< यर्मिया 37 >
1 यहोयाकीमका छोरा यहोयाकीनको सट्टामा योशियाहका छोरा सिदकियाहले राजा भएर राज्य गरे । बेबिलोनका राजा नबूकदनेसरले सिदकियाहलाई यहूदा देशका राजा बनाएका थिए ।
೧ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು.
2 तर सिदकियाह, तिनका सेवकहरू र देशका मानिसले यर्मिया अगमवक्ताको हातद्वारा परमप्रभुले घोषणा गर्नुभएको उहाँको वचनलाई सुनेनन् ।
೨ಆಗ ಅವನಾಗಲಿ, ಅವನ ಸೇವಕರಾಗಲಿ ಅಥವಾ ದೇಶದ ಜನರಾಗಲಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆ ಹೋದರು.
3 त्यसैले राजा सिदकियाह, शेलेम्याहका छोरा यहूकल र मासेयाहका छोरा सपन्याह पुजारीले यर्मिया अगमवक्तालाई एउटा सन्देश पठाए । तिनीहरूले यसो भने, “हाम्रा निम्ति परमप्रभु हाम्रा परमेश्वरसँग प्रार्थना गर ।”
೩ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ ಇವರ ಮೂಲಕ, “ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.
4 यस बेला यर्मिया मानिसहरूकहाँ आउने र जाने गर्थे, किनकि तिनलाई अझै पनि थुनामा राखिएको थिएन ।
೪ಆ ಕಾಲದಲ್ಲಿ ಯೆರೆಮೀಯನು ಇನ್ನೂ ಸೆರೆಯಾಗಿರಲಿಲ್ಲ; ಜನರಲ್ಲಿ ಹೋಗುತ್ತಾ ಬರುತ್ತಾ ಇದ್ದನು.
5 फारोको सेना मिश्रदेशबाट आयो, र यरूशलेमलाई घेराबन्दी गर्ने कल्दीहरूले तिनीहरूका बारेमा खबर सुने र यरूशलेम छाडे ।
೫ಆಗ ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತ್ತು; ಇದನ್ನು ಕೇಳಿ ಯೆರೂಸಲೇಮನ್ನು ಮುತ್ತಿದ್ದ ಕಸ್ದೀಯರು ಬಿಟ್ಟು ಹೋಗಿದ್ದರು.
6 तब परमप्रभुको वचन यर्मिया अगमवक्ताकहाँ यसो भनेर आयो,
೬ಹೀಗಿರಲು ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು.
7 “परमप्रभु इस्राएलका परमेश्वर यसो भन्नुहुन्छः यहूदाका राजाले मबाट सल्लाह लिन तँकहाँ मानिसहरू पठाएको हुनाले तैंले उसलाई यसो भन्नेछस्, 'हेर्नुहोस्, तपाईंलाई मदत गर्न आएको फारोको सेना आफ्नै देश, मिश्रदेशमा फर्केर जानै लागेको छ ।
೭“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.
8 कल्दीहरू फर्केर आउनेछन् । तिनीहरूले यस सहरको विरुद्धमा युद्ध गर्नेछन्, यसलाई कब्जा गर्नेछन्, र जलाउनेछन् ।'
೮ಕಸ್ದೀಯರು ಪುನಃ ಬಂದು ಈ ಪಟ್ಟಣದ ವಿರುದ್ಧವಾಗಿ ಹೋರಾಡಿ, ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಡುವರು’” ಎಂಬುದು.
9 परमप्रभु यसो भन्नुहुन्छः यसो भनेर आफैलाई धोका नदिनुहोस्, 'निश्चय पनि कल्दीहरूले हामीलाई छाडेर जाँदैछन्,' किनकि तिनीहरू छोड्नेछैनन् ।
೯ಯೆಹೋವನು ಇಂತೆನ್ನುತ್ತಾನೆ, “ಕಸ್ದೀಯರು ನಮ್ಮಿಂದ ತೊಲಗಿ ಹೋಗುವುದು ಖಂಡಿತ ಎಂದು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವುದೇ ಇಲ್ಲ.
10 तपाईंको विरुद्धमा लड्ने सम्पूर्ण कल्दी सेनालाई तपाईंले जितेको, जसले गर्दा पालहरूमा घाइते मानिसहरू मात्र छाडिएको भए पनि तिनीहरू उठ्नेछन् र यस सहरलाई जलाउनेछन् ।”
೧೦ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”
11 त्यसैले फारोको सेना आउँदै गर्दा कल्दीको सेनाले यरूशलेम छाड्यो,
೧೧ಕಸ್ದೀಯರ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಯೆರೂಸಲೇಮನ್ನು ಬಿಟ್ಟುಹೋದರು.
12 तब यर्मिया यरूशलेमबाट प्रस्थान गरेर बेन्यामीनको इलाकामा गए । त्यहाँ तिनले आफ्ना मानिसहरूका बिचमा आफ्नो जग्गाको अंश लिन चाहन्थे ।
೧೨ಆಮೇಲೆ ಯೆರೆಮೀಯನು ಬೆನ್ಯಾಮೀನ್ ಸೀಮೆಯಲ್ಲಿ ತನಗೆ ಬರಬೇಕಾದ ಸ್ವತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಯೆರೂಸಲೇಮಿನಿಂದ ಹೊರಟನು.
