छ र तृप्त हुन्छ । उसले आफैलाई न्यानो बनाउँछ र भन्छ, “ओहो, म तातो भएको छु, मैले आगो देखेको छु ।”
೧೬ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು, ಅದರ ಮೇಲೆ ಮಾಂಸವನ್ನು ಸುಡುವನು. ಅದನ್ನು ತಿಂದು ತೃಪ್ತನಾಗುವನು. ತನ್ನನ್ನು ಕಾಯಿಸಿಕೊಳ್ಳುತ್ತಾ, “ಆಹಾ, ಬೆಂಕಿಯನ್ನು ಕಂಡೆ, ಬೆಚ್ಚಗಾಯಿತು” ಎಂದುಕೊಳ್ಳುವನು.
17 बाँकी रहेको काठले उसले एउटा देउता अर्थात् आफ्नो खोपेको मूर्ती बनाउँछ । त्यसमा ऊ घोप्टो पर्छ र त्यसको आदर गर्छ, र यसो भन्दै त्यसमा प्रार्थना चढाउँछ, “मलाई बचाउनुहोस्, किनकि तपाईं मेरो ईश्वर हुनुहुन्छ ।”
೧೭ಅದರಲ್ಲಿ ಉಳಿದ ಭಾಗವನ್ನು ತನ್ನ ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಪ್ರಾರ್ಥಿಸುವನು.
18 तिनीहरूले जान्दैनन्, न तिनीहरूले बुझ्छन्, किनकि तिनीहरूका आँखा अन्धा छन् र देख्न सक्दैनन्, अनि तिनीहरूका हृदयहरूले बुझ्न नै सक्दैनन् ।
೧೮ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.
19 कसैले विचार गर्दैन, न तिनीहरूले बुझ्छन् र भन्छन्, “मैले रूखका केही भाग दाउरा बालें । हो, त्यसको भुङ्ग्रोमा मैले रोटी पनि पकाएको छु । त्यसको भुङ्ग्रोमा मैले मासुको सुकुटी पनि बनाएको र खाएको छु । अब के मैले त्यो रूखबाट बचेको अरू भागबाट पुजा गर्न घिन लाग्ने कुरा बनाउनू र? के म काठको टुक्रामा घोप्टो पर्नू र?”
೧೯“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ, ಉಳಿದ ಭಾಗದಿಂದ ಅಸಹ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.
20 यो त उसले खरानी खाएको जस्तो भयो । उसको छलमा परेको हृदयले उसलाई बहकाउँछ । उसले आफैलाई बचाउन सक्दैन, न उसले यसो भन्छ, “मेरो दाहिने हातमा भएको यो कुरा झुटो देवता हो ।”
೨೦ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.
21 ए याकूब र इस्राएल, यी कुराहरूका बारेमा विचार गर्, किनकि तँ मेरो सेवक होस्: “मैले तँलाई आकार दिएको हुँ । तँ मेरो सेवक होस्: ए इस्राएल, तँलाई बिर्सिइने छैन ।
೨೧ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ. ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು.
22 तेरा विद्रोहका कामहरूलाई एउटा बाक्लो बादललाई झैं र तेरा पापहरूलाई एउटा बादललाई झैं मैले हटाएको छु । मकहाँ फर्की, किनकि मैले तँलाई उद्धार गरेको छु ।
೨೨ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.
23 ए आकाश गाओ, किनकि परमप्रभुले नै यसो गर्नुभएको हो । ए पृथ्वीका गहिराइ हो कराओ । ए पर्वतहरू, वनका सबै रूख हो, गीत गाओ । किनकि परमप्रभुले याकूबलाई उद्धार गर्नुभएको छ र इस्राएलमा आफ्नो महिमा प्रकट गर्नुहुनेछ ।
೨೩ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.
24 तँलाई गर्भमा आकार दिनुहुने परमप्रभु तेरा उद्धारक यसो भन्नुहुन्छः “म परमप्रभु हुँ, जसले हरेक कुरा बनाएँ, जसले आकाशलाई एक्लै फैलाएँ, जसले पृथ्वीलाई एक्लै बनाएँ ।
೨೪ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.
25 हात हेरेर फतफताउनेका खोक्रा कुरालाई व्यार्थ तुल्याउने म नै हुँ र हात हेर्ने कुरा पढ्नेलाई घृणा गर्ने म नै हुँ । यस्ता बुद्धिमान्हरूका बुद्धिलाई उल्टाउने र तिनीहरूका सल्लाहलाई मूर्ख बनाउने म नै हुँ ।
೨೫ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.
26 आफ्ना सेवकका वचनहरू पुरा गर्ने र आफ्ना दूतहरूका भविष्यवाणी पुरा गर्ने परमप्रभु म नै हुँ, जसले यरूशलेमलाई भन्छ, 'त्यसमा बसोवास गरिनेछ,' र यहूदाका नगरहरूका बारेमा भन्छ, 'तिनीहरूलाई फेरि निर्माण गरिनेछ र म तिनका भग्नावशेषहरूलाई खडा गर्नेछु ।'
೨೬ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ
27 जसले गहिरो समुद्रलाई भन्छ, 'सुक् र तेरा धारहरूलाई म सुकाउनेछु ।'
೨೭ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ.
28 कोरेसलाई यसो भन्नुहुने परमप्रभु नै हुनुहुन्छ, 'त्यो मेरो गोठालो हो, त्यसले मेरा हेरक इच्छा पुरा गर्नेछ । त्यसले यरूशलेमको बारेमा, 'त्यसलाई पुननिर्माण गरिनेछ,' र मन्दिरको बारेमा, 'यसको जग बसालियोस्' भनेर आदेश दिनेछ ।”
೨೮ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’” ಎಂಬುದಾಗಿ ಮಾತನಾಡುವವನು ನಾನೇ.