< यर्मिया 11 >
1 परमप्रभुबाट यर्मियाकहाँ यसो भनेर वचन आयो,
ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ,
2 “यस करारका वचनहरूलाई सुन्, अनि यहूदाका हरेक मानिस र यरूशलेमका बासिन्दाहरूलाई ती घोषणा गर् ।
“ಒಡಂಬಡಿಕೆಯ ಈ ವಚನಗಳನ್ನು ಕೇಳಿ, ಯೆಹೂದ್ಯರಿಗೂ ಯೆರೂಸಲೇಮಿನ ನಿವಾಸಿಗಳಿಗೂ ಸಾರು.
3 तिनीहरूलाई भन्, 'परमप्रभु इस्राएलका परमेश्वर यसो भन्नुहुन्छः यस करारका वचनहरू नसुन्ने जोसुकै श्रापित होस् ।
ನೀನು ಅವರಿಗೆ ಹೇಳಬೇಕಾದುದು: ಇಸ್ರಾಯೇಲ್ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.
4 मैले तिमीहरूका पुर्खाहरूलाई मिश्रदेश अर्थात् फलाम पगाल्ने भट्टीबाट ल्याएको दिनमा यो करारको पालन गर्न आज्ञा दिएको थिएँ । मैले भनें, 'मेरो आवाजलाई सुन र मैले तिमीहरूलाई आज्ञा गरेका यी सबै कुरा पालन गर, किनकि तिमीहरू मेरो जाति हुनेछौ, र म तिमीहरूका परमेश्वर हुनेछु ।'
ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಈಜಿಪ್ಟ್ ದೇಶದಿಂದ ನಿಮ್ಮ ಪೂರ್ವಜರನ್ನು ನಾನು ಬರಮಾಡಿದಾಗ, ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ವಿಧಿಗಳನ್ನೆಲ್ಲಾ ಕೈಗೊಂಡರೆ, ನನ್ನ ಪ್ರಜೆಯಾಗುವಿರಿ; ನಾನು ನಿಮ್ಮ ದೇವರಾಗಿರುವೆನು.
5 मेरो आज्ञा पालन गर ताकि दूध र मह बग्ने देश दिनेछु भनी मैले तिमीहरूका पुर्खाहरूसित खाएको शपथ म पुरा गर्न सक्छु ।' तब म यर्मियाले जवाफ दिएँ र भनें, 'हे, परमप्रभु हवस् ।'
ಹಾಲು ಜೇನು ಹರಿಯುವ ನಾಡನ್ನು, ಎಂದರೆ ಇಂದು ನೀವಿರುವ ನಾಡನ್ನು ಕೊಡುವುದಾಗಿ ನಿಮ್ಮ ಮೂಲ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವ ಮಾತು.” “ಓ ಯೆಹೋವ ದೇವರೇ, ಹಾಗೆಯೇ ಆಗಲಿ,” ಎಂದೆನು.
6 परमप्रभुले मलाई भन्नुभयो, “यहूदाका सहरहरू र यरूशलेमका सडकहरूका यी सबै कुराको घोषणा गर् । यसो भन्, 'यस करारका वचनहरूलाई सुन र तिनलाई कार्यावन्यन गर ।
ತರುವಾಯ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯ ಬೀದಿಗಳಲ್ಲಿಯೂ ಸಾರಿ ಹೇಳು. ‘ಹೇಗೆಂದರೆ, ಈ ಒಡಂಬಡಿಕೆಯ ಮಾತುಗಳನ್ನು ಕೇಳಿ, ಅವುಗಳನ್ನು ಮಾಡಿರಿ.
7 किनकि मैले तिमीहरूका पुर्खाहरूलाई मिश्रदेशबाट ल्याएको दिनदेखि वर्तमान समयसम्म निरन्तर रूपमा तिनीहरूलाई चेताउनी दिंदै र 'मेरो आवाज सुन,' भन्दै गम्भीर आज्ञाहरू दिंदै आएको छु ।
ಏಕೆಂದರೆ ನಾನು ನಿಮ್ಮ ತಂದೆಗಳಿಗೆ, “ನನ್ನ ಮಾತನ್ನು ಕೇಳಿ,” ಎಂದು ಖಂಡಿತವಾಗಿ ಹೇಳಿದೆನು. ಅವರನ್ನು ಈಜಿಪ್ಟ್ ದೇಶದೊಳಗಿಂದ ಮೇಲೆ ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಜ್ಞಾಪಿಸುತ್ತಾ ಬಂದಿದ್ದೇನೆ.
