< यर्मिया 8 >

1 “यो परमप्रभुको घोषणा हो, त्यस बेला तिनीहरूले चिहानहरूबाट यहूदाका राजाहरू, यसका अधिकारीहरू, पुजारीहरू, अगमवक्ताहरू र यरूशलेमका बासिन्दाहरूका हड्‍डीहरू निकाल्नेछन् ।
ಯೆಹೋವನು ಹೀಗೆನ್ನುತ್ತಾನೆ, “ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು.
2 त्यसपछि तिनीहरूले सूर्य, चन्द्रमा र आकाशका सबै ताराको प्रकाशमा तिनलाई फैलाउनेछन् । तिनीहरूले आकाशका यी कुराहरूलाई पछ्याएका छन्, सेवा गरेका छन्, तिनको खोजी गरेका छन् र पुजा गरेका छन् । हड्‍डीहरू फेरि जम्मा गरिने र गाडिने छैनन् । ती जमिनको सतहमा मलझैं परिरहनेछन् ।
ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.
3 हरेक बाँकी रहेको ठाउँ जहाँ मैले तनीहरूलाई धपाएको छु, त्यहाँ तिनीहरूले आफ्‍नो निम्‍ति जीवनको साटो मृत्यु रोज्नेछन्, यो सर्वशक्तिमान् परमप्रभुको घोषण हो ।
ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.
4 त्यसैले तिनीहरूलाई भन्, “परमप्रभु यसो भन्‍नुहुन्छ, 'के कोही लडेर उठ्दैन र? के कोही हरायो भने त्यो फर्केर आउन खोज्दैन र?
ನೀನು ಅವರಿಗೆ ಹೀಗೆ ಹೇಳಬೇಕು, “ಯೆಹೋವನು ಇಂತೆನ್ನುತ್ತಾನೆ, ಬಿದ್ದವರು ಏಳದಿರುವರೋ? ಬಿಟ್ಟುಹೋದವನು ತಿರುಗಿ ಬರುವುದಿಲ್ಲವೋ?
5 यरूशलेमका मानिसहरू किन स्थायी विश्‍वासहीनतामा तर्केर गएका छन् त? तिनीहरू विश्‍वासघातमा टाँसिरहन्छन्, र पश्‍चात्ताप गर्न इन्कार गर्छन् ।
ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.
6 मैले ध्यान दिएँ, र सुनें, तर तिनीहरूले सही कुरा बोलेनन् । आफ्नो दुष्‍टताको लागि कोही पनि दुःखी भएन, 'मैले के गरेको छु?' भनेर सोध्‍ने कुनै व्‍यक्‍ति छैन । घोडा युद्धमा गएझैं तिनीहरू सबै आफूलाई इच्छा लागेको ठाउँमा जान्छन् ।
ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು ‘ಆಹಾ, ನಾನು ಎಂಥಾ ಕೆಲಸ ಮಾಡಿದೆ’ ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ.
7 आकाशको सारस अनि ढुकुर, गौँथली र सारिका चरा पनि आफ्नो समय थाहा छ । तिनीहरू ठिक समयमा बसाइँ सर्छन्, तर मेरा मानिसहरूले परमप्रभुका आज्ञाहरू जान्दैनन् ।
ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿಯೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ. ಆದರೆ ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.
8 'परमप्रभुको व्यवस्था हामीसित भएको हुनाले हामी बुद्धिमान छौं' भनी तिमीहरू कसरी भन्‍न सक्छौ? वास्तवमा, हेर, शास्‍त्रीहरूको छलपूर्ण कलमले धलको सृजना गरेको छ ।
ಹೀಗಿರಲು ‘ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ’ ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.
9 बुद्धिमान् मानिसहरू लज्‍जित हुनेछन् । तिनीहरू हताश भएका छन् र पासोमा परेका छन् । हेर, तिनीहरूले परमप्रभुको वचन इन्कार गर्छन्, यसैले तिनीहरूको बुद्धिको के काम?
ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.
10 त्यसैले म तिनीहरूका पत्‍नीहरू अरूलाई दिनेछु, र तिनीहरूका खेतबारी अधिकार गर्नेहरूलाई म ति दिनेछु, किनकि सानादेखि ठुलासम्म सबै जना बेइमान आर्जनको लागि लोभी छन् । अगमवक्तादेखि पुजारीसम्म सबैले छलको अभ्यास गर्छन् ।
೧೦ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.
11 शान्‍ति नै नहुँदा पनि 'शान्ति, शान्ति' भनेर तिनीहरूले मेरा मानिसहरूको चोटलाई अलिअलि मात्र निको पारेका छन् ।
೧೧ಸಮಾಧಾನವಿಲ್ಲದ್ದಿದ್ದರೂ, ‘ಸಮಾಧಾನ’ ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
12 तिनीहरूले घृणित कामहरू गर्दा के तिनीहरू लज्‍जित भए? तिनीहरू लज्‍जित भएनन् । कसरी शर्म मान्‍ने भन्‍ने कुरा पनि तिनीहरूलाई थाहा भएन । त्यसैले पतन भएकाहरूका बिचमा तिनीहरू पतन हुनेछन् । तिनीहरूलाई दण्ड दिइँदा तिनीहरू तल खसालिने छन्, परमप्रभु भन्‍नुहुन्छ ।
೧೨ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.
