< यर्मिया 25 >

1 यहूदाका सबै मानिसको विषयमा यर्मियाकहाँ आएको वचन यही हो । यहूदाका राजा योशियाहका छोरा यहोयाकीमको चौथो वर्षमा यो वचन आयो । त्यो बेबिलोनका राजा नबूकदनेसरको पहिलो वर्ष थियो ।
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,
2 यर्मिया अगमवक्ताले यो वचन यहूदाका सबै मानिस र यरूशलेमका सबै बासिन्दालाई घोषणा गरे ।
ಪ್ರವಾದಿಯಾದ ಯೆರೆಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು ಸಕಲ ಯೆಹೂದ್ಯರಿಗೂ ಸಮಸ್ತ ಯೆರೂಸಲೇಮಿನವರಿಗೂ ಸಾರಿದನು.
3 तिनले भने, “यहूदाका राजा अमोनका छोरा योशियाहको तेह्रौं वर्षदेखि आजको दिनसम्म अर्थात् तेइस वर्षसम्म परमप्रभुको वचन मकहाँ आइरहेको छ, र मैले तिमीहरूसित पटक-पटक बोलेको छु, तर तिमीहरूले सुनेका छैनौ ।
ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.
4 परमप्रभुले आफ्ना सबै दास, अगमवक्ताहरूलाई तिमीहरूकहाँ पटक-पटक पठाउनुभयो, तर तिमीहरूले सुनेका वा ध्यान दिएका छैनौ ।
ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
5 यी अगमवक्ताहरूले भने, ‘हरेक मानिस आफ्नो दुष्‍ट चाल र आफ्ना भ्रष्‍ट अभ्यासहरूबाट फर्कोस्, अनि परमप्रभुले प्राचीन समयमा तिमीहरूका पिता-पुर्खाहरू र तिमीहरूलाई स्थायी उपहारको रूपमा दिनुभएको देशमा फर्कोस् ।
ಆತನು ನಿಮಗೆ ಹೇಳಿದ ಮಾತೇನೆಂದರೆ, ‘ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ.
6 त्यसैले अरू देवताहरूको पुजा गर्न वा तिनीहरूको सामु निहुरिन तिनीहरूको पछि नलाग, र उहाँले तिमीहरूको हानि गर्ने गरी तिमीहरूका हातले बनाएका कामबाट उहँलाई रिस नउठाओ ।”
ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸಬೇಡಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡುವುದಿಲ್ಲ’ ಎಂಬುದೇ.
7 तर तिमीहरूले मेरो कुरा सुनेका छैनौ । त्‍यसैले तिमीहरूको हानि गर्न तिमीहरूका हातको कामले उहालाई रिस उठाएका छौ, यो परमप्रभुको घोषणा हो ।’
ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ನೀವೇ ಕೇಡನ್ನು ತಂದುಕೊಂಡಿದ್ದೀರಿ” ಎಂದು ಹೇಳಿದನು.
8 त्यसैले सर्वशक्तिमान् परमप्रभु यसो भन्‍नुहुन्छ, ‘तिमीहरूले मेरा वचन नसुनेका हुनाले,
ಹೀಗಿರಲು ಸೇನಾಧೀಶ್ವರನಾದ ಯೆಹೋವನ ಈ ನುಡಿಯನ್ನು ಕೇಳಿರಿ, “ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ,
9 हेर्, मेरो दास बेबिलोनका राजा नबूकदनेसरसँगै उत्तरका सबै मानिसलाई जम्मा गर्न एउटा आदेश मैले दिनै लागेको छु, यो परमप्रभुको घोषणा हो, तिनीहरूलाई म यस देश र यसका बासिन्दाहरूको विरुद्धमा र तिमीहरूका वरिपरि भएका सबै जातिको विरुद्धमा ल्याउनेछु । किनकि म तिनीहरूलाई विनाशको निम्ति अलग गर्नेछु । म तिनीहरूलाई त्रास, गिल्ला र अनन्तको विनाशको पात्रमा परिणत गरिदिनेछु ।
ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.
10 म आनन्द र खुसीको सोर, दुलहा र दुलहीको सोर, जाँतो पिंधेको सोर र बत्तिको उज्यालोको अन्त्य गरिदिनेछु ।
೧೦ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.
11 तब यो सारा देश उजाड र त्रासको पात्र हुनेछ, अनि सत्तरी वर्षसम्म यी जातिहरूले बेबिलोनका राजाको सेवा गर्नेछन् ।
೧೧ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.