8 तर तिनीहरूले सुनेनन्, वा ध्यानै दिएनन् । हरेक व्यक्ति आफ्नै दुष्ट हृदयको कठोरतामा हिंडिरहेको छ । त्यसैले यस करारमा मैले तिनीहरूलाई आज्ञा गरेका सबै श्राप मैले तिनीहरूका विरुद्धमा ल्याएँ । तर मानिसहरूले अझै पनि आज्ञा मानेनन् ।”
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡೆದುಕೊಂಡರು. ಆದ್ದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.’”
9 त्यसपछि परमप्रभुले मलाई भन्नुभयो, “यहूदाका मानिसहरू र यरूशलेमका बासिन्दाहरूका बिचमा भएको एउटा षड्यन्त्र पत्ता लागेको छ ।
ತರುವಾಯ, ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ, “ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡುಬಂದಿದೆ.
10 तिनीहरू आफ्ना पहिलेका पुर्खाहरूका अधर्मतर्फ लागेका छन् जसले मेरो वचन सुन्न इन्कार गरी अरू देवताहरूको पुजा गर्न तिनीहरूको पछि लागे । इस्राएलको घराना र यहूदाको घरानाले मैले तिनीहरूका पुर्खाहरूसित स्थापित गरेको मेरो करार तोडे ।
ನನ್ನ ಮಾತುಗಳನ್ನು ಕೇಳಲೊಲ್ಲದ ತಮ್ಮ ಪಿತೃಗಳ ಅಕ್ರಮಗಳಿಗೆ ತಿರುಗಿಕೊಂಡಿದ್ದಾರೆ. ಬೇರೆ ದೇವರುಗಳನ್ನು ಸೇವಿಸುವುದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ. ಇಸ್ರಾಯೇಲಿನ ವಂಶದವರೂ ಯೆಹೂದದ ವಂಶದವರೂ ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಗಳನ್ನು ಮೀರಿದ್ದಾರೆ.
11 त्यसकारण परमप्रभु यसो भन्नुहुन्छ, 'हेर, मैले तिनीहरूमाथि यस्तो विपत्ति ल्याउनै लागेको छु, जुन विपत्तिबाट तिनीहरू भाग्न सक्ने छैनन् । तब तिनीहरूले मेरो पुकारा गर्नेछन्, तर म तिनीहरूको कुरा सुन्नेछैनँ ।
ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ಅವರು ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ತರುವೆನು. ಅವರು ನನಗೆ ಕೂಗಿದರೂ ನಾನು ಅವರನ್ನು ಕೇಳುವುದಿಲ್ಲ.
12 यहूदाका सहरहरू र यरूशलेमका बासिन्दाहरू जानेछन्, र तिनीहरूले भेटी चढाएका देवताहरूलाई पुकार्नेछन्, तर तिनीहरूको विपत्तिको समयमा निश्चय पनि तिनीहरू ती देवताहरूद्वारा बचाइनेछैनन् ।
ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು. ಆದರೆ ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವುದೇ ಇಲ್ಲ.
13 किनकि तँ यहूदाले तेरा देवताहरूको सङ्ख्या वृद्धि गरेर तेरा सहरहरूको सङ्ख्या बराबर तुल्याएको छस् । तैंले यरूशलेममा त्यसका सडकहरूको सङ्ख्या जत्तिकै धेरै लज्जास्पद वेदीहरू, बाल देवताको निम्ति धुप बाल्ने वेदीहरू बनाएको छस् ।
ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು. ಯೆರೂಸಲೇಮಿಗೆ ಎಷ್ಟು ಬೀದಿಗಳೋ, ಅಷ್ಟು ಬಲಿಪೀಠಗಳನ್ನು ನಾಚಿಗೆಗೆ ಎಂದರೆ, ಅಷ್ಟು ಬಲಿಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವುದಕ್ಕೆ ಇಟ್ಟಿದ್ದೀ.’