13 म तिनीहरूलाई पूर्ण रूपमा हटाइदिने छु, यो परमप्रभुको घोषणा हो । दाखका बोटहरूमा दाख हुनेछैन, न त अञ्जीरका रुखहरूमा अञ्जीर हुनेछ । किनकि पात सुकेर जानेछ, र मैले तिनीहरूलाई दिएका कुरा हराएर जानेछ ।
೧೩ನಾನು ಇವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಿಬಿಡುವೆನು. ದ್ರಾಕ್ಷಿಯ ಬಳ್ಳಿಯಲ್ಲಿಯೂ, ಅಂಜೂರದ ಮರದಲ್ಲಿಯೂ ಹಣ್ಣಿರುವುದಿಲ್ಲ, ಎಲೆಯು ಬಾಡುವುದು; ನಾನು ಹಾಳುಮಾಡುವವರನ್ನು ಅವರಿಗೆ ನೇಮಿಸುವೆನು” ಇದು ಯೆಹೋವನ ನುಡಿ.
14 हामी किन यहाँ बसिरहेका छौं? सँगसँगै आओ । हामी किल्लाबन्दी गरिएका सहरहरूमा जाऔं, र त्यहाँ हामी मरेर चुप बनौं । किनकि परमप्रभु हाम्रा परमेश्‍वरले हामीलाई चुप पार्नुहुनेछ । उहाँले हामीलाई विष पिउन लगाउनुहुनेछ किनकि हामीले उहाँको विरुद्धमा पाप गरेका छौं ।
೧೪ಆ ಕಾಲದಲ್ಲಿ ಜನರು, “ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ. ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.
15 हामी शान्तिको अपेक्षा गर्दैछौं, तर त्यहाँ कुनै असल कुरो हुनेछैन । हामी चङ्गाइको समयको आशा गर्दैछौं, तर त्यहाँ त्रास हुनेछ ।
೧೫ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!
16 दानबाट त्यसका घोडाहरूको घ्वार-घ्वार आवाज सुनिन्छ । त्यसका शक्तिशाली घोडाहरूको हिनहिनाइको आवाजमा पुरै पृथ्वी हल्लिन्छ । किनकि तिनीहरू आउनेछन् र यो देश र यसको सम्पत्ति, सहर र यसमा बस्‍नेहरूलाई स्वाहा पार्नेछन् ।
೧೬ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ. ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು.
17 किनकि हेर, म तिमीहरूका बिचमा सर्पहरू, तिमीहरूका टुनामुनाले वशमा पार्न नसक्‍ने विषालु सर्पहरू पठाउँदैछु । तिनीहरूले तिमीहरूलाई डस्‍नेछन्, यो परमप्रभुको घोषणा हो ।
೧೭ಅದಕ್ಕೆ ಯೆಹೋವನು, “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು” ಎಂದು ನುಡಿದಿದ್ದಾನೆ.
18 मेरो शोकको कुनै अन्त छैन, र मेरो हृदय व्याकुल भएको छ ।
೧೮ಅಯ್ಯೋ, ನನ್ನ ದುಃಖಕ್ಕೆ ಕೊನೆಯಿಲ್ಲವೇ? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.
19 हेर्नुहोस्, टाढाको देशमा भएका मेरो मानिसहरूको छोरीको क्रन्दन सुन्‍नुहोस् । के परमप्रभु सियोनमा हुनुहुन्‍न र? के त्यसका राजा अहिले त्यहाँ हुनुहुन्‍न र? त्यसो भए, तिनीहरूले आफ्ना खोपिएका मूर्तिहरू र बेकम्मा विदेशी देवताहरूले मलाई किन रिस उठाउँछन् त?
೧೯ಆಹಾ, ನನ್ನ ಪ್ರಜೆಯೆಂಬಾಕೆಯು, “ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?” ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. ಅದಕ್ಕೆ ಯೆಹೋವನು, “ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ” ಎಂದು ನುಡಿಯುತ್ತಾನೆ.
20 कटनीको समय बितेको छ, ग्रीष्म ऋतु पनि सकिएको छ । तरै पनि हामी बचाइएका छैनौं ।
೨೦ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ.
21 मेरा मानिसहरूको छोरीको चोटको कारणले मलाई मलाई चोट लागेको छ । त्यसलाई आइपरेका डरलाग्दा कुराहरूमा म शोक गर्छु । म लज्‍जित भएको छु ।
೨೧ನನ್ನ ಪ್ರಜೆಯೆಂಬಾಕೆಯ ವೇದನೆಯಿಂದ ನನಗೆ ಮನೋಯಾತನೆಯಾಯಿತು, ನಾನು ಶೋಕಿಸಿದೆನು, ಭಯವು ನನ್ನನ್ನು ಹಿಡಿದಿದೆ.
22 के गिलादमा कुनै औषधी छैन? के त्यहाँ कुनै निको पार्न व्‍यक्‍ति छैन? मेरा मानिसहरूको छोरीको चोट किन निको भएको छैन त?
೨೨ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?

< यर्मिया 8 >