< यशैया 6 >

1 उज्‍जियाह राजाको मृत्यु भएको वर्षमा मैले परमप्रभुलाई सिंहासनमा विराजमान हुनुभएको देखें । उहाँ उच्‍च र उचालिएको हुनुहुन्थ्यो, अनि उहाँको पोशाकको छेउले मन्दिर नै ढाकेको थियो ।
ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಯೆಹೋವ ದೇವರು ಉನ್ನತೋನ್ನತವಾಗಿ ಸಿಂಹಾಸನದ ಮೇಲೆ ಕೂತಿರುವುದನ್ನು ಕಂಡೆನು. ಅವರ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.
2 उहाँ माथिल्तिर सराफहरू थिए । प्रत्‍येकका छ-छवटा पखेटाहरू थिए । दुई वटा पखेटाहरूले प्रत्‍येकले आफ्नो मुहार छोप्थे र दुई वटा पखेटाले तिनले आफ्‍ना खुट्टा छोप्थे र दुई वटाले ती उड्थे ।
ಅವರ ಮೇಲೆ ಸೆರಾಫಿಯರು ನಿಂತಿದ್ದರು. ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು. ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದರು.
3 प्रत्‍येकले अर्कोलाई बोलाउँथे र यसो भन्थे, “सर्वशक्तिमान् परमप्रभु पवित्र, पवित्र, पवित्र हुनुहुन्छ! सारा पृथ्वी उहाँको महिमाले भरिएको छ ।”
ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರ ಯೆಹೋವ ದೇವರು ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು. ಭೂಮಂಡಲವೆಲ್ಲಾ ಅವರ ಮಹಿಮೆಯಿಂದ ತುಂಬಿದೆ,” ಎಂದು ಕೂಗಿ ಹೇಳಿದನು.
4 ती कराइरहेकाहरूको आवाजले सँघारका जगहरू हल्लिए र मन्‍दिर धूँवाले भरिएको थियो ।
ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು; ಧೂಮವು ಆಲಯವನ್ನೆಲ್ಲ ತುಂಬಿತು.
5 तब मैले भने, “मलाई धिक्‍कार होस्! किनभने म सर्वनाश भएँ, म त अशुद्ध ओठ भएको मानिस हुँ, र अशुद्ध मानिसहरूको बिचमा म बस्छु, किनभने सर्वशक्तिमान् परमप्रभु महाराजा परमप्रभुलाई नै मेरा आँखाले देखेका छन्!”
ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.
6 तब सराफहरूमध्ये एउटा उडेर मकहाँ आए । उनको हातमा बलिरहेको भुङ्‍ग्रो थियो, जसलाई उनले वेदीबाट चिम्टाले निकालेका थिए ।
ಆಗ ಸೆರಾಫಿಯರಲ್ಲಿ ಒಬ್ಬನು ಬಲಿಪೀಠದಿಂದ ತಾನು ಉರಿಯುವ ಕೆಂಡವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಹಾರಿ ಬಂದು,
7 त्यसले उनले मेरो ओठ छोए र भने, “हेर, यसले तिम्रो ओठ छोएको छ । तिम्रा दोषहरू हटाइएका छन् र तिम्रा पापको प्रायश्‍चि गरिएको छ ।”
ಅದರಿಂದ ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳನ್ನು ತಗಲಿದೆ. ನಿನ್ನ ದೋಷವು ತೊಲಗಿದೆ, ನಿನ್ನ ಪಾಪಪರಿಹಾರ ಆಯಿತು,” ಎಂದು ಹೇಳಿದನು.
8 मैले परमप्रभुको यसो भन्‍ने आवाज सुनें, “म कसलाई पठाऊँ । हाम्रा निम्ति को जान्छ?” तब मैले भनें, “म यहाँ छु । मलाई पठाउनुहोस् ।”
ಆಗ, “ಯಾರನ್ನು ಕಳುಹಿಸಲಿ, ಯಾರು ನಮಗೋಸ್ಕರ ಹೋಗುವರು?” ಎಂಬ ಯೆಹೋವ ದೇವರ ನುಡಿಯನ್ನು ನಾನು ಕೇಳಿ, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿರಿ,” ಎಂದೆನು.
9 उहाँले भन्‍नुभयो, “जाऊ, यी मानिहरूलाई भन, 'सुन्‍छौ, तर बुझ्दैनौ । हेर्छौ, तर थाहा पाउँदैनौ ।'
ಅದಕ್ಕೆ ಅವರು, “ನೀನು ಈ ಜನರ ಬಳಿಗೆ ಹೋಗಿ: “‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ,’
10 यी मानिसहरूका हृदयलाई मुर्ख बनाऊ, र तिनीहरूका कानलाई बैरो बनाऊ र तिनीहरूका आँखालाई अन्‍धो बनाऊ । अन्‍यथा तिनीहरूका आफ्नो आँखाले देख्‍लान्, तिनीहरूका कानले सुन्‍लान् र तिनीहरूका हृदयले बुझ्‍लान् र तब फर्केर निको होलान् ।”
ತಮ್ಮ ಕಣ್ಣುಗಳಿಂದ ನೋಡದಂತೆಯೂ, ತಮ್ಮ ಕಿವಿಗಳಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗದಂತೆಯೂ ಈ ಜನರ ಹೃದಯವನ್ನು ಕಠಿಣಗೊಳಿಸಿ, ಅವರ ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣುಗಳನ್ನು ಮೊಬ್ಬಾಗಿಸು,” ಎಂದು ನನಗೆ ಹೇಳಿದರು.
11 तब मैले भने, “हे परमप्रभु, कहिलेसम्म?” उहाँले जवाफ दिनुभयो, “बासिन्दाविनाका भग्‍नावशेष सहरहरू ध्‍वस्‍त नहुन्‍जेल र मानिसविनाका घरहरू नहुन्‍जेल, र देश उजाड नहुन्‍जेल,
ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,
12 अनि परमप्रभुले मानिसहरूलाई टाढा नपठाउन्‍जेल र देश ठुलो निर्जन नहुन्‍जेलसम्‍म ।
ಯೆಹೋವ ದೇವರಾದ ನಾನು ಮನುಷ್ಯರನ್ನು ದೂರ ಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗಿರುವುದು.
13 यसमा मानिसहरूको दस भागमा एक भाग रहे तापनि, फेरि पनि त्‍यो नष्‍ट पारिनेछ । तारपीन र फँलाट काटिन्छ र त्‍यसको ठुटो बाँकी रहेझैं, त्‍यसको पवित्र बीउ त्‍यसको ठुटोमा हुन्छ ।”
ಆದರೆ ದೇಶದಲ್ಲಿ ಹತ್ತನೆಯ ಪಾಲು ಉಳಿದಿದ್ದರೂ, ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ. ಅದೇ ರೀತಿಯಾಗಿ ಪವಿತ್ರ ಜನರು ದೇಶದಲ್ಲಿ ಬುಡವಾಗಿ ಉಳಿದಿರುವರು.”

< यशैया 6 >