14 त्यसैले ए यर्मिया, तँ आफूले यी मानिसहरूको निम्ति प्रार्थना नचढा । तिनीहरूको पक्षमा तैंले विलाप वा बिन्ती गर्नहुँदैन । किनकि तिनीहरूले आफ्नो विपत्तिमा मलाई पुकारा गर्दा म तिनीहरूको पुकारा सुन्नेछैन्नँ ।
“ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಏಕೆಂದರೆ, ತಮ್ಮ ಕೇಡಿನ ನಿಮಿತ್ತ ನನ್ನ ಕೂಗುವ ಸಮಯದಲ್ಲಿ ನಾನು ಕೇಳೆನು.
15 मेरी प्रिय जससित धेरै दुष्ट मनसाय थिए, त्यो किन मेरो मन्दिरमा छे? तेरा बलिदानहरूको मासुले तँलाई मदत गर्न सक्दैन । तेरा दुष्ट कामहरूको कारणले तँ आनन्द मनाउँछस् ।
“ನನ್ನ ಪ್ರಿಯಳಿಗೆ ನನ್ನ ಆಲಯದಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡೆಸಿದ್ದಾಳೆ. ನೀನು ಸಮರ್ಪಿಸಿದ ಮಾಂಸದ ಬಲಿಯು ನಿನ್ನ ಶಿಕ್ಷೆಯನ್ನು ರದ್ದುಗೊಳಿಸುವುದೋ? ನೀನು ಕೆಟ್ಟತನ ಮಾಡುವಾಗ ಉಲ್ಲಾಸಪಡುತ್ತೀ.”
16 विगतमा परमप्रभुले तँलाई झ्याम्म परेको जैतूनको रुख, रहरलाग्दो फल भएको सुन्दर रुख भन्नुभयो । तर उहाँले यसमा आगो सल्काउनुहुनेछ, जुन आँधीबेहरीको गर्जनजस्तो सुनिनेछ । यसका हाँगाहरू भँचिनेछन् ।
ಸೌಂದರ್ಯವಾದ ಒಳ್ಳೆಯ ಹಣ್ಣುಳ್ಳ ಹಸುರಾದ ಓಲಿವ್ ಗಿಡವೆಂದು ಯೆಹೋವ ದೇವರು ನಿನಗೆ ಹೆಸರಿಟ್ಟರು. ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸುವನು. ಅದರ ಕೊಂಬೆಗಳು ಮುರಿದು ಹೋಗುವುವು.
17 इस्राएलको घराना र यहूदाको घरानाले गरेका दुष्ट कामहरूको कारणले तिमीहरूलाई रोप्नुहुने सर्वशक्तिमान् परमप्रभुले तिमीहरूको विरुद्धमा विपत्तिको आदेश दिनुभएको छ— तिनीहरूले बाल देवतालाई भेटीहरू चढाएर मलाई रिस उठाएका छन् ।”
ಇಸ್ರಾಯೇಲಿನ ವಂಶವೂ ಯೆಹೂದದ ವಂಶವೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ, ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ, ನಿನ್ನನ್ನು ನೆಟ್ಟ ಸೇನಾಧೀಶ್ವರ ಯೆಹೋವ ದೇವರು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾರೆ.
18 परमप्रभुले मलाई यी कुराहरू अवगत गराउनुभयो, त्यसैले म यी जान्दछु । हे परमप्रभु, तपाईंले नै मलाई तिनीहरूका कामहरू देखाउनुभयो ।
ಯೆಹೋವ ದೇವರು ತಿಳಿಸಿದ್ದರಿಂದಲೇ ಶತ್ರುಗಳು ನನಗೆ ವಿರುದ್ಧ ಹೂಡಿದ್ದ ಕುತಂತ್ರವು ನನಗೆ ಗೊತ್ತಾಯಿತು. ಅವರ ಕೃತ್ಯಗಳನ್ನು ನನಗೆ ತೋರಿಸಲಾಯಿತು.