13 जसै तिनी बेन्यामीनको मूल ढोकामा पुगे, त्यहाँ मुख्य पहरेदार थिए । तिनको नाउँ यिरियाह थियो, जो हनन्याहका नाति, शेलेम्याहका छोरा थिए । तिनले यर्मिया अगमवक्तालाई समाते र भने, “तिमी कल्दीहरूकहाँ भागेर जाँदैछौ ।”
೧೩ಅವನು ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಯ ವಿಚಾರಕನಾಗಿದ್ದು ಪ್ರವಾದಿಯಾದ ಯೆರೆಮೀಯನನ್ನು ಹಿಡಿದು, “ನೀನು ಕಸ್ದೀಯರಲ್ಲಿ ಮೊರೆಹೋಗಲು ಹೋಗುತ್ತಿದ್ದಿ” ಎಂದು ಹೇಳಿದನು.
14 तर यर्मियाले भने, “त्यो साँचो होइन । म कल्दीहरूकहाँ भागेर जानेछैन ।” तर यिरियाहले तिनको कुरा सुनेनन् । तिनले यर्मियालाई समाते र अधिकारीहरूकहाँ लगे ।
೧೪ಅದಕ್ಕೆ ಯೆರೆಮೀಯನು, “ಅದು ಸುಳ್ಳು, ನಾನು ಕಸ್ದೀಯರಲ್ಲಿ ಮೊರೆಹೋಗುವವನಲ್ಲ” ಎನ್ನಲು ಇರೀಯನು ಅವನ ಮಾತನ್ನು ಕೇಳದೆ ಅವನನ್ನು ಹಿಡಿದು ಪ್ರಧಾನರ ಬಳಿಗೆ ಕರೆತಂದನು.
15 अधिकारीहरू यर्मियासित रिसाए । तिनीहरूले तिनलाई कुटे र थुनामा हाले जुन सचिव जोनाथनको घर थियो, किनकि तिनीहरूले यसलाई झ्यालखानामा परिणत गरेका थिए ।
೧೫ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.
16 यसरी यर्मियालाई झ्यालखानाको कालकोठरीमा हालियो, जहाँ तिनी धेरै दिनसम्म रहे ।
೧೬ಯೆರೆಮೀಯನು ಆ ಬಂದಿಖಾನೆಯ ನೆಲಮನೆಗಳಲ್ಲಿ ಕೆಲವು ದಿನಗಳು ಇದ್ದನು.
17 तब राजा सिदकियाहले कसैलाई पठाए जसले तिनलाई दरबारमा ल्याए । आफ्नो महलमा राजाले तिनलाई गुप्तमा सोधे, “के परमप्रभुबाट कुनै वचन आएको छ?” यर्मियाले जवाफ दिए, “वचन छः तपाईंलाई बेबिलोनका राजाको हातमा दिइनेछ ।”
೧೭ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.
18 तब यर्मियाले सिदकियाह राजालाई भने, “तपाईं, तपाईंका सेवकहरू र यी मानिसहरूको विरुद्धमा मैले कसरी पाप गरें जसको कारण तपाईंले मलाई झ्यालखानामा हाल्नुभयो?
೧೮ಅಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ, “ನೀವು ನನ್ನನ್ನು ಸೆರೆಯಲ್ಲಿ ಹಾಕಿಸಿದ್ದಕ್ಕೆ ನಾನು ನಿನಗಾಗಲಿ, ನಿನ್ನ ಸೇವಕರಿಗಾಗಲಿ ಅಥವಾ ಈ ಜನರಿಗಾಗಲಿ ಯಾವ ಅಪರಾಧವನ್ನು ಮಾಡಿದೆನು?
19 तपाईंका ती अगमवक्ताहरू कहाँ छन् जसले तपाईंको निम्ति अगमवाणी बोले र यसो भने, कि बेबिलोनका राजा तपाईं र यस देशको विरुद्धमा आउनेछैनन्?
೧೯ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?
20 तर हे मेरा मालिक राजा, अब सुन्नुहोस् । मेरा बिन्ती हजुरको सामु राख्न दिनुहोस् । मलाई सचिव जोनाथनको घरमा नफर्काउनुहोस्, नत्रता म त्यहीँ मर्नेछु ।”
೨೦ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ” ಎಂದು ಅರಿಕೆಮಾಡಿದನು.
21 त्यसैले राजा सिदकियाहले एउटा हुकुम दिए । तिनका अधिकारीहरूले यर्मियालाई गारदको चोकमा थुने । सहरमा सबै रोटी नसकुञ्जेलसम्म तिनलाई हरेक दिन एउटा रोटी दिइन्थ्यो । यसरी यर्मिया गारदको चोकमा रहे ।
೨೧ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.