< यर्मिया 52 >
1 सिदकियाहले राज्य गर्न सुरु गर्दा तिनी एक्काइस वर्षका थिए । तिनले यरूशलेममा एघार वर्ष राज्य गरे । तिनकी आमाको नाउँ हमुतल थियो । उनी लिब्नाका यर्मियाकी छोरी थिइन् ।
೧ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.
2 परमप्रभुको दृष्टिमा जे खराब थियो, तिनले त्यही गरे । यहोयाकीमले गरेका हरेक कुरा तिनले गरे ।
೨ಇವನು ಯೆಹೋಯಾಕೀಮನಂತೆ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
3 परमप्रभुले आफ्नो सामुबाट तिनीहरूलाई नधपाउनुभएसम्म उहाँको क्रोधद्वारा यी सबै घटना यरूशलेम र यहूदामा घटे । तब सिदकियाह बेबिलोनको विरुद्धमा विद्रोह गरे ।
೩ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು.
4 राजा सिदकियाहको शासनकालको नवौं वर्षको दसौं महिनाको दसौं दिनमा बेबिलोनका राजा नबूकदनेसर यरूशलेमको विरुद्धमा आफ्ना सबै सेनासँगै आए । तिनीहरूले यसको सामु छाउनी हाले, र तिनीहरूले यसको चारैतिर घेराबन्दी गरे ।
೪ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,
5 यसरी राजा सिदकियाहको शासनकालको एघारौं वर्षसम्म सहरलाई घेराबन्दी गरियो ।
೫ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
6 चौथो महिनाको नवौं दिनसम्म सहरमा यस्तो घोर अनिकाल पर्यो, कि देशका मानिसहरूका लागि कुनै खानेकुरा नै थिएन ।
೬ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ,
7 तब सहरको पर्खाल भत्काइयो, र कल्दीहरू सहरको चारैतिर भए तापनि सहरको पर्खाललाई भत्काएर सबै योद्धा रातमा राजाको बगैंचानेर भएका दुईवटा पर्खालको बिचको ढोकाको बाटो भएर भागे । तिनीहरू अराबाको दिशातिर गए ।
೭ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.
8 तर कल्दीहरूका सेनाले राजा सिदकियाहलाई खेदे, र यरीहो नजिकैको यर्दन नदीका मैदानहरूमा भेट्टाए । तिनका सबै सेना तिनीबाट तितर-बितर भए ।
೮ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು.
9 तिनीहरूले राजालाई समाते र हमात देशको रिब्लामा बेबिलोनका राजाकहाँ तिनलाई ल्याए जहाँ राजाले तिनलाई दण्डको फैसला सुनाए ।
೯ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
10 बेबिलोनका राजाले सिदकियाहका छोराहरूलाई तिनकै आँखाका सामु मारे, र रिब्लामा तिनले यहूदाका सबै अगुवालाई पनि मारे ।
೧೦ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.
11 तब तिनले सिदकियाहका आँखा निकाले, तिनलाई काँसाका साङ्लाहरूले बाँधे र बेबिलोनमा ल्याए । तिनको मृत्यु नभएसम्म नै बेबिलोनका राजाले तिनलाई झ्यालखानामा राखे ।
೧೧ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು.
12 अब बेबिलोनका राजा नबूकदनेसरको राज्य सुरु गरेको उन्नाइसौं वर्षको पाँचौं महिनाको दसौं दिनमा नबूजरदान यरूशलेममा आए । तिनी राजाका अङ्गरक्षकहरूका कमान्डर अनि बेबिलोनका राजाका सेवक थिए ।
೧೨ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು.
13 तिनले परमप्रभुको मन्दिर, राजदरबार र यरूशलेमका सबै घर जलाए । अनि सहरमा भएका हरेक महत्त्वपूर्ण भवन तिनले जलाए ।
೧೩ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.
14 यरूशलेमको वरिपरि भएका पर्खालहरूका सन्दर्भमा, अङ्गरक्षकहरूका कमान्डरको अधीनमा रहेका बेबिलोनका सबै सेनाले ती नष्ट पारे ।
೧೪ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.