12 तब सत्तरी वर्ष पुरा भएपछि म बेबिलोनका राजा, र त्यो जाति र कल्दीहरूको देशलाई तिनीहरूको अधर्मको कारण दण्ड दिनेछु र त्‍यसलाई अनन्तको उजाड पार्नेछु, यो परमप्रभुको घोषण हो ।
೧೨ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.
13 त्यसपछि मैले त्यस देशको विरुद्धमा बोलेका सबै वचन र यर्मियाले सबै जातिको विरुद्धमा बोलेका अगमवाणीका वचनहरू जुन यो पुस्तकमा लेखिएका छन्, ती सबै पुरा गर्नेछु ।
೧೩ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ ಅದರ ಮೇಲೆ ಬರಮಾಡುವೆನು.
14 किनकि अरू धेरै जातिहरू र महान् राजाहरूले यी जातिहरूका मानिसहरूलाई कमारा तुल्याउनेछन् । तिनीहरूका कामहरू र तिनीहरूका हातका कार्यहरूका कारण म तिनीहरूलाई बदला लिनेछु ।”
೧೪ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು” ಎಂಬುದೇ.
15 किनकि परमप्रभु इस्राएलका परमेश्‍वरले मलाई यसो भन्‍नुभयो, “मेरो हातबाट क्रोधको मदिराले भरिएको यो कचौरा लि, र मैले तँकहाँ पठाउने सबै जातिलाई यो पिउन लगा ।
೧೫ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.
16 तिनीहरूले पिउनेछन् र त्‍यसपछि धरमराउने छन्, र मैले तिनीहरूका बिचमा पठाएको तरवारको सामु बौलाहा हुनेछन् ।”
೧೬ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು. ಆ ನನ್ನ ರೋಷವನ್ನು ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು” ಎಂದು ಅಪ್ಪಣೆಕೊಟ್ಟನು.
17 त्यसैले मैले परमप्रभुको हातबाट कचौरा लिएँ, र ती सबै जाति जसकहाँ परमप्रभुले मलाई पठाउनुभएको थियो, मैले तिनीहरूलाई पिउन लगाएँ,
೧೭ಆಗ ನಾನು ಯೆಹೋವನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡು ಯೆಹೋವನು ಯಾವ ಜನಾಂಗಗಳ ಬಳಿಗೆ ನನ್ನನ್ನು ಕಳುಹಿಸಿದನೋ, ಆ ಸಕಲ ಜನಾಂಗಗಳು ಅದರಲ್ಲಿ ಕುಡಿಯುವಂತೆ ಮಾಡಿದೆನು.
18 अर्थात् तिनीहरू आजको दिनमा भएझैं तिनीहरूलाई विनाश, भय अनि गिल्ला र सरापको पात्र बनाउन यरूशलेम, यहूदाका सहरहरू, त्यसका राजाहरू र अधिकारीहरूलाई यो पिउन लगाएँ ।
೧೮ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು.
19 अरू जातिहरूले पनि यसलाई पिउनुपर्‍यो, अर्थात् मिश्रका राजा फारो, र उसका सेवकहरू, अधिकारीहरू र उसका सबै मानिस,
೧೯ಅದು ಈ ದಿನ ನೆರವೇರಿದೆ. ಇದರೊಂದಿಗೆ ಐಗುಪ್ತದ ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು, ಅವನ ಎಲ್ಲಾ ಜನರು,
20 विभिन्‍न जातका सबै मिश्रित मानिस, र ऊज देशका सबै राजा, पलिश्तीहरू अश्कलोन, गाजा, एक्रोन र अश्दोदका बाँकी रहेकाहरू सबै राजा,
೨೦ಬಗೆಬಗೆಯ ಎಲ್ಲಾ ವಿದೇಶೀಯರು, ಊಚ್ ದೇಶದ ಎಲ್ಲಾ ಅರಸರು, ಫಿಲಿಷ್ಟಿಯ ದೇಶದ ಎಲ್ಲಾ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಹಾಳಾಗದೆ ಉಳಿದ ಸ್ವಲ್ಪ ಅಷ್ಡೋದ್,
21 एदोम, मोआब र अम्मोनका मानिसहरू,
೨೧ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು,
22 टुरोस र सीदोनका राजाहरू, समुद्रपारि किनाराका सबै राजा,
೨೨ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು, ಸಮುದ್ರದ ಆಚೆಯ ಕರಾವಳಿಯ ಅರಸರು,
23 ददान, तेमा र बूज, तिनीहरूका शिरका किनाराहरूमा कपाल काट्नेहरू सबैले यसलाई पिउनुपर्‍यो ।
೨೩ದೆದಾನ್ಯರು, ತೇಮಾ ದೇಶದವರು, ಬೂಜ್ ದೇಶದವರು, ಚಂಡಿಕೆ ಬಿಟ್ಟುಕೊಂಡಿರುವವರೆಲ್ಲರು,
24 यसबाहेक, अरबका सबै राजा, उजाड-स्थानमा बस्‍ने मिश्रित मानिसहरूका सबै राजा,
೨೪ಅರಬಿಯದ ಎಲ್ಲಾ ಅರಸರು, ಅರಣ್ಯವಾಸಿಗಳಾದ ಮಿಶ್ರಜಾತಿಯವರ ಎಲ್ಲಾ ಅರಸರು,
25 जिम्रीका सबै राजा, एलामका सबै राजा, मादीका सबै राजा,
೨೫ಜಿಮ್ರಿಯ ಎಲ್ಲಾ ಅರಸರು, ಏಲಾಮಿನ ಎಲ್ಲಾ ಅರಸರು, ಮೇದ್ಯರ ಎಲ್ಲಾ ಅರಸರು,
26 उत्तरका, नजिक र टाढा बस्‍ने सबै राजा, पृथ्वीमा हुने सबै राज्यहरूले तिनीहरूका भाइसँगै परमप्रभुको हातको कचौरा पिउनुपर्‍यो । अन्त्यमा, बेबिलोनका राजाले पनि त्यस कचौरालाई पिउनेछ ।
೨೬ದೂರ ಮತ್ತು ಸಮೀಪವಿರುವ ಉತ್ತರದೇಶದ ಎಲ್ಲಾ ಅರಸರು, ಭೂಲೋಕದಲ್ಲಿರುವ ಸಕಲರಾಜ್ಯಗಳವರು ಇವರೆಲ್ಲರಿಗೂ ಕುಡಿಸು; ಇವರು ಕುಡಿದ ಮೇಲೆ ಶೇಷಕಿನ ಅರಸನೂ ಕುಡಿಯಲಿ ಎಂಬುದೇ ನನಗಾದ ಅಪ್ಪಣೆ.
27 परमप्रभुले मलाई भन्‍नुभयो, “अब तैंले तिनीहरूलाई यसो भन्‍नुपर्छ, 'सर्वशक्तिमान् परमप्रभु इस्राएलका परमेश्‍वर यसो भन्‍नुहुन्छः पिओ र मात, अनि बान्त गर, लडिबडि गर, र मैले तिमीहरूका बिचमा पठाउँदै गरेको तरवारको सामु खडा नहोओ ।'
೨೭ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”
28 तब तिनीहरूले पिउनलाई तेरो हातबाट कचौरा लिन इन्कार गरे भने, तैंले तिनीहरूलाई यसो भन्‍नू, 'सर्वशक्तिमान् परमप्रभु यसो भन्‍नुहुन्छः तिमीहरूले निश्‍चय पनि यसलाई पिउनैपर्छ ।
೨೮ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ, ಕುಡಿಯಲಿಕ್ಕೂ ಕೇಳದಿದ್ದರೆ ನೀನು ಅವರಿಗೆ ಹೀಗೆ ಹೇಳು, “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನೀವು ಕುಡಿಯಲೇ ಬೇಕು.
29 किनकि हेर, मेरो नाउँद्वारा कहलाइने सहरमाथि मैले विपत्ति ल्याउनै लागेको छु, र के तिमीहरू आफूचाहिं दण्डबाट उम्कने छौ र? तिमीहरू उम्कने छैनौ, किनकि देशका सबै बासिन्दाको विरुद्धमा म एउटा तरवार पठाउँदैछु, यो सर्वशक्तिमान् परमप्रभुको घोषणा हो ।'
೨೯ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ” ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.
30 तिनीहरूका विरुद्धमा तैंले यी सबै वचनको अगमवाणी बोल्‍नुपर्छ र तिनीहरूलाई यसो भन्‍नुपर्छ, 'परमप्रभु उच्‍च ठाउँहरूबाट गर्जनुहुनेछ, र आफ्नो पवित्र बासस्थानबाट उहाँको स्‍वरले उहाँले चर्को गरी कराउनुहुनेछ, अनि आफ्ना जातिको विरुद्धमा उहाँ जोडसित गर्जनुहुनेछ, र अङ्गुर पेल्‍नेहरूजस्तै पृथ्वीमा बस्‍ने सबैको विरुद्धमा उहाँले चर्को गरी कराउनुहुनेछ ।
೩೦ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು, “ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು. ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.
31 युद्धको आवाज पृथ्वीको कुना-कुनासम्म गुन्‍जिनेछ, किनकि परमप्रभुले जाति-जातिहरूको विरुद्धमा अभियोग लगाउनुहुन्‍छ, र सबै मानिसमाथि इन्साप ल्याउनुहुने छ, अनि दुष्‍टहरूलाई उहाँले तरवारले काट्नुहुनेछ, यो परमप्रभुको घोषणा हो ।’
೩೧ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು, ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ, ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು” ಇದು ಯೆಹೋವನ ನುಡಿ.
32 सर्वशक्तिमान् परमप्रभु यसो भन्‍नुहुन्छ, 'हेर, विपत्ति एक जातिदेखि अर्को जातिकहाँ जाँदैछ, र पृथ्वीका पल्‍लो कुनाबाट प्रचण्ड आँधी सुरु हुँदैछ ।
೩೨ಸೇನಾಧೀಶ್ವರನಾದ ಯೆಹೋವನು, “ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವುದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದು ಬರುವುದು.
33 तब त्यस दिन परमप्रभुद्वारा मारिएकाहरू पृथ्वीको एउटा कुनादेखि अर्को कुनासम्म हुनेछन् । तिनीहरूका निम्ति शोक गरिने, जम्मा गरने र गाडिनेछैन । तिनीहरू भुइँमा मलजस्तै हुनेछन् ।
೩೩ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು; ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಒಟ್ಟುಗೂಡಿಸುವುದಿಲ್ಲ, ಯಾರು ಹೂಣಿಡುವುದಿಲ್ಲ, ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
34 हे गोठालाहरू हो, विलाप गर, मदतको लागि कराओ । बगालका अगुवाहरू हो, धुलोमा लडीबडी गर, किनकि तिमीहरूको हत्या गरिने दिन आएको छ । तिमीहरू माटोको भाँडाझैं खस्दा छरपष्‍ट हुनेछौ ।
೩೪ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ, ಬೂದಿಯಲ್ಲಿ ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ಬಂದಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದು ಒಡೆದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.
35 गोठालाहरूका लागि कुनै शरणस्थान छैन । बगालका अगुवाहरूका लागि त्यहाँ भाग्‍ने ठाउँ हुनेछैन ।
೩೫ಕುರುಬರು ಓಡಿಹೋಗುವುದಕ್ಕೆ ಮಾರ್ಗವು ಸಿಕ್ಕದು, ಮಂದೆಯ ಹಿರಿಯ ನಾಯಕರು ತಪ್ಪಿಸಿಕೊಳ್ಳುವುದಕ್ಕೆ ಆಸ್ಪದ ದೊರೆಯದು.
36 गोठालाहरूको रुवाइ र बगालका अगुवाहरूको विलाप सुन, किनकि परमप्रभुले तिनीहरूका खर्कहरू नष्‍ट पार्दै हुनुहुन्छ ।
೩೬ಆಹಾ, ಕುರುಬರ ಕೂಗಾಟ! ಮಂದೆಯ ಹಿರಿಯ ನಾಯಕರ ಅರಚಾಟ! ಯೆಹೋವನು ಆ ಹುಲ್ಗಾವಲನ್ನು ಹಾಳುಮಾಡುತ್ತಿದ್ದಾನಲ್ಲಾ.
37 त्यसैले परमप्रभुको डरलाग्दो रिसको कारणले शान्तिमय खर्कहरू उजाड पारिनेछन् ।
೩೭ನೆಮ್ಮದಿಯ ಗೋಮಾಳಗಳು ಯೆಹೋವನ ರೋಷಾಗ್ನಿಯಿಂದ ನಿಶ್ಯಬ್ದವಾಗಿವೆ.
38 जवान सिंहले झैं उहाँले आफ्नो ठाउँ छाड्नुभएको छ, किनकि अत्याचारीको रिस र उहाँको बल्दो क्रोधको कारणले तिनीहरूको देश त्रासको ठाउँ हुनेछ ।
೩೮ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ. ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ.

< यर्मिया 25 >