19 म त कसाइकहाँ लगिंदै गरेको अवोध थुमाजस्तै थिएँ । तिनीहरूले मेरो विरुद्धमा यस्तो योजना रचेका थिए भनी मलाई थाहा थिएन, “रुखलाई त्यसको फलसमेत नष्ट पारौं । फेरि त्यसको नाउँ नै नसम्झने गरी त्यसलाई जीवितहरूको देशबाट निष्काशित गरौं ।”
ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. ಆದರೆ ನನ್ನ ವಿರುದ್ಧ ಸಂಚು ಹೂಡುತ್ತಿದ್ದಾರೆಂದು ನನಗೆ ತಿಳಿದಿರಲಿಲ್ಲ. “ಮರವನ್ನು ಫಲ ಸಹಿತ ನಾಶ ಪಡಿಸೋಣ, ಜೀವ ಲೋಕದಿಂದ ಇವನನ್ನು ನಿರ್ಮೂಲ ಮಾಡೋಣ, ಅವನ ಹೆಸರೇ ಇಲ್ಲದಂತಾಗಲಿ.”
20 तापनि सर्वशक्तिमान् परमप्रभु धार्मिक न्यायाधीश हुनुहुन्छ जसले हृदय र मनको जाँच गर्नहुन्छ । तिनीहरूको विरुद्धमा तपाईंको बदलाको म साक्षी बन्नेछु किनकि मैले मेरो विषय तपाईंको सामु पेस गरेको छु ।
ಆದರೆ ನೀತಿಯಾಗಿ ನ್ಯಾಯತೀರಿಸುವಂಥ ಅಂತರಿಂದ್ರಿಯಗಳನ್ನೂ, ಹೃದಯವನ್ನೂ ಶೋಧಿಸುವಂಥ ಸೇನಾಧೀಶ್ವರ ಯೆಹೋವ ದೇವರೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ಏಕೆಂದರೆ ನಿನಗೆ ನನ್ನ ವ್ಯಾಜ್ಯವನ್ನು ಒಪ್ಪಿಸಿದ್ದೇನೆ.
21 त्यसकारण परमप्रभु तेरो प्राण लिन खोज्ने अनातोतका मानिसहरूको सम्बन्धमा यसो भन्नुहुन्छ, “तिनीहरू भन्छन्, 'तैंले परमप्रभुको नाउँमा अगमवाणी बोल्नुहँदैन, नत्रता तँ हाम्रा हातबाट मर्नेछस् ।'
ಆದ್ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ ನೀನು, “ನಮ್ಮ ಕೈಯಿಂದ ಸಾಯದ ಹಾಗೆ ಯೆಹೋವ ದೇವರ ಹೆಸರಿನಲ್ಲಿ ಪ್ರವಾದನೆ ಹೇಳಬೇಡ,” ಅನ್ನುವವರಿಗೆ ಯೆಹೋವ ದೇವರು ಹೇಳುವುದೇನೆಂದರೆ,
22 त्यसकारण सर्वशक्तिमान् परमप्रभु यसो भन्नुहुन्छ, 'हेर, मैले तिनीहरूलाई दण्ड दिनै लागेको छु । तिनीहरूका हट्टाकट्टा युवाहरू तरवारले मारिनेछन् । तिनीहरूका छोराहरू र छोरीहरू अनिकालद्वारा मर्नेछन् ।
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಖಡ್ಗದಿಂದ ಸಾಯುವರು. ಅವರ ಪುತ್ರಪುತ್ರಿಯರು ಹಸಿವೆಯಿಂದ ಸಾಯುವರು.
23 तिनीहरूमध्ये कोही पनि छाडिनेछैन, किनकि म अनातोतका मानिसहरूको विरुद्धमा विपत्ति ल्याउँदैछु, जुन तिनीहरूको दण्डको वर्ष हुनेछ' ।”
ಅವರಲ್ಲಿ ಶೇಷವು ಇರುವುದಿಲ್ಲ. ಏಕೆಂದರೆ ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಎಂದರೆ ಅವರ ಶಿಕ್ಷೆಯ ವರ್ಷವನ್ನೇ ತರುತ್ತೇನೆ.”