< यर्मिया 39 >
1 यहूदाका राजाको नवौँ वर्षको दसौँ महिनामा बेबिलोनका राजा नबूकदनेसर यरूशलेमका विरुद्धमा आफ्ना सबै सेना लिएर आए, र यसलाई घेराबन्दी गरे ।
೧ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.
2 सिदकियाहको एघारौं वर्षको चौथो महिनाको नवौँ दिनमा सहरको पर्खाल भत्काइयो ।
೨ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕು ಬಿದ್ದು ಯೆರೂಸಲೇಮ್ ಪಟ್ಟಣವು ಶತ್ರುವಶವಾಯಿತು.
3 तब बेबिलोनका राजाका सबै अधिकारी अर्थात् नेबो-सर्सेकिम, सम्गर-नेबो र एक उच्च अधिकारी सर्सेचिम आएर मध्य ढोकामा बसे । नेबो-सर्सेकिम बेबिलोनका राजाका विशिष्ट अधिकारी थिए, र अरू बाँकी सबै अधिकारीहरू थिए ।
೩ಆಗ ನೇರ್ಗಲ್ ಸರೆಚರ್, ಸಮ್ಗರ್ ನೆಬೋ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಕಲ ಸರದಾರರೂ ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಆಸೀನರಾದರು.
4 जब यहूदाका राजा सिदकियाह र सबै योद्धाले तिनीहरूलाई देखे, तिनीहरू भागे । तिनीहरू रातमा दुई पर्खालको बिचमा भएको ढोकाबाट छिरेर राजको बगैँचाको बाटो भएर सहरबाट भागे । राजा अराबा जाने बाटोतिर लागे ।
೪ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
5 तर कल्दीहरूका सेनाले तिनीहरूलाई खेदे, र यरीहो नजिकै यर्दन नदीको बेँसीको मैदानमा सिदकियाहलाई भेट्टाए । तिनीहरूलाई तिनलाई पक्रे र हमात देशको रिब्ला भन्ने ठाउँमा बेबिलोनका राजा नबूकदनेसरकहाँ ल्याए, जहाँ नबूकदनेसरले तिनलाई दण्डाज्ञा दिए ।
೫ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ಕೀಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
6 रिब्लामा बेबिलोनका राजाले सिदकियाहका आँखाकै सामु तिनका छोराहरूलाई मारे । तिनले यहूदाका सबै कुलीनहरूलाई पनि मारे ।
೬ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ರಿಬ್ಲದಲ್ಲಿ ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.
7 तब तिनले सिदकियाहका आँखा निकाले, र तिनलाई बेबिलोनमा लान काँसाको साङ्लाले बाँधे ।
೭ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬಿಲೋನಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು.
8 अनि कल्दीहरूले राजदरबार र मानिसका घरहरू जलाए । तिनीहरूले यरूशलेमका पर्खालहरू पनि भत्काए ।
೮ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.
9 राजाको अङ्गरक्षकका सेनापति नबूजरदानले सहरमा बाँकी रहेका मानिसहरूलाई निर्वासनमा लगे । कल्दीहरूकहाँ भागेर गएका र सहरमा छाडिएका बाँकी मानिसहरू सबै नै लगिए ।
೯ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬಿಲೋನಿಗೆ ಸೆರೆಯೊಯ್ದನು.
10 तर अङ्गरक्षकका कप्तापन नबूजरदानले केही नभएका सबैभन्दा गरिब मानिसहरूलाई यहूदा देशमा छाडे । त्यही दिन तिनले तिनीहरूलाई दाखाबारी र खेतहरू दिए ।
೧೦ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲ ಮತ್ತು ದ್ರಾಕ್ಷಿತೋಟಗಳನ್ನು ಕೊಟ್ಟನು.
11 बेबिलोनका राजा नबूकदेनसरले राजाका अङ्गरक्षकका कप्तान नबूजरदानलाई यर्मियाको विषयमा हुकुम दिएका थिए,
೧೧ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನಿಗೆ,
12 “तिनलाई लेजाऊ र तिनको राम्रो हेरचाह गर । तिनलाई कुनै हानि नगर । त्यसले तिमीलाई भनेका हर कुरा गर्नू ।”
೧೨“ಅವನನ್ನು ಕರೆಯಿಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವುದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು” ಎಂದು ಅಪ್ಪಣೆಕೊಟ್ಟನು.
13 त्यसैले राजाका अङ्गरक्षकका कप्तान नबूजरदान, उच्च नपुंसक नबुशजबान, उच्च अधिकृत नेर्गल-सरेसर र बेबिलोनका राजाका अरू सबै उच्च अधिकारीहरूले अरू मानिसहरूलाई बाहिर पठाए ।
೧೩ಅದಕ್ಕೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನ್, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳು,
14 तिनीहरूका मानिसहरूले यर्मियालाई गारदको चोकबाट लिएर गए, र घरमा नै लैजान शापानका नाति, अहीकामका छोरा गदल्याहको हातमा जिम्मा दिए । यसरी यर्मिया मानिसहरूकै बिचमा बसे ।
೧೪ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.
15 यर्मिया गारदको चोकमा गिरफ्तार भएकै बेलामा परमप्रभुको वचन यसो भनेर तिनीकहाँ आयो,
೧೫ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಯೆಹೋವನು ಅವನಿಗೆ ಈ ಮಾತನ್ನು ದಯಪಾಲಿಸಿದನು,
16 “कूशी एबेद-मेलेकलाई भन्, 'सर्वशक्तिमान् परमप्रभु इस्राएलका परमेश्वर यसो भन्नुहुन्छः यस सहरको विरुद्धमा भलाई नभई विपत्ति ल्याएर मैले मेरा वचन पुरा गर्नै लागेको छु । त्यस दिन तेरै सामु यी सबै वचन पुरा हुनेछन् ।
೧೬“ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವುದು.
17 तर त्यस दिन म तँलाईचाहिं छुटकारा दिनेछु, यो परमप्रभुको घोषणा हो, र तँ जसदेखि डराउँछस्, म तँलाई तिनीहरूको हातमा दिनेछैनँ ।
೧೭ಯೆಹೋವನು ಇಂತೆನ್ನುತ್ತಾನೆ, ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವುದಿಲ್ಲ.
18 किनकि म निश्चय नै तँलाई छुटकारा दिनेछु । तँ तरवारले ढालिनेछैनस् । तैंले ममाथि भरोसा गरेको हुनाले तेरो जीवन जोगिनेछ, यो परमप्रभु घोषणा थियो' ।”
೧೮ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳೆದುಕೊಂಡು ಹೋಗುವಿ; ಇದು ಯೆಹೋವನ ನುಡಿ’” ಎಂಬುದೇ.