15 सबैभन्दा गरिब मानिसहरू, सहरमा बाँकी रहेका मानिसहरू, बेबिलोनका राजाकहाँ भागेर गएकाहरू र बाँकी रहेका कारीगरहरूका विषयमा, अङ्गरक्षकहरूका कमान्डर नबूजरदानले तीमध्ये कसैलाई निर्वासनमा लगे ।
೧೫ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದಿಕ್ಕಿಲ್ಲದವರಲ್ಲಿ ಅನೇಕರನ್ನೂ, ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ಬಾಬೆಲಿನ ಅರಸನ ಮೊರೆಹೊಕ್ಕವರನ್ನೂ ಮತ್ತು ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.
16 तर अङ्गरक्षकहरूका कमान्डर नबूजरदानले दाखबारी र खेतहरूमा काम गर्न देशका सबैभन्दा गरिबहरूलाई त्यहीं छोडे ।
೧೬ಆದರೆ ನೆಬೂಜರದಾನನು ಹೊಲಗಳನ್ನೂ ಹಾಗು ದ್ರಾಕ್ಷಿಯ ತೋಟಗಳನ್ನೂ ವ್ಯವಸಾಯ ಮಾಡುವುದಕ್ಕಾಗಿ ದೇಶದ ಜನರಲ್ಲಿ ಕೆಲವು ಬಡ, ದಿಕ್ಕಿಲ್ಲದವರನ್ನು ಮಾತ್ರ ಬಿಟ್ಟುಹೋದನು.
17 परमप्रभुको मन्दिरमा राखिएका काँसाका स्तम्भहरू, आधारहरू र काँसाको विशाल खड्कुँलो विषयमा कल्दीहरूले ती टुक्राटुक्रा पारे, र सबै काँसाचाहिं बेबिलोनमा लगे ।
೧೭ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ, ಪೀಠಗಳನ್ನೂ, ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು,
18 भाँडाहरू, बेल्चाहरू, सलेदाका चिम्टाहरू, चम्चाहरू र मन्दिरमा पुजारीहरूले सेवा गर्दा प्रयोग गरिने काँसाका सबै सामान पनि, कल्दीहरूले तीसबै लगे ।
೧೮ಅವುಗಳ ಎಲ್ಲಾ ತಾಮ್ರವನ್ನೂ ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.
19 राजाका अङ्गरक्षकका कमान्डरले कञ्चन सुन वा चाँदीले बनेका स्नान-बाटाहरू, धुपौराहरू, छर्कने बाटाहरू, भाँडाहरू, सामदानहरू, अर्घ-बलिमा चढाइने कचौरा र बाटाहरू पनि लगे ।
೧೯ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.
20 सोलोमनले मन्दिरको लागि बनाएका दुईवटा स्तम्भ, विशाल खड्कुँलो भनेर चिनिने काँसाको बाटा, त्यसमुनि भएका बाह्रवटा काँसाका साँढे जोख्नै नसक्ने गरी धेरै काँसा थियो ।
೨೦ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳನ್ನು ಹೊರುವ ಹನ್ನೆರಡು ತಾಮ್ರದ ಹೋರಿಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು.
21 स्तम्भहरू प्रत्येकका उचाइ अठार हात थियो, र गोलाइ बाह्र हात थियो । प्रत्येकको मोटाइ चार अङ्गुल चौडा र खोक्रो थियो ।
೨೧ಕಂಬಗಳು ಎಂಥವುಗಳೆಂದರೆ ಮೊದಲನೆಯ ಕಂಬವು ಹದಿನೆಂಟು ಮೊಳ ಎತ್ತರವಿತ್ತು; ಅದರ ಸುತ್ತಳತೆಯು ಹನ್ನೆರಡು ಮೊಳ; ಅದು ನಾಲ್ಕು ಬೆರಳಷ್ಟು ದಪ್ಪವಾಗಿಯೂ, ಪೊಳ್ಳಾಗಿಯೂ ಇತ್ತು.
22 स्तम्भमाथि एउटा स्तम्भ-शिर थियो । स्तम्भ-शिर पाँच हात अग्लो थियो, र यो काँसाको जाली र दारिमका बुट्टाले चारैतिर भरिएको थियो । अर्को स्तम्भ पनि त्यसका दारिमहरूसहित पहिलेको जस्तै थियो ।
೨೨ಕಂಬದ ಮೇಲೆ ಐದು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು; ಕುಂಭದ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ಅಲಂಕಾರವಾಗಿ ಹಾಗೆಯೇ ಇತ್ತು.
23 स्तम्भ-शिरका छेउ-छेउमा छयानब्बेवटा दारिम थिए । चारैतिर जालीलाई घेरिराखेका दारिमहरू जम्मा एक सयवटा थिए ।
೨೩ನಾಲ್ಕು ಪಕ್ಕಗಳಲ್ಲಿ ತೊಂಭತ್ತಾರು ದಾಳಿಂಬ ಹಣ್ಣುಗಳಿದ್ದವು; ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ದಾಳಿಂಬ ಹಣ್ಣುಗಳಿದ್ದವು.
24 अङ्गरक्षकहरूका कमान्डरले मुख्य पुजारी बन्दी सरायाह, दोस्रो दर्जाका पुजारी सपन्याह र तिन जना द्वारपाललाई लिएर गए ।
೨೪ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಜನ ದ್ವಾರಪಾಲಕರು,
25 तिनले सिपाहीहरूको जिम्मामा भएका अधिकारी, सहरमा अझै बाँकी रहेका राजाका सात जना सल्लाहकारलाई सहरबाट कैद गरेर लगे । तिनले देशका मानिसहरूलाई सेनाम भर्ती गर्ने मुख्य अधिकारी र देशमा भएका अन्य साठी जना विशिष्ट मानिसलाई पनि कैद गरेर लगे ।
೨೫ಸೈನ್ಯಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದು ಅರಸನಿಗೆ ಆಪ್ತರಾಗಿದ್ದ ಏಳು ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ರೈತರು ಇದ್ದರು.
26 तब अङ्गरक्षकहरूका कमान्डर नबूजरदानले तिनीहरूलाई रिब्लामा बेबिलोनका राजाकहाँ लगे ।
೨೬ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಿದರು.
27 बेबिलोनका राजाले हमात देशको रिब्लामा तिनीहरूलाई मारे । यसरी यहूदा आफ्नो देशबाट निर्वासनमा लगियो ।
೨೭ಬಾಬೆಲಿನ ಅರಸನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.
28 नबूकदनेसरले निर्वासनमा लगेका मानिसहरू यी नै थिएः सातौँ वर्षमा ३,०२३ जना यहूदी ।
೨೮ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ, ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಮೂರು ಸಾವಿರದ ಇಪ್ಪತ್ತ ಮೂರು ಜನ ಯೆಹೂದ್ಯರನ್ನು ಸೆರೆಯೊಯ್ದನು.
29 नबूकदनेसरको अठारौं वर्षमा तिनले यरूशलेमबाट ८३२ जना मानिसलाई लगे ।
೨೯ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಎಂಟುನೂರ ಮೂವತ್ತೆರಡು ಜನರನ್ನು ಯೆರೂಸಲೇಮಿನಿಂದ ಸೆರೆಯೊಯ್ದನು.
30 नबूकदनेसरको तेइसौं वर्षमा अङ्गरक्षकहरूका कमान्डर नबूजरदानले यहूदाका ७४५ जना मानिसलाई लगे । निर्वासित भएका जम्मा मानिस ४,६०० जना थिए ।
೩೦ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳು ನೂರ ನಲ್ವತ್ತೈದು ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.
31 यहूदाका राजा यहोयाकीन निर्वासन भएको सैंतिसौं वर्षको बाह्रौं महिनाको पच्चिसौं दिनमा, बेबिलोनका राजा एबील-मरोदकले यहूदाका राजा यहोयाकीनलाई कैदबाट मुक्त गरे । एबील-मरोदकले राज्य सुरु गरेको वर्षमा यसो गरियो ।
೩೧ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ ಬಾಬೆಲಿನ ಅರಸನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.
32 राजाले तिनीसित दयापूर्वक बोले, र बेबिलोनमा तिनीसित भएका अन्य राजाहरूलाई भन्दा तिनलाई प्रतिष्ठित स्थान दिए ।
೩೨ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತ ಸ್ಥಾನವನ್ನು ಕೊಟ್ಟನು.
33 एबील-मरोदकले यहोयाकीनका कैदका लुगाहरू हटाए, र यहोयाकीनले आफ्नो बाँकी जीवनभर नियमित रूपमा राजाको टेबुलमा खानपान गरे,
೩೩ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.
34 र तिनको मृत्यु नभएसम्म नै तिनको बाँकी जीवनभर हरेक दिन तिनलाई नियमित रूपमा खानाको भत्ता दिइयो ।
೩೪ಅವನು ಸಾಯುವ ತನಕ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಬಾಬೆಲಿನ ಅರಸನಿಂದಲೇ ದೊರಕುತ್ತಿದ್ದವು.