< यशैया 53 >

1 हामीबाट तिनीहरूले सुनेका कुरा कसले विश्‍वास गरेको छ, र कसलाई परमप्रभुको बाहुली प्रकट गरिएको छ?
ನಮ್ಮ ಸುದ್ದಿಯನ್ನು ಯಾರು ನಂಬಿದ್ದಾರೆ? ಯೆಹೋವ ದೇವರ ಬಾಹುವು ಯಾರಿಗೆ ಪ್ರಕಟವಾಯಿತು?
2 किनकि कलिलो बिरूवाजस्तै र सुख्‍खा जमिनबाट उम्रेको टुसाजस्तै ऊ परमप्रभुको सामु बढ्यो । उसमा हेर्नलायक आकर्षण वा ऐश्‍वर्य थिएन । हामीले उसलाई हेर्दा, हामीलाई आकर्षण गर्ने कुनै सुन्दरता थिएन ।
ಅವನು ಚಿಗುರಿನಂತೆಯೂ, ಒಣ ನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಯೆಹೋವ ದೇವರ ಮುಂದೆ ಬೆಳೆಯುವನು. ಅವನಿಗೆ ಯಾವ ಸೌಂದರ್ಯವಾಗಲಿ ಇಲ್ಲವೆ ಘನತೆಯಾಗಲಿ ಇರಲಿಲ್ಲ. ನಾವು ಅವನನ್ನು ನೋಡಿದಾಗ, ಅವನಲ್ಲಿ ಆಕರ್ಷಿಸತಕ್ಕ ಯಾವ ಚಂದವು ಇರಲಿಲ್ಲ.
3 मानिसहरूद्वारा उसलाई घृणा र तिरस्‍कार गरियो । दुखको मानिस र कष्‍टसँग परिचित । त्‍यस्‍तो जसबाट मानिसहरूले आफ्‍ना अनुहार लुकाउँछन्, उसलाई घृणा गरियो । अनि हामीले उसलाई तुच्‍छ ठान्यौं ।
ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ, ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು. ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು. ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.
4 तर निश्‍चय नै उसले हाम्रा रोगहरू बोकेको र हाम्रा कष्‍टहरू उठाएको छ । तापनि हामीले उसलाई परमेश्‍वरद्वारा दण्ड दिइएको, परमेश्‍वरद्वारा हिर्काइएको र कष्‍टमा परेको ठान्यौं ।
ನಿಶ್ಚಯವಾಗಿಯೂ ಆತನು ನಮ್ಮ ನೋವನ್ನು ತೆಗೆದುಕೊಂಡನು; ಹೌದು, ನಮ್ಮ ದುಃಖಗಳನ್ನು ಸಹ ಹೊತ್ತುಕೊಂಡನು. ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಶಿಕ್ಷೆಹೊಂದಿದವನು, ಬಾಧೆಪಟ್ಟವನು ಎಂದು ಭಾವಿಸಿಕೊಂಡೆವು.
5 तर हाम्रा विद्रोहपूर्ण कामहरूका कारणले उसलाई घोचिएको थियो । हाम्रा पापहरूका कारणले उसलाई पेलिएको थियो । हाम्रो शान्तिको निम्ति उसमाथि दण्ड पर्‍यो र उसका घाउहरूले हामी निको भएका छौं ।
ನಮ್ಮ ಉಲ್ಲಂಘನೆಗಳಿಗಾಗಿ ಆತನು ತಿವಿತಕ್ಕೆ ಒಳಗಾದನು. ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಿಹೋದನು. ನಮಗೆ ಸಮಾಧಾನವನ್ನು ತಂದ ದಂಡನೆಯು ಆತನ ಮೇಲಿತ್ತು. ಆತನ ಗಾಯಗಳಿಂದ ನಮಗೆ ಗುಣವಾಯಿತು.
6 हामी सबै बह्रालिएका भेडाहरूजस्ता छौं । हामी प्रत्‍येक आ-आफ्नै मार्गतिर लागेका छौं र परमप्रभुले हामी सबैको अधर्म उसमाथि राख्‍नुभएको छ ।
ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು. ಯೆಹೋವ ದೇವರು ನಮ್ಮ ಎಲ್ಲಾ ದುಷ್ಕೃತ್ಯಗಳನ್ನು ಆತನ ಮೇಲೆ ಹಾಕಿದರು.
7 उसलाई अत्याचार गरियो । तापनि उसले आफूलाई होच्याउँदा, उसले आफ्नो मुख खोलेन । जसरी मार्नलाई लगिएको थुमा र ऊन कत्रनेहरूका सामु भेडा चुपचाप बस्‍छ, त्‍यसरी उसले आफ्नो मुख खोलेन ।
ಆತನು ದಬ್ಬಾಳಿಕೆಗೆ ಗುರಿಯಾಗಿ ಬಾಧೆಪಟ್ಟನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಬಲಿಗೆ ಎಳೆದುಕೊಂಡು ಹೋಗುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
8 जबर्जस्ती र इन्साफद्वारा उसलाई दोषी ठहर गरियो । त्यस पुस्ताबाट कसले उसको बारेमा विचार गर्‍यो र? तर उसलाई जीविहरूको देशबाट अलग गरियो । मेरा मानिसहरूले अपराधहरू गरेका कारणले उसलाई दण्‍ड दिइयो ।
ಆತನನ್ನು ದಬ್ಬಾಳಿಕೆಯಿಂದಲೂ, ನ್ಯಾಯತೀರ್ಪಿನಿಂದಲೂ ಎಳೆದುಕೊಂಡು ಹೋದರು. ಆತನ ಕಾಲದವರಲ್ಲಿ ಯಾರು ಮರುಗಿದರು? ಏಕೆಂದರೆ ಆತನನ್ನು ಜೀವಿತರ ಲೋಕದಿಂದ ತೆಗೆದುಹಾಕಿದರು. ನನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಶಿಕ್ಷೆಯನ್ನು ಹೊಂದಿದನು.
9 उसले कुनै हिंसा गरेका थिएन, न त उसको मुखमा कुनै छल नै थियो, तापनि अपराधीहरूसँगै तिनीहरूले उसको चिहान बनाए । उसको मृत्युमा एक जना धनी मानिस थियो ।
ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.
10 तापनि उसलाई धुलो पार्ने र उसलाई बिरामी पार्ने परमप्रभुकै इच्छा थियो । जब उसले आफ्नो जीवनलाई पापको निम्ति बलिदान बनाउँछन्, उसले आफ्ना सन्तानहरू देख्‍नेछ, उसले आफ्‍नो समय बढाउनेछ र उसैद्वारा परमप्रभुको उद्देश्य पुरा हुनेछ ।
ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.
11 उसको जीवनको कष्‍टपछि उसले ज्योति देख्‍नेछ र आफ्‍नो ज्ञानद्वारा सन्तुष्‍ट हुनेछ । मेरो धर्मिक सेवकले धेरै जनालाई निर्दोष ठहराउनेछ । उसले तिनीहरूको अधर्म बोक्‍नेछ ।
ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, ಜೀವದ ಬೆಳಕನ್ನು ಕಂಡು ತೃಪ್ತನಾಗುವನು. ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು.
12 यसकारण म भीडहरूका माझमा उसको भाग उसैलाई दिनेछु, उसले धेरै जनासित लूटको माल बाँड्नेछ, किनभने उसले आफूलाई मृत्युमा हाल्यो र अपराधीहरूसँगै गनियो । उसले धेरै जनाको पाप बोक्यो र अपराधीहरूका निम्ति मध्‍यस्‍थ-बिन्ती गर्‍यो ।
ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು ಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು. ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು. ಅನೇಕರ ಪಾಪವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು.

< यशैया 